Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ತಾಲಿಬಾನಿಗಳು ಕಲ್ಲಿನಿಂದ ಹೊಡೆದು ಮಹಿಳಾ ಪೈಲಟ್‌ರನ್ನು ಸಾಯಿಸಿದ್ದಾರೆ ಎಂದು ಹಳೆಯ ಪೋಟೋ ಹಂಚಿಕೊಳ್ಳಲಾಗುತ್ತಿದೆ

ಫ್ಯಾಕ್ಟ್‌‌ಚೆಕ್‌: ತಾಲಿಬಾನಿಗಳು ಕಲ್ಲಿನಿಂದ ಹೊಡೆದು ಮಹಿಳಾ ಪೈಲಟ್‌ರನ್ನು ಸಾಯಿಸಿದ್ದಾರೆ ಎಂದು ಹಳೆಯ ಪೋಟೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಅಫ್ಘಾನಿಸ್ತಾನ ತಾಲಿಬಾನ್ ಕೈವಶವಾದ ಮೇಲೆ ಅಫ್ಘಾನ್ ವಾಯುಪಡೆಯ ನಾಲ್ಕು ಮಹಿಳಾ ಪೈಲಟ್‌ಗಳಲ್ಲಿ ಒಬ್ಬರಾದ ಸಫಿಯಾ ಫಿರೋಜಿ ಅವರನ್ನು ಸಾರ್ವಜನಿಕವಾಗಿ ಕಲ್ಲಿನಿಂದ ಹೊಡೆದು ಸಾಯಿಸಲಾಗಿದೆ ಎಂದು ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಟ್ವಿಟರ್ ಬಳಕೆದಾರರು ಇತ್ತೀಚೆಗೆ ಈ ಚಿತ್ರವನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. “ಸಫಿಯಾ ಫಿರೋಜಿ, ಅಫ್ಘಾನ್ ವಾಯುಪಡೆಯ ನಾಲ್ಕು ಮಹಿಳಾ ಪೈಲಟ್‌ಗಳಲ್ಲಿ ಒಬ್ಬರು. ಇಂದು ಬೆಳಿಗ್ಗೆ ಅವರನ್ನು ಸಾರ್ವಜನಿಕವಾಗಿ ಕಲ್ಲೆಸೆದು ಸಾಯಿಸಲಾಗಿದೆ” ಎಂದು ಆಗಸ್ಟ್ 18 ರಂದು ಸಂಗೀತಾ ಸಾಗರ್‌ ಎಂಬುವರು ಹಂಚಿಕೊಂಡಿದ್ದಾರೆ.

ಇದೇ ರೀತಿ ಹಲವು ಮಂದಿ ಈ ಚಿತ್ರವನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಕಂಡು ಬಂದದ್ದು, ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಚಿತ್ರ 2018ರಲ್ಲಿ ನಡೆದ ಪ್ರತಿಭನಟನೆಯ ವರದಿಯಲ್ಲಿ ಕಾಣಿಸಿಕೊಂಡಿದೆ.  ಇದು ಕಾಬೂಲ್‌ನಲ್ಲಿ ನಡೆದ ಫರ್ಖುಂಡಾ ಹತ್ಯಾಕಾಂಡದ ಚಿತ್ರ ಎಂಬ ವರದಿಗಳು ಸಿಕ್ಕಿವೆ.

ವರದಿಗಳ ಪ್ರಕಾರ, ಮುಗ್ಧ ಯುವತಿಯ ಹತ್ಯೆಯಾದ ಮೂರನೇ ವರ್ಷದ ಸ್ಮರಣಾರ್ಥವಾಗಿ ಸ್ಥಳೀಯರು ಫರ್ಖುಂಡಾ ಸ್ಮಾರಕದ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಕಿರುಕುಳ, ಚಿತ್ರಹಿಂಸೆಗೆ ಬಲಿಯಾದ ಫರ್ಖುಂಡಾ, ರುಖ್ಶಾನಾ, ಶುಕ್ರಿಯಾ ತಬಸುಮ್, ಮಿರ್ಜಾಲಾಂಗ್ ಇತರ ಸಂತ್ರಸ್ತ ಮಹಿಳೆಯರಿಗೆ ನಡೆದ ಅನ್ಯಾಯವನ್ನು ಖಂಡಿಸುವ ಪೋಸ್ಟರ್‌ಗಳನ್ನು ಈ ವರದಿಯಲ್ಲಿ ನೋಡಬಹುದು. ಈ ಪೋಸ್ಟರ್‌ಗಳಲ್ಲಿ  ಒಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟರ್‌ನಲ್ಲಿರುವ ಮಹಿಳೆಯನ್ನು ಹೋಲುತ್ತದೆ.

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ಇನ್ನು ಮುಂದಿನ ಹುಡುಕಾಟದಿಂದ ಈ ಚಿತ್ರ ಡಿಸೆಂಬರ್ 26, 2015 ರ ದಿ ನ್ಯೂಯಾರ್ಕ್ ಟೈಮ್ಸ್ ನ ವಿಡಿಯೊದಲ್ಲಿ ದೊರಕಿದೆ. ಇದರಲ್ಲಿ ನಿರೂಪಕ “27 ವರ್ಷದ ಮುಸ್ಲಿಂ ಮಹಿಳೆ ಫರ್ಖುಂಡಾ ಮಲಿಕ್ಜಾಡಾರನ್ನು ಖುರಾನ್ ಸುಟ್ಟ ಆರೋಪದ ಮೇಲೆ ಕೊಲ್ಲಲಾಯಿತು. ಈ ಘಟನೆಯನ್ನು ಸಾವಿರಾರು ಜನರು ವೀಕ್ಷಿಸಿದರು” ಎಂದು ವಿವರಿಸುತ್ತಾರೆ.

ಮೇ 2015 ರ ಬಿಬಿಸಿ ವರದಿಯು ಫರ್ಖುಂಡಾ ಮಲಿಕ್ಜಾಡಾ ಮಾರ್ಚ್ 19 ರಂದು ನಿಧನರಾದರು ಎಂದು ತಿಳಿಸುತ್ತದೆ. ಕುರಾನ್ ಅನ್ನು ಸುಟ್ಟ ತಪ್ಪು ಆರೋಪದಲ್ಲಿ ಈಕೆಯನ್ನು ಹತ್ಯೆ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ 19 ಮಂದಿ ಪೊಲೀಸ್ ಅಧಿಕಾರಿಗಳು ಸೇರಿ 49 ಜನರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌ | ನೆದರ್‌ಲ್ಯಾಂಡ್ಸ್‌‌ನ ಡಚ್‌‌‌‌‌ ವಿದ್ಯಾರ್ಥಿಗಳಿಗೆ 5 ನೇ ತರಗತಿಯಿಂದ ಭಗವದ್ಗೀತೆ ಕಡ್ಡಾಯ! – ನಿಜವೆ?

ವರದಿಯ ಪ್ರಕಾರ, “ಮೂವರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ, ಎಂಟು ಮಂದಿಗೆ 16 ವರ್ಷಗಳ ಜೈಲು ಶಿಕ್ಷೆ ಮತ್ತು ಅಪ್ರಾಪ್ತ ವಯಸ್ಕನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 11 ಪೋಲಿಸ್ ಅಧಿಕಾರಿಗಳಿಗೆ ಫರ್ಖುಂಡಾಕ್ಕೆ ಭದ್ರತೆ ನೀಡಲು ವಿಫಲವಾದ ಕಾರಣಕ್ಕೆ ತಲಾ ಒಂದು ವರ್ಷ ಶಿಕ್ಷೆ ವಿಧಿಸಲಾಗಿತ್ತು.

ವೈರಲ್ ಪೋಸ್ಟ್‌ಗಳಲ್ಲಿ ಫರ್ಖುಂಡಾ ಮಲಿಕ್ಜಾಡಾ ಅವರನ್ನು ಸಫಿಯಾ ಫಿರೋಜಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಸಫಿಯಾ ಫಿರೋಜಿ ಅಫ್ಘಾನಿಸ್ತಾನದ ಎರಡನೇ ಮಹಿಳಾ ಪೈಲಟ್ ಆಗಿ ಪ್ರಾಮುಖ್ಯತೆ ಪಡೆದಿದ್ದರು. 1990 ರಲ್ಲಿ ಫಿರೋಜಿ ಮತ್ತು ಆಕೆಯ ಕುಟುಂಬ ಕಾಬೂಲ್‌ನಿಂದ ಪಲಾಯನ ಮಾಡಿತ್ತು. 2001 ರಲ್ಲಿ ತಾಲಿಬಾನ್ ಪತನದ ನಂತರ, ಅವರು ಕಾಬೂಲ್‌ಗೆ ಮರಳಿದರು. ಆದರೆ, ಸಫಿಯಾ ಸಾವಿನ ದೃಢೀರಣಕ್ಕೆ ನಮಗೆ ಯಾವುದೇ ನಂಬಲರ್ಹವಾದ ವರದಿ ಲಭ್ಯವಾಗಿಲ್ಲ.

ಅಫ್ಘಾನಿಸ್ತಾನದ ಮೊದಲ ಮಹಿಳಾ ಪೈಲಟ್ ಹೆಸರು ನಿಲೂಫರ್ ರಹ್ಮಾನಿ, ಮಹಿಳಾ ಹಕ್ಕುಗಳ ಮೇಲೆ ತಾಲಿಬಾನ್ ಪ್ರಚಾರವನ್ನು ನಂಬಬೇಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.

ಆದ್ದರಿಂದ, ಇದರಿಂದ ಫರ್ಖುಂಡಾ ಮಲಿಕ್ಜಾಡಾ ಅವರ ಹಳೆಯ ಚಿತ್ರವನ್ನು ಅಫ್ಘಾನಿಸ್ತಾನದ ಮಹಿಳಾ ಪೈಲಟ್ ಸಫಿಯಾ ಫಿರೋಜಿ, ತಾಲಿಬಾನಿಗಳು ಸಾರ್ವಜನಿಕವಾಗಿ ಕಲ್ಲಿನಿಂದ ಹೊಡೆದು ಸಾಯಿಸುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...