Homeಮುಖಪುಟಒಂದು ಫ್ಯಾಕ್ಟ್ ಚೆಕಿಂಗ್.... ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

ಒಂದು ಫ್ಯಾಕ್ಟ್ ಚೆಕಿಂಗ್…. ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

ಈಶ್ವರಚಂದ್ರ ವಿದ್ಯಾಸಾಗರ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದೂ ಅಲ್ಲದೇ, ಹಲವು ರೀತಿಯ ಹಿಂಸಾಚಾರ ಕೊಲ್ಕೊತ್ತಾದಲ್ಲಿ ನಡೆದಿದೆ. ಸ್ವತಃ ಅಮಿತ್ ಷಾ ಪತ್ರಿಕಾಗೋಷ್ಠಿ ನಡೆಸಿ ಟಿಎಂಸಿ ಮೇಲೆ ಆಪಾದನೆ ಮಾಡಿದ್ದಾರೆ. ಆದರೆ, ವಾಸ್ತವವೇನು? ನೋಡಿ

- Advertisement -
ಕಂಪ್ಲೀಟ್ ವಿಡಿಯೋ ಎಲ್ಲ ಮಾಧ್ಯಮಗಳ ಬಳಿಯಿದೆ. ಆದರೆ, ಅದರಲ್ಲಿ ಶೇ. 90 ರಷ್ಟು ಮಾಧ್ಯಮಗಳು ಕೋಲ್ಕತ್ತ ಹಿಂಸಾಚಾರದಲ್ಲಿ ಭಾಗವಹಿಸಿದವರಾರು, ವಿದ್ಯಾಸಾಗರ್ ಕಾಲೇಜಿನೊಳ್ಳಕ್ಕೆ ನುಗ್ಗಿದವರಾರು, ವಿದ್ಯಾಸಾಗರರ ಪುತ್ಥಳಿ ಒಡೆದವರಾರು ಎಂಬ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ. ‘ಈ ಕೃತ್ಯ ಮಾಡಿದ್ದು ನಿಮ್ಮ ಪಕ್ಷವೇ’ ಎಂದು ಬಿಜೆಪಿ ಮತ್ತು ಟಿಎಂಸಿ ಪಕ್ಷಗಳೆರಡೂ ಪರಸ್ಪರ ಆರೋಪ ಮಾಡುತ್ತಿವೆ ಎಂದು ಕೈ ತೊಳೆದುಕೊಂಡಿವೆ. ಇಲ್ಲಿ ಟಿಎಂಸಿ ನೀಡಿರುವ ವಿಡಿಯೋ ನಂಬಲರ್ಹವಾಗಿದ್ದರೆ, ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ, ಅಷ್ಟೇ ಅಲ್ಲ, ಅದು ಸುಳ್ಳಿನ ಮೇಲೆ ಸುಳ್ಳನ್ನು ಹೇಳುತ್ತ ನಡೆದಿದೆ. ಹಾಗಾಗಿ ಬಿಜೆಪಿಯ ಆರೋಪ ಅಥವಾ ಕ್ಲೈಮ್‍ಗಳ ಸತ್ಯಾಸತ್ಯತೆಯನ್ನು ಇಲ್ಲಿ ಪರಿಶೀಲಿಸಲಾಗಿದೆ….
ಮೇ 15ರ ಮುಂಜಾನೆ ಬಿಜೆಪಿ ಐಟಿ ಸೆಲ್‍ನ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ‘ವಿದ್ಯಾಸಾಗರ ಕಾಲೇಜಿನಲ್ಲಿ ನಡೆದ ದೊಂಬಿಯ ಮೊದಲ ಪ್ರತ್ಯಕ್ಷದರ್ಶಿ’ಯ ಫೇಸ್‍ಬುಕ್ ಪೋಸ್ಟ್ ಉಲ್ಲೇಖಿಸಿ, ಕಾಲೇಜಿನೊಳಗೆ ಇದ್ದ ಟಿಎಂಸಿ ವಿದ್ಯಾರ್ಥಿ ಘಟಕದ ಸದಸ್ಯರು ಈ ದೊಂಬಿ ಆರಂಭಿಸಿದರು’ ಎಂದು ಬರೆಯುತ್ತಾರೆ. ಇದರಲ್ಲಿ ಈ ಘಟನೆಯ ಮೊದಲ ‘ಪ್ರತ್ಯಕ್ಷದರ್ಶಿ’ ಆ ಕಾಲೇಜಿನ ವಿದ್ಯಾರ್ಥಿ ಬೀರಜ್ ನಾರಾಯಣ ರಾಯ್ ಮಾಡಿದ ಬೆಂಗಾಲಿ ಭಾಷೆಯ ಪೋಸ್ಟ್ ಉಲ್ಲೇಖಿಸಿ ಐಟಿ ಸೆಲ್‍ನ ಮಾಳವೀಯ ಅಪಾದನೆ ಮಾಡಿದರು.
- Advertisement -

ವಿಚಿತ್ರ:  ಸಂಪೂರ್ಣ ವಿಡಿಯೋ ಹೊರ ಬೀಳುತ್ತಿದ್ದಂತೆ, ‘ಮೊದಲ ಪ್ರತ್ಯಕ್ಷದರ್ಶಿ’ ಬೀರಜ್ ನಾರಾಯಣ್ ರಾಯ್‍ನ ‘ಫೇಸ್‍ಬುಕ್’ ಅಕೌಂಟೇ ನಾಪತ್ತೆ! ಇನ್ನೂ ವಿಚಿತ್ರವೆಂದರೆ, ಆತನ ಪೋಸ್ಟನ್ನೇ ಹಾಕಿ ‘ತಾನೇ ಪ್ರತ್ಯಕ್ಷದರ್ಶಿ’ ಎಂಬಂತೆ ವಿವಿಧ ಖಾತೆಗಳಿಂದ ಪೋಸ್ಟ್‍ಗಳು ಹೊರಹೊಮ್ಮಿದವು!
ಈ ‘ಮೊದಲ ಪ್ರತ್ಯಕ್ಷದರ್ಶಿ’(ಗಳ!) ಪೋಸ್ಟ್ ಆಧಾರದಲ್ಲಿ ಬಿಜೆಪಿ ಮಾಡಿರುವ ಅಪಾದನೆ ಅಥವಾ ಕ್ಲೈಮ್‍ಗಳನ್ನು ನೋಡೋಣ:

1. ಮೊದಲ ಇಟ್ಟಿಗೆ ಕಾಲೇಜ್ ಕ್ಯಾಂಪಸ್ ಒಳಗಿಂದ ತೂರಿ ಬಂತು…

ಈ ಆರೋಪ ಸಮರ್ಥಿಸಲು ಒಂದೇ ಒಂದು ವಿಡಿಯೋವೂ ಲಭ್ಯ ಇಲ್ಲ. ‘ಮೊದಲ ಪ್ರತ್ಯಕ್ಷದರ್ಶಿ’ಯ ಅಕೌಂಟೇ ಕ್ಲೋಸ್!
ಸ್ಥಳೀಯ ‘ಆನಂದ್ ಬಜಾರ್’ ಪತ್ರಿಕೆಯ ಸ್ಪಾಟ್ ವರದಿ ಪ್ರಕಾರ, ಕಾಲೇಜಿನ ಹೊರಭಾಗದ ರಸ್ತೆಯಿಂದ (ಅಮಿತ್ ಶಾ ರ್ಯಾಲಿ ಪಾಸಾಗುತ್ತಿದ್ದ ರಸ್ತೆ) ಕಲ್ಲುಗಳನ್ನು ಕಾಲೇಜಿನ ಕ್ಯಾಂಪಸ್ ಒಳಕ್ಕೆ ಎಸೆಯಲಾಯಿತು.  ಅದನ್ನು ಎಸದವರು ‘ನಮೋ ಒನ್ಸ್ ಎಗೇನ್’ ಎಂಬ ಕೇಸರಿ ಟೀ ಶರ್ಟ್ ತೊಟ್ಟ, ರ್ಯಾಲಿಯ ಭಾಗವಾಗಿದ್ದ ಯುವಕರು. ಆದರೆ ಕಾಲೇಜ್ ಒಳಗಡೆಯಿಂದ ಯಾವುದೇ ಇಟ್ಟಿಗೆ ಎಸೆದಿದ್ದಕ್ಕೆ ಆಧಾರವಿಲ್ಲ.
ಈ ವಿಡಿಯೋ ನೋಡಿ:

2. ಟಿಎಂಸಿ ಬೈಕ್‍ಗಳನ್ನು ಸುಟ್ಟಿತು…

ಫೇಸ್‍ಬುಕ್ (ಮಾಯವಾದ ಪ್ರತ್ಯಕ್ಷದರ್ಶಿ ಮತ್ತು ನಂತರ ಅದನ್ನೇ ಕಾಪಿ ಮಾಡಿ ‘ಪ್ರತ್ಯಕ್ಷದರ್ಶಿ’ ಗಳಾದವರ ಪೋಸ್ಟ್) ಪೋಸ್ಟ್ ಮತ್ತು ಬಿಜೆಪಿ ನಾಯಕರ ಆರೋಪ ಎಂದರೆ, ಟಿಎಂಸಿ ಕಾರ್ಯಕರ್ತರು ಬೈಕ್‍ಗಳನ್ನು ಸುಟ್ಟರು.
ವಿಡಿಯೋ ನೋಡಿ: ಇಲ್ಲಿ ರ್ಯಾಲಿಯಲ್ಲಿದ್ದ ಕೇಸರಿ ಟೀ ಶರ್ಟಿನ  ಹುಡುಗರೇ ಬೈಕ್‍ಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ.

3. ಕ್ಯಾಂಪಸ್‍ಗೆ ಬೀಗ ಹಾಕಿದ್ದರಿಂದ ಬಿಜೆಪಿ ಕಾರ್ಯಕರ್ತರು ಒಳಕ್ಕೆ ಪ್ರವೇಶಿಸಲು ಅಸಾಧ್ಯ.

ಇದನ್ನು ಅಮಿತ್ ಶಾ ಸೇರಿದಂತೆ ಮಾಳವಿಯ ಮತ್ತು ಭಕ್ತರು ಹೇಳುತ್ತಿದ್ದಾರೆ. ಈ ಕುರಿತು ಪಾತ್ರಿಕಾಗೋಷ್ಠಿಯಲ್ಲೂ ಶಾ ಹೇಳಿದ್ದಾರೆ. ಗಲಭೆ ನಡೆದ 7.30ರ ಸಮಯದಲ್ಲಿ ಕಾಲೇಜ  ಮುಚ್ಚಿತ್ತು, ಎಲ್ಲ ಗೇಟ್ ಬಂದ್ ಆಗಿದ್ದವು. ಹೀಗಾಗಿ ಬಿಜೆಪಿ ಕಾರ್ಯಕರ್ತರು ಒಳಗೆ ಹೋಗುವುದು ಹೇಗೆ ಸಾಧ್ಯ? ಎಂದು ವಾದಿಸಿದ್ದಾರೆ.
ಆದರೆ ಈ ಕೆಳಗಿನ ವಿಡಿಯೊ ನೋಡಿ: ಗೇಟ್‍ನ ಬೀಗವನ್ನು ಒಡೆಯುತ್ತಿರುವುದು ಬಿಜೆಪಿ ಕಾರ್ಯಕರ್ತರು ಎಂಬುದು ಇಲ್ಲಿ ಸ್ಪಷ್ಟ..

ಬಿಜೆಪಿ ಕಾರ್ಯಕರ್ತರು ಗೇಟ್ ಬೀಗ ಒಡೆಯುತ್ತಿರುವ ವಿಡಿಯೋ
ಕ್ಯಾಂಪಸ್ ಒಳಗೆ ಪ್ರವೇಶಿಸಿದ ವಿಡಿಯೋ

ಒಳಗಿನ ದೃಶ್ಯ ತೋರಿಸುವ ಏರಿಯಲ್ ವೀವ್ ವಿಡಿಯೋ

4. ಕಬ್ಬಿಣದ ಗೇಟ್ ಮತ್ತು ನಂತರ ಕಟ್ಟಿಗೆ ಬಾಗಿಲಿರುವ ರೂಮ್‍ನಲ್ಲಿರುವ ವಿದ್ಯಾಸಾಗರರ ಪುತ್ಥಳಿಯನ್ನು ಬಿಜೆಪಿ ಕಾರ್ಯಕರ್ತರು ಒಡೆಯಲು ಹೇಗೆ ಸಾಧ್ಯ?

ಇದು ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಮಾಡಿದ ಪ್ರಶ್ನೆ. ನಿಜ, ಅಲ್ಲಿ ಕಬ್ಬಿಣದ ಗೇಟ್, ನಂತರ ಕಟ್ಟಿಗೆಯ ದ್ವಾರ ಎಲ್ಲ ಇರುವುದು ನಿಜ. ಅಂತಹ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವೇ ಎಂಬುದು ಬಿಜೆಪಿಯ ಮೂರ್ಖ ಪ್ರಶ್ನೆ. ಯಾವುದೇ ಶಕ್ತಿಶಾಲಿ ಕಬ್ಬಿಣದ ಗೇಟ್ ಇರಲಿ, ಅದರ ಶಕ್ತಿ ಇರುವುದು ಅದರ ಲಾಕ್ ಎಷ್ಟು ಶಕ್ತಿಯುತವಾಗಿದೆಯೋ ಅಷ್ಟೇ.. ಮೇಲಿನ ವಿಡಿಯೊದಲ್ಲಿಯೇ ನೋಡಿ, ರಾಡ್‍ಗಳಿಂದ ಬಿಜೆಪಿ ಕಾರ್ಯಕರ್ತರು ಆ ಲಾಕ್ ಒಡೆದು ಒಳ ನುಗ್ಗಿರುವುದನ್ನು..

5. ಒಳಗಿರುವ ಈಶ್ವರಚಂದ್ರ ವಿದ್ಯಾಸಾಗರರ ಪುತ್ಥಳಿಯನ್ನು ವಿರೂಪಗೊಳಿಸಿದ್ದು ಟಿಎಂಸಿ ಕಾರ್ಯಕರ್ತರು… 

ಈ ಅಪಾದನೆಗೂ ಯಾವುದೇ ಸಾಕ್ಷ್ಯಗಳಿಲ್ಲ. ಬದಲಿಗೆ ಲಭ್ಯವಿರುವ ಎಲ್ಲ ವಿಡಿಯೊಗಳ ಪ್ರಕಾರ, ಶಾ ರ್ಯಾಲಿಯ ಬಿಜೆಪಿ ಕಾರ್ಯಕರ್ತರೇ ವಿದ್ಯಾಸಾಗರರ ಪುತ್ಥಳಿಯನ್ನು ವಿರೂಪಗೊಳಿಸಿ, ಅದರ ತುಂಡನ್ನು ಹೊರಗೆ ತಂದು ಬಿಸಾಡಿದ್ದಾರೆ ಎಂಬುದನ್ನು ವಿಡಿಯೋಗಳೇ ಹೇಳುತ್ತಿವೆ. ಜೊತೆಗೆ ಟೆಲಿಗ್ರಾಫ್ ಪತ್ರಿಕೆಯ ಪ್ರತ್ಯಕ್ಷ ವರದಿಯೂ ಅದನ್ನೇ ಹೇಳುತ್ತಿದೆ.

ಸಾರಾಂಶ: ಕೋಲ್ಕತ್ತ ಹಿಂಸಾಚಾರಕ್ಕೆ ಟಿಎಂಸಿ ಕಾರಣ ಎಂಬ ಬಿಜೆಪಿ ಅಪಾದನೆಗೆ ಯಾವ ತಳ ಸಾಕ್ಷ್ಯವೂ ಲಭ್ಯವಿಲ್ಲ. ಅದನ್ನು ತೋರಿಸು ಸಾಕ್ಷ್ಯಗಳೂ ಬಿಜೆಪಿ ಬಳಿಯಿಲ್ಲ. ಅದು ‘ಮೊದಲ ಪ್ರತ್ಯಕ್ಷದರ್ಶಿ’ಯ ಪೇಸ್‍ಬುಕ್ ಪೇಜ್ ಉಲ್ಲೇಖಿಸಿ ಬಚಾವಾಗಲು ನೋಡಿತು. ಆದರೆ ತಕ್ಷಣವೇ ಆ ಅಕೌಂಟ್ ಮಾಯ… ಇಲ್ಲಿ ತೋರಿಸಿರುವ ಎಲ್ಲ ವಿಡಿಯೊಗಳಲ್ಲಿ ರ್ಯಾಲಿಯಲ್ಲಿದ್ದ ‘ನಮೋ ಒನ್ಸ್ ಎಗೇನ್’ ಹೆಸರಿನ ಕೇಸರಿ ಟೀಶರ್ಟ್ ಧರಿಸಿದ್ದ ಮತ್ತು ಅವರ ಜೊತೆಗಿದ್ದ ಬಿಜೆಪಿ ಕಾರ್ಯಕರ್ತರೇ ಈ ಹಿಂಸಾಚಾರ, ಗಲಭೆ ಮಾಡಿದ್ದಾರೆ….)
(ಆಧಾರ:Altnews.in)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...