Homeಕರ್ನಾಟಕಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

ಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

‘ಭ್ರಷ್ಟರೇ, ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ’ ಮತ್ತು ‘ ನಾಡಪ್ರೇಮಿಗಳೇ, ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ’ ಎಂಬ ಘೋಷವಾಕ್ಯದಡಿ, ಪ್ರತಿ ಜಿಲ್ಲೆಯಲ್ಲೂ ‘ಲಂಚಮುಕ್ತ ಕರ್ನಾಟಕ’ ಜಾಗೃತಿ ಅಭಿಯಾನವನ್ನು ಪಕ್ಷ ನಡೆಸುತ್ತಿದೆ.

- Advertisement -
- Advertisement -

ರಾಜ್ಯದ ಪ್ರಮುಖ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿ ಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಎರಡು ವರ್ಷಗಳ ಹಿಂದೆ ಪ್ರಾರಂಭವಾಗಿರುವ ‘ಕರ್ನಾಟಕ ರಾಷ್ಟ್ರ ಸಮಿತಿ’(KRS) ಪಕ್ಷವು, ‘ಭ್ರಷ್ಟರೇ, ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ’ ಮತ್ತು ‘ ನಾಡಪ್ರೇಮಿಗಳೇ, ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ’ ಎಂಬ ಘೋಷವಾಕ್ಯದಡಿ ರಾಜ್ಯವ್ಯಾಪಿ ಅಭಿಯಾನವನ್ನು ನಡೆಸುತ್ತಿದೆ. ಆಗಸ್ಟ್ 8 ರಿಂದ ಪ್ರಾರಂಭವಾಗಿರುವ ಈ ಕಾರ್ಯಕ್ರಮವು ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ, 32 ದಿನಗಳ ಕಾಲ, 3500 ಕಿಲೋಮೀಟರ್‌ ಪ್ರವಾಸ ಮತ್ತು ಜನಜಾಗೃತಿ ಅಭಿಯಾನದ ಮೂಲಕ ನಡೆಯಲಿದೆ.

ಈಗಾಗಲೆ 12 ದಿನವನ್ನು ಪೂರೈಸಿರುವ ಅಭಿಯಾನವು ಪ್ರಸ್ತುತ ಲಿಂಗಸುಗೂರು ಮತ್ತು ಮಸ್ಕಿಯಲ್ಲಿದ್ದು, ಇಂದು ಅಲ್ಲಿನ ತಾಲೂಕು ಕಚೇರಿಗಳಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

ಅಭಿಯಾನದ ಅಂಗವಾಗಿ ಪ್ರತಿ ಜಿಲ್ಲೆಗಳ ಸರ್ಕಾರಿ ಕಚೇರಿಗಳಿಗೆ ತೆರಳಿ ಅಲ್ಲಿ, “ಲಂಚಮುಕ್ತ ಕರ್ನಾಟಕ” ಜಾಗೃತಿ ಅಭಿಯಾನವನ್ನು ನಡೆಸುತ್ತಿದೆ. ಇಷ್ಟೇ ಅಲ್ಲದೆ, ಸ್ಥಳೀಯ ಭ್ರಷ್ಟಾಚಾರಿಗಳ ವಿರುದ್ದ ಜನಜಾಗೃತಿ, ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಸಾರ್ವಜನಿಕರೊಡನೆ ಮತ್ತು ವೈದ್ಯಾಧಿಕಾರಿಗಳೊಡನೆ ಅಲ್ಲಿಯ ಮೂಲಭೂತ ಸೌಲಭ್ಯಗಳ ಕುರಿತು ಚರ್ಚೆ, ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ, ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ಆಗ್ರಹ, ಪರಿಸರ ಕಾರ್ಯಕ್ರಮಗಳು, ಪ್ರಾಮಾಣಿಕ ಹೋರಾಟಗಾರ/ರಾಜಕಾರಣಿಗಳ ಭೇಟಿ, ಭ್ರಷ್ಟರನ್ನು ರಾಜಕೀಯದಿಂದ ಹೊರಗಟ್ಟಲು ಪ್ರಾಮಾಣಿಕರು ಚುನಾವಣಾ ರಾಜಕೀಯವನ್ನು ಪ್ರವೇಶಿಸಲು ಉತ್ತೇಜನ, ಪಕ್ಷ ಸೇರ್ಪಡೆ, ಇತ್ಯಾದಿ ಕಾರ್ಯಕ್ರಮಗಳನ್ನು ಪಕ್ಷವು ಈ ಅಭಿಯಾನದ ಅಂಗವಾಗಿ ನಡೆಸುತ್ತಿದೆ.

“ತನ್ನ ನ್ಯಾಯಬದ್ದ ಕೆಲಸಕ್ಕಾಗಿ ಯಾವುದೇ ಸರ್ಕಾರಿ ಕಚೇರಿಗೆ ಭೇಟಿ ಕೊಡುವ ಜನಸಾಮಾನ್ಯನಿಗೆ ಇಂದು ಅಲ್ಲಿ ಗೌರವ ಸಿಗುತ್ತಿಲ್ಲ. ರೈತರೂ ಸೇರಿದಂತೆ ಅತಿ ಹೆಚ್ಚು ಜನರು ಭೇಟಿ ಕೊಡುವ ಕಂದಾಯ ಇಲಾಖೆಯಲ್ಲಿಯಂತೂ ಲಂಚ ಕೊಡದೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕಾದ ಪೊಲೀಸ್ ಮತ್ತು ಅಬಕಾರಿ ಇಲಾಖೆಗಳು ಇಂದು ಸುಲಿಗೆಯ, ವಂಚನೆಯ, ದೌರ್ಜನ್ಯದ ಕೇಂದ್ರಗಳಾಗಿವೆ ಹಾಗೂ ಅಪರಾಧಗಳನ್ನು ಉತ್ತೇಜಿಸುವ ಕೆಲಸವನ್ನು ಮಾಡುತ್ತಿವೆ. ಇದರ ವಿರುದ್ಧ ಕೆಆರ್‌ಎಸ್‌ ಪಕ್ಷವು ಅಭಿಯಾನವನ್ನು ನಡೆಸುತ್ತಿದೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಕಛೇರಿಯಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಶ್ನೆ: KRS ಪಕ್ಷದ ರವಿಕೃಷ್ಣಾ ರೆಡ್ಡಿ ಬಂಧನ

ಈ ಮಧ್ಯೆ, ದಾವಣಗೆರೆಯಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ ಘಟನೆಯು ನಡೆದಿದೆ. ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾರೆಡ್ಡಿ ಅವರು ಹೇಳುವಂತೆ, “ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ಆಗುತ್ತಿದ್ದ ತೊಂದರೆಯನ್ನು ವಿಡಿಯೋ ಮಾಡುತ್ತಿದ್ದ KRS ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಹರಿಹಾಯ್ದಿದ್ದಾರೆ. ಅವರ ಫೋನ್ ಕಿತ್ತುಕೊಂಡು, ಅದರಿಂದ ವಿಡಿಯೋ ಡಿಲೀಟ್ ಮಾಡಿ ಖಾಸಗಿತನಕ್ಕೆ ಧಕ್ಕೆ ಉಂಟು ಮಾಡಿ, ನಂತರ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಠಾಣೆಗೂ ಎಳೆದುಕೊಂಡು ಹೋಗಿ, ಅಲ್ಲಿಯೂ ಹೆದರಿಸಿ ಬೆದರಿಸಿ ಬಲಾತ್ಕಾರದಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪೊಲೀಸರ ಈ ನಡೆಯ ಬಗ್ಗೆ ಪ್ರಕರಣ ದಾಖಲಿಸಲು ಠಾಣೆಗೆ ತೆರಳಿದಾಗ ಪಕ್ಷದ ಯುವ ಮುಖಂಡನ್ನು, ‘ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡಿದರು’ ಎಂದು ಸುಳ್ಳು ಆರೋಪ ಹೊರಿಸಿ ಠಾಣೆಯಲ್ಲಿಯೇ ಬಂಧಿಸಿ ಏಳು ಜೈಲಿನಲ್ಲಿಡಲಾಗಿತ್ತು. ಇದೀಗ ಅವರು ಜಾಮೀನಿನ ಅಡಿಯಲ್ಲಿ ಬಿಡುಗಡೆಯಾಗಿದ್ದು, ಇಂದಲ್ಲ ನಾಳೆ ದೂರುದಾರ ಪೊಲೀಸನಿಗೆ ಮಂಪರು ಪರೀಕ್ಷೆ ಮಾಡಿಸಿ ಅಮಾಯಕರ ಪ್ರಾಣ ಹಿಂಡುವ ಕಾನೂನು ಭಂಜಕ ಅಪರಾಧಿ ಮನೋಭಾವದ ಪೊಲೀಸರಿಗೆ ಪಕ್ಷವು ಪಾಠ ಕಲಿಸದೆ ಬಿಡುವುದಿಲ್ಲ” ಎಂದು ಫೇಸ್‌ಬುಕ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಪ್ರಕರಣದಲ್ಲಿ ಪೊಲೀಸರು ಅವರನ್ನು ಕೂಡಾ ವಿಚಾರಣೆಗೆ ಹಾಜರಾಗುವಂತೆ ನೋಟಿಸು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರವಿಕೃಷ್ಣ ರೆಡ್ಡಿ ತಾನು ಆಗಸ್ಟ್‌ 24 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದು, “ಪೊಲೀಸರು ಅಂದು ಬಂಧಿಸಿದರೂ ಬಂಧಿಸಬಹುದೇನೋ! ಯಾರಿಗೆ ಗೊತ್ತು? ನಾನೂ ದಾವಣಗೆರೆ ಜೈಲು ನೋಡಿಲ್ಲ. ಈ ರಾಜ್ಯದಲ್ಲಿ ಅದೆಷ್ಟು ಸಾವಿರ, ಲಕ್ಷ ಅಮಾಯಕರು ಪೊಲೀಸರಿಂದ ಅನ್ಯಾಯಕ್ಕೆ ಒಳಗಾಗಿದ್ದಾರೋ! ಎಷ್ಟೆಲ್ಲಾ ನಿರಪರಾಧಿಗಳು ಸುಳ್ಳು ಕೇಸುಗಳಲ್ಲಿ ಜೈಲು ಪಾಲಾಗಿದ್ದಾರೋ!” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅಭಿಯಾನ ಪ್ರಾರಂಭವಾಗಿ 12 ದಿನಗಳಷ್ಟೇ ಆಗಿದ್ದು ಈಗಾಗಲೆ ಪಕ್ಷದ ಅಭಿಯಾನವು ಸರ್ಕಾರಿ ಕಚೇರಿಗಳಲ್ಲಿನ ಹಲವು ಸಮಸ್ಯೆಗಳನ್ನು ಬಯಲಿಗೆ ಎಳೆದಿದೆ. ಅಭಿಯಾನದ ಎಲ್ಲಾ ದೃಶ್ಯಗಳನ್ನು ಪಕ್ಷವು ಫೇಸ್‌ಬುಕ್ ಮೂಲಕ ರಾಜ್ಯದ ಜನತೆಗೆ ತಲುಪಿಸುತ್ತಿದೆ. ಅಭಿಯಾನದ ತಂಡವು ಇನ್ನೂ ಇಪ್ಪತ್ತು ದಿನಗಳು ರಾಜ್ಯದಾದ್ಯಂತ ಸಂಚರಿಸಲಿದೆ.

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...