Homeಕರ್ನಾಟಕಇಂದಿರಾ ಕ್ಯಾಂಟೀನ್‌: ಜನಪರ ಯೋಜನೆಗಳನ್ನು ಜಾರಿ ಮಾಡುವುದು ಮುಖ್ಯವೇ, ಹೆಸರು ಬದಲಾವಣೆ ಮುಖ್ಯವೇ?

ಇಂದಿರಾ ಕ್ಯಾಂಟೀನ್‌: ಜನಪರ ಯೋಜನೆಗಳನ್ನು ಜಾರಿ ಮಾಡುವುದು ಮುಖ್ಯವೇ, ಹೆಸರು ಬದಲಾವಣೆ ಮುಖ್ಯವೇ?

ಇಂದಿರಾ ಕ್ಯಾಂಟೀನ್ ಅವಲಂಬಿಸಿರುವ ಜನರ ಅಭಿಪ್ರಾಯಗಳು ಇಲ್ಲಿವೆ..

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದಿನ ಸರ್ಕಾರ ಜಾರಿ ಮಾಡಿದ್ದ ಯೋಜನೆಗಳು, ನಿರ್ಮಿಸಿದ ಮೈದಾನಗಳು, ಪ್ರಶಸ್ತಿಗಳು, ಸೇತುವೆಗಳು, ನಗರಗಳ ಹೆಸರು ಮರು ನಾಮಕರಣ ಮಾಡುವುದು ನಡೆಯುತ್ತಲೇ ಇದೆ.

ವಿಪಕ್ಷಗಳು, ದೇಶದ ನಾಗರಿಕರು ಈ ಬಗ್ಗೆ ಆಕ್ಷೇಪವೆತ್ತಿದರೂ ಕೂಡ, ಹೆಸರುಗಳ ಮರುನಾಮಕರಣವನ್ನು ಬಿಜೆಪಿ ಸರ್ಕಾರಗಳು ನಿಲ್ಲಿಸುತ್ತಿಲ್ಲ. ಇತ್ತಿಚೆಗಷ್ಟೇ ಮೋಟೆರಾ ಸ್ಟೇಡಿಯಂ ಹೆಸರನ್ನು ನರೇಂದ್ರ ಮೋದಿ ಸ್ಟೇಡಿಯಂ ಎಂದು,  ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಮೇಜರ್‌ ಧ್ಯಾನ್ ಚಂದ್ ಖೇಲ್ ರತ್ನ ಎಂದು ಬದಲಾಯಿಸಲಾಗಿದೆ.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಂದ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್‌ ಕೂಡ ಒಂದು. 5, 10 ರೂಪಾಯಿಗೆ ಊಟ ದೊರೆಯುವ ಸ್ಥಳವಾಗಿ ಇಂದಿಗೂ ಜನಪ್ರಿಯ ಯೋಜನೆಯಾಗಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ, ಬಿಜೆಪಿ ಆಡಳಿತದ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಾಗಿನಿಂದ ಇಂದಿರಾ ಕ್ಯಾಂಟೀನ್ ವಿವಾದದ ಹೆಸರಾಗಿದೆ.

ಇದನ್ನೂ ಓದಿ: ‘ಬಾರ್‌‌’ ಸಿಟಿ ರವಿಯ ಸಂಸ್ಕೃತಿ: ಸಿದ್ದರಾಮಯ್ಯ

ಈ ಹಿಂದೆ ಕ್ಯಾಂಟೀನ್ ಮುಚ್ಚುವ ನಿರ್ಧಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರ, ವಿಪಕ್ಷಗಳು ಮತ್ತು ಜನರ ವಿರೋಧಕ್ಕೆ ತಲೆಬಾಗಬೇಕಾಯಿತು. ಈಗ ಇದನ್ನೆ ಮುಂದುವರೆಸಿರುವ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ಸೂಚನೆ ನೀಡಿದ್ದು, ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ಕಾರಣವಾಗಿದೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡಿದ್ದರು.

“ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರೆ, ಕರ್ನಾಟಕದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಆದಷ್ಟು ಬೇಗ “ಅನ್ನಪೂರ್ಣೇಶ್ವರಿ ಕ್ಯಾಂಟೀನ್” ಎಂದು ಮರುನಾಮಕರಣ ಮಾಡಿ. ಕನ್ನಡಿಗರು ಆಹಾರ ಸೇವಿಸುತ್ತಿರುವಾಗ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಳ್ಳುವುದು ಯಾಕೆ?” ಎಂದು ಪ್ರಶ್ನಿಸಿದ್ದರು.

ಇದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಹೆಸರು ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ಜನರ ಅಭಿಪ್ರಾಯಗಳಿ ಇಂತಿವೆ.

ಇದನ್ನೂ ಓದಿ: ಹೆಸರು ಬದಲಾವಣೆ ಮುಂದುವರೆಸಿದ ಬಿಜೆಪಿ: ಉತ್ತರ ಪ್ರದೇಶದ ಅಲಿಗಢ ಮರುನಾಮಕರಣಕ್ಕೆ ಪ್ರಸ್ತಾಪ

“ಬಡವರ ಹೊಟ್ಟೆ ತುಂಬಿಸುತ್ತಿರುವ ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವ ಅವಶ್ಯಕತೆ ಏನಿದೆ. ಮಾಡುವುದಾದರೇ ಅವರು ಬದಲಾಯಿಸಬೇಕು ಎನ್ನುವ ಹೆಸರಿನಲ್ಲಿ ಮತ್ತೆ 100 ಕ್ಯಾಂಟೀನ್ ಆರಂಭಿಸಲಿ. ಇದರಿಂದ ಜನರಿಗೆ ಉಪಕಾರ ಆಗುತ್ತದೆ. ಅದು ಬಿಟ್ಟು ಹೆಸರುಗಳನ್ನು ಬದಲಿಸೋದು ಯಾವ ಕಾರಣಕ್ಕೆ..? ಎಂದು ಪ್ರಶ್ನಿಸುತ್ತಾರೆ ಆಟೋ ಚಾಲಕ ಆನಂದ್.

ರಾಜಸ್ಥಾನದಿಂದ ಬಂದು ಬೆಂಗಳೂರಿನಲ್ಲಿ ಕಳೆದ  15 ವರ್ಷಗಳಿಂದ ವಾಸವಿರುವ ಬದ್ರಿಲಾಲ್ ಮೆಹ್ರಾ, “ಕಳೆದ ಮೂರು ವರ್ಷಗಳಿಂದ ಇಂದಿರಾ ಕ್ಯಾಂಟೀನ್‌ ಊಟ ಮಾಡುತ್ತಿದ್ದೇನೆ. ಈಗ ಹೆಸರು ಬದಲಾವಣೆ ವಿಚಾರ ಯಾಕೆ ಬಂದಿತೋ ಗೊತ್ತಿಲ್ಲ. ಒಳ್ಳೆ ಕೆಲಸ ಮಾಡಿದವರ ಹೆಸರು ಇಟ್ಟಿದ್ದಾರೆ. ಅದೇ ಇದ್ದರೇ ಒಳ್ಳೆಯದು. ಹೆಸರು ಬದಲಾವಣೆ ಮಾಡುವಂತಹದ್ದು ಏನಿದೆ. ಇದರಲ್ಲಿ ತೊಂದರೆ ಏನಿದೆ ನಮಗೂ ಇಂದಿರಾ ಕ್ಯಾಂಟೀನ್ ಎಂದೇ ಪರಿಚಿತ. ಹೆಸರು ಬದಲಾವಣೆ ಅವಶ್ಯತೆ ಇಲ್ಲ” ಎಂದು ಹೇಳಿದ್ದಾರೆ.

“ಇಂದಿರಾ ಕ್ಯಾಂಟೀನ್‌ಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಮೂರು ತಿಂಗಳಿನಿಂದ ಸರಿಯಾಗಿ ವೇತನ ನೀಡಿಲ್ಲ. ಕೊರೊನಾ ಸಮಯದಲ್ಲಿ ಉಚಿತ ಆಹಾರ ವಿತರಣೆ ಮಾಡಿದ್ದೇವೆ. ಸರ್ಕಾರ ಅದರ ಹಣವನ್ನು ಇನ್ನು ನೀಡಿಲ್ಲ. ಕೆಲವೊಂದು ಕ್ಯಾಂಟೀನ್‌ಗಳ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿಲ್ಲ. ಸ್ಮಾರ್ಟ್ ಸಿಟಿ ಎಂದು ಹೇಳಿ ಚೆನ್ನಾಗಿರುವ ಕ್ಯಾಂಟೀನ್‌ಗಳ ಬಳಿ ಗುಂಡಿಗಳನ್ನು ತೋಡಿ ಅವ್ಯವಸ್ಥೆ ಮಾಡಲಾಗಿದೆ. ಇಷ್ಟೆಲ್ಲಾ ಸಮಸ್ಯೆ ಇರುವಾಗ ಈ ಸರ್ಕಾರ ಹೆಸರು ಬದಲಾವಣೆ ಅನ್ನೋದನ್ನು ಮುಂದೆ ಮಾಡುತ್ತಿದೆ. ಮೊದಲು ಇರುವ ಸಮಸ್ಯೆ ಸರಿಪಡಿಸಲಿ. ಆಮೇಲೆ ಏನಾದರೂ ಮಾಡಿಕೊಳ್ಳಲಿ. ಕಳೆದ ಎರಡು ವರ್ಷಗಳಿಂದ ಕ್ಯಾಂಟೀನ್ ನಡೆಸುವುದು ತುಂಬಾ ಕಷ್ಟವಾಗಿದೆ. ಕ್ಯಾಂಟೀನ್ ಅನುದಾನವೆಲ್ಲ ಮಠಗಳಿಗೆ ಹೋಗುತ್ತಿದೆ. ಜನರಿಗೆ ಉಪಯೋಗವಿರುವ ಇಂತಹ ಯೋಜನೆ ಹಳ್ಳ ಹಿಡಿಯುವಂತಿದೆ ” ಎಂದು  ಹೆಸರೆಳಲು ಇಚ್ಚಿಸದ ಇಂದಿರಾ ಕ್ಯಾಂಟೀನ್ ವ್ಯವಸ್ಥಾಪಕರೊಬ್ಬರು ನಾನುಗೌರಿ.ಕಾಂ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ, ಇಂದಿರಾ ಕ್ಯಾಂಟೀನ್ ಹೆಸರಲ್ಲಿ ರಾಜಕೀಯ ಮಾಡುವುದನ್ನು ಪಕ್ಷಗಳು ಬಿಟ್ಟು ಜನಪರ ಯೋಜನೆಗಳನ್ನು ಉಳಿಸಿಕೊಳ್ಳಲಿ. ಇನ್ನು ಹೆಸರು ಮರುನಾಮಕರಣ ಮಾಡುವುದಕ್ಕೆ ನೀಡುವ ಪ್ರಾಶಸ್ತ್ಯವನ್ನು ಮತ್ತಷ್ಟು ಜನಪರ ಯೋಜನೆಗಳು ಮತ್ತು ಕ್ಯಾಂಟೀನ್‌ಗಳ ನಿರ್ಮಾಣಕ್ಕೂ ಕೊಡಲಿ ಎಂಬುದೇ ನಮ್ಮ ಆಶಯ.


ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ: ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂದಿರ ಕ್ಯಾಟಿನ್ ಅನೋ ಹೆಸರು ಬೇಡ ಅನ್ನ ಪೂರ್ಣಿಶ್ವರಿ ಇವರಿಗೆ ಅನ್ನದ ಬೆಲೆ ಏನೂ ಅಂತ ಗೊತ್ತಿಲ್ಲ
    ಡಾ. ಭೀಮರಾವ್ ಅಂಬೇಡ್ಕರ್ ರವರಿಗೆ ಅನ್ನದ ಬೆಲೆ ಏನು ಅಂತ ಗೊತ್ತಿದ್ದವರ ಹೆಸರು ಇಡುವುದು ಉತ್ತಮ ಹೆಸರು ಇಡುವುದಾದರೆ ಜೈ ಭೀಮ್ ಕ್ಯಾಂಟೀನ್ ಅಂತ ಹೆಸರು ಇಡುವುದು ಉತ್ತಮವಾಗಿರುತ್ತದೆ ……..ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...