Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

- Advertisement -
- Advertisement -

ಅಫ್ಘಾನ್‌ ದೇಶವನ್ನು ಇಪ್ಪತ್ತು ವರ್ಷಗಳ ನಂತರ ತಾಲಿಬಾನ್‌ ಮರು ವಶಪಡಿಸಿಕೊಂಡ ನಂತರ ಹಲವು ಬರ್ಬರ ಮತ್ತು ಮಾನವೀಯ ಬಿಕ್ಕಟ್ಟಿನ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲೊಂದಾಗಿದೆ, ‘ಬುರ್ಖಾ ಧರಿಸಿರುವ ಮೂವರು ಮಹಿಳೆಯರ ಕಾಲಿಗೆ ಸರಪಣಿಯಿಂದ ಕಟ್ಟಿ ವ್ಯಕ್ತಿಯೊಬ್ಬ ಎಳೆದೊಯ್ಯುತ್ತಿರುವ’ ಚಿತ್ರ. ಈ ಚಿತ್ರದೊಂದಿಗೆ ಪಾಶ್ಚಿಮಾತ್ಯ ಉಡುಪಿನಲ್ಲಿರುವ ಮಹಿಳೆಯರ ಇನ್ನೊಂದು ಫೋಟೋವನ್ನು ಚಿತ್ರವನ್ನು ಕೂಡಾ ಹಂಚಿಕೊಳ್ಳಲಾಗುತ್ತಿದೆ.

ಈ ಎರಡು ಚಿತ್ರವನ್ನು ಹಂಚಿ, ತಾಲಿಬಾನ್‌ ಆಕ್ರಮಿತ ಅಫ್ಘಾನ್‌ ಮತ್ತು 1960-70 ರ ದಶಕದಲ್ಲಿನ ಅಫ್ಘಾನಿನ ವ್ಯತ್ಯಾಸವನ್ನು ತೋರಿಸಲು ಪ್ರಯತ್ನಿಸಲಾಗುತ್ತಿದೆ. ಟಿವಿ 9 ಭಾರತವರ್ಶ್ ನಿರೂಪಕ ಶುಭಂಕರ್ ಮಿಶ್ರಾ ಕೂಡಾ ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಅವರ ಟ್ವೀಟ್‌ ಅನ್ನು ಕೆಳಗೆ ನೀಡಲಾಗಿದೆ. (ಆರ್ಕೈವ್ ಲಿಂಕ್)

ಮೇಲಿನ ಟ್ವೀಟ್‌ಗಳನ್ನು ಹಾಕಿದ ಕೆಲವೆ ಗಂಟೆಗಳ ನಂತರ, ಶುಭಂಕರ್ ಮಿಶ್ರಾ ಮತ್ತೊಮ್ಮೆ ಚಿತ್ರಗಳನ್ನು ಬೇರೆ ಗ್ರಾಫಿಕ್‌ನಲ್ಲಿ ಟ್ವೀಟ್ ಮಾಡಿದ್ದಾರೆ. (ಆರ್ಕೈವ್ ಲಿಂಕ್)

ಈ ಚಿತ್ರವು ಟ್ವಿಟರ್‌ನಲ್ಲಿ ವೈರಲ್ ಆಗಿದೆ.

ಈ ಚಿತ್ರಗಳು ಫೇಸ್‌ಬುಕ್‌ನಲ್ಲಿ ಕೂಡಾ ವೈರಲ್‌ ಆಗಿದೆ. (1 ಮತ್ತು 2)

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರಗಳನ್ನು ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಗಿರುವ ಆಲ್ಟ್‌ನ್ಯೂಸ್‌ ಫ್ಯಾಕ್ಟ್‌ಚೆಕ್‌ ನಡೆಸಿದೆ. ವೈರಲ್‌ ಚಿತ್ರವನ್ನು ಸೂಕ್ಷ್ಮವಾಗಿ ನೋಡಿದರೆ, ಸಂಕೋಲೆಗಳ ನೆರಳು ಸ್ವಲ್ಪ ವಿಚಿತ್ರವಾಗಿರುವುದನ್ನು ಗಮನಿಸಬಹುದಾಗಿದೆ. ಪುರುಷ ಮತ್ತು ಅವರ ಹಿಂದೆ ಇರುವ ಮಹಿಳೆಯ ನಡುವೆ ಸಂಕೋಲೆಯ ನೆರಳು ಗೋಚರಿಸುತ್ತದೆ, ಆದರೆ ನಂತರದ ಮಹಿಳೆಯ ನಡುವೆ ಈ ನೆರಳು ಕಾಣೆಯಾಗಿದೆ. ಆದರೆ ಎರಡನೆ ಮತ್ತು ಮೂರನೆ ಮಹಿಳೆಯ ನಡುವೆ ಇದು ಮತ್ತೆ ಕಾಣುತ್ತಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಈ ಚಿತ್ರಗಳಿಗಾಗಿ ಇಂಟರ್‌ನೆಟ್‌ನಲ್ಲಿ ಹುಡುಕಿರುವ ಆಲ್ಟ್‌ನ್ಯೂಸ್‌, ಎಬಿಪಿ ನ್ಯೂಸ್‌ನ ಬಂಗಾಳಿ ವಿಭಾಗವಾದ ಎಬಿಪಿ ಆನಂದದ 2017 ರ ವರದಿಯಲ್ಲಿ ವೈರಲ್‌ ಚಿತ್ರವನ್ನು ಪತ್ತೆಹಚ್ಚಿದೆ. ಆದರೆ ಈ ವರದಿಯಲ್ಲಿ ಇರುವ ಅದೇ ಚಿತ್ರದಲ್ಲಿ ಯಾವುದೆ ಸಂಕೋಲೆಗಳಿಲ್ಲ.

ಇದೇ ಚಿತ್ರವನ್ನು ‘ಮಾರ್ಡೆನ್‌ ಡಿಪ್ಲೊಮಸಿ’ 2017 ರ ಲೇಖನದಲ್ಲಿ ಬಳಸಿಕೊಂಡಿದೆ. ಇಲ್ಲಿಯೂ ವೈರಲ್‌ ಚಿತ್ರದಲ್ಲಿ ಇರುವಂತೆ ಯಾವುದೇ ಸಂಕೋಲೆಗಳು ಕಾಣುತ್ತಿಲ್ಲ.

ಇಷ್ಟೇ ಅಲ್ಲದೆ, 2011 ಮತ್ತು 2012 ರಲ್ಲಿ ಬರೆದ ಕೆಲವು ಬ್ಲಾಗ್ ಪೋಸ್ಟ್‌ಗಳಲ್ಲಿ ಕೂಡಾ ಈ ಚಿತ್ರವನ್ನು ಬಳಸಿಕೊಳ್ಳಲಾಗಿದ್ದು, ಅವುಗಳಲ್ಲಿ ಕೂಡಾ ಸಂಕೋಲೆಗಳು ಇಲ್ಲ. [ಲಿಂಕ್ 1 (ಆರ್ಕೈವ್ ಲಿಂಕ್), ಲಿಂಕ್ 2 (ಆರ್ಕೈವ್ ಲಿಂಕ್), ಲಿಂಕ್ 3 (2012 ಆರ್ಕೈವ್ ಲಿಂಕ್), ಲಿಂಕ್ 4 (2016 ಆರ್ಕೈವ್ ಲಿಂಕ್)]

ಇಂಟರ್ನೆಟ್ ಆರ್ಕೈವ್ ಲೈಬ್ರರಿಯನ್ನು ಬಳಸಿ, ಆಲ್ಟ್ ನ್ಯೂಸ್ ಈ ಬ್ಲಾಗ್ ಪೋಸ್ಟ್‌ಗಳ ಆರ್ಕೈವ್‌ ಮಾಡಿದೆ. ವಾಸ್ತವಲ್ಲಿ ಮೂಲ ಫೋಟೋವನ್ನು ಮೇ 2011 ರಲ್ಲಿ ಹಂಚಿಕೊಳ್ಳಲಾಗಿದೆ. ಇದರರ್ಥ ಚಿತ್ರವು ಕನಿಷ್ಠ 10 ವರ್ಷ ಹಳೆಯದಾಗಿದೆ.

ಇದನ್ನೂ ಓದಿ: ಅರಳಿ ಮರದಲ್ಲಿ ಮಾವಿನ ಕಾಯಿ ಬಿಟ್ಟಿದೆ ಎಂಬ ವೈರಲ್ ವಿಡಿಯೋ ಸುಳ್ಳು: ವಾಸ್ತವವೇನು?

ಈ ಎಲ್ಲಾ ಬ್ಲಾಗ್ ಪೋಸ್ಟ್‌ಗಳು ಒಂದೇ ಆಗಿದ್ದು, ಅವುಗಳನ್ನು ಪದಶಃ ಕಾಪಿ ಪೇಸ್ಟ್‌ ಮಾಡಲಾಗಿದೆ. ಎಲ್ಲಾ ಬ್ಲಾಗ್‌ ಪೋಸ್ಟ್‌ಗಳೂ, ಅಮೆರಿಕಾದ ಪತ್ರಕರ್ತೆ ಬಾರ್ಬರಾ ವಾಲ್ಟರ್ಸ್ ಅಫ್ಘಾನಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದಾಗ, ಅಫ್ಘಾನಿಸ್ತಾನದ ಮಹಿಳೆಯೊಂದಿಗೆ ಮಾತನಾಡಿದ ಘಟನೆಯನ್ನು ವಿವರಿಸುತ್ತದೆ.

2017 ರಲ್ಲಿ ಅಭಿಜಿತ್ ಅಯ್ಯರ್ ಮಿತ್ರ ಅವರು ವಾಟ್ಸಾಪ್ ಅನ್ನು ಉಲ್ಲೇಖಿಸಿ ಟ್ವಿಟರ್‌ನಲ್ಲಿ ಅದೇ ಕಥೆಯನ್ನು ಹಂಚಿಕೊಂಡಿದ್ದಾರೆ. ಆದ್ದರಿಂದ, ಈ ಘಟನೆಯನ್ನು ಹಿಂದೆ ಭಾರತದಲ್ಲೂ ಹಂಚಿಕೊಳ್ಳಲಾಗಿತ್ತು. (ಆರ್ಕೈವ್ ಲಿಂಕ್)

ಬಾರ್ಬರಾ ವಾಲ್ಟರ್ಸ್ ವರದಿ ಮಾಡಿದ ಈ ಘಟನೆಯನ್ನು ಅಮೆರಿಕದ ಪ್ಯಾಕ್ಟ್‌ ಚೆಕಿಂಗ್‌ ಸಂಸ್ಥೆ 2014 ರಲ್ಲಿ ತನಿಖೆ ಮಾಡಿ ಸತ್ಯಾಸತ್ಯತೆಯನ್ನು ಹೊರ ಹಾಕಿದೆ. ಅದು ನಡೆಸಿದ ತನಿಖೆಯಂತೆ ಈ ಘಟನೆಯು ಕೇವಲ ವಿಡಂಬನಾತ್ಮಕ ಎಂದು ತೀರ್ಮಾನಿಸಿದೆ, ಇದು 2001 ರಿಂದ ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ.

ಒಟ್ಟಿನಲ್ಲಿ ಸಂಕ್ಷಿಪ್ತವಾಗಿ ಹೇಳುವುದಾದರೆ, ಸುಮಾರು ಹತ್ತು ವರ್ಷಗಳ ಹಿಂದಿನ ಚಿತ್ರವನ್ನು ಎಡಿಟ್‌ ಮಾಡಿ, ತಾಲಿಬಾ‌ನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರದ ಚಿತ್ರ ಎಂದು ಶೇರ್‌ ಮಾಡಲಾಗುತ್ತಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...