Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ತಾಲಿಬಾನಿಗಳು ಕಲ್ಲಿನಿಂದ ಹೊಡೆದು ಮಹಿಳಾ ಪೈಲಟ್‌ರನ್ನು ಸಾಯಿಸಿದ್ದಾರೆ ಎಂದು ಹಳೆಯ ಪೋಟೋ ಹಂಚಿಕೊಳ್ಳಲಾಗುತ್ತಿದೆ

ಫ್ಯಾಕ್ಟ್‌‌ಚೆಕ್‌: ತಾಲಿಬಾನಿಗಳು ಕಲ್ಲಿನಿಂದ ಹೊಡೆದು ಮಹಿಳಾ ಪೈಲಟ್‌ರನ್ನು ಸಾಯಿಸಿದ್ದಾರೆ ಎಂದು ಹಳೆಯ ಪೋಟೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಅಫ್ಘಾನಿಸ್ತಾನ ತಾಲಿಬಾನ್ ಕೈವಶವಾದ ಮೇಲೆ ಅಫ್ಘಾನ್ ವಾಯುಪಡೆಯ ನಾಲ್ಕು ಮಹಿಳಾ ಪೈಲಟ್‌ಗಳಲ್ಲಿ ಒಬ್ಬರಾದ ಸಫಿಯಾ ಫಿರೋಜಿ ಅವರನ್ನು ಸಾರ್ವಜನಿಕವಾಗಿ ಕಲ್ಲಿನಿಂದ ಹೊಡೆದು ಸಾಯಿಸಲಾಗಿದೆ ಎಂದು ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಟ್ವಿಟರ್ ಬಳಕೆದಾರರು ಇತ್ತೀಚೆಗೆ ಈ ಚಿತ್ರವನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. “ಸಫಿಯಾ ಫಿರೋಜಿ, ಅಫ್ಘಾನ್ ವಾಯುಪಡೆಯ ನಾಲ್ಕು ಮಹಿಳಾ ಪೈಲಟ್‌ಗಳಲ್ಲಿ ಒಬ್ಬರು. ಇಂದು ಬೆಳಿಗ್ಗೆ ಅವರನ್ನು ಸಾರ್ವಜನಿಕವಾಗಿ ಕಲ್ಲೆಸೆದು ಸಾಯಿಸಲಾಗಿದೆ” ಎಂದು ಆಗಸ್ಟ್ 18 ರಂದು ಸಂಗೀತಾ ಸಾಗರ್‌ ಎಂಬುವರು ಹಂಚಿಕೊಂಡಿದ್ದಾರೆ.

ಇದೇ ರೀತಿ ಹಲವು ಮಂದಿ ಈ ಚಿತ್ರವನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಕಂಡು ಬಂದದ್ದು, ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಚಿತ್ರ 2018ರಲ್ಲಿ ನಡೆದ ಪ್ರತಿಭನಟನೆಯ ವರದಿಯಲ್ಲಿ ಕಾಣಿಸಿಕೊಂಡಿದೆ.  ಇದು ಕಾಬೂಲ್‌ನಲ್ಲಿ ನಡೆದ ಫರ್ಖುಂಡಾ ಹತ್ಯಾಕಾಂಡದ ಚಿತ್ರ ಎಂಬ ವರದಿಗಳು ಸಿಕ್ಕಿವೆ.

ವರದಿಗಳ ಪ್ರಕಾರ, ಮುಗ್ಧ ಯುವತಿಯ ಹತ್ಯೆಯಾದ ಮೂರನೇ ವರ್ಷದ ಸ್ಮರಣಾರ್ಥವಾಗಿ ಸ್ಥಳೀಯರು ಫರ್ಖುಂಡಾ ಸ್ಮಾರಕದ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಕಿರುಕುಳ, ಚಿತ್ರಹಿಂಸೆಗೆ ಬಲಿಯಾದ ಫರ್ಖುಂಡಾ, ರುಖ್ಶಾನಾ, ಶುಕ್ರಿಯಾ ತಬಸುಮ್, ಮಿರ್ಜಾಲಾಂಗ್ ಇತರ ಸಂತ್ರಸ್ತ ಮಹಿಳೆಯರಿಗೆ ನಡೆದ ಅನ್ಯಾಯವನ್ನು ಖಂಡಿಸುವ ಪೋಸ್ಟರ್‌ಗಳನ್ನು ಈ ವರದಿಯಲ್ಲಿ ನೋಡಬಹುದು. ಈ ಪೋಸ್ಟರ್‌ಗಳಲ್ಲಿ  ಒಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟರ್‌ನಲ್ಲಿರುವ ಮಹಿಳೆಯನ್ನು ಹೋಲುತ್ತದೆ.

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ಇನ್ನು ಮುಂದಿನ ಹುಡುಕಾಟದಿಂದ ಈ ಚಿತ್ರ ಡಿಸೆಂಬರ್ 26, 2015 ರ ದಿ ನ್ಯೂಯಾರ್ಕ್ ಟೈಮ್ಸ್ ನ ವಿಡಿಯೊದಲ್ಲಿ ದೊರಕಿದೆ. ಇದರಲ್ಲಿ ನಿರೂಪಕ “27 ವರ್ಷದ ಮುಸ್ಲಿಂ ಮಹಿಳೆ ಫರ್ಖುಂಡಾ ಮಲಿಕ್ಜಾಡಾರನ್ನು ಖುರಾನ್ ಸುಟ್ಟ ಆರೋಪದ ಮೇಲೆ ಕೊಲ್ಲಲಾಯಿತು. ಈ ಘಟನೆಯನ್ನು ಸಾವಿರಾರು ಜನರು ವೀಕ್ಷಿಸಿದರು” ಎಂದು ವಿವರಿಸುತ್ತಾರೆ.

ಮೇ 2015 ರ ಬಿಬಿಸಿ ವರದಿಯು ಫರ್ಖುಂಡಾ ಮಲಿಕ್ಜಾಡಾ ಮಾರ್ಚ್ 19 ರಂದು ನಿಧನರಾದರು ಎಂದು ತಿಳಿಸುತ್ತದೆ. ಕುರಾನ್ ಅನ್ನು ಸುಟ್ಟ ತಪ್ಪು ಆರೋಪದಲ್ಲಿ ಈಕೆಯನ್ನು ಹತ್ಯೆ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ 19 ಮಂದಿ ಪೊಲೀಸ್ ಅಧಿಕಾರಿಗಳು ಸೇರಿ 49 ಜನರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌ | ನೆದರ್‌ಲ್ಯಾಂಡ್ಸ್‌‌ನ ಡಚ್‌‌‌‌‌ ವಿದ್ಯಾರ್ಥಿಗಳಿಗೆ 5 ನೇ ತರಗತಿಯಿಂದ ಭಗವದ್ಗೀತೆ ಕಡ್ಡಾಯ! – ನಿಜವೆ?

ವರದಿಯ ಪ್ರಕಾರ, “ಮೂವರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ, ಎಂಟು ಮಂದಿಗೆ 16 ವರ್ಷಗಳ ಜೈಲು ಶಿಕ್ಷೆ ಮತ್ತು ಅಪ್ರಾಪ್ತ ವಯಸ್ಕನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 11 ಪೋಲಿಸ್ ಅಧಿಕಾರಿಗಳಿಗೆ ಫರ್ಖುಂಡಾಕ್ಕೆ ಭದ್ರತೆ ನೀಡಲು ವಿಫಲವಾದ ಕಾರಣಕ್ಕೆ ತಲಾ ಒಂದು ವರ್ಷ ಶಿಕ್ಷೆ ವಿಧಿಸಲಾಗಿತ್ತು.

ವೈರಲ್ ಪೋಸ್ಟ್‌ಗಳಲ್ಲಿ ಫರ್ಖುಂಡಾ ಮಲಿಕ್ಜಾಡಾ ಅವರನ್ನು ಸಫಿಯಾ ಫಿರೋಜಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಸಫಿಯಾ ಫಿರೋಜಿ ಅಫ್ಘಾನಿಸ್ತಾನದ ಎರಡನೇ ಮಹಿಳಾ ಪೈಲಟ್ ಆಗಿ ಪ್ರಾಮುಖ್ಯತೆ ಪಡೆದಿದ್ದರು. 1990 ರಲ್ಲಿ ಫಿರೋಜಿ ಮತ್ತು ಆಕೆಯ ಕುಟುಂಬ ಕಾಬೂಲ್‌ನಿಂದ ಪಲಾಯನ ಮಾಡಿತ್ತು. 2001 ರಲ್ಲಿ ತಾಲಿಬಾನ್ ಪತನದ ನಂತರ, ಅವರು ಕಾಬೂಲ್‌ಗೆ ಮರಳಿದರು. ಆದರೆ, ಸಫಿಯಾ ಸಾವಿನ ದೃಢೀರಣಕ್ಕೆ ನಮಗೆ ಯಾವುದೇ ನಂಬಲರ್ಹವಾದ ವರದಿ ಲಭ್ಯವಾಗಿಲ್ಲ.

ಅಫ್ಘಾನಿಸ್ತಾನದ ಮೊದಲ ಮಹಿಳಾ ಪೈಲಟ್ ಹೆಸರು ನಿಲೂಫರ್ ರಹ್ಮಾನಿ, ಮಹಿಳಾ ಹಕ್ಕುಗಳ ಮೇಲೆ ತಾಲಿಬಾನ್ ಪ್ರಚಾರವನ್ನು ನಂಬಬೇಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.

ಆದ್ದರಿಂದ, ಇದರಿಂದ ಫರ್ಖುಂಡಾ ಮಲಿಕ್ಜಾಡಾ ಅವರ ಹಳೆಯ ಚಿತ್ರವನ್ನು ಅಫ್ಘಾನಿಸ್ತಾನದ ಮಹಿಳಾ ಪೈಲಟ್ ಸಫಿಯಾ ಫಿರೋಜಿ, ತಾಲಿಬಾನಿಗಳು ಸಾರ್ವಜನಿಕವಾಗಿ ಕಲ್ಲಿನಿಂದ ಹೊಡೆದು ಸಾಯಿಸುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...