Homeಕರ್ನಾಟಕಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿ೦ತಾಮಣಿ ಅಧಿಕಾರಿಗಳು: ಜನರ ಆಕ್ರೋಶ

ಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿ೦ತಾಮಣಿ ಅಧಿಕಾರಿಗಳು: ಜನರ ಆಕ್ರೋಶ

- Advertisement -
- Advertisement -

ರಾಜ್ಯದ ಚಿ೦ತಾಮಣಿ ಸೇರಿದಂತೆ ಹಲವು ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಜಿಲ್ಲಾಧಿಕಾರಿಗಳು “ಲಸಿಕೆ ಪಡೆಯದಿದ್ದವರಿಗೆ ಪಡಿತರವನ್ನು ನೀಡುವುದಿಲ್ಲ’ ಎ೦ದು ಸುತ್ತೋಲೆ ಹೊರಡಿಸಿದ್ದಾರೆ. ಇದು ಆಹಾರದ ಹಕ್ಕಿನ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಕೋವಿಡ್‌ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿ ಕಾನೂನು ತರಲಾಗಿದೆ. ಎಲ್ಲೆಡೆ ಲಸಿಕೆ ಹಾಕಲಾಗುತ್ತಿದೆ.  ಲಸಿಕೆ ಸ್ವಪ್ರೇರಿತವಾಗಿರಬೇಕು ಎ೦ದು ಕೇ೦ದ್ರ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಇಲಾಖೆಯು ಸ್ಪಷ್ಟವಾಗಿ ಹೇಳಿದ್ದರೂ ಲಸಿಕೆ ಪಡೆಯದವರಿಗೆ ಪಡಿತರ ನೀಡಬಾರದು ಎ೦ದು ಕೋಲಾರ ಜಿಲ್ಲೆಯ ಚಿ೦ತಾಮಣಿ ತಾಲೂಕಿನ ತಹಶೀಲ್ದಾರ್‌ ಹೊರಡಿಸಿರುವ ಸೂಚನೆಯು ವಿರೋಧಕ್ಕೆ ಗ್ರಾಸವಾಗಿದೆ.

ಜನರನ್ನು ಲಸಿಕಾ ಹಾಕಿಕೊಳ್ಳುವಂತೆ ಒತ್ತಾಯಿಸುತ್ತಿರುವ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳು ಲಸಿಕೆ ಪಡೆಯದವರಿಗೆ ಪಡಿತರ ಸ್ಥಗಿತಗೊಳಿಸಲು ಸುತ್ತೋಲೆ ಹೊರಡಿಸುತ್ತಿದ್ದಾರೆ. ಆದರೂ, ಕ೦ದಾಯ ಸಚಿವ ಆರ್‌. ಅಶೋಕ್‌ ಮತ್ತು ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್‌ ಕತ್ತಿ ಈವರೆಗೂ ಈ ಬಗ್ಗೆ ಯಾವುದೇ ಚಕಾರ ಎತ್ತಿಲ್ಲ.

ಬಾಗಲಕೋಟೆ ಮತ್ತು ಯಾದಗಿರಿ ಜಿಲ್ಲೆಯಲ್ಲಿಯೂ ಅಲ್ಲಿನ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಅಧಿಕಾರಿಗಳು ಪಡಿತರ ಚೀಟಿದಾರರಿಗೆ ಪಡಿತರವನ್ನು ಸ್ಮಗಿತಗೊಳಿಸಿದ್ದರು. ಇದರ ಬೆನ್ನಲ್ಲೇ ಚಿ೦ತಾಮಣಿ ತಾಲೂಕಿನ ತಹಶೀಲ್ದಾರ್‌, 2021ರ ಆಗಸ್ಟ್‌ 21ರಂದು ಪಡಿತರ ಸ್ಮಗಿತಗೊಳಿಸುವ೦ತೆ ನ್ಯಾಯಬೆಲೆ ಅಂಗಡಿ ಪ್ರಾಧಿಕಾರದವರಿಗೆ ಸೂಚಿಸಿದ್ದಾರೆ.

“ಲಸಿಕೆ ಪಡೆಯದೇ ಇರುವ ಪಡಿತರ ಚೀಟಿದಾರರಿಗೆ ಪಡಿತರವನ್ನು ನೀಡಲಾಗುವುದಿಲ್ಲ ಎ೦ಬ ಬಗ್ಗೆ ಸೂಚನಾ ಫಲಕವನ್ನು ನ್ಯಾಯಬೆಲೆ ಅ೦ಗಡಿಯ ಮುಂದೆ ಕಡ್ಡಾಯವಾಗಿ ಪ್ರಕಟಿಸುವುದು” ಎಂದು ಸೂಚಿಸಿರುವುದು ಸೂಚನಾ ಪತ್ರದಿ೦ದ ತಿಳಿದು ಬ೦ದಿದೆ.

ಇದನ್ನೂ ಓದಿ: ಮೈಸೂರು ರಸ್ತೆ – ಕೆಂಗೇರಿವರೆಗಿನ ಮೆಟ್ರೋ ಮಾರ್ಗ ಆ.29 ರಂದು ಲೋಕಾರ್ಪಣೆ

ಕೊರೊನಾ 3ನೇ ಅಲೆ ಆತಂಕದಲ್ಲಿ 2021ರ ಆಗಸ್ಟ್‌ 21ರಂದು ಚಿಂತಾಮಣಿಯಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳ ಮಾಲೀಕರೊಂ೦ದಿಗೆ ಕೋವಿಡ್‌ ಲಸಿಕೆ ಕುರಿತು ಚರ್ಚಿಸಲಾಗಿತ್ತು. ಅದರಲ್ಲಿ ಲಸಿಕೆ ಪಡೆಯದೇ ಇರುವ ಪಡಿತರ ಚೀಟಿದಾರರಿಗೆ ಪಡಿತರವನ್ನು ನೀಡುವುದಿಲ್ಲ ಎ೦ಬ ಸೂಚನೆಯನ್ನೂ ನೀಡಲಾಗಿತ್ತು.

ಲಸಿಕೆ ನಿರಾಕರಿಸಿದವರಿಗೆ ಪಡಿತರ ನೀಡಬಾರದು ಎ೦ದು ಯಾದಗಿರಿ ಜಿಲ್ಲೆಯಲ್ಲಿಯೂ ಅಲ್ಲಿನ ಜಿಲ್ಲಾಧಿಕಾರಿ ರಾಗಪ್ರಿಯಾ ಅವರು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದರು ಎ೦ದು ಕನ್ನಡಪ್ರಭ ಪತ್ರಿಕೆಯು ವಿಶೇಷ ವರದಿ ಪ್ರಕಟಿಸಿತ್ತು.

ಪ್ರತಿ ದಿನ 15 ರಿ೦ದ 20 ಸಾವಿರ ಲಸಿಕೆಗಳನ್ನು ನೀಡಬೇಕು. ಇದಕ್ಕಾಗಿ 12 ಗ೦ಟಿಗಳ ಕಾಲ ಲಸಿಕೆ ನೀಡಿದಾಗ ಮಾತ್ರ ಟಾರ್ಗೆಟ್‌ ಪೂರ್ಣಗೊಳಿಸಲು ಸಾಧ್ಯ ಎ೦ದು ಕೋವಿಡ್‌ ಲಸಿಕೆ ವಿತರಣೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಲಾಗಿತ್ತು ಎಂದು ವರದಿಯಾಗಿದೆ.

ಯಾದಗಿರಿ ಸಮೀಪದ ಅಲ್ಲಿಪೂರ ಗ್ರಾಮದಲ್ಲಿ ಕೆಲವು ದಿನಗಳ ಹಿ೦ದೆ, ಲಸಿಕೆ ಪಡೆಯದಿದ್ದರೆ ಪಡಿತರ ನೀಡುವುದಿಲ್ಲವೆ೦ದು ಪ೦ಚಾಯತ್‌ ಕಡೆಯಿಂದ ಡ೦ಗೂರ ಸಾರಲಾಗಿತ್ತು. ತಮ್ಮ ಟಾರ್ಗೆಟ್ ಪೂರ್ತಿಗೊಳಿಸಲು ಮನೆಗಳಿಗೆ ನುಗ್ಗಿ ಆಟೋಗಳಲ್ಲಿ  ಬಲವಂತವಾಗಿ ಕರೆದುಕೊಂಡು ಹೋಗಿ ಕೆಲವರಿಗೆ ಲಸಿಕೆ ನೀಡಿಸಿದ್ದಾರೆ ಎ೦ಬ ಆಕ್ರೋಶಗಳು ಬಂದಿವೆ.

ಆರೋಗ್ಯ ಸಿಬ್ಬ೦ದಿಗಳು ಅಥವಾ ಅಧಿಕಾರಿಗಳು ಊರಿಗೆ ಬರುತ್ತಾರೆ೦ದರೆ ಆ ಭಾಗದ ಎಲ್ಲ ಗ್ರಾಮಸ್ಥರು ಊರೇ ಖಾಲಿ ಮಾಡಿ ಓಡಿಹೋಗುವ೦ತಹ ಸ್ಥಿತಿ ನಿರ್ಮಾಣವಾಗಿತ್ತು ಎ೦ಬ ವರದಿ ಈ ಹಿಂದೆ ಪ್ರಕಟವಾಗಿತ್ತು.


ಇದನ್ನೂ ಓದಿ: ‘ನೇಣುಗಂಬ ಏರಬೇಕಾಗಿದ್ದ ಭಯೋತ್ಪಾದಕಿಯನ್ನು ಸಂಸದೆ ಮಾಡಿದ ಬಿಜೆಪಿಯದ್ದು ತಾಲಿಬಾನಿಯದ್ದೇ ರಕ್ತ’- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲು ಜನರಿಗೆ ಸರಿಯಾಗಿ ಪಡಿತರವನ್ನು ಹಂಚಲಾಗುತ್ತಿದೆಯೇ ಎಂಬುದನ್ನು ತಿಳಿದುಕೊಳ್ಳಿ (ಸರ್ಕಾರ ಮತ್ತು ಅಧಿಕಾರಿಗಳಿಗೆ).

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...