Homeಕರ್ನಾಟಕಗಂಗಾವತಿ: ಮಾದಿಗ ಸಮುದಾಯದ ಮೇಲೆ ಗುಂಪು ಕಟ್ಟಿಕೊಂಡು ಆಕ್ರಮಣ; ನಾಲ್ವರು ಆಸ್ಪತ್ರೆಗೆ ದಾಖಲು

ಗಂಗಾವತಿ: ಮಾದಿಗ ಸಮುದಾಯದ ಮೇಲೆ ಗುಂಪು ಕಟ್ಟಿಕೊಂಡು ಆಕ್ರಮಣ; ನಾಲ್ವರು ಆಸ್ಪತ್ರೆಗೆ ದಾಖಲು

- Advertisement -
- Advertisement -

ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಶನಿವಾರದಂದು ಮಾದಿಗ ಸಮುದಾಯದ ಜನರ ಮೇಲೆ, ಕುರುಬ ಮತ್ತು ನಾಯಕ ಸಮುದಯಗಳ ಜನರು ಗುಂಪು ಕಟ್ಟಿಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮೊಹರಂ ಹಬ್ಬದ ದಿನವಾದ ಶುಕ್ರವಾರಂದು ಗೆಜ್ಜೆ ಕುಣಿತದ ಸಮಯದಲ್ಲಿ ಮೈಕೈ ಸ್ಪರ್ಶಿಸಿದ್ದಕ್ಕೆ ಜಗಳಗಳು ಪ್ರಾರಂಭವಾಗಿದೆ. ಇದುವೆ ದೊಡ್ಡದಾಗಿ ಶನಿವಾರ ಕೂಡಾ ಮಾದಿಗರ ಮೇಲೆ ಆಕ್ರಮಣ ನಡೆದಿದೆ ಎಂದು ವ್ಯಕ್ತಿಯೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ಮೊದಲ ಘಟನೆಯ ಬಗ್ಗೆ ಶುಕ್ರವಾರ ರಾತ್ರಿ 7 ಗಂಟೆಗೆ ಪೋಲಿಸರಿಗೆ ದೂರವಾಣಿ ಮುಖಾಂತರ ತಿಳಿಸಲಾಗಿತ್ತು ಎನ್ನಲಾಗಿದ್ದು, ಆದರೆ ಪೊಲೀಸರು ಶನಿವಾರ ಬೆಳಿಗ್ಗೆ ಎಲ್ಲಾ ಸಮುದಾಯದವರು ಸೇರಿ ಶಾಂತಿ ಸಭೆ ಮಾಡುವ ಬಗ್ಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಅದಾಗ್ಯೂ ಪೊಲೀಸರಿಗೆ ದೂರಿದ್ದಕ್ಕಾಗಿ ಕುರುಬ ಮತ್ತು ನಾಯಕ ಸಮುದಾಯದವರು ಮತ್ತೆ ಶನಿವಾರದಂದು ಮುಂಜಾನೆ ಗುಂಪುಕಟ್ಟಿಕೊಂಡು ಮಾದಿಗ ಸಮುದಾಯದ ಮೇಲೆ ಆಕ್ರಮಣ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಕ್ರಮಣದಿಂದಾಗಿ ನಾಲ್ಕು ಯುವಕರಿಗೆ ಗಂಭೀರ ಗಾಯಗಾಳಾಗಿದ್ದು ಅವರು ಗಂಗಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಗುಂಪುಗಳು ಹೊಡೆದಾಡುತ್ತಿರುವ  ದೃಶ್ಯಗಳು ವೈರಲ್‌ ಆಗಿದೆ.

ಶನಿವಾರ ನಡೆದ ಆಕ್ರಮಣದ ಬಗ್ಗೆ ದೂರು ನೀಡಲು ಅಂದು ಬೆಳಿಗ್ಗೆ ಗಂಗಾವತಿ ಗ್ರಾಮೀಣ ಠಾಣೆಗೆ ತೆರಳಿದರೂ ಮಾದಿಗ ಸಮುದಾಯದಿಂದ ದೂರು ಸ್ವೀಕರಿಸಲು ಆರಂಭದಲ್ಲಿ ಪೊಲೀಸರು ನಿರಾಕರಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ರಘು ಆರೋಪಿಸಿದ್ದಾರೆ. ಇದರ ನಂತರ ಮಾದಿಗ ಸಮುದಾಯದ ಜನರು ಠಾಣೆಯ ಮುಂದೆ ಪ್ರತಿಭಟನೆಗೆ ಮುಂದಾದಾಗ ಮಧ್ಯಾಹ್ನದ ನಂತರ ಪೊಲೀಸರು ದೂರು ಸ್ವೀಕರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ಈ ಜಾತಿ ದಾಂಧಲೆ ತೆಂಡೂಲ್ಕರ್ ಮನೆ ಮುಂದೆ ನಡೆದಿದ್ದರೆ!

ಘಟನೆಯ ಬಗ್ಗೆಗಿನ ದೃಶ್ಯಾವಳಿಗಳು ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿದೆ. ವಿಡಿಯೊದಲ್ಲಿ, ಜಾತಿ ಕಾರಣಕ್ಕೆ ಊರಿಗೆ ಬರಬಾರದು ಎಂದು ಮೇಲ್ಜಾತಿಯ ಸಮುದಾಯಗಳು ಹಲ್ಲೆ ನಡೆಸಿವೆ ಎಂದು ಮಹಿಳೆಯರು ದೂರುತ್ತಿರುವುದನ್ನು ನೋಡಬಹುದಾಗಿದೆ.

ಅಲ್ಲದೆ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿರುವ ಯುವಕರ ವಿಡಿಯೊಗಳು ಕೂಡಾ ಹರಿದಾಡುತ್ತಿದೆ. ಅದರಲ್ಲೂ ಮಹಿಳೆಯರು ತಮ್ಮ ಯುವಕರಿಗೆ ಹಲ್ಲೆಗೊಳಗಾಗಿರುವ ಘಟನೆಯನ್ನು ವಿವರಿಸುತ್ತಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಗಂಗಾವತಿ ಗ್ರಾಮೀಣ ಪೊಲೀಸ್‌ ಠಾಣೆಯ ಪಿಎಸ್‌ಐ ದೊಡ್ಡಯ್ಯ ಮಾತನಾಡಿ, “ಘಟನೆಯಲ್ಲಿ ಒಂದು ಕಡೆಯಿಂದ 20 ಮತ್ತು ಇನ್ನೊಂದು ಕಡೆಯಿಂದ 21 ಜನರ ಮೇಲೆ ಪ್ರಕರಣ ದಾಖಲಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...