Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

- Advertisement -
- Advertisement -

ಅಫ್ಘಾನ್‌ ದೇಶವನ್ನು ಇಪ್ಪತ್ತು ವರ್ಷಗಳ ನಂತರ ತಾಲಿಬಾನ್‌ ಮರು ವಶಪಡಿಸಿಕೊಂಡ ನಂತರ ಹಲವು ಬರ್ಬರ ಮತ್ತು ಮಾನವೀಯ ಬಿಕ್ಕಟ್ಟಿನ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲೊಂದಾಗಿದೆ, ‘ಬುರ್ಖಾ ಧರಿಸಿರುವ ಮೂವರು ಮಹಿಳೆಯರ ಕಾಲಿಗೆ ಸರಪಣಿಯಿಂದ ಕಟ್ಟಿ ವ್ಯಕ್ತಿಯೊಬ್ಬ ಎಳೆದೊಯ್ಯುತ್ತಿರುವ’ ಚಿತ್ರ. ಈ ಚಿತ್ರದೊಂದಿಗೆ ಪಾಶ್ಚಿಮಾತ್ಯ ಉಡುಪಿನಲ್ಲಿರುವ ಮಹಿಳೆಯರ ಇನ್ನೊಂದು ಫೋಟೋವನ್ನು ಚಿತ್ರವನ್ನು ಕೂಡಾ ಹಂಚಿಕೊಳ್ಳಲಾಗುತ್ತಿದೆ.

ಈ ಎರಡು ಚಿತ್ರವನ್ನು ಹಂಚಿ, ತಾಲಿಬಾನ್‌ ಆಕ್ರಮಿತ ಅಫ್ಘಾನ್‌ ಮತ್ತು 1960-70 ರ ದಶಕದಲ್ಲಿನ ಅಫ್ಘಾನಿನ ವ್ಯತ್ಯಾಸವನ್ನು ತೋರಿಸಲು ಪ್ರಯತ್ನಿಸಲಾಗುತ್ತಿದೆ. ಟಿವಿ 9 ಭಾರತವರ್ಶ್ ನಿರೂಪಕ ಶುಭಂಕರ್ ಮಿಶ್ರಾ ಕೂಡಾ ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಅವರ ಟ್ವೀಟ್‌ ಅನ್ನು ಕೆಳಗೆ ನೀಡಲಾಗಿದೆ. (ಆರ್ಕೈವ್ ಲಿಂಕ್)

ಮೇಲಿನ ಟ್ವೀಟ್‌ಗಳನ್ನು ಹಾಕಿದ ಕೆಲವೆ ಗಂಟೆಗಳ ನಂತರ, ಶುಭಂಕರ್ ಮಿಶ್ರಾ ಮತ್ತೊಮ್ಮೆ ಚಿತ್ರಗಳನ್ನು ಬೇರೆ ಗ್ರಾಫಿಕ್‌ನಲ್ಲಿ ಟ್ವೀಟ್ ಮಾಡಿದ್ದಾರೆ. (ಆರ್ಕೈವ್ ಲಿಂಕ್)

ಈ ಚಿತ್ರವು ಟ್ವಿಟರ್‌ನಲ್ಲಿ ವೈರಲ್ ಆಗಿದೆ.

ಈ ಚಿತ್ರಗಳು ಫೇಸ್‌ಬುಕ್‌ನಲ್ಲಿ ಕೂಡಾ ವೈರಲ್‌ ಆಗಿದೆ. (1 ಮತ್ತು 2)

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರಗಳನ್ನು ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಗಿರುವ ಆಲ್ಟ್‌ನ್ಯೂಸ್‌ ಫ್ಯಾಕ್ಟ್‌ಚೆಕ್‌ ನಡೆಸಿದೆ. ವೈರಲ್‌ ಚಿತ್ರವನ್ನು ಸೂಕ್ಷ್ಮವಾಗಿ ನೋಡಿದರೆ, ಸಂಕೋಲೆಗಳ ನೆರಳು ಸ್ವಲ್ಪ ವಿಚಿತ್ರವಾಗಿರುವುದನ್ನು ಗಮನಿಸಬಹುದಾಗಿದೆ. ಪುರುಷ ಮತ್ತು ಅವರ ಹಿಂದೆ ಇರುವ ಮಹಿಳೆಯ ನಡುವೆ ಸಂಕೋಲೆಯ ನೆರಳು ಗೋಚರಿಸುತ್ತದೆ, ಆದರೆ ನಂತರದ ಮಹಿಳೆಯ ನಡುವೆ ಈ ನೆರಳು ಕಾಣೆಯಾಗಿದೆ. ಆದರೆ ಎರಡನೆ ಮತ್ತು ಮೂರನೆ ಮಹಿಳೆಯ ನಡುವೆ ಇದು ಮತ್ತೆ ಕಾಣುತ್ತಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಈ ಚಿತ್ರಗಳಿಗಾಗಿ ಇಂಟರ್‌ನೆಟ್‌ನಲ್ಲಿ ಹುಡುಕಿರುವ ಆಲ್ಟ್‌ನ್ಯೂಸ್‌, ಎಬಿಪಿ ನ್ಯೂಸ್‌ನ ಬಂಗಾಳಿ ವಿಭಾಗವಾದ ಎಬಿಪಿ ಆನಂದದ 2017 ರ ವರದಿಯಲ್ಲಿ ವೈರಲ್‌ ಚಿತ್ರವನ್ನು ಪತ್ತೆಹಚ್ಚಿದೆ. ಆದರೆ ಈ ವರದಿಯಲ್ಲಿ ಇರುವ ಅದೇ ಚಿತ್ರದಲ್ಲಿ ಯಾವುದೆ ಸಂಕೋಲೆಗಳಿಲ್ಲ.

ಇದೇ ಚಿತ್ರವನ್ನು ‘ಮಾರ್ಡೆನ್‌ ಡಿಪ್ಲೊಮಸಿ’ 2017 ರ ಲೇಖನದಲ್ಲಿ ಬಳಸಿಕೊಂಡಿದೆ. ಇಲ್ಲಿಯೂ ವೈರಲ್‌ ಚಿತ್ರದಲ್ಲಿ ಇರುವಂತೆ ಯಾವುದೇ ಸಂಕೋಲೆಗಳು ಕಾಣುತ್ತಿಲ್ಲ.

ಇಷ್ಟೇ ಅಲ್ಲದೆ, 2011 ಮತ್ತು 2012 ರಲ್ಲಿ ಬರೆದ ಕೆಲವು ಬ್ಲಾಗ್ ಪೋಸ್ಟ್‌ಗಳಲ್ಲಿ ಕೂಡಾ ಈ ಚಿತ್ರವನ್ನು ಬಳಸಿಕೊಳ್ಳಲಾಗಿದ್ದು, ಅವುಗಳಲ್ಲಿ ಕೂಡಾ ಸಂಕೋಲೆಗಳು ಇಲ್ಲ. [ಲಿಂಕ್ 1 (ಆರ್ಕೈವ್ ಲಿಂಕ್), ಲಿಂಕ್ 2 (ಆರ್ಕೈವ್ ಲಿಂಕ್), ಲಿಂಕ್ 3 (2012 ಆರ್ಕೈವ್ ಲಿಂಕ್), ಲಿಂಕ್ 4 (2016 ಆರ್ಕೈವ್ ಲಿಂಕ್)]

ಇಂಟರ್ನೆಟ್ ಆರ್ಕೈವ್ ಲೈಬ್ರರಿಯನ್ನು ಬಳಸಿ, ಆಲ್ಟ್ ನ್ಯೂಸ್ ಈ ಬ್ಲಾಗ್ ಪೋಸ್ಟ್‌ಗಳ ಆರ್ಕೈವ್‌ ಮಾಡಿದೆ. ವಾಸ್ತವಲ್ಲಿ ಮೂಲ ಫೋಟೋವನ್ನು ಮೇ 2011 ರಲ್ಲಿ ಹಂಚಿಕೊಳ್ಳಲಾಗಿದೆ. ಇದರರ್ಥ ಚಿತ್ರವು ಕನಿಷ್ಠ 10 ವರ್ಷ ಹಳೆಯದಾಗಿದೆ.

ಇದನ್ನೂ ಓದಿ: ಅರಳಿ ಮರದಲ್ಲಿ ಮಾವಿನ ಕಾಯಿ ಬಿಟ್ಟಿದೆ ಎಂಬ ವೈರಲ್ ವಿಡಿಯೋ ಸುಳ್ಳು: ವಾಸ್ತವವೇನು?

ಈ ಎಲ್ಲಾ ಬ್ಲಾಗ್ ಪೋಸ್ಟ್‌ಗಳು ಒಂದೇ ಆಗಿದ್ದು, ಅವುಗಳನ್ನು ಪದಶಃ ಕಾಪಿ ಪೇಸ್ಟ್‌ ಮಾಡಲಾಗಿದೆ. ಎಲ್ಲಾ ಬ್ಲಾಗ್‌ ಪೋಸ್ಟ್‌ಗಳೂ, ಅಮೆರಿಕಾದ ಪತ್ರಕರ್ತೆ ಬಾರ್ಬರಾ ವಾಲ್ಟರ್ಸ್ ಅಫ್ಘಾನಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದಾಗ, ಅಫ್ಘಾನಿಸ್ತಾನದ ಮಹಿಳೆಯೊಂದಿಗೆ ಮಾತನಾಡಿದ ಘಟನೆಯನ್ನು ವಿವರಿಸುತ್ತದೆ.

2017 ರಲ್ಲಿ ಅಭಿಜಿತ್ ಅಯ್ಯರ್ ಮಿತ್ರ ಅವರು ವಾಟ್ಸಾಪ್ ಅನ್ನು ಉಲ್ಲೇಖಿಸಿ ಟ್ವಿಟರ್‌ನಲ್ಲಿ ಅದೇ ಕಥೆಯನ್ನು ಹಂಚಿಕೊಂಡಿದ್ದಾರೆ. ಆದ್ದರಿಂದ, ಈ ಘಟನೆಯನ್ನು ಹಿಂದೆ ಭಾರತದಲ್ಲೂ ಹಂಚಿಕೊಳ್ಳಲಾಗಿತ್ತು. (ಆರ್ಕೈವ್ ಲಿಂಕ್)

ಬಾರ್ಬರಾ ವಾಲ್ಟರ್ಸ್ ವರದಿ ಮಾಡಿದ ಈ ಘಟನೆಯನ್ನು ಅಮೆರಿಕದ ಪ್ಯಾಕ್ಟ್‌ ಚೆಕಿಂಗ್‌ ಸಂಸ್ಥೆ 2014 ರಲ್ಲಿ ತನಿಖೆ ಮಾಡಿ ಸತ್ಯಾಸತ್ಯತೆಯನ್ನು ಹೊರ ಹಾಕಿದೆ. ಅದು ನಡೆಸಿದ ತನಿಖೆಯಂತೆ ಈ ಘಟನೆಯು ಕೇವಲ ವಿಡಂಬನಾತ್ಮಕ ಎಂದು ತೀರ್ಮಾನಿಸಿದೆ, ಇದು 2001 ರಿಂದ ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ.

ಒಟ್ಟಿನಲ್ಲಿ ಸಂಕ್ಷಿಪ್ತವಾಗಿ ಹೇಳುವುದಾದರೆ, ಸುಮಾರು ಹತ್ತು ವರ್ಷಗಳ ಹಿಂದಿನ ಚಿತ್ರವನ್ನು ಎಡಿಟ್‌ ಮಾಡಿ, ತಾಲಿಬಾ‌ನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರದ ಚಿತ್ರ ಎಂದು ಶೇರ್‌ ಮಾಡಲಾಗುತ್ತಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...