Homeಕರ್ನಾಟಕಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿ೦ತಾಮಣಿ ಅಧಿಕಾರಿಗಳು: ಜನರ ಆಕ್ರೋಶ

ಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿ೦ತಾಮಣಿ ಅಧಿಕಾರಿಗಳು: ಜನರ ಆಕ್ರೋಶ

- Advertisement -
- Advertisement -

ರಾಜ್ಯದ ಚಿ೦ತಾಮಣಿ ಸೇರಿದಂತೆ ಹಲವು ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಜಿಲ್ಲಾಧಿಕಾರಿಗಳು “ಲಸಿಕೆ ಪಡೆಯದಿದ್ದವರಿಗೆ ಪಡಿತರವನ್ನು ನೀಡುವುದಿಲ್ಲ’ ಎ೦ದು ಸುತ್ತೋಲೆ ಹೊರಡಿಸಿದ್ದಾರೆ. ಇದು ಆಹಾರದ ಹಕ್ಕಿನ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಕೋವಿಡ್‌ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿ ಕಾನೂನು ತರಲಾಗಿದೆ. ಎಲ್ಲೆಡೆ ಲಸಿಕೆ ಹಾಕಲಾಗುತ್ತಿದೆ.  ಲಸಿಕೆ ಸ್ವಪ್ರೇರಿತವಾಗಿರಬೇಕು ಎ೦ದು ಕೇ೦ದ್ರ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಇಲಾಖೆಯು ಸ್ಪಷ್ಟವಾಗಿ ಹೇಳಿದ್ದರೂ ಲಸಿಕೆ ಪಡೆಯದವರಿಗೆ ಪಡಿತರ ನೀಡಬಾರದು ಎ೦ದು ಕೋಲಾರ ಜಿಲ್ಲೆಯ ಚಿ೦ತಾಮಣಿ ತಾಲೂಕಿನ ತಹಶೀಲ್ದಾರ್‌ ಹೊರಡಿಸಿರುವ ಸೂಚನೆಯು ವಿರೋಧಕ್ಕೆ ಗ್ರಾಸವಾಗಿದೆ.

ಜನರನ್ನು ಲಸಿಕಾ ಹಾಕಿಕೊಳ್ಳುವಂತೆ ಒತ್ತಾಯಿಸುತ್ತಿರುವ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳು ಲಸಿಕೆ ಪಡೆಯದವರಿಗೆ ಪಡಿತರ ಸ್ಥಗಿತಗೊಳಿಸಲು ಸುತ್ತೋಲೆ ಹೊರಡಿಸುತ್ತಿದ್ದಾರೆ. ಆದರೂ, ಕ೦ದಾಯ ಸಚಿವ ಆರ್‌. ಅಶೋಕ್‌ ಮತ್ತು ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್‌ ಕತ್ತಿ ಈವರೆಗೂ ಈ ಬಗ್ಗೆ ಯಾವುದೇ ಚಕಾರ ಎತ್ತಿಲ್ಲ.

ಬಾಗಲಕೋಟೆ ಮತ್ತು ಯಾದಗಿರಿ ಜಿಲ್ಲೆಯಲ್ಲಿಯೂ ಅಲ್ಲಿನ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಅಧಿಕಾರಿಗಳು ಪಡಿತರ ಚೀಟಿದಾರರಿಗೆ ಪಡಿತರವನ್ನು ಸ್ಮಗಿತಗೊಳಿಸಿದ್ದರು. ಇದರ ಬೆನ್ನಲ್ಲೇ ಚಿ೦ತಾಮಣಿ ತಾಲೂಕಿನ ತಹಶೀಲ್ದಾರ್‌, 2021ರ ಆಗಸ್ಟ್‌ 21ರಂದು ಪಡಿತರ ಸ್ಮಗಿತಗೊಳಿಸುವ೦ತೆ ನ್ಯಾಯಬೆಲೆ ಅಂಗಡಿ ಪ್ರಾಧಿಕಾರದವರಿಗೆ ಸೂಚಿಸಿದ್ದಾರೆ.

“ಲಸಿಕೆ ಪಡೆಯದೇ ಇರುವ ಪಡಿತರ ಚೀಟಿದಾರರಿಗೆ ಪಡಿತರವನ್ನು ನೀಡಲಾಗುವುದಿಲ್ಲ ಎ೦ಬ ಬಗ್ಗೆ ಸೂಚನಾ ಫಲಕವನ್ನು ನ್ಯಾಯಬೆಲೆ ಅ೦ಗಡಿಯ ಮುಂದೆ ಕಡ್ಡಾಯವಾಗಿ ಪ್ರಕಟಿಸುವುದು” ಎಂದು ಸೂಚಿಸಿರುವುದು ಸೂಚನಾ ಪತ್ರದಿ೦ದ ತಿಳಿದು ಬ೦ದಿದೆ.

ಇದನ್ನೂ ಓದಿ: ಮೈಸೂರು ರಸ್ತೆ – ಕೆಂಗೇರಿವರೆಗಿನ ಮೆಟ್ರೋ ಮಾರ್ಗ ಆ.29 ರಂದು ಲೋಕಾರ್ಪಣೆ

ಕೊರೊನಾ 3ನೇ ಅಲೆ ಆತಂಕದಲ್ಲಿ 2021ರ ಆಗಸ್ಟ್‌ 21ರಂದು ಚಿಂತಾಮಣಿಯಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳ ಮಾಲೀಕರೊಂ೦ದಿಗೆ ಕೋವಿಡ್‌ ಲಸಿಕೆ ಕುರಿತು ಚರ್ಚಿಸಲಾಗಿತ್ತು. ಅದರಲ್ಲಿ ಲಸಿಕೆ ಪಡೆಯದೇ ಇರುವ ಪಡಿತರ ಚೀಟಿದಾರರಿಗೆ ಪಡಿತರವನ್ನು ನೀಡುವುದಿಲ್ಲ ಎ೦ಬ ಸೂಚನೆಯನ್ನೂ ನೀಡಲಾಗಿತ್ತು.

ಲಸಿಕೆ ನಿರಾಕರಿಸಿದವರಿಗೆ ಪಡಿತರ ನೀಡಬಾರದು ಎ೦ದು ಯಾದಗಿರಿ ಜಿಲ್ಲೆಯಲ್ಲಿಯೂ ಅಲ್ಲಿನ ಜಿಲ್ಲಾಧಿಕಾರಿ ರಾಗಪ್ರಿಯಾ ಅವರು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದರು ಎ೦ದು ಕನ್ನಡಪ್ರಭ ಪತ್ರಿಕೆಯು ವಿಶೇಷ ವರದಿ ಪ್ರಕಟಿಸಿತ್ತು.

ಪ್ರತಿ ದಿನ 15 ರಿ೦ದ 20 ಸಾವಿರ ಲಸಿಕೆಗಳನ್ನು ನೀಡಬೇಕು. ಇದಕ್ಕಾಗಿ 12 ಗ೦ಟಿಗಳ ಕಾಲ ಲಸಿಕೆ ನೀಡಿದಾಗ ಮಾತ್ರ ಟಾರ್ಗೆಟ್‌ ಪೂರ್ಣಗೊಳಿಸಲು ಸಾಧ್ಯ ಎ೦ದು ಕೋವಿಡ್‌ ಲಸಿಕೆ ವಿತರಣೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಲಾಗಿತ್ತು ಎಂದು ವರದಿಯಾಗಿದೆ.

ಯಾದಗಿರಿ ಸಮೀಪದ ಅಲ್ಲಿಪೂರ ಗ್ರಾಮದಲ್ಲಿ ಕೆಲವು ದಿನಗಳ ಹಿ೦ದೆ, ಲಸಿಕೆ ಪಡೆಯದಿದ್ದರೆ ಪಡಿತರ ನೀಡುವುದಿಲ್ಲವೆ೦ದು ಪ೦ಚಾಯತ್‌ ಕಡೆಯಿಂದ ಡ೦ಗೂರ ಸಾರಲಾಗಿತ್ತು. ತಮ್ಮ ಟಾರ್ಗೆಟ್ ಪೂರ್ತಿಗೊಳಿಸಲು ಮನೆಗಳಿಗೆ ನುಗ್ಗಿ ಆಟೋಗಳಲ್ಲಿ  ಬಲವಂತವಾಗಿ ಕರೆದುಕೊಂಡು ಹೋಗಿ ಕೆಲವರಿಗೆ ಲಸಿಕೆ ನೀಡಿಸಿದ್ದಾರೆ ಎ೦ಬ ಆಕ್ರೋಶಗಳು ಬಂದಿವೆ.

ಆರೋಗ್ಯ ಸಿಬ್ಬ೦ದಿಗಳು ಅಥವಾ ಅಧಿಕಾರಿಗಳು ಊರಿಗೆ ಬರುತ್ತಾರೆ೦ದರೆ ಆ ಭಾಗದ ಎಲ್ಲ ಗ್ರಾಮಸ್ಥರು ಊರೇ ಖಾಲಿ ಮಾಡಿ ಓಡಿಹೋಗುವ೦ತಹ ಸ್ಥಿತಿ ನಿರ್ಮಾಣವಾಗಿತ್ತು ಎ೦ಬ ವರದಿ ಈ ಹಿಂದೆ ಪ್ರಕಟವಾಗಿತ್ತು.


ಇದನ್ನೂ ಓದಿ: ‘ನೇಣುಗಂಬ ಏರಬೇಕಾಗಿದ್ದ ಭಯೋತ್ಪಾದಕಿಯನ್ನು ಸಂಸದೆ ಮಾಡಿದ ಬಿಜೆಪಿಯದ್ದು ತಾಲಿಬಾನಿಯದ್ದೇ ರಕ್ತ’- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲು ಜನರಿಗೆ ಸರಿಯಾಗಿ ಪಡಿತರವನ್ನು ಹಂಚಲಾಗುತ್ತಿದೆಯೇ ಎಂಬುದನ್ನು ತಿಳಿದುಕೊಳ್ಳಿ (ಸರ್ಕಾರ ಮತ್ತು ಅಧಿಕಾರಿಗಳಿಗೆ).

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...