Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

- Advertisement -
- Advertisement -

ಅಫ್ಘಾನ್‌ ದೇಶವನ್ನು ಇಪ್ಪತ್ತು ವರ್ಷಗಳ ನಂತರ ತಾಲಿಬಾನ್‌ ಮರು ವಶಪಡಿಸಿಕೊಂಡ ನಂತರ ಹಲವು ಬರ್ಬರ ಮತ್ತು ಮಾನವೀಯ ಬಿಕ್ಕಟ್ಟಿನ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲೊಂದಾಗಿದೆ, ‘ಬುರ್ಖಾ ಧರಿಸಿರುವ ಮೂವರು ಮಹಿಳೆಯರ ಕಾಲಿಗೆ ಸರಪಣಿಯಿಂದ ಕಟ್ಟಿ ವ್ಯಕ್ತಿಯೊಬ್ಬ ಎಳೆದೊಯ್ಯುತ್ತಿರುವ’ ಚಿತ್ರ. ಈ ಚಿತ್ರದೊಂದಿಗೆ ಪಾಶ್ಚಿಮಾತ್ಯ ಉಡುಪಿನಲ್ಲಿರುವ ಮಹಿಳೆಯರ ಇನ್ನೊಂದು ಫೋಟೋವನ್ನು ಚಿತ್ರವನ್ನು ಕೂಡಾ ಹಂಚಿಕೊಳ್ಳಲಾಗುತ್ತಿದೆ.

ಈ ಎರಡು ಚಿತ್ರವನ್ನು ಹಂಚಿ, ತಾಲಿಬಾನ್‌ ಆಕ್ರಮಿತ ಅಫ್ಘಾನ್‌ ಮತ್ತು 1960-70 ರ ದಶಕದಲ್ಲಿನ ಅಫ್ಘಾನಿನ ವ್ಯತ್ಯಾಸವನ್ನು ತೋರಿಸಲು ಪ್ರಯತ್ನಿಸಲಾಗುತ್ತಿದೆ. ಟಿವಿ 9 ಭಾರತವರ್ಶ್ ನಿರೂಪಕ ಶುಭಂಕರ್ ಮಿಶ್ರಾ ಕೂಡಾ ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಅವರ ಟ್ವೀಟ್‌ ಅನ್ನು ಕೆಳಗೆ ನೀಡಲಾಗಿದೆ. (ಆರ್ಕೈವ್ ಲಿಂಕ್)

ಮೇಲಿನ ಟ್ವೀಟ್‌ಗಳನ್ನು ಹಾಕಿದ ಕೆಲವೆ ಗಂಟೆಗಳ ನಂತರ, ಶುಭಂಕರ್ ಮಿಶ್ರಾ ಮತ್ತೊಮ್ಮೆ ಚಿತ್ರಗಳನ್ನು ಬೇರೆ ಗ್ರಾಫಿಕ್‌ನಲ್ಲಿ ಟ್ವೀಟ್ ಮಾಡಿದ್ದಾರೆ. (ಆರ್ಕೈವ್ ಲಿಂಕ್)

ಈ ಚಿತ್ರವು ಟ್ವಿಟರ್‌ನಲ್ಲಿ ವೈರಲ್ ಆಗಿದೆ.

ಈ ಚಿತ್ರಗಳು ಫೇಸ್‌ಬುಕ್‌ನಲ್ಲಿ ಕೂಡಾ ವೈರಲ್‌ ಆಗಿದೆ. (1 ಮತ್ತು 2)

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರಗಳನ್ನು ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಗಿರುವ ಆಲ್ಟ್‌ನ್ಯೂಸ್‌ ಫ್ಯಾಕ್ಟ್‌ಚೆಕ್‌ ನಡೆಸಿದೆ. ವೈರಲ್‌ ಚಿತ್ರವನ್ನು ಸೂಕ್ಷ್ಮವಾಗಿ ನೋಡಿದರೆ, ಸಂಕೋಲೆಗಳ ನೆರಳು ಸ್ವಲ್ಪ ವಿಚಿತ್ರವಾಗಿರುವುದನ್ನು ಗಮನಿಸಬಹುದಾಗಿದೆ. ಪುರುಷ ಮತ್ತು ಅವರ ಹಿಂದೆ ಇರುವ ಮಹಿಳೆಯ ನಡುವೆ ಸಂಕೋಲೆಯ ನೆರಳು ಗೋಚರಿಸುತ್ತದೆ, ಆದರೆ ನಂತರದ ಮಹಿಳೆಯ ನಡುವೆ ಈ ನೆರಳು ಕಾಣೆಯಾಗಿದೆ. ಆದರೆ ಎರಡನೆ ಮತ್ತು ಮೂರನೆ ಮಹಿಳೆಯ ನಡುವೆ ಇದು ಮತ್ತೆ ಕಾಣುತ್ತಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಈ ಚಿತ್ರಗಳಿಗಾಗಿ ಇಂಟರ್‌ನೆಟ್‌ನಲ್ಲಿ ಹುಡುಕಿರುವ ಆಲ್ಟ್‌ನ್ಯೂಸ್‌, ಎಬಿಪಿ ನ್ಯೂಸ್‌ನ ಬಂಗಾಳಿ ವಿಭಾಗವಾದ ಎಬಿಪಿ ಆನಂದದ 2017 ರ ವರದಿಯಲ್ಲಿ ವೈರಲ್‌ ಚಿತ್ರವನ್ನು ಪತ್ತೆಹಚ್ಚಿದೆ. ಆದರೆ ಈ ವರದಿಯಲ್ಲಿ ಇರುವ ಅದೇ ಚಿತ್ರದಲ್ಲಿ ಯಾವುದೆ ಸಂಕೋಲೆಗಳಿಲ್ಲ.

ಇದೇ ಚಿತ್ರವನ್ನು ‘ಮಾರ್ಡೆನ್‌ ಡಿಪ್ಲೊಮಸಿ’ 2017 ರ ಲೇಖನದಲ್ಲಿ ಬಳಸಿಕೊಂಡಿದೆ. ಇಲ್ಲಿಯೂ ವೈರಲ್‌ ಚಿತ್ರದಲ್ಲಿ ಇರುವಂತೆ ಯಾವುದೇ ಸಂಕೋಲೆಗಳು ಕಾಣುತ್ತಿಲ್ಲ.

ಇಷ್ಟೇ ಅಲ್ಲದೆ, 2011 ಮತ್ತು 2012 ರಲ್ಲಿ ಬರೆದ ಕೆಲವು ಬ್ಲಾಗ್ ಪೋಸ್ಟ್‌ಗಳಲ್ಲಿ ಕೂಡಾ ಈ ಚಿತ್ರವನ್ನು ಬಳಸಿಕೊಳ್ಳಲಾಗಿದ್ದು, ಅವುಗಳಲ್ಲಿ ಕೂಡಾ ಸಂಕೋಲೆಗಳು ಇಲ್ಲ. [ಲಿಂಕ್ 1 (ಆರ್ಕೈವ್ ಲಿಂಕ್), ಲಿಂಕ್ 2 (ಆರ್ಕೈವ್ ಲಿಂಕ್), ಲಿಂಕ್ 3 (2012 ಆರ್ಕೈವ್ ಲಿಂಕ್), ಲಿಂಕ್ 4 (2016 ಆರ್ಕೈವ್ ಲಿಂಕ್)]

ಇಂಟರ್ನೆಟ್ ಆರ್ಕೈವ್ ಲೈಬ್ರರಿಯನ್ನು ಬಳಸಿ, ಆಲ್ಟ್ ನ್ಯೂಸ್ ಈ ಬ್ಲಾಗ್ ಪೋಸ್ಟ್‌ಗಳ ಆರ್ಕೈವ್‌ ಮಾಡಿದೆ. ವಾಸ್ತವಲ್ಲಿ ಮೂಲ ಫೋಟೋವನ್ನು ಮೇ 2011 ರಲ್ಲಿ ಹಂಚಿಕೊಳ್ಳಲಾಗಿದೆ. ಇದರರ್ಥ ಚಿತ್ರವು ಕನಿಷ್ಠ 10 ವರ್ಷ ಹಳೆಯದಾಗಿದೆ.

ಇದನ್ನೂ ಓದಿ: ಅರಳಿ ಮರದಲ್ಲಿ ಮಾವಿನ ಕಾಯಿ ಬಿಟ್ಟಿದೆ ಎಂಬ ವೈರಲ್ ವಿಡಿಯೋ ಸುಳ್ಳು: ವಾಸ್ತವವೇನು?

ಈ ಎಲ್ಲಾ ಬ್ಲಾಗ್ ಪೋಸ್ಟ್‌ಗಳು ಒಂದೇ ಆಗಿದ್ದು, ಅವುಗಳನ್ನು ಪದಶಃ ಕಾಪಿ ಪೇಸ್ಟ್‌ ಮಾಡಲಾಗಿದೆ. ಎಲ್ಲಾ ಬ್ಲಾಗ್‌ ಪೋಸ್ಟ್‌ಗಳೂ, ಅಮೆರಿಕಾದ ಪತ್ರಕರ್ತೆ ಬಾರ್ಬರಾ ವಾಲ್ಟರ್ಸ್ ಅಫ್ಘಾನಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದಾಗ, ಅಫ್ಘಾನಿಸ್ತಾನದ ಮಹಿಳೆಯೊಂದಿಗೆ ಮಾತನಾಡಿದ ಘಟನೆಯನ್ನು ವಿವರಿಸುತ್ತದೆ.

2017 ರಲ್ಲಿ ಅಭಿಜಿತ್ ಅಯ್ಯರ್ ಮಿತ್ರ ಅವರು ವಾಟ್ಸಾಪ್ ಅನ್ನು ಉಲ್ಲೇಖಿಸಿ ಟ್ವಿಟರ್‌ನಲ್ಲಿ ಅದೇ ಕಥೆಯನ್ನು ಹಂಚಿಕೊಂಡಿದ್ದಾರೆ. ಆದ್ದರಿಂದ, ಈ ಘಟನೆಯನ್ನು ಹಿಂದೆ ಭಾರತದಲ್ಲೂ ಹಂಚಿಕೊಳ್ಳಲಾಗಿತ್ತು. (ಆರ್ಕೈವ್ ಲಿಂಕ್)

ಬಾರ್ಬರಾ ವಾಲ್ಟರ್ಸ್ ವರದಿ ಮಾಡಿದ ಈ ಘಟನೆಯನ್ನು ಅಮೆರಿಕದ ಪ್ಯಾಕ್ಟ್‌ ಚೆಕಿಂಗ್‌ ಸಂಸ್ಥೆ 2014 ರಲ್ಲಿ ತನಿಖೆ ಮಾಡಿ ಸತ್ಯಾಸತ್ಯತೆಯನ್ನು ಹೊರ ಹಾಕಿದೆ. ಅದು ನಡೆಸಿದ ತನಿಖೆಯಂತೆ ಈ ಘಟನೆಯು ಕೇವಲ ವಿಡಂಬನಾತ್ಮಕ ಎಂದು ತೀರ್ಮಾನಿಸಿದೆ, ಇದು 2001 ರಿಂದ ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ.

ಒಟ್ಟಿನಲ್ಲಿ ಸಂಕ್ಷಿಪ್ತವಾಗಿ ಹೇಳುವುದಾದರೆ, ಸುಮಾರು ಹತ್ತು ವರ್ಷಗಳ ಹಿಂದಿನ ಚಿತ್ರವನ್ನು ಎಡಿಟ್‌ ಮಾಡಿ, ತಾಲಿಬಾ‌ನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರದ ಚಿತ್ರ ಎಂದು ಶೇರ್‌ ಮಾಡಲಾಗುತ್ತಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...