Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

- Advertisement -
- Advertisement -

ಅಫ್ಘಾನ್‌ ದೇಶವನ್ನು ಇಪ್ಪತ್ತು ವರ್ಷಗಳ ನಂತರ ತಾಲಿಬಾನ್‌ ಮರು ವಶಪಡಿಸಿಕೊಂಡ ನಂತರ ಹಲವು ಬರ್ಬರ ಮತ್ತು ಮಾನವೀಯ ಬಿಕ್ಕಟ್ಟಿನ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲೊಂದಾಗಿದೆ, ‘ಬುರ್ಖಾ ಧರಿಸಿರುವ ಮೂವರು ಮಹಿಳೆಯರ ಕಾಲಿಗೆ ಸರಪಣಿಯಿಂದ ಕಟ್ಟಿ ವ್ಯಕ್ತಿಯೊಬ್ಬ ಎಳೆದೊಯ್ಯುತ್ತಿರುವ’ ಚಿತ್ರ. ಈ ಚಿತ್ರದೊಂದಿಗೆ ಪಾಶ್ಚಿಮಾತ್ಯ ಉಡುಪಿನಲ್ಲಿರುವ ಮಹಿಳೆಯರ ಇನ್ನೊಂದು ಫೋಟೋವನ್ನು ಚಿತ್ರವನ್ನು ಕೂಡಾ ಹಂಚಿಕೊಳ್ಳಲಾಗುತ್ತಿದೆ.

ಈ ಎರಡು ಚಿತ್ರವನ್ನು ಹಂಚಿ, ತಾಲಿಬಾನ್‌ ಆಕ್ರಮಿತ ಅಫ್ಘಾನ್‌ ಮತ್ತು 1960-70 ರ ದಶಕದಲ್ಲಿನ ಅಫ್ಘಾನಿನ ವ್ಯತ್ಯಾಸವನ್ನು ತೋರಿಸಲು ಪ್ರಯತ್ನಿಸಲಾಗುತ್ತಿದೆ. ಟಿವಿ 9 ಭಾರತವರ್ಶ್ ನಿರೂಪಕ ಶುಭಂಕರ್ ಮಿಶ್ರಾ ಕೂಡಾ ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಅವರ ಟ್ವೀಟ್‌ ಅನ್ನು ಕೆಳಗೆ ನೀಡಲಾಗಿದೆ. (ಆರ್ಕೈವ್ ಲಿಂಕ್)

ಮೇಲಿನ ಟ್ವೀಟ್‌ಗಳನ್ನು ಹಾಕಿದ ಕೆಲವೆ ಗಂಟೆಗಳ ನಂತರ, ಶುಭಂಕರ್ ಮಿಶ್ರಾ ಮತ್ತೊಮ್ಮೆ ಚಿತ್ರಗಳನ್ನು ಬೇರೆ ಗ್ರಾಫಿಕ್‌ನಲ್ಲಿ ಟ್ವೀಟ್ ಮಾಡಿದ್ದಾರೆ. (ಆರ್ಕೈವ್ ಲಿಂಕ್)

ಈ ಚಿತ್ರವು ಟ್ವಿಟರ್‌ನಲ್ಲಿ ವೈರಲ್ ಆಗಿದೆ.

ಈ ಚಿತ್ರಗಳು ಫೇಸ್‌ಬುಕ್‌ನಲ್ಲಿ ಕೂಡಾ ವೈರಲ್‌ ಆಗಿದೆ. (1 ಮತ್ತು 2)

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರಗಳನ್ನು ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಗಿರುವ ಆಲ್ಟ್‌ನ್ಯೂಸ್‌ ಫ್ಯಾಕ್ಟ್‌ಚೆಕ್‌ ನಡೆಸಿದೆ. ವೈರಲ್‌ ಚಿತ್ರವನ್ನು ಸೂಕ್ಷ್ಮವಾಗಿ ನೋಡಿದರೆ, ಸಂಕೋಲೆಗಳ ನೆರಳು ಸ್ವಲ್ಪ ವಿಚಿತ್ರವಾಗಿರುವುದನ್ನು ಗಮನಿಸಬಹುದಾಗಿದೆ. ಪುರುಷ ಮತ್ತು ಅವರ ಹಿಂದೆ ಇರುವ ಮಹಿಳೆಯ ನಡುವೆ ಸಂಕೋಲೆಯ ನೆರಳು ಗೋಚರಿಸುತ್ತದೆ, ಆದರೆ ನಂತರದ ಮಹಿಳೆಯ ನಡುವೆ ಈ ನೆರಳು ಕಾಣೆಯಾಗಿದೆ. ಆದರೆ ಎರಡನೆ ಮತ್ತು ಮೂರನೆ ಮಹಿಳೆಯ ನಡುವೆ ಇದು ಮತ್ತೆ ಕಾಣುತ್ತಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಈ ಚಿತ್ರಗಳಿಗಾಗಿ ಇಂಟರ್‌ನೆಟ್‌ನಲ್ಲಿ ಹುಡುಕಿರುವ ಆಲ್ಟ್‌ನ್ಯೂಸ್‌, ಎಬಿಪಿ ನ್ಯೂಸ್‌ನ ಬಂಗಾಳಿ ವಿಭಾಗವಾದ ಎಬಿಪಿ ಆನಂದದ 2017 ರ ವರದಿಯಲ್ಲಿ ವೈರಲ್‌ ಚಿತ್ರವನ್ನು ಪತ್ತೆಹಚ್ಚಿದೆ. ಆದರೆ ಈ ವರದಿಯಲ್ಲಿ ಇರುವ ಅದೇ ಚಿತ್ರದಲ್ಲಿ ಯಾವುದೆ ಸಂಕೋಲೆಗಳಿಲ್ಲ.

ಇದೇ ಚಿತ್ರವನ್ನು ‘ಮಾರ್ಡೆನ್‌ ಡಿಪ್ಲೊಮಸಿ’ 2017 ರ ಲೇಖನದಲ್ಲಿ ಬಳಸಿಕೊಂಡಿದೆ. ಇಲ್ಲಿಯೂ ವೈರಲ್‌ ಚಿತ್ರದಲ್ಲಿ ಇರುವಂತೆ ಯಾವುದೇ ಸಂಕೋಲೆಗಳು ಕಾಣುತ್ತಿಲ್ಲ.

ಇಷ್ಟೇ ಅಲ್ಲದೆ, 2011 ಮತ್ತು 2012 ರಲ್ಲಿ ಬರೆದ ಕೆಲವು ಬ್ಲಾಗ್ ಪೋಸ್ಟ್‌ಗಳಲ್ಲಿ ಕೂಡಾ ಈ ಚಿತ್ರವನ್ನು ಬಳಸಿಕೊಳ್ಳಲಾಗಿದ್ದು, ಅವುಗಳಲ್ಲಿ ಕೂಡಾ ಸಂಕೋಲೆಗಳು ಇಲ್ಲ. [ಲಿಂಕ್ 1 (ಆರ್ಕೈವ್ ಲಿಂಕ್), ಲಿಂಕ್ 2 (ಆರ್ಕೈವ್ ಲಿಂಕ್), ಲಿಂಕ್ 3 (2012 ಆರ್ಕೈವ್ ಲಿಂಕ್), ಲಿಂಕ್ 4 (2016 ಆರ್ಕೈವ್ ಲಿಂಕ್)]

ಇಂಟರ್ನೆಟ್ ಆರ್ಕೈವ್ ಲೈಬ್ರರಿಯನ್ನು ಬಳಸಿ, ಆಲ್ಟ್ ನ್ಯೂಸ್ ಈ ಬ್ಲಾಗ್ ಪೋಸ್ಟ್‌ಗಳ ಆರ್ಕೈವ್‌ ಮಾಡಿದೆ. ವಾಸ್ತವಲ್ಲಿ ಮೂಲ ಫೋಟೋವನ್ನು ಮೇ 2011 ರಲ್ಲಿ ಹಂಚಿಕೊಳ್ಳಲಾಗಿದೆ. ಇದರರ್ಥ ಚಿತ್ರವು ಕನಿಷ್ಠ 10 ವರ್ಷ ಹಳೆಯದಾಗಿದೆ.

ಇದನ್ನೂ ಓದಿ: ಅರಳಿ ಮರದಲ್ಲಿ ಮಾವಿನ ಕಾಯಿ ಬಿಟ್ಟಿದೆ ಎಂಬ ವೈರಲ್ ವಿಡಿಯೋ ಸುಳ್ಳು: ವಾಸ್ತವವೇನು?

ಈ ಎಲ್ಲಾ ಬ್ಲಾಗ್ ಪೋಸ್ಟ್‌ಗಳು ಒಂದೇ ಆಗಿದ್ದು, ಅವುಗಳನ್ನು ಪದಶಃ ಕಾಪಿ ಪೇಸ್ಟ್‌ ಮಾಡಲಾಗಿದೆ. ಎಲ್ಲಾ ಬ್ಲಾಗ್‌ ಪೋಸ್ಟ್‌ಗಳೂ, ಅಮೆರಿಕಾದ ಪತ್ರಕರ್ತೆ ಬಾರ್ಬರಾ ವಾಲ್ಟರ್ಸ್ ಅಫ್ಘಾನಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದಾಗ, ಅಫ್ಘಾನಿಸ್ತಾನದ ಮಹಿಳೆಯೊಂದಿಗೆ ಮಾತನಾಡಿದ ಘಟನೆಯನ್ನು ವಿವರಿಸುತ್ತದೆ.

2017 ರಲ್ಲಿ ಅಭಿಜಿತ್ ಅಯ್ಯರ್ ಮಿತ್ರ ಅವರು ವಾಟ್ಸಾಪ್ ಅನ್ನು ಉಲ್ಲೇಖಿಸಿ ಟ್ವಿಟರ್‌ನಲ್ಲಿ ಅದೇ ಕಥೆಯನ್ನು ಹಂಚಿಕೊಂಡಿದ್ದಾರೆ. ಆದ್ದರಿಂದ, ಈ ಘಟನೆಯನ್ನು ಹಿಂದೆ ಭಾರತದಲ್ಲೂ ಹಂಚಿಕೊಳ್ಳಲಾಗಿತ್ತು. (ಆರ್ಕೈವ್ ಲಿಂಕ್)

ಬಾರ್ಬರಾ ವಾಲ್ಟರ್ಸ್ ವರದಿ ಮಾಡಿದ ಈ ಘಟನೆಯನ್ನು ಅಮೆರಿಕದ ಪ್ಯಾಕ್ಟ್‌ ಚೆಕಿಂಗ್‌ ಸಂಸ್ಥೆ 2014 ರಲ್ಲಿ ತನಿಖೆ ಮಾಡಿ ಸತ್ಯಾಸತ್ಯತೆಯನ್ನು ಹೊರ ಹಾಕಿದೆ. ಅದು ನಡೆಸಿದ ತನಿಖೆಯಂತೆ ಈ ಘಟನೆಯು ಕೇವಲ ವಿಡಂಬನಾತ್ಮಕ ಎಂದು ತೀರ್ಮಾನಿಸಿದೆ, ಇದು 2001 ರಿಂದ ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ.

ಒಟ್ಟಿನಲ್ಲಿ ಸಂಕ್ಷಿಪ್ತವಾಗಿ ಹೇಳುವುದಾದರೆ, ಸುಮಾರು ಹತ್ತು ವರ್ಷಗಳ ಹಿಂದಿನ ಚಿತ್ರವನ್ನು ಎಡಿಟ್‌ ಮಾಡಿ, ತಾಲಿಬಾ‌ನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರದ ಚಿತ್ರ ಎಂದು ಶೇರ್‌ ಮಾಡಲಾಗುತ್ತಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...