Homeಮುಖಪುಟಜಸ್ಟ್ ಆಸ್ಕಿಂಗ್: ಹಿಂದೆ ಅಮಿತ್ ‍ಶಾರನ್ನು ಕಸ್ಟಡಿಗೆ ಕಳುಹಿಸಿದ್ದ ಜಸ್ಟೀಸ್ ಖುರೇಷಿಯವರಿಗೆ ಪದೋನ್ನತಿ ಇಲ್ಲ!

ಜಸ್ಟ್ ಆಸ್ಕಿಂಗ್: ಹಿಂದೆ ಅಮಿತ್ ‍ಶಾರನ್ನು ಕಸ್ಟಡಿಗೆ ಕಳುಹಿಸಿದ್ದ ಜಸ್ಟೀಸ್ ಖುರೇಷಿಯವರಿಗೆ ಪದೋನ್ನತಿ ಇಲ್ಲ!

ಅಂದರೆ... ಮತ್ತೊಮ್ಮೆ ಮೋದಿ ಸರ್ಕಾರದ ಒತ್ತಡಕ್ಕೆ ಉನ್ನತ ನ್ಯಾಯಾಂಗ ಮಣಿಯಿತೇ?

- Advertisement -
- Advertisement -

ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ನಿನ್ನೆ ಶಿಫಾರಸ್ಸುಗೊಂಡಿರುವ ನ್ಯಾಯಾಧೀಶರುಗಳಿಗಿಂತ ಹಿರಿಯರಾದ ತ್ರಿಪುರ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಖುರೇಷಿ ಯವರನ್ನು ಏಕೆ ಸುಪ್ರೀಂ ನ್ಯಾಯಮೂರ್ತಿಯಾಗಿ ಆಯ್ಕೆ ಮಾಡಲಿಲ್ಲ?

ಮೋದಿ ಸರ್ಕಾರ ಪೆಗಾಸಸ್ ಬೇಹು ತಂತ್ರಜ್ಞಾನ ಖರೀದಿಸಿತ್ತೋ ಇಲ್ಲವೋ ಎಂದು ಉತ್ತರಿಸುವುದು ರಾಷ್ಟ್ರ ಭದ್ರತೆಯ ವಿಷಯವೇ?

ಜಸ್ಟೀಸ್ NV ರಮಣ ಅವರು ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೋದಿ ಸರ್ಕಾರದ ಮುಲಾಜಿಲ್ಲದೆ ಕೊಟ್ಟ ಕೆಲವು ಸ್ವತಂತ್ರ ತೀರ್ಮಾನಗಳು ಉನ್ನತ ನ್ಯಾಯಾಂಗದ ಬಗ್ಗೆ ಮತ್ತೆ ಭರವಸೆಗಳನ್ನು ಮೂಡಿಸಿತ್ತಷ್ಟೇ..

ಆದರೆ ಸುಪ್ರೀಂ ಕೋರ್ಟಿನ ಹಾಗೂ ದೇಶದ ಭವಿಷ್ಯದ ದಿಕ್ಕಿನ ಮೇಲೆ ಪ್ರಭಾವ ಬೀರಬಹುದಾದ ಎರಡು ಪ್ರಮುಖ ನಿರ್ಣಯಗಳಲ್ಲಿ ಮತ್ತೆ ಮೋದಿ ಸರ್ಕಾರದ ಕರಾಳ ನೆರಳುಗಳು ಕಾಣಿಸಿಕೊಳ್ಳುತ್ತಿರುವುದು ಆತಂಕ ಮೂಡಿಸುವಂತಿದೆ.

1. ತ್ರಿಪುರಾದ ಮುಖ್ಯ ನ್ಯಾಯಮೂರ್ತಿ ಖುರೇಷಿಯವರನ್ನು ಸುಪ್ರೀಂ ಕೋರ್ಟಿಗೆ ಪದೋನ್ನತಿಗೆ ಪರಿಗಣಿಸದಿರುವುದರ ಹಿಂದಿನ ಕಾರಣವೇನು?

– ಕಳೆದ 22 ತಿಂಗಳಿಂದ ಸುಪ್ರೀಂ ಕೋರ್ಟಿಗೆ ಹೊಸ ನ್ಯಾಯಾಧೀಶರಾರು ನೇಮಕವಾಗಿರಲಿಲ್ಲ. ಏಕೆಂದರೆ ಅದರ ಬಗ್ಗೆ ಶಿಫಾರಸ್ಸು ಮಾಡಬೇಕಿದ್ದ ಸುಪ್ರೀಂ ಕೋರ್ಟಿನ ಐವರು ಅತಿ ಹಿರಿಯ ನ್ಯಾಯಾಧೀಶರ ಕೊಲಿಜಿಯಂ ನಲ್ಲಿ ಒಂದು ಹೆಸರಿನ ಬಗ್ಗೆ ಏಕಾಭಿಪ್ರಾಯವಿರಲಿಲ್ಲ.

ಆ ಹೆಸರು ಈಗ ತ್ರಿಪುರಾದ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿರುವ ನ್ಯಾಯಾಧೀಶ ಅಖಿಲ್ ಖುರೇಷಿಯವರದ್ದು.

ಈಗ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿರುವ ಒಂಭತ್ತು ನ್ಯಾಯಾಧೀಶರಲ್ಲಿ ಬಹುಪಾಲು ನ್ಯಾಯಮೂರ್ತಿಗಳಿಗಿಂತ ಖುರೇಷಿಯವರು ಹಿರಿಯರು. ಆದರೂ ಅವರಿಗ್ಯಾಕೆ ಬಡ್ತಿ ಕೊಡಲಿಲ್ಲ?

ಕಾರಣ ನಿಗೂಢವೇನಲ್ಲ. ಖುರೇಷಿಯವರು ಬಾಂಬೆ ಹೈಕೋರ್ಟಿನ ಹಿರಿಯ ನ್ಯಾಯಾಧೀಶರಾಗಿದ್ದಾಗ ಗುಜರಾತಿನಲ್ಲಿ ಶೊಹ್ರಾಬುದ್ದೀನ್ ಏನ್ಕೌಂಟರ್ ಪ್ರಕರಣದಲ್ಲಿ ಆಪಾದಿತರಾಗಿದ್ದ ಈಗಿನ ಗೃಹಮಂತ್ರಿ ಅಮಿತ್ ಷಾ ರವರನ್ನು ವಿಚಾರಣೆಗೆಂದು ಸಿಬಿಐ ಕಸ್ಟಡಿಗೆ ಒಪ್ಪಿಸಿದ್ದರು.

2014ರಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬಂದ ನಂತರ ಈ ಸೇಡನ್ನು ಕಾಪಿಟ್ಟುಕೊಂಡಿದ್ದ ಮೋದಿ-ಶಾ ಸರ್ಕಾರ ಎಲ್ಲ ಹಂತದಲ್ಲೂ ಖುರೇಷಿಯವರಿಗೆ ತೊಂದರೆ ಕೊಡಲು ಪ್ರಾರಂಭಿಸಿತು.

2019ರಲ್ಲಿ ಖುರೇಷಿಯರನ್ನು 40 ನ್ಯಾಯಾಧೀಶರಿರುವ ಮಧ್ಯಪ್ರದೇಶದ ಹೈಕೋರ್ಟಿಗೆ ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿ ವರ್ಗಾವಣೆ ಮಾಡಿ ಕೊಲಿಜಿಯಂ ಕಳಿಸಿದ್ದ ಶಿಪಾರಸ್ಸನ್ನು ಮೋದಿ ಸರ್ಕಾರ ಒಪ್ಪಿಕೊಳ್ಳಲೇ ಇಲ್ಲ.

ಆ ನಂತರ ಮೋದಿ ಸರ್ಕಾರದ ಒತ್ತಡಕ್ಕೆ ಮಣಿದ ಸುಪ್ರೀಂಕೋರ್ಟ್ ಖುರೇಷಿಯವರನ್ನು ಕೇವಲ 4 ನ್ಯಾಯಾಧೀಶರಿರುವ ತ್ರಿಪುರಾದ ಹೈಕೋರ್ಟಿಗೆ ಮುಖ್ಯ ನ್ಯಾಯಾಧೀಶರಾಗಿ ವರ್ಗಾವಣೆ ಮಾಡಿತು.

ನಂತರ 2020ರಲ್ಲಿ ಸುಪ್ರೀಂ ಕೋರ್ಟಿಗೆ ಹೈಕೋರ್ಟಿನಿಂದ ಪದೋನ್ನತಿ ಪಡೆಯಬೇಕಾದ ಮುಖ್ಯ ನ್ಯಾಯಾಧೀಶರ ಪಟ್ಟಿಯಲ್ಲಿ ಯಾವಾಗಲೂ ಖುರೇಷಿಯವರ ಹೆಸರೇ ಪ್ರಥಮವಾಗಿರುತ್ತಿತ್ತು.

ಆದರೆ ಆಗಿನ ಮುಖ್ಯ ನ್ಯಾಯಾಧೀಶರಾಗಿದ್ದ ಬೋಬಡೆಯವರು ನ್ಯಾಯದ ಪ್ರತಿನಿಧಿಯಾಗದೆ ಮೋದಿಯ ಪ್ರತಿನಿಧಿಯಾಗಿ ವರ್ತಿಸುತ್ತಾ ಖುರೇಷಿಯವರ ಹೆಸರನ್ನು ಕೈಬಿಟ್ಟು ಉಳಿದವರನ್ನು ಸೂಚಿಸುತ್ತಿದ್ದರು.

ಆದರೆ the wire ನಂತ ಕೆಲವು ಪತ್ರಿಕೆಗಳ ಅಧ್ಯಯನ ವರದಿಗಳು ಸೂಚಿಸುವಂತೆ, ಆಗ ಸುಪ್ರೀಂ ಕೋರ್ಟಿನ ಕೊಲಿಜಿಯಂನಲ್ಲಿದ್ದ ನ್ಯಾಯಮೂರ್ತಿ ರೊಹಿಂಗ್ಟನ್ ನಾರಿಮನ್ ಅವರು ಈ ಅನ್ಯಾಯವನ್ನು ಖಡಾಖಂಡಿತವಾಗಿ ವಿರೋಧಿಸುತ್ತ ಬಂದಿದ್ದರು.

ಹೀಗಾಗಿ ನಾರಿಮನ್ ಅವರು ಕೊಲಿಜಿಯಂನಲ್ಲಿ ಇರುವ ತನಕ ಖುರೇಶಿಯವರ ಜೊತೆಗೆ ಯಾರ ಪದೋನ್ನತಿಯೂ ಆಗಿರಲಿಲ್ಲ. ಮೊನ್ನೆ ಆಗಸ್ಟ್ 12 ರಂದು ನಾರಿಮನ್ ಅವರು ನಿವೃತ್ತರಾದರು.

ಅವರ ನಿವೃತ್ತಿಯೊಂದಿಗೆ ಮುಖ್ಯ ನ್ಯಾಯಮೂರ್ತಿ ರಮಣ, ನ್ಯಾಯಮೂರ್ತಿ ಕಾನ್ವಿಲ್ಕರ್, ಲಲಿತ್, ಚಂದ್ರಚೂಡ್, ಮತ್ತು ನಾಗೇಶ್ವರರಾವ್ ಅವರನ್ನೊಳಗೊಂಡ ಹೊಸ ಕೊಲಿಜಿಯಂ ರೂಪುಗೊಂಡಿತು.

ನ್ಯಾಯಮೂರ್ತಿ ನಾರಿಮನ್ ಇಲ್ಲದ ಹೊಸ ಕೊಲಿಜಿಯಂನ ಮೊತ್ತ ಮೊದಲ ಸಭೆಯಲ್ಲೇ ಅತ್ಯಂತ ಹಿರಿಯರಾದ ನ್ಯಾಯಮೂರ್ತಿ ಖುರೇಷಿಯವರನ್ನು ಕೈಬಿಟ್ಟು ಅವರಿಗಿಂತ ಕಿರಿಯರಾದ ಒಂಭತ್ತು ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟಿಗೆ ಆಯ್ಕೆ ಮಾಡಲಾಗಿದೆ.

ನ್ಯಾಯಮೂರ್ತಿ ಖುರೇಷಿಯವರನ್ನು ಕೈಬಿಟ್ಟಿರುವುದಕ್ಕೆ ಯಾವ ಕಾರಣವನ್ನು ಈವರೆಗೆ ಸುಪ್ರೀಂ ಕೋರ್ಟಿನ ಹಿರಿಯ ನ್ಯಾಯಾಧೀಶರ ಕೊಲಿಜಿಯಂ ಒದಗಿಸಿಲ್ಲ.

ಅಂದರೆ… ಮತ್ತೊಮ್ಮೆ ಮೋದಿ ಸರ್ಕಾರದ ಒತ್ತಡಕ್ಕೆ ಉನ್ನತ ನ್ಯಾಯಾಂಗ ಮಣಿಯಿತೇ?

2. ಪೆಗಾಸಸ್ ಅನ್ನು ಭಾರತ ಸರ್ಕಾರ ಖರೀದಿಸಿದೆಯೇ ಇಲ್ಲವೇ ಎಂಬ ಮಾಹಿತಿ ದೇಶದ ಭದ್ರತೆಯ ವಿಷಯವೇ?

– ಪೆಗಾಸಸ್ ಗೂಢಚರ್ಯೆ ಪ್ರಕರಣ ಹೇಗೆ ಈ ದೇಶದ ಸಾರ್ವಭೌಮತೆ ಯನ್ನೂ ಹಾಗು ಈ ದೇಶದ ಮಾಧ್ಯಮ ಹಾಗೂ ಭಿನ್ನಮತದ ಸ್ವಾತಂತ್ರ್ಯವನ್ನು ಉಲ್ಲಂಘಿಸಿದೆ ಎಂಬುದು ಈಗ ಎಲ್ಲರಿಗೂ ಗೊತ್ತಿರುವ ವಿಚಾರ .

ಈಗ ಆ ಪ್ರಕರಣ ಸುಪ್ರೀಂ ಕೋರ್ಟಿನಲ್ಲಿ ಮುಖ್ಯ ನ್ಯಾಯಮೂರ್ತಿ ರಮಣ ಅವರ ಪೀಠದ ಮುಂದಿದೆ.

ಮೋದಿ ಸರ್ಕಾರ ಈ ಪ್ರಕರಣದಲ್ಲಿ ಅಡಕತ್ತರಿಯಲ್ಲಿ ಸಿಲುಕಿಕೊಂಡಿದೆ.

ಏಕೆಂದರೆ ಈಗಾಗಲೇ ಪೆಗಾಸಸ್ ಅನ್ನು ಬಳಸಿ ಕೆಲವು ಪತ್ರಕರ್ತರ ಮೇಲೆ ಬೇಹುಗಾರಿಕೆ ನಡೆಸಿರುವುದಕ್ಕೆ ನಿರಾಕರಿಸಲಾಗದ ಪುರಾವೆಗಳು ಸಿಕ್ಕಿದೆ. ಮತ್ತೊಂದು ಕಡೆ ಪೆಗಾಸಸ್ ಮಾರುವ ಇಸ್ರೇಲಿನ NSO ಕಂಪನಿ ಅದನ್ನು ಸರ್ಕಾರಗಳಿಗೆ ಮಾತ್ರವೇ ಮಾರಿರುವುದಾಗಿ ಸ್ಪಷ್ಟಪಡಿಸಿದೆ.

ಹೀಗಾಗಿ ಭಾರತದಲ್ಲಿ ಪೆಗಾಸಸ್ ಬಳಕೆಯಾಗಿದೆ ಎಂದರೆ ಅದನ್ನು ಭಾರತ ಸರ್ಕಾರವೇ ಖರೀದಿಸಿರಬೇಕು. ಹೀಗಾಗಿ ಪತ್ರಕರ್ತರ ಮೇಲೆ ಬೇಹುಗಾರಿಕೆ ನಡೆಸಲು ಸರ್ಕಾರವೇ ಬಳಸಿರಬೇಕು.

ಆದರೆ ಇದಕ್ಕೆ ಯಾವುದೇ ಕಾನೂನಿನ ಬೆಂಬಲವಿಲ್ಲ. ಹೀಗಾಗಿ ಸರ್ಕಾರ ಮಾಡಿದ್ದರೆ ಅದು ಕಾನೂನು ಬಾಹಿರ, ಸಂವಿಧಾನ ವಿರೋಧಿ…

ಹೀಗಾಗಿ ಸುಪ್ರೀಂ ಕೋರ್ಟಿನಲ್ಲಿ ದಾವೆ ಹೂಡಿರುವ ಅರ್ಜಿದಾರರು ಭಾರತ ಸರ್ಕಾರವು ಪೆಗಾಸಸ್ ಅನ್ನು ಖರೀದಿಸಿದೆಯೋ ಇಲ್ಲವೋ ಎಂಬ ಸರಳ ಪ್ರಶ್ನೆಗೆ ಮೋದಿ ಸರ್ಕಾರದಿಂದ ಉತ್ತರ ಬಯಸುತ್ತಿದ್ದಾರೆ…

ಆದರೆ ಸರ್ಕಾರ ಆ ಮಾಹಿತಿ ದೇಶದ ಭದ್ರತೆಗೆ ಸಂಬಂಧಪಟ್ಟ ವಿಷಯವಾದ್ದರಿಂದ ಉತ್ತರ ಕೊಡಲು ಸಾಧ್ಯವಿಲ್ಲ ಎಂದು ಜಾರಿಕೊಳ್ಳುತ್ತಿದೆ.

ಈ ಬಗ್ಗೆ ಪ್ರಶ್ನಿಸುವ ಅಧಿಕಾರ ಹೊಂದಿರುವ ಸದನದ ಸಮಿತಿಯ ಮುಂದೆ ಅಧಿಕಾರಿಗಳು ಹಾಜರಾಗದಂತೆ ತಡೆಯುತ್ತಿದೆ. ಮತ್ತೊಂದು ಕಡೆ ಬೇಕಿದ್ದರೆ ಈ ವಿಷಯದ ಬಗ್ಗೆ ತನಿಖೆ ಮಾಡಲು ಸಿದ್ಧ ಎಂದು ಹೇಳುತ್ತಿದೆ.

ಅಂದರೆ ತಾನು ಮಾಡಿರಬಹುದಾದ ಅಪರಾಧದ ಬಗ್ಗೆ ತಾನೇ ‘ಆತ್ಮನಿರ್ಭರ’ ತನಿಖೆ ಮಾಡಿಕೊಳ್ಳುವುದು! ಈ ವಾದ ಮೋದಿ ಸರ್ಕಾರ ಎದುರಾಗಿರುವ ಕುತ್ತಿನಿಂದ ಬಚಾವಾಗಲು ಬಳಸುತ್ತಿರುವ ತಂತ್ರ ಎಂದು ಎಂಬುದು ಸ್ಪಷ್ಟ.

ಹೀಗಾಗಿ ದೇಶದ ಸಾರ್ವಭೌಮತೆಗೆ ಸಂಬಂಧಪಟ್ಟ ಈ ವಿಷಯದಲ್ಲಿ ಸುಪ್ರೀಂಕೋರ್ಟ್ ಸರ್ಕಾರದ ಬಗ್ಗೆ ಕಠಿಣ ನಿಲುವು ತಳೆಯಬಹುದು ಎಂದು ನಿರೀಕ್ಷಿಸಲಾಗಿತ್ತು.

ಆದರೆ ಮುಖ್ಯ ನ್ಯಾಯಮೂರ್ತಿಗಳ ಪೀಠ ಈ ಬಗ್ಗೆ ಸರ್ಕಾರ ಮುಂದಿಟ್ಟಿರುವ ಆಳವಾದ ತನಿಖೆಯ ಪ್ರಸ್ತಾಪದಿಂದ ತೃಪ್ತವಾದಂತೆ ಕಾಣುತ್ತಿದೆ.

ಹಾಗೂ “ದೇಶದ ಭದ್ರತೆಗೆ ಸಂಬಂಧಪಟ್ಟ ವಿಷಯದ ಬಗ್ಗೆ ಯಾವುದೇ ಮಾಹಿತಿಯನ್ನು ಕೊಡಬೇಕೆಂದು ಕೋರ್ಟು ಕಡ್ಡಾಯ ಮಾಡುವುದಿಲ್ಲ” ವೆಂದು ಭರವಸೆಯನ್ನೂ ನೀಡಿದೆ.

ಆ ಮೂಲಕ, ಮೋದಿ ಸರ್ಕಾರ ದೇಶದ ಭದ್ರತೆಯ ವಿಷಯದಲ್ಲಿ ಮಾಡಿರಬಹುದಾದ ಅಪರಾಧದಿಂದ ಬಚಾವಾಗಲು ಸುಪ್ರೀಂ ಕೋರ್ಟು ಅವಕಾಶ ಕೊಟ್ಟಂತಾಗಲಿಲ್ಲವೇ?

ಪೆಗಾಸಸ್ ಅನ್ನು ಬಳಸಿ ಯಾರ್ಯಾರ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂಬ ವಿವರ ಹೇಳುವುದು ದೇಶದ ಭದ್ರತೆಗೆ ಸಂಬಂಧಪಟ್ಟ ವಿಷಯವಾಗಬಹುದಾಗಲೀ, ಪೆಗಾಸಸ್ ಅನ್ನು ದೇಶ ಕೊಂಡಿದೆಯೋ ಇಲ್ಲವೋ ಎಂಬುದು ಹೇಗೆ ದೇಶ ಭದ್ರತೆಯ ವಿಷಯವಾದೀತು?

ಅದರಲ್ಲೂ ಮೋದಿ ನಿಲುವುಗಳನ್ನು ವಿರೋಧಿಸುವ ಪತ್ರಕರ್ತರ ಮೇಲೆ ನಡೆಸುವ ಬೇಹುಗಾರಿಕೆ ದೇಶರಕ್ಷಣೆಯ ವಿಷಯ ಹೇಗಾದೀತು?

ಇತ್ತೀಚಿನ ಈ ಎರಡು ಪ್ರಕರಣಗಳು ಏನಾದರೂ ಸಂದೇಶ ಕೊಡುತ್ತಿವೆಯೇ?

ಮುಖ್ಯ ನ್ಯಾಯಮೂರ್ತಿ ರಮಣ ಹಾಗೂ ನ್ಯಾಯಮೂರ್ತಿ ಚಂದ್ರಚೂಡರ ಸ್ವತಂತ್ರ ನ್ಯಾಯ ನಿರ್ಣಯಗಳು ಸುಪ್ರೀಂಕೋರ್ಟಿನ ಬಗ್ಗೆ ಹುಟ್ಟಿಸಿದ್ದ ಭರವಸೆಗಳು ಉತ್ಪ್ರೇಕ್ಷಿತವಾಗಿದ್ದವೇ?

ಶಿವಸುಂದರ್


ಇದನ್ನೂ ಓದಿ: ಇತಿಹಾಸ ಮತ್ತು ಪ್ರಸ್ತುತದ ಹಲವು ’ಹಾರರ್‌’ಗಳ ನಡುವೆ ಬದುಕುತ್ತಿರುವ ನಾವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...