Homeಕರ್ನಾಟಕಹುತಾತ್ಮ ಯೋಧನ ಮನೆ ಎಂದು ಕರ್ತವ್ಯದಲ್ಲಿರುವ ಸೈನಿಕನ ಮನೆಗೆ ತೆರಳಿ ಸಾಂತ್ವನ ಹೇಳಿದ ಸಚಿವ ಎ...

ಹುತಾತ್ಮ ಯೋಧನ ಮನೆ ಎಂದು ಕರ್ತವ್ಯದಲ್ಲಿರುವ ಸೈನಿಕನ ಮನೆಗೆ ತೆರಳಿ ಸಾಂತ್ವನ ಹೇಳಿದ ಸಚಿವ ಎ ನಾರಾಯಣಸ್ವಾಮಿ

- Advertisement -
- Advertisement -

ಒಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಶುಕ್ರವಾರ ಎಡವಟ್ಟು ಮಾಡಿರುವ ಘಟನೆ ನಡೆದಿದೆ. ಹುತಾತ್ಮ ಸೈನಿಕನೊಬ್ಬನ ಮನೆಗೆ ತೆರಳಬೇಕಿದ್ದ ಅವರು, ಕರ್ತವ್ಯದಲ್ಲಿದ್ದ ಸೈನಿಕನೊಬ್ಬನ ಮನೆಗೆ ತೆರಳಿ ಸಾಂತ್ವಾನ ಹೇಳಿದ್ದಲ್ಲದೆ, ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಮತ್ತು ಭೂಮಿ ನೀಡುವುದಾಗಿ ಭರವಸೆ ನೀಡದ್ದಾರೆ.

ಸಚಿವ ನಾರಾಯಣಸ್ವಾಮಿ ತೆರಳಿದ್ದ ಮನೆಯಲ್ಲಿನ ಸೈನಿಕ ರವಿಕುಮಾರ್ ಕಟ್ಟಿಮನಿ ಜಮ್ಮೂ ಕಾಶೀರದಲ್ಲಿ ಕರ್ತವ್ಯದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಒಂದು ವರ್ಷಗಳ ಹಿಂದೆ ಕರ್ತವ್ಯದಲ್ಲಿದ್ದಾಗ ಮೃತಪಟ್ಟಿದ್ದ ಮುಳಗುಂದದ ಯೋಧ ಬಸವರಾಜ್‌ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಬೇಕಿದ್ದ ಸಚಿವ ಜೀವಂತ ಇರುವ ಸೈನಿಕನ ಮನೆಗೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ: ನಿರ್ಮಾಣ ಹಂತದಲ್ಲೆ ಕುಸಿದ ‘ನಮೋ’ ಕಾಲೇಜ್; ‘ಬ್ರಾಂಡ್‌ನೇಮ್‌ ಎಫೆಕ್ಟ್‌‌? – ಮಾಜಿ ಐಎಎಸ್‌ ಪ್ರಶ್ನೆ!

ಬಿಜೆಪಿಯ ಜನ ಆಶೀರ್ವಾದ ಯಾತ್ರೆಯಲ್ಲಿ ಈ ಘಟನೆ ನಡೆದಿದೆ. ಯಾತ್ರೆ ಅಂಗವಾಗಿ ಗದಗ ಜಿಲ್ಲೆಯಲ್ಲಿನ ಮುಳಗುಂದದಲ್ಲಿರುವ ಹುತಾತ್ಮ ಸೈನಿಕನ ನಿವಾಸಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅವರು ಜಮ್ಮು ಕಾಶ್ಮೀರದಲ್ಲಿ ಕರ್ತವ್ಯದಲ್ಲಿರುವ ರವಿಕುಮಾರ್ ಕಟ್ಟಿಮನಿ ಅವರ ಮನೆಗೆ ತೆರಳಿದ್ದಾರೆ. ಕುಟುಂಬ ಸದಸ್ಯರ ಆರೋಗ್ಯ ಮತ್ತು ಮನೆಯ ಪರಿಸ್ಥಿತಿಯನ್ನು ವಿಚಾರಿಸಿ, ನಂತರ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಮತ್ತು ಭೂಮಿ ನೀಡುವುದಾಗಿ ಘೋಷಿಸಿದ್ದಾರೆ.

ಇದರಿಂದಾಗಿ ಕುಟುಂಬದ ಸದಸ್ಯರು ಗೊಂದಲಕ್ಕೆ ಸಿಲುಕಿ ಆಘಾತಕ್ಕೊಳಗಾಗಿದ್ದು, ತಕ್ಷಣವೆ ಕುಟುಂಬದ ಪರಿಚಯಸ್ಥರೊಬ್ಬರು ಸೈನಿಕ ರವಿಕುಮಾರ್‌ಗೆ ವಿಡಿಯೋ ಕರೆ ಮಾತನಾಡಿದ್ದಾರೆ. ನಂತರ ಸಚಿವರು ಕೂಡಾ ಅವರೊಂದಿಗೆ ಮಾತನಾಡಿ, ಕುಟುಂಬವನ್ನು ಅಭಿನಂದಿಸಿ ಅಲ್ಲಿಂದ ತೆರಳಿದ್ದಾರೆ.

ಸೈನಿಕನ ನಿವಾಸವನ್ನು ತೊರೆದ ನಂತರ ಸಚಿವರು ಸ್ಥಳೀಯ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಹಿಂದೂ ವರದಿ ಮಾಡಿದೆ. ಸ್ಥಳೀಯ ಬಿಜೆಪಿ ನಾಯಕರು ಸಚಿವರಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅದು ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...