Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

- Advertisement -
- Advertisement -

ಅಫ್ಘಾನ್‌ 20 ವರ್ಷಗಳ ನಂತರ ಮತ್ತೆ ತಾಲಿಬಾನಿಗಳ ವಶವಾಗಿದೆ. ಈ ಬೆಳವಣಿಗೆಯಾಗುತ್ತಿದ್ದಂತೆ ಅಫ್ಘಾನಿಸ್ತಾನದ ಮಹಿಳೆ ಮತ್ತು ಮಕ್ಕಳ ಬಗ್ಗೆ ಮರುಗಿ ಇಡೀ ವಿಶ್ವವೆ ಅವರ ಸ್ವಾತಂತ್ಯ್ರದ ಬಗ್ಗೆ ಆತಂಕ  ವ್ಯಕ್ತಪಡಿಸಿದ್ದವು. ಇಪ್ಪತ್ತು ವರ್ಷಗಳ ಹಿಂದೆ ತಾಲಿಬಾನ್ ನಡೆಸಿದ್ದ ಅಮಾನವೀಯ ಕೃತ್ಯಗಳ ಬಗ್ಗೆ ಹಲವಾರು ಚಿತ್ರಗಳು, ವರದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಹಿನ್ನಲೆಯಲ್ಲಿ, ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಸಂಕೋಲೆಗಳಿಂದ ಕಟ್ಟಿ ಹಾಕಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಚಿತ್ರದ ಜೊತೆಗೆ ‘ತಾಲಿಬಾನ್ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳಿ ಮಾರಾಟ ಮಾಡುತ್ತಿದೆ’ ಎಂಬ ಸಂದೇಶ ಕೂಡಾ ಹರಿದಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ಹಲವಾರು ಫೇಸ್‌ಬುಕ್ ಬಳಕೆದಾರರು ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮಹಿಳೆಯರನ್ನು ಹರಾಜು ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ಪೋಸ್ಟ್‌ನ ಆರ್ಕೈವ್ ಅನ್ನು ಇಲ್ಲಿ ನೋಡಬಹುದು.

ಬಲಪಂಥೀಯ ಬೆಂಬಲಿಗರಾದ ಶೆಫಾಲಿ ವೈದ್ಯ ಅವರು ಕೂಡಾ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇವರು ಈ ಹಿಂದೆ ಕೂಡಾ ಹಲವಾರು ಬಾರಿ ತಪ್ಪು ಮಾಹಿತಿಗಳನ್ನು ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಉದಾಹರಣೆಗಳಿಗೆ. ಅವರ ಟ್ವೀಟ್‌ನ ಆರ್ಕೈವ್‌ ಅನ್ನು ಇಲ್ಲಿ ನೋಡಬಹುದು. ಇನ್ನೂ ಹಲವಾರು ಜನರು ಇದನ್ನು ಹಂಚಿಕೊಂಡಿದ್ದು ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು 2014 ರ ಸಮಯದ್ದಾಗಿದ್ದು, ‘ಕಂಪೇಷನ್‌ 4 ಕುರ್ದಿಸ್ತಾನ್’ ಎಂಬ ಗುಂಪು ಲಂಡನ್‌ನಲ್ಲಿ ‘ಇಸ್ಲಾಮಿಕ್ ಸ್ಟೇಟ್ ಸೆಕ್ಸ್ ಸ್ಲೇವ್ ಮಾರ್ಕೆಟ್’ ಎಂಬ ಬೀದಿ ನಾಟಕವನ್ನು ಐಸಿಸ್‌‌ ಭಯೋತ್ಪಾದಕರ ವಿರುದ್ದ ಜಾಗೃತಿಗಾಗಿ ಪ್ರದರ್ಶಿಸಿತು. ಆಗ ಈ ಚಿತ್ರವನ್ನು ಕ್ಲಿಕ್ಕಿಸಲಾಗಿತ್ತು ಎಂದು ದಿ ಕ್ವಿಂಟ್‌ ಫ್ಯಾಕ್ಟ್‌ಚೆಕ್ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವಲ್ಲ

ಯಾಂಡೆಕ್ಸ್ ಎಂಬ ಸರ್ಚ್ ಇಂಜಿನ್ ಬಳಸಿ, ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ಚಿತ್ರವು ಟೆಲಿಗ್ರಾಫ್ ಎಂಬ ವೆಬ್‌ಸೈಟ್‌ನಲ್ಲಿ ಬಳಸಿರುವುದನ್ನು ದಿ ಕ್ವಿಂಟ್‌‌‌ ಪತ್ತೆ ಹಚ್ಚಿದೆ. ಟರ್ಕಿಶ್‌ ಬಾಷೆಯಲ್ಲಿ ‘ಲಂಡನ್‌ನಲ್ಲಿ ಐಸಿಸ್ ಗ್ಯಾಂಗ್‌ಗಳ ವಿರುದ್ಧ ಅರ್ಥಪೂರ್ಣ ಕ್ರಮ’ ಎಂಬ ಶಿರ್ಷಿಕೆಯ ಅಡಿಯಲ್ಲಿ ಈ ಚಿತ್ರವಿರುವ ಲೇಖನವನ್ನು ಬರೆಯಲಾಗಿದೆ.

ಟೆಲಿಗ್ರಾಫ್‌ ಈ ವರದಿಯನ್ನು 2014 ರ ಅಕ್ಟೋಬರ್ 17 ರಂದು ಪ್ರಕಟಿಸಿದ್ದು, ಫೋಟೊ ಕೃಪೆಯನ್ನು ‘ಅರಿ ಮುರಾದ್’ ಎಂಬವರಿಗೆ ನೀಡಿದೆ.

ಅರಿ ಮುರಾದ್’ ಅವರ ಅಧೀಕೃತ ಫೇಸ್‌ಬುಕ್ ಖಾತೆಯಲ್ಲೂ ಇದೇ ದೃಶ್ಯಗಳನ್ನು ತೋರಿಸುವ ವಿಡಿಯೊ 2016 ರ ಮಾರ್ಚ್ 1 ರಂದು ಪ್ರಕಟಿಸಲಾಗಿದೆ. ವೀಡಿಯೊದಲ್ಲಿ, “ಐಸಿಸ್ ಮತ್ತು ಅವರ ಕ್ರೌರ್ಯವನ್ನು ತೋರಿಸುವ ಬೆಚ್ಚಿಬೀಳಿಸುವ ಪ್ರದರ್ಶನ” ಎಂದು ಉಲ್ಲೇಖಿಸಲಾಗಿದೆ.

ಈ ಬೀದಿ ನಾಟಕವನ್ನು ಕುರ್ದಿಶ್ ವಲಸೆಗಾರರ ​​ಗುಂಪಾದ ‘ಕಂಪೇಷನ್‌ 4 ಕುರ್ದಿಸ್ತಾನ್’ ಎಂಬ ಗುಂಪು ಲಂಡನ್‌ನಲ್ಲಿ ನಡೆಸಿತ್ತು. ಇರಾಕ್‌ನಲ್ಲಿ ಐಸಿಸ್‌ನ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಈ ಬೀದಿ ನಾಟಕವನ್ನು ಪ್ರದರ್ಶನ ಮಾಡಲಾಯಿತು.

ಈ ಮೊದಲು ಕೂಡಾ ಈ ಬೀದಿ ನಾಟಕದ ದೃಶ್ಯವನ್ನು ಅಫ್ಘಾನಿಸ್ತಾನದ ಬೀದಿಯಲ್ಲಿ ಮಹಿಳೆಯರನ್ನು ಹರಾಜು ಹಾಕಲಾಗುತ್ತಿದೆ ಎಂಬ ಪ್ರತಿಪಾದನೆಯೊಂದಿಗೆ ವೈರಲ್‌ ಮಾಡಲಾಗಿತ್ತು.

ಆದಾಗ್ಯೂ, ಅಫ್ಘಾನಿಸ್ತಾನ ಮತ್ತೆ ತಾಲಿಬಾನ್ ವಶಕ್ಕೆ ಹೋಗಿರುವುದರಿಂದ ಮಹಿಳೆಯರು ತಮ್ಮ ಹಕ್ಕುಗಳು, ಸುರಕ್ಷತೆ, ಜೀವನ ಮತ್ತು ಭವಿಷ್ಯದ ಬಗ್ಗೆ ಭಯಪಡುತ್ತಿದ್ದಾರೆ ಎಂಬುವುದು ವರದಿಯಾಗಿದೆ. ಈ ಹಿಂದೆ ಕೂಡಾ ತಾಲಿಬಾನ್‌ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ದಮನಕಾರಿ ನೀತಿಗಳನ್ನು ಪ್ರತಿಪಾದಿಸುತ್ತಲೆ ಬಂದಿದೆ. ಹಾಗಾಗಿ ಇಡಿ ವಿಶ್ವ ಅದೇ ಭಯದಿಂದ ಅಫ್ಘಾನಿಸ್ತಾನವನ್ನು ನೋಡುತ್ತಿದೆ.

ಆದರೆ ಪ್ರಸ್ತುತ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರವು ಅಫ್ಘಾನಿಸ್ತಾದ ದೃಶ್ಯವಲ್ಲ.

ಕೃಪೆ: ದಿ ಕ್ವಿಂಟ್‌

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...