Homeಮುಖಪುಟಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ (ಟೈಮ್ ಸ್ಕೇಲ್) ಶ್ರೇಣಿ!

ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ (ಟೈಮ್ ಸ್ಕೇಲ್) ಶ್ರೇಣಿ!

- Advertisement -
- Advertisement -

ಭಾರತೀಯ ಸೇನೆಯ ಆಯ್ಕೆ ಮಂಡಳಿಯು ಐವರು ಮಹಿಳಾ ಅಧಿಕಾರಿಗಳನ್ನು ಕರ್ನಲ್ (ಟೈಮ್ ಸ್ಕೇಲ್) ಶ್ರೇಣಿಗೆ ಇದೇ ಮೊದಲು ಆಯ್ಕೆ ಮಾಡಿದೆ. 26 ವರ್ಷಗಳ ‘ಗಣನೀಯ ಸೇವೆ’ ಪೂರ್ಣಗೊಳಿಸಿದ ನಂತರ ಅವರಿಗೆ ಬಡ್ತಿ ನೀಡುವ ಬಗ್ಗೆ ಸೇನೆ ಸ್ಪಷ್ಟಪಡಿಸಿದೆ.

ನಿರ್ಧಾರವನ್ನು ಪ್ರಕಟಿಸಿದ ಭಾರತೀಯ ಸೇನೆಯು ಸೋಮವಾರ, “ಕಾರ್ಪ್ ಆಫ್ ಸಿಗ್ನಲ್, ಕಾರ್ಪ್ ಆಫ್ ಎಲೆಕ್ಟ್ರಾನಿಕ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್ (ಇಎಂಇ) ಹಾಗೂ ಕಾರ್ಪ್ ಆಫ್ ಇಂಜಿನಿಯರ್‌ಗಳೊಂದಿಗೆ ಸೇವೆ ಸಲ್ಲಿಸುತ್ತಿರುವ ಮಹಿಳಾ ಅಧಿಕಾರಿಗಳು ಕರ್ನಲ್ ಹುದ್ದೆಗೆ ಅನುಮೋದನೆ ಪಡೆಯುತ್ತಿರುವುದು ಇದೇ ಮೊದಲು” ಎಂದು ಹೇಳಿದೆ.

ಇದನ್ನೂ ಓದಿ: ಮಹಿಳೆಯರು ಎನ್‌ಡಿಎ ಪರೀಕ್ಷೆ ಬರೆಯಬಹುದು: ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು

ಕಾರ್ಪ್ ಆಫ್‌ ಸಿಗ್ನಲ್‌ನ ಲೆಫ್ಟಿನೆಂಟ್ ಕರ್ನಲ್ ಸಂಗೀತಾ ಸರ್ದನ, ಲೆಫ್ಟಿನೆಂಟ್ ಕರ್ನಲ್ ಸೋನಿಯಾ ಆನಂದ್, ಕಾರ್ಪ್ ಆಫ್‌ ಇಎಂಇ ಲೆಫ್ಟಿನೆಂಟ್ ಕರ್ನಲ್ ನವನೀತ್ ದುಗ್ಗಲ್, ಕಾರ್ಪ್‌ ಆಫ್‌ ಇಂಜಿನೀರ್‌ಸ್‌ ಲೆಫ್ಟಿನೆಂಟ್ ಕರ್ನಲ್ ರೀನು ಖನ್ನಾ ಮತ್ತು ಲೆಫ್ಟಿನೆಂಟ್ ಕರ್ನಲ್ ರಿಚ ಸಾಗರ್‌‌, ಒಟ್ಟು ಐವರು ಕರ್ನಲ್ (ಟೈಮ್ ಸ್ಕೇಲ್) ಶ್ರೇಣಿಗೆ ಆಯ್ಕೆಯಾದ ಮಹಿಳಾ ಅಧಿಕಾರಿಗಳು ಎಂದು ಸೇನೆಯು ಹೇಳಿದೆ.

16 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನಂತರ ಕರ್ನಲ್ ಹುದ್ದೆಗೆ ಮೊದಲ ಆಯ್ಕೆ ನಡೆಯುತ್ತದೆ, ಇದರಲ್ಲಿ ಉಳಿದವರಿಗೆ 26 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನಂತರ ಕರ್ನಲ್ ಶ್ರೇಣಿಯನ್ನು ನೀಡಲಾಗುತ್ತದೆ.

ಸೈನ್ಯಕ್ಕೆ ಖಾಯಂ ಆಯೋಗವನ್ನು ನೀಡಿದ್ದರಿಂದ ಮಹಿಳೆಯರು ಕರ್ನಲ್ (ಟೈಮ್ ಸ್ಕೇಲ್) ಶ್ರೇಣಿಗೆ ಅರ್ಹರಾಗಿದ್ದಾರೆ.

ಖಾಯಂ ಆಯೋಗ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ ನಂತರ ವಿಶೇಷ ಮಂಡಳಿಯಿಂದ 615 ರಲ್ಲಿ 424 ಮಹಿಳೆಯರನ್ನು ಖಾಯಂ ಆಯೋಗಕ್ಕೆ ಪರಿಗಣಿಸಲಾಗಿದೆ.

ಹಿಂದೆ, ಕರ್ನಲ್ ಹುದ್ದೆಗೆ ಬಡ್ತಿ ಪಡೆಯುವುದು ಕೇವಲ ಸೇನಾ ವೈದ್ಯಕೀಯ ದಳ (AMC), ನ್ಯಾಯಾಧೀಶ ಅಡ್ವೋಕೇಟ್ ಜನರಲ್ (JAG) ಮತ್ತು ಸೇನಾ ಶಿಕ್ಷಣ ದಳ (AEC) ದ ಮಹಿಳಾ ಅಧಿಕಾರಿಗಳಿಗೆ ಮಾತ್ರ ಸಾಧ್ಯವಾಗುತ್ತಿತ್ತು.

ಇದನ್ನೂ ಓದಿ: ಮಹಿಳೆಯರನ್ನು ನೇಮಿಸಿಕೊಳ್ಳಿ, ಇಲ್ಲಿದಿದ್ದರೆ ನಾವು ಆದೇಶಿಸಬೇಕಾಗುತ್ತದೆ: ಸೇನೆಗೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...