Homeಚಳವಳಿಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ಬಹುತೇಕ ಸುಡಗಾಡು ಸಿದ್ದ ದಲಿತ ಸಮುದಾಯದಿಂದ ಕೂಡಿದ ಅಂಚೆ ಸೋಮನಹಳ್ಳಿಯಲ್ಲಿ ಮದ್ಯದಂಗಡಿ ಸ್ಥಾಪನೆ ವಿರುದ್ಧ ತೀವ್ರ ಹೋರಾಟ ನಡೆದಿತ್ತು.

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಸಿಂಗಟಗೆರೆ ಹೋಬಳಿಯ ಅಂಚೆ ಸೋಮನಹಳ್ಳಿ ಗ್ರಾಮದಲ್ಲಿ ಸ್ಥಾಪನೆಯಾಗಿದ್ದ ಮದ್ಯದಂಗಡಿ ತೆರವಿಗೆ ಮಹಿಳೆಯರು ನಡೆಸಿದ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಅರವತ್ತು ದಿವಸದ ಒಳಗೆ ಮದ್ಯದ ಅಂಗಡಿಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಅಬಕಾರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಬಹುತೇಕ ಸುಡಗಾಡು ಸಿದ್ದ ದಲಿತ ಸಮುದಾಯದಿಂದ ಕೂಡಿದ ಅಂಚೆ ಸೋಮನಹಳ್ಳಿ ಒಂದು ಚಿಕ್ಕ ಗ್ರಾಮ. ಗ್ರಾಮಸ್ಥರ ವಿರೋಧದ ನಡುವೆಯೇ ಏಕಾಏಕಿ ಊರಿನಲ್ಲಿ ಮದ್ಯದಂಗಡಿ ತೆರೆಯಲು ಕೆಲವರು ಮುಂದಾಗಿದ್ದಾರೆ. ಇದು ಮಹಿಳೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಕೂಲಿ ಕಾರ್ಮಿಕರಾಗಿರುವ ಇಲ್ಲಿನ ಜನರು ಜೀವನೋಪಾಯಕ್ಕೆ ಕೂಲಿಯಿಂದ ಬರುವ ಅಲ್ಪ ಆದಾಯವನ್ನೇ ನಂಬಿದ್ದಾರೆ. ಮದ್ಯದಂಗಡಿಯಿಂದ ಬಡ ಜನರ ಜೀವನ ಬೀದಿಗೆ ಬೀಳಲಿದೆ ಎಂಬ ಆತಂಕದಿಂದ ಮಹಿಳೆಯರು ನಿರಂತರವಾಗಿ ಪ್ರತಿಭಟನೆ ನಡೆಸಿದ್ದರು.

ಮದ್ಯದಂಗಡಿ ತೆರವಿಗೆ ಗ್ರಾಮ ಪಂಚಾಯತಿ ಸದಸ್ಯರಾದ ಸವಿತಾ ಪ್ರಸನ್ನ, ಸ್ಥಳೀಯ ಹೋರಾಟಗಾರ ಮಂಜುನಾಥ್‌ ನೇತೃತ್ವದಲ್ಲಿ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಅಂಚೆ ಸೋಮನಹಳ್ಳಿಯ ಬಹುತೇಕ ಜನರು ಅವಿದ್ಯಾವಂತ ಕೂಲಿ ಕಾರ್ಮಿಕರು. ಜನರ ಕಾನೂನಿನ ಅಜ್ಞಾನವನ್ನು ಅಸ್ತ್ರ ಮಾಡಿಕೊಂಡು ಕೆಲವರು ತಮ್ಮ ಲಾಭಕ್ಕಾಗಿ ಊರಿನ ಆರೋಗ್ಯವನ್ನು ಬಲಿಕೊಡಲು ಹೊರಟಿದ್ದಾರೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ದೂರು ದಾಖಲಿಸಿದ್ದರು.

ದೂರು ಆಲಿಸಿದ ಅಬಕಾರಿ ಜಿಲ್ಲಾ ನ್ಯಾಯಾಲಯ “ಅಂಚೆ ಸೋಮನಹಳ್ಳಿ ಗ್ರಾಮದ ಬಾಪೂಜಿ ಕಾಲೋನಿ ರಸ್ತೆಯಲ್ಲಿರುವ ಸರ್ವೇ ನಂ.38/12, ಸಂಖ್ಯೆ 323ರಲ್ಲಿ ಹೊಂದಿರುವ ಸಿಎಲ್‌-2 ಸನ್ನದನ್ನು ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಅಬಕಾರಿ ಸನ್ನದುಗಳು (ಸಾಮಾನ್ಯ ಷರತ್ತುಗಳು) ನಿಯಮಾವಳಿ 1967ರ ನಿಯಮ 5(4)(ಎ)ರ ರೀತ್ಯಾ ಹಾಲಿ ಇರುವ ಸ್ಥಳದಿಂದ ಬೇರೊಂದು ಆಕ್ಷೇಪಣಾ ರಹಿತ ಸ್ಥಳಕ್ಕೆ 60 ದಿನಗಳೊಳಗಾಗಿ ಸ್ಥಳಾಂತರಿಸಿಕೊಳ್ಳಲು” ಆದೇಶಿಸಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹೋರಾಟಗಾರರಾದ ಮಂಜುನಾಥ್‌ರವರು “ಕಾನೂನು ಸಂವಿಧಾನ ನಮ್ಮ ಕಡೆಯಿವೆ ಎಂಬುದನ್ನು ಈ ತೀರ್ಪು ನಮಗೆ ತೋರಿಸಿಕೊಟ್ಟಿದೆ. ನಾವು ಕಾನೂನು ರೀತಿ ಹೋರಾಡಿ ಜಯ ಗಳಿಸಬಹುದು ಎಂಬುದಕ್ಕೆ ಇದು ಉದಾಹರಣೆ. ಅಂಬೇಡ್ಕರ್‌ರವರ ಸಂವಿಧಾನದಿಂದ ನಾವು ಗೆದ್ದಿದ್ದೇವೆ” ಎಂದಿದ್ದಾರೆ.

ಈ ಹಿಂದೆ ನಾನುಗೌರಿ.ಕಾಂ ಈ ಹೋರಾಟದ ಕುರಿತು ವಿಸ್ತೃತವಾಗಿ ವರದಿ ಮಾಡಿತ್ತು. ಅದನ್ನು ಇಲ್ಲಿ ಓದಬಹುದು.

ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ


ಇದನ್ನೂ ಓದಿ: ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...