Homeಕರ್ನಾಟಕಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

ಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

‘ಭ್ರಷ್ಟರೇ, ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ’ ಮತ್ತು ‘ ನಾಡಪ್ರೇಮಿಗಳೇ, ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ’ ಎಂಬ ಘೋಷವಾಕ್ಯದಡಿ, ಪ್ರತಿ ಜಿಲ್ಲೆಯಲ್ಲೂ ‘ಲಂಚಮುಕ್ತ ಕರ್ನಾಟಕ’ ಜಾಗೃತಿ ಅಭಿಯಾನವನ್ನು ಪಕ್ಷ ನಡೆಸುತ್ತಿದೆ.

- Advertisement -
- Advertisement -

ರಾಜ್ಯದ ಪ್ರಮುಖ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿ ಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಎರಡು ವರ್ಷಗಳ ಹಿಂದೆ ಪ್ರಾರಂಭವಾಗಿರುವ ‘ಕರ್ನಾಟಕ ರಾಷ್ಟ್ರ ಸಮಿತಿ’(KRS) ಪಕ್ಷವು, ‘ಭ್ರಷ್ಟರೇ, ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ’ ಮತ್ತು ‘ ನಾಡಪ್ರೇಮಿಗಳೇ, ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ’ ಎಂಬ ಘೋಷವಾಕ್ಯದಡಿ ರಾಜ್ಯವ್ಯಾಪಿ ಅಭಿಯಾನವನ್ನು ನಡೆಸುತ್ತಿದೆ. ಆಗಸ್ಟ್ 8 ರಿಂದ ಪ್ರಾರಂಭವಾಗಿರುವ ಈ ಕಾರ್ಯಕ್ರಮವು ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ, 32 ದಿನಗಳ ಕಾಲ, 3500 ಕಿಲೋಮೀಟರ್‌ ಪ್ರವಾಸ ಮತ್ತು ಜನಜಾಗೃತಿ ಅಭಿಯಾನದ ಮೂಲಕ ನಡೆಯಲಿದೆ.

ಈಗಾಗಲೆ 12 ದಿನವನ್ನು ಪೂರೈಸಿರುವ ಅಭಿಯಾನವು ಪ್ರಸ್ತುತ ಲಿಂಗಸುಗೂರು ಮತ್ತು ಮಸ್ಕಿಯಲ್ಲಿದ್ದು, ಇಂದು ಅಲ್ಲಿನ ತಾಲೂಕು ಕಚೇರಿಗಳಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

ಅಭಿಯಾನದ ಅಂಗವಾಗಿ ಪ್ರತಿ ಜಿಲ್ಲೆಗಳ ಸರ್ಕಾರಿ ಕಚೇರಿಗಳಿಗೆ ತೆರಳಿ ಅಲ್ಲಿ, “ಲಂಚಮುಕ್ತ ಕರ್ನಾಟಕ” ಜಾಗೃತಿ ಅಭಿಯಾನವನ್ನು ನಡೆಸುತ್ತಿದೆ. ಇಷ್ಟೇ ಅಲ್ಲದೆ, ಸ್ಥಳೀಯ ಭ್ರಷ್ಟಾಚಾರಿಗಳ ವಿರುದ್ದ ಜನಜಾಗೃತಿ, ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಸಾರ್ವಜನಿಕರೊಡನೆ ಮತ್ತು ವೈದ್ಯಾಧಿಕಾರಿಗಳೊಡನೆ ಅಲ್ಲಿಯ ಮೂಲಭೂತ ಸೌಲಭ್ಯಗಳ ಕುರಿತು ಚರ್ಚೆ, ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ, ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ಆಗ್ರಹ, ಪರಿಸರ ಕಾರ್ಯಕ್ರಮಗಳು, ಪ್ರಾಮಾಣಿಕ ಹೋರಾಟಗಾರ/ರಾಜಕಾರಣಿಗಳ ಭೇಟಿ, ಭ್ರಷ್ಟರನ್ನು ರಾಜಕೀಯದಿಂದ ಹೊರಗಟ್ಟಲು ಪ್ರಾಮಾಣಿಕರು ಚುನಾವಣಾ ರಾಜಕೀಯವನ್ನು ಪ್ರವೇಶಿಸಲು ಉತ್ತೇಜನ, ಪಕ್ಷ ಸೇರ್ಪಡೆ, ಇತ್ಯಾದಿ ಕಾರ್ಯಕ್ರಮಗಳನ್ನು ಪಕ್ಷವು ಈ ಅಭಿಯಾನದ ಅಂಗವಾಗಿ ನಡೆಸುತ್ತಿದೆ.

“ತನ್ನ ನ್ಯಾಯಬದ್ದ ಕೆಲಸಕ್ಕಾಗಿ ಯಾವುದೇ ಸರ್ಕಾರಿ ಕಚೇರಿಗೆ ಭೇಟಿ ಕೊಡುವ ಜನಸಾಮಾನ್ಯನಿಗೆ ಇಂದು ಅಲ್ಲಿ ಗೌರವ ಸಿಗುತ್ತಿಲ್ಲ. ರೈತರೂ ಸೇರಿದಂತೆ ಅತಿ ಹೆಚ್ಚು ಜನರು ಭೇಟಿ ಕೊಡುವ ಕಂದಾಯ ಇಲಾಖೆಯಲ್ಲಿಯಂತೂ ಲಂಚ ಕೊಡದೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕಾದ ಪೊಲೀಸ್ ಮತ್ತು ಅಬಕಾರಿ ಇಲಾಖೆಗಳು ಇಂದು ಸುಲಿಗೆಯ, ವಂಚನೆಯ, ದೌರ್ಜನ್ಯದ ಕೇಂದ್ರಗಳಾಗಿವೆ ಹಾಗೂ ಅಪರಾಧಗಳನ್ನು ಉತ್ತೇಜಿಸುವ ಕೆಲಸವನ್ನು ಮಾಡುತ್ತಿವೆ. ಇದರ ವಿರುದ್ಧ ಕೆಆರ್‌ಎಸ್‌ ಪಕ್ಷವು ಅಭಿಯಾನವನ್ನು ನಡೆಸುತ್ತಿದೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಕಛೇರಿಯಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಶ್ನೆ: KRS ಪಕ್ಷದ ರವಿಕೃಷ್ಣಾ ರೆಡ್ಡಿ ಬಂಧನ

ಈ ಮಧ್ಯೆ, ದಾವಣಗೆರೆಯಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ ಘಟನೆಯು ನಡೆದಿದೆ. ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾರೆಡ್ಡಿ ಅವರು ಹೇಳುವಂತೆ, “ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ಆಗುತ್ತಿದ್ದ ತೊಂದರೆಯನ್ನು ವಿಡಿಯೋ ಮಾಡುತ್ತಿದ್ದ KRS ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಹರಿಹಾಯ್ದಿದ್ದಾರೆ. ಅವರ ಫೋನ್ ಕಿತ್ತುಕೊಂಡು, ಅದರಿಂದ ವಿಡಿಯೋ ಡಿಲೀಟ್ ಮಾಡಿ ಖಾಸಗಿತನಕ್ಕೆ ಧಕ್ಕೆ ಉಂಟು ಮಾಡಿ, ನಂತರ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಠಾಣೆಗೂ ಎಳೆದುಕೊಂಡು ಹೋಗಿ, ಅಲ್ಲಿಯೂ ಹೆದರಿಸಿ ಬೆದರಿಸಿ ಬಲಾತ್ಕಾರದಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪೊಲೀಸರ ಈ ನಡೆಯ ಬಗ್ಗೆ ಪ್ರಕರಣ ದಾಖಲಿಸಲು ಠಾಣೆಗೆ ತೆರಳಿದಾಗ ಪಕ್ಷದ ಯುವ ಮುಖಂಡನ್ನು, ‘ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡಿದರು’ ಎಂದು ಸುಳ್ಳು ಆರೋಪ ಹೊರಿಸಿ ಠಾಣೆಯಲ್ಲಿಯೇ ಬಂಧಿಸಿ ಏಳು ಜೈಲಿನಲ್ಲಿಡಲಾಗಿತ್ತು. ಇದೀಗ ಅವರು ಜಾಮೀನಿನ ಅಡಿಯಲ್ಲಿ ಬಿಡುಗಡೆಯಾಗಿದ್ದು, ಇಂದಲ್ಲ ನಾಳೆ ದೂರುದಾರ ಪೊಲೀಸನಿಗೆ ಮಂಪರು ಪರೀಕ್ಷೆ ಮಾಡಿಸಿ ಅಮಾಯಕರ ಪ್ರಾಣ ಹಿಂಡುವ ಕಾನೂನು ಭಂಜಕ ಅಪರಾಧಿ ಮನೋಭಾವದ ಪೊಲೀಸರಿಗೆ ಪಕ್ಷವು ಪಾಠ ಕಲಿಸದೆ ಬಿಡುವುದಿಲ್ಲ” ಎಂದು ಫೇಸ್‌ಬುಕ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಪ್ರಕರಣದಲ್ಲಿ ಪೊಲೀಸರು ಅವರನ್ನು ಕೂಡಾ ವಿಚಾರಣೆಗೆ ಹಾಜರಾಗುವಂತೆ ನೋಟಿಸು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರವಿಕೃಷ್ಣ ರೆಡ್ಡಿ ತಾನು ಆಗಸ್ಟ್‌ 24 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದು, “ಪೊಲೀಸರು ಅಂದು ಬಂಧಿಸಿದರೂ ಬಂಧಿಸಬಹುದೇನೋ! ಯಾರಿಗೆ ಗೊತ್ತು? ನಾನೂ ದಾವಣಗೆರೆ ಜೈಲು ನೋಡಿಲ್ಲ. ಈ ರಾಜ್ಯದಲ್ಲಿ ಅದೆಷ್ಟು ಸಾವಿರ, ಲಕ್ಷ ಅಮಾಯಕರು ಪೊಲೀಸರಿಂದ ಅನ್ಯಾಯಕ್ಕೆ ಒಳಗಾಗಿದ್ದಾರೋ! ಎಷ್ಟೆಲ್ಲಾ ನಿರಪರಾಧಿಗಳು ಸುಳ್ಳು ಕೇಸುಗಳಲ್ಲಿ ಜೈಲು ಪಾಲಾಗಿದ್ದಾರೋ!” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅಭಿಯಾನ ಪ್ರಾರಂಭವಾಗಿ 12 ದಿನಗಳಷ್ಟೇ ಆಗಿದ್ದು ಈಗಾಗಲೆ ಪಕ್ಷದ ಅಭಿಯಾನವು ಸರ್ಕಾರಿ ಕಚೇರಿಗಳಲ್ಲಿನ ಹಲವು ಸಮಸ್ಯೆಗಳನ್ನು ಬಯಲಿಗೆ ಎಳೆದಿದೆ. ಅಭಿಯಾನದ ಎಲ್ಲಾ ದೃಶ್ಯಗಳನ್ನು ಪಕ್ಷವು ಫೇಸ್‌ಬುಕ್ ಮೂಲಕ ರಾಜ್ಯದ ಜನತೆಗೆ ತಲುಪಿಸುತ್ತಿದೆ. ಅಭಿಯಾನದ ತಂಡವು ಇನ್ನೂ ಇಪ್ಪತ್ತು ದಿನಗಳು ರಾಜ್ಯದಾದ್ಯಂತ ಸಂಚರಿಸಲಿದೆ.

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...