Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ತಾಲಿಬಾನಿಗಳು ಕಲ್ಲಿನಿಂದ ಹೊಡೆದು ಮಹಿಳಾ ಪೈಲಟ್‌ರನ್ನು ಸಾಯಿಸಿದ್ದಾರೆ ಎಂದು ಹಳೆಯ ಪೋಟೋ ಹಂಚಿಕೊಳ್ಳಲಾಗುತ್ತಿದೆ

ಫ್ಯಾಕ್ಟ್‌‌ಚೆಕ್‌: ತಾಲಿಬಾನಿಗಳು ಕಲ್ಲಿನಿಂದ ಹೊಡೆದು ಮಹಿಳಾ ಪೈಲಟ್‌ರನ್ನು ಸಾಯಿಸಿದ್ದಾರೆ ಎಂದು ಹಳೆಯ ಪೋಟೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಅಫ್ಘಾನಿಸ್ತಾನ ತಾಲಿಬಾನ್ ಕೈವಶವಾದ ಮೇಲೆ ಅಫ್ಘಾನ್ ವಾಯುಪಡೆಯ ನಾಲ್ಕು ಮಹಿಳಾ ಪೈಲಟ್‌ಗಳಲ್ಲಿ ಒಬ್ಬರಾದ ಸಫಿಯಾ ಫಿರೋಜಿ ಅವರನ್ನು ಸಾರ್ವಜನಿಕವಾಗಿ ಕಲ್ಲಿನಿಂದ ಹೊಡೆದು ಸಾಯಿಸಲಾಗಿದೆ ಎಂದು ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಟ್ವಿಟರ್ ಬಳಕೆದಾರರು ಇತ್ತೀಚೆಗೆ ಈ ಚಿತ್ರವನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. “ಸಫಿಯಾ ಫಿರೋಜಿ, ಅಫ್ಘಾನ್ ವಾಯುಪಡೆಯ ನಾಲ್ಕು ಮಹಿಳಾ ಪೈಲಟ್‌ಗಳಲ್ಲಿ ಒಬ್ಬರು. ಇಂದು ಬೆಳಿಗ್ಗೆ ಅವರನ್ನು ಸಾರ್ವಜನಿಕವಾಗಿ ಕಲ್ಲೆಸೆದು ಸಾಯಿಸಲಾಗಿದೆ” ಎಂದು ಆಗಸ್ಟ್ 18 ರಂದು ಸಂಗೀತಾ ಸಾಗರ್‌ ಎಂಬುವರು ಹಂಚಿಕೊಂಡಿದ್ದಾರೆ.

ಇದೇ ರೀತಿ ಹಲವು ಮಂದಿ ಈ ಚಿತ್ರವನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಕಂಡು ಬಂದದ್ದು, ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಚಿತ್ರ 2018ರಲ್ಲಿ ನಡೆದ ಪ್ರತಿಭನಟನೆಯ ವರದಿಯಲ್ಲಿ ಕಾಣಿಸಿಕೊಂಡಿದೆ.  ಇದು ಕಾಬೂಲ್‌ನಲ್ಲಿ ನಡೆದ ಫರ್ಖುಂಡಾ ಹತ್ಯಾಕಾಂಡದ ಚಿತ್ರ ಎಂಬ ವರದಿಗಳು ಸಿಕ್ಕಿವೆ.

ವರದಿಗಳ ಪ್ರಕಾರ, ಮುಗ್ಧ ಯುವತಿಯ ಹತ್ಯೆಯಾದ ಮೂರನೇ ವರ್ಷದ ಸ್ಮರಣಾರ್ಥವಾಗಿ ಸ್ಥಳೀಯರು ಫರ್ಖುಂಡಾ ಸ್ಮಾರಕದ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಕಿರುಕುಳ, ಚಿತ್ರಹಿಂಸೆಗೆ ಬಲಿಯಾದ ಫರ್ಖುಂಡಾ, ರುಖ್ಶಾನಾ, ಶುಕ್ರಿಯಾ ತಬಸುಮ್, ಮಿರ್ಜಾಲಾಂಗ್ ಇತರ ಸಂತ್ರಸ್ತ ಮಹಿಳೆಯರಿಗೆ ನಡೆದ ಅನ್ಯಾಯವನ್ನು ಖಂಡಿಸುವ ಪೋಸ್ಟರ್‌ಗಳನ್ನು ಈ ವರದಿಯಲ್ಲಿ ನೋಡಬಹುದು. ಈ ಪೋಸ್ಟರ್‌ಗಳಲ್ಲಿ  ಒಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟರ್‌ನಲ್ಲಿರುವ ಮಹಿಳೆಯನ್ನು ಹೋಲುತ್ತದೆ.

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ಇನ್ನು ಮುಂದಿನ ಹುಡುಕಾಟದಿಂದ ಈ ಚಿತ್ರ ಡಿಸೆಂಬರ್ 26, 2015 ರ ದಿ ನ್ಯೂಯಾರ್ಕ್ ಟೈಮ್ಸ್ ನ ವಿಡಿಯೊದಲ್ಲಿ ದೊರಕಿದೆ. ಇದರಲ್ಲಿ ನಿರೂಪಕ “27 ವರ್ಷದ ಮುಸ್ಲಿಂ ಮಹಿಳೆ ಫರ್ಖುಂಡಾ ಮಲಿಕ್ಜಾಡಾರನ್ನು ಖುರಾನ್ ಸುಟ್ಟ ಆರೋಪದ ಮೇಲೆ ಕೊಲ್ಲಲಾಯಿತು. ಈ ಘಟನೆಯನ್ನು ಸಾವಿರಾರು ಜನರು ವೀಕ್ಷಿಸಿದರು” ಎಂದು ವಿವರಿಸುತ್ತಾರೆ.

ಮೇ 2015 ರ ಬಿಬಿಸಿ ವರದಿಯು ಫರ್ಖುಂಡಾ ಮಲಿಕ್ಜಾಡಾ ಮಾರ್ಚ್ 19 ರಂದು ನಿಧನರಾದರು ಎಂದು ತಿಳಿಸುತ್ತದೆ. ಕುರಾನ್ ಅನ್ನು ಸುಟ್ಟ ತಪ್ಪು ಆರೋಪದಲ್ಲಿ ಈಕೆಯನ್ನು ಹತ್ಯೆ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ 19 ಮಂದಿ ಪೊಲೀಸ್ ಅಧಿಕಾರಿಗಳು ಸೇರಿ 49 ಜನರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌ | ನೆದರ್‌ಲ್ಯಾಂಡ್ಸ್‌‌ನ ಡಚ್‌‌‌‌‌ ವಿದ್ಯಾರ್ಥಿಗಳಿಗೆ 5 ನೇ ತರಗತಿಯಿಂದ ಭಗವದ್ಗೀತೆ ಕಡ್ಡಾಯ! – ನಿಜವೆ?

ವರದಿಯ ಪ್ರಕಾರ, “ಮೂವರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ, ಎಂಟು ಮಂದಿಗೆ 16 ವರ್ಷಗಳ ಜೈಲು ಶಿಕ್ಷೆ ಮತ್ತು ಅಪ್ರಾಪ್ತ ವಯಸ್ಕನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 11 ಪೋಲಿಸ್ ಅಧಿಕಾರಿಗಳಿಗೆ ಫರ್ಖುಂಡಾಕ್ಕೆ ಭದ್ರತೆ ನೀಡಲು ವಿಫಲವಾದ ಕಾರಣಕ್ಕೆ ತಲಾ ಒಂದು ವರ್ಷ ಶಿಕ್ಷೆ ವಿಧಿಸಲಾಗಿತ್ತು.

ವೈರಲ್ ಪೋಸ್ಟ್‌ಗಳಲ್ಲಿ ಫರ್ಖುಂಡಾ ಮಲಿಕ್ಜಾಡಾ ಅವರನ್ನು ಸಫಿಯಾ ಫಿರೋಜಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಸಫಿಯಾ ಫಿರೋಜಿ ಅಫ್ಘಾನಿಸ್ತಾನದ ಎರಡನೇ ಮಹಿಳಾ ಪೈಲಟ್ ಆಗಿ ಪ್ರಾಮುಖ್ಯತೆ ಪಡೆದಿದ್ದರು. 1990 ರಲ್ಲಿ ಫಿರೋಜಿ ಮತ್ತು ಆಕೆಯ ಕುಟುಂಬ ಕಾಬೂಲ್‌ನಿಂದ ಪಲಾಯನ ಮಾಡಿತ್ತು. 2001 ರಲ್ಲಿ ತಾಲಿಬಾನ್ ಪತನದ ನಂತರ, ಅವರು ಕಾಬೂಲ್‌ಗೆ ಮರಳಿದರು. ಆದರೆ, ಸಫಿಯಾ ಸಾವಿನ ದೃಢೀರಣಕ್ಕೆ ನಮಗೆ ಯಾವುದೇ ನಂಬಲರ್ಹವಾದ ವರದಿ ಲಭ್ಯವಾಗಿಲ್ಲ.

ಅಫ್ಘಾನಿಸ್ತಾನದ ಮೊದಲ ಮಹಿಳಾ ಪೈಲಟ್ ಹೆಸರು ನಿಲೂಫರ್ ರಹ್ಮಾನಿ, ಮಹಿಳಾ ಹಕ್ಕುಗಳ ಮೇಲೆ ತಾಲಿಬಾನ್ ಪ್ರಚಾರವನ್ನು ನಂಬಬೇಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.

ಆದ್ದರಿಂದ, ಇದರಿಂದ ಫರ್ಖುಂಡಾ ಮಲಿಕ್ಜಾಡಾ ಅವರ ಹಳೆಯ ಚಿತ್ರವನ್ನು ಅಫ್ಘಾನಿಸ್ತಾನದ ಮಹಿಳಾ ಪೈಲಟ್ ಸಫಿಯಾ ಫಿರೋಜಿ, ತಾಲಿಬಾನಿಗಳು ಸಾರ್ವಜನಿಕವಾಗಿ ಕಲ್ಲಿನಿಂದ ಹೊಡೆದು ಸಾಯಿಸುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...