Homeಕರ್ನಾಟಕಇಂದಿರಾ ಕ್ಯಾಂಟೀನ್‌: ಜನಪರ ಯೋಜನೆಗಳನ್ನು ಜಾರಿ ಮಾಡುವುದು ಮುಖ್ಯವೇ, ಹೆಸರು ಬದಲಾವಣೆ ಮುಖ್ಯವೇ?

ಇಂದಿರಾ ಕ್ಯಾಂಟೀನ್‌: ಜನಪರ ಯೋಜನೆಗಳನ್ನು ಜಾರಿ ಮಾಡುವುದು ಮುಖ್ಯವೇ, ಹೆಸರು ಬದಲಾವಣೆ ಮುಖ್ಯವೇ?

ಇಂದಿರಾ ಕ್ಯಾಂಟೀನ್ ಅವಲಂಬಿಸಿರುವ ಜನರ ಅಭಿಪ್ರಾಯಗಳು ಇಲ್ಲಿವೆ..

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದಿನ ಸರ್ಕಾರ ಜಾರಿ ಮಾಡಿದ್ದ ಯೋಜನೆಗಳು, ನಿರ್ಮಿಸಿದ ಮೈದಾನಗಳು, ಪ್ರಶಸ್ತಿಗಳು, ಸೇತುವೆಗಳು, ನಗರಗಳ ಹೆಸರು ಮರು ನಾಮಕರಣ ಮಾಡುವುದು ನಡೆಯುತ್ತಲೇ ಇದೆ.

ವಿಪಕ್ಷಗಳು, ದೇಶದ ನಾಗರಿಕರು ಈ ಬಗ್ಗೆ ಆಕ್ಷೇಪವೆತ್ತಿದರೂ ಕೂಡ, ಹೆಸರುಗಳ ಮರುನಾಮಕರಣವನ್ನು ಬಿಜೆಪಿ ಸರ್ಕಾರಗಳು ನಿಲ್ಲಿಸುತ್ತಿಲ್ಲ. ಇತ್ತಿಚೆಗಷ್ಟೇ ಮೋಟೆರಾ ಸ್ಟೇಡಿಯಂ ಹೆಸರನ್ನು ನರೇಂದ್ರ ಮೋದಿ ಸ್ಟೇಡಿಯಂ ಎಂದು,  ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಮೇಜರ್‌ ಧ್ಯಾನ್ ಚಂದ್ ಖೇಲ್ ರತ್ನ ಎಂದು ಬದಲಾಯಿಸಲಾಗಿದೆ.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಂದ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್‌ ಕೂಡ ಒಂದು. 5, 10 ರೂಪಾಯಿಗೆ ಊಟ ದೊರೆಯುವ ಸ್ಥಳವಾಗಿ ಇಂದಿಗೂ ಜನಪ್ರಿಯ ಯೋಜನೆಯಾಗಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ, ಬಿಜೆಪಿ ಆಡಳಿತದ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಾಗಿನಿಂದ ಇಂದಿರಾ ಕ್ಯಾಂಟೀನ್ ವಿವಾದದ ಹೆಸರಾಗಿದೆ.

ಇದನ್ನೂ ಓದಿ: ‘ಬಾರ್‌‌’ ಸಿಟಿ ರವಿಯ ಸಂಸ್ಕೃತಿ: ಸಿದ್ದರಾಮಯ್ಯ

ಈ ಹಿಂದೆ ಕ್ಯಾಂಟೀನ್ ಮುಚ್ಚುವ ನಿರ್ಧಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರ, ವಿಪಕ್ಷಗಳು ಮತ್ತು ಜನರ ವಿರೋಧಕ್ಕೆ ತಲೆಬಾಗಬೇಕಾಯಿತು. ಈಗ ಇದನ್ನೆ ಮುಂದುವರೆಸಿರುವ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ಸೂಚನೆ ನೀಡಿದ್ದು, ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ಕಾರಣವಾಗಿದೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡಿದ್ದರು.

“ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರೆ, ಕರ್ನಾಟಕದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಆದಷ್ಟು ಬೇಗ “ಅನ್ನಪೂರ್ಣೇಶ್ವರಿ ಕ್ಯಾಂಟೀನ್” ಎಂದು ಮರುನಾಮಕರಣ ಮಾಡಿ. ಕನ್ನಡಿಗರು ಆಹಾರ ಸೇವಿಸುತ್ತಿರುವಾಗ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಳ್ಳುವುದು ಯಾಕೆ?” ಎಂದು ಪ್ರಶ್ನಿಸಿದ್ದರು.

ಇದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಹೆಸರು ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ಜನರ ಅಭಿಪ್ರಾಯಗಳಿ ಇಂತಿವೆ.

ಇದನ್ನೂ ಓದಿ: ಹೆಸರು ಬದಲಾವಣೆ ಮುಂದುವರೆಸಿದ ಬಿಜೆಪಿ: ಉತ್ತರ ಪ್ರದೇಶದ ಅಲಿಗಢ ಮರುನಾಮಕರಣಕ್ಕೆ ಪ್ರಸ್ತಾಪ

“ಬಡವರ ಹೊಟ್ಟೆ ತುಂಬಿಸುತ್ತಿರುವ ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವ ಅವಶ್ಯಕತೆ ಏನಿದೆ. ಮಾಡುವುದಾದರೇ ಅವರು ಬದಲಾಯಿಸಬೇಕು ಎನ್ನುವ ಹೆಸರಿನಲ್ಲಿ ಮತ್ತೆ 100 ಕ್ಯಾಂಟೀನ್ ಆರಂಭಿಸಲಿ. ಇದರಿಂದ ಜನರಿಗೆ ಉಪಕಾರ ಆಗುತ್ತದೆ. ಅದು ಬಿಟ್ಟು ಹೆಸರುಗಳನ್ನು ಬದಲಿಸೋದು ಯಾವ ಕಾರಣಕ್ಕೆ..? ಎಂದು ಪ್ರಶ್ನಿಸುತ್ತಾರೆ ಆಟೋ ಚಾಲಕ ಆನಂದ್.

ರಾಜಸ್ಥಾನದಿಂದ ಬಂದು ಬೆಂಗಳೂರಿನಲ್ಲಿ ಕಳೆದ  15 ವರ್ಷಗಳಿಂದ ವಾಸವಿರುವ ಬದ್ರಿಲಾಲ್ ಮೆಹ್ರಾ, “ಕಳೆದ ಮೂರು ವರ್ಷಗಳಿಂದ ಇಂದಿರಾ ಕ್ಯಾಂಟೀನ್‌ ಊಟ ಮಾಡುತ್ತಿದ್ದೇನೆ. ಈಗ ಹೆಸರು ಬದಲಾವಣೆ ವಿಚಾರ ಯಾಕೆ ಬಂದಿತೋ ಗೊತ್ತಿಲ್ಲ. ಒಳ್ಳೆ ಕೆಲಸ ಮಾಡಿದವರ ಹೆಸರು ಇಟ್ಟಿದ್ದಾರೆ. ಅದೇ ಇದ್ದರೇ ಒಳ್ಳೆಯದು. ಹೆಸರು ಬದಲಾವಣೆ ಮಾಡುವಂತಹದ್ದು ಏನಿದೆ. ಇದರಲ್ಲಿ ತೊಂದರೆ ಏನಿದೆ ನಮಗೂ ಇಂದಿರಾ ಕ್ಯಾಂಟೀನ್ ಎಂದೇ ಪರಿಚಿತ. ಹೆಸರು ಬದಲಾವಣೆ ಅವಶ್ಯತೆ ಇಲ್ಲ” ಎಂದು ಹೇಳಿದ್ದಾರೆ.

“ಇಂದಿರಾ ಕ್ಯಾಂಟೀನ್‌ಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಮೂರು ತಿಂಗಳಿನಿಂದ ಸರಿಯಾಗಿ ವೇತನ ನೀಡಿಲ್ಲ. ಕೊರೊನಾ ಸಮಯದಲ್ಲಿ ಉಚಿತ ಆಹಾರ ವಿತರಣೆ ಮಾಡಿದ್ದೇವೆ. ಸರ್ಕಾರ ಅದರ ಹಣವನ್ನು ಇನ್ನು ನೀಡಿಲ್ಲ. ಕೆಲವೊಂದು ಕ್ಯಾಂಟೀನ್‌ಗಳ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿಲ್ಲ. ಸ್ಮಾರ್ಟ್ ಸಿಟಿ ಎಂದು ಹೇಳಿ ಚೆನ್ನಾಗಿರುವ ಕ್ಯಾಂಟೀನ್‌ಗಳ ಬಳಿ ಗುಂಡಿಗಳನ್ನು ತೋಡಿ ಅವ್ಯವಸ್ಥೆ ಮಾಡಲಾಗಿದೆ. ಇಷ್ಟೆಲ್ಲಾ ಸಮಸ್ಯೆ ಇರುವಾಗ ಈ ಸರ್ಕಾರ ಹೆಸರು ಬದಲಾವಣೆ ಅನ್ನೋದನ್ನು ಮುಂದೆ ಮಾಡುತ್ತಿದೆ. ಮೊದಲು ಇರುವ ಸಮಸ್ಯೆ ಸರಿಪಡಿಸಲಿ. ಆಮೇಲೆ ಏನಾದರೂ ಮಾಡಿಕೊಳ್ಳಲಿ. ಕಳೆದ ಎರಡು ವರ್ಷಗಳಿಂದ ಕ್ಯಾಂಟೀನ್ ನಡೆಸುವುದು ತುಂಬಾ ಕಷ್ಟವಾಗಿದೆ. ಕ್ಯಾಂಟೀನ್ ಅನುದಾನವೆಲ್ಲ ಮಠಗಳಿಗೆ ಹೋಗುತ್ತಿದೆ. ಜನರಿಗೆ ಉಪಯೋಗವಿರುವ ಇಂತಹ ಯೋಜನೆ ಹಳ್ಳ ಹಿಡಿಯುವಂತಿದೆ ” ಎಂದು  ಹೆಸರೆಳಲು ಇಚ್ಚಿಸದ ಇಂದಿರಾ ಕ್ಯಾಂಟೀನ್ ವ್ಯವಸ್ಥಾಪಕರೊಬ್ಬರು ನಾನುಗೌರಿ.ಕಾಂ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ, ಇಂದಿರಾ ಕ್ಯಾಂಟೀನ್ ಹೆಸರಲ್ಲಿ ರಾಜಕೀಯ ಮಾಡುವುದನ್ನು ಪಕ್ಷಗಳು ಬಿಟ್ಟು ಜನಪರ ಯೋಜನೆಗಳನ್ನು ಉಳಿಸಿಕೊಳ್ಳಲಿ. ಇನ್ನು ಹೆಸರು ಮರುನಾಮಕರಣ ಮಾಡುವುದಕ್ಕೆ ನೀಡುವ ಪ್ರಾಶಸ್ತ್ಯವನ್ನು ಮತ್ತಷ್ಟು ಜನಪರ ಯೋಜನೆಗಳು ಮತ್ತು ಕ್ಯಾಂಟೀನ್‌ಗಳ ನಿರ್ಮಾಣಕ್ಕೂ ಕೊಡಲಿ ಎಂಬುದೇ ನಮ್ಮ ಆಶಯ.


ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ: ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂದಿರ ಕ್ಯಾಟಿನ್ ಅನೋ ಹೆಸರು ಬೇಡ ಅನ್ನ ಪೂರ್ಣಿಶ್ವರಿ ಇವರಿಗೆ ಅನ್ನದ ಬೆಲೆ ಏನೂ ಅಂತ ಗೊತ್ತಿಲ್ಲ
    ಡಾ. ಭೀಮರಾವ್ ಅಂಬೇಡ್ಕರ್ ರವರಿಗೆ ಅನ್ನದ ಬೆಲೆ ಏನು ಅಂತ ಗೊತ್ತಿದ್ದವರ ಹೆಸರು ಇಡುವುದು ಉತ್ತಮ ಹೆಸರು ಇಡುವುದಾದರೆ ಜೈ ಭೀಮ್ ಕ್ಯಾಂಟೀನ್ ಅಂತ ಹೆಸರು ಇಡುವುದು ಉತ್ತಮವಾಗಿರುತ್ತದೆ ……..ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...