Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ತಾಲಿಬಾನಿಗಳು ಕಲ್ಲಿನಿಂದ ಹೊಡೆದು ಮಹಿಳಾ ಪೈಲಟ್‌ರನ್ನು ಸಾಯಿಸಿದ್ದಾರೆ ಎಂದು ಹಳೆಯ ಪೋಟೋ ಹಂಚಿಕೊಳ್ಳಲಾಗುತ್ತಿದೆ

ಫ್ಯಾಕ್ಟ್‌‌ಚೆಕ್‌: ತಾಲಿಬಾನಿಗಳು ಕಲ್ಲಿನಿಂದ ಹೊಡೆದು ಮಹಿಳಾ ಪೈಲಟ್‌ರನ್ನು ಸಾಯಿಸಿದ್ದಾರೆ ಎಂದು ಹಳೆಯ ಪೋಟೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಅಫ್ಘಾನಿಸ್ತಾನ ತಾಲಿಬಾನ್ ಕೈವಶವಾದ ಮೇಲೆ ಅಫ್ಘಾನ್ ವಾಯುಪಡೆಯ ನಾಲ್ಕು ಮಹಿಳಾ ಪೈಲಟ್‌ಗಳಲ್ಲಿ ಒಬ್ಬರಾದ ಸಫಿಯಾ ಫಿರೋಜಿ ಅವರನ್ನು ಸಾರ್ವಜನಿಕವಾಗಿ ಕಲ್ಲಿನಿಂದ ಹೊಡೆದು ಸಾಯಿಸಲಾಗಿದೆ ಎಂದು ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಟ್ವಿಟರ್ ಬಳಕೆದಾರರು ಇತ್ತೀಚೆಗೆ ಈ ಚಿತ್ರವನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. “ಸಫಿಯಾ ಫಿರೋಜಿ, ಅಫ್ಘಾನ್ ವಾಯುಪಡೆಯ ನಾಲ್ಕು ಮಹಿಳಾ ಪೈಲಟ್‌ಗಳಲ್ಲಿ ಒಬ್ಬರು. ಇಂದು ಬೆಳಿಗ್ಗೆ ಅವರನ್ನು ಸಾರ್ವಜನಿಕವಾಗಿ ಕಲ್ಲೆಸೆದು ಸಾಯಿಸಲಾಗಿದೆ” ಎಂದು ಆಗಸ್ಟ್ 18 ರಂದು ಸಂಗೀತಾ ಸಾಗರ್‌ ಎಂಬುವರು ಹಂಚಿಕೊಂಡಿದ್ದಾರೆ.

ಇದೇ ರೀತಿ ಹಲವು ಮಂದಿ ಈ ಚಿತ್ರವನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಕಂಡು ಬಂದದ್ದು, ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಚಿತ್ರ 2018ರಲ್ಲಿ ನಡೆದ ಪ್ರತಿಭನಟನೆಯ ವರದಿಯಲ್ಲಿ ಕಾಣಿಸಿಕೊಂಡಿದೆ.  ಇದು ಕಾಬೂಲ್‌ನಲ್ಲಿ ನಡೆದ ಫರ್ಖುಂಡಾ ಹತ್ಯಾಕಾಂಡದ ಚಿತ್ರ ಎಂಬ ವರದಿಗಳು ಸಿಕ್ಕಿವೆ.

ವರದಿಗಳ ಪ್ರಕಾರ, ಮುಗ್ಧ ಯುವತಿಯ ಹತ್ಯೆಯಾದ ಮೂರನೇ ವರ್ಷದ ಸ್ಮರಣಾರ್ಥವಾಗಿ ಸ್ಥಳೀಯರು ಫರ್ಖುಂಡಾ ಸ್ಮಾರಕದ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಕಿರುಕುಳ, ಚಿತ್ರಹಿಂಸೆಗೆ ಬಲಿಯಾದ ಫರ್ಖುಂಡಾ, ರುಖ್ಶಾನಾ, ಶುಕ್ರಿಯಾ ತಬಸುಮ್, ಮಿರ್ಜಾಲಾಂಗ್ ಇತರ ಸಂತ್ರಸ್ತ ಮಹಿಳೆಯರಿಗೆ ನಡೆದ ಅನ್ಯಾಯವನ್ನು ಖಂಡಿಸುವ ಪೋಸ್ಟರ್‌ಗಳನ್ನು ಈ ವರದಿಯಲ್ಲಿ ನೋಡಬಹುದು. ಈ ಪೋಸ್ಟರ್‌ಗಳಲ್ಲಿ  ಒಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟರ್‌ನಲ್ಲಿರುವ ಮಹಿಳೆಯನ್ನು ಹೋಲುತ್ತದೆ.

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ಇನ್ನು ಮುಂದಿನ ಹುಡುಕಾಟದಿಂದ ಈ ಚಿತ್ರ ಡಿಸೆಂಬರ್ 26, 2015 ರ ದಿ ನ್ಯೂಯಾರ್ಕ್ ಟೈಮ್ಸ್ ನ ವಿಡಿಯೊದಲ್ಲಿ ದೊರಕಿದೆ. ಇದರಲ್ಲಿ ನಿರೂಪಕ “27 ವರ್ಷದ ಮುಸ್ಲಿಂ ಮಹಿಳೆ ಫರ್ಖುಂಡಾ ಮಲಿಕ್ಜಾಡಾರನ್ನು ಖುರಾನ್ ಸುಟ್ಟ ಆರೋಪದ ಮೇಲೆ ಕೊಲ್ಲಲಾಯಿತು. ಈ ಘಟನೆಯನ್ನು ಸಾವಿರಾರು ಜನರು ವೀಕ್ಷಿಸಿದರು” ಎಂದು ವಿವರಿಸುತ್ತಾರೆ.

ಮೇ 2015 ರ ಬಿಬಿಸಿ ವರದಿಯು ಫರ್ಖುಂಡಾ ಮಲಿಕ್ಜಾಡಾ ಮಾರ್ಚ್ 19 ರಂದು ನಿಧನರಾದರು ಎಂದು ತಿಳಿಸುತ್ತದೆ. ಕುರಾನ್ ಅನ್ನು ಸುಟ್ಟ ತಪ್ಪು ಆರೋಪದಲ್ಲಿ ಈಕೆಯನ್ನು ಹತ್ಯೆ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ 19 ಮಂದಿ ಪೊಲೀಸ್ ಅಧಿಕಾರಿಗಳು ಸೇರಿ 49 ಜನರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌ | ನೆದರ್‌ಲ್ಯಾಂಡ್ಸ್‌‌ನ ಡಚ್‌‌‌‌‌ ವಿದ್ಯಾರ್ಥಿಗಳಿಗೆ 5 ನೇ ತರಗತಿಯಿಂದ ಭಗವದ್ಗೀತೆ ಕಡ್ಡಾಯ! – ನಿಜವೆ?

ವರದಿಯ ಪ್ರಕಾರ, “ಮೂವರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ, ಎಂಟು ಮಂದಿಗೆ 16 ವರ್ಷಗಳ ಜೈಲು ಶಿಕ್ಷೆ ಮತ್ತು ಅಪ್ರಾಪ್ತ ವಯಸ್ಕನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 11 ಪೋಲಿಸ್ ಅಧಿಕಾರಿಗಳಿಗೆ ಫರ್ಖುಂಡಾಕ್ಕೆ ಭದ್ರತೆ ನೀಡಲು ವಿಫಲವಾದ ಕಾರಣಕ್ಕೆ ತಲಾ ಒಂದು ವರ್ಷ ಶಿಕ್ಷೆ ವಿಧಿಸಲಾಗಿತ್ತು.

ವೈರಲ್ ಪೋಸ್ಟ್‌ಗಳಲ್ಲಿ ಫರ್ಖುಂಡಾ ಮಲಿಕ್ಜಾಡಾ ಅವರನ್ನು ಸಫಿಯಾ ಫಿರೋಜಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಸಫಿಯಾ ಫಿರೋಜಿ ಅಫ್ಘಾನಿಸ್ತಾನದ ಎರಡನೇ ಮಹಿಳಾ ಪೈಲಟ್ ಆಗಿ ಪ್ರಾಮುಖ್ಯತೆ ಪಡೆದಿದ್ದರು. 1990 ರಲ್ಲಿ ಫಿರೋಜಿ ಮತ್ತು ಆಕೆಯ ಕುಟುಂಬ ಕಾಬೂಲ್‌ನಿಂದ ಪಲಾಯನ ಮಾಡಿತ್ತು. 2001 ರಲ್ಲಿ ತಾಲಿಬಾನ್ ಪತನದ ನಂತರ, ಅವರು ಕಾಬೂಲ್‌ಗೆ ಮರಳಿದರು. ಆದರೆ, ಸಫಿಯಾ ಸಾವಿನ ದೃಢೀರಣಕ್ಕೆ ನಮಗೆ ಯಾವುದೇ ನಂಬಲರ್ಹವಾದ ವರದಿ ಲಭ್ಯವಾಗಿಲ್ಲ.

ಅಫ್ಘಾನಿಸ್ತಾನದ ಮೊದಲ ಮಹಿಳಾ ಪೈಲಟ್ ಹೆಸರು ನಿಲೂಫರ್ ರಹ್ಮಾನಿ, ಮಹಿಳಾ ಹಕ್ಕುಗಳ ಮೇಲೆ ತಾಲಿಬಾನ್ ಪ್ರಚಾರವನ್ನು ನಂಬಬೇಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.

ಆದ್ದರಿಂದ, ಇದರಿಂದ ಫರ್ಖುಂಡಾ ಮಲಿಕ್ಜಾಡಾ ಅವರ ಹಳೆಯ ಚಿತ್ರವನ್ನು ಅಫ್ಘಾನಿಸ್ತಾನದ ಮಹಿಳಾ ಪೈಲಟ್ ಸಫಿಯಾ ಫಿರೋಜಿ, ತಾಲಿಬಾನಿಗಳು ಸಾರ್ವಜನಿಕವಾಗಿ ಕಲ್ಲಿನಿಂದ ಹೊಡೆದು ಸಾಯಿಸುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...