Homeಕರೋನಾ ತಲ್ಲಣಕೊರೊನಾ ಆರ್ಥಿಕ ಕುಸಿತದಿಂದ ಭಾರತದಲ್ಲಿ ಸುಮಾರು 1 ಲಕ್ಷ ಶಿಶುಗಳ ಸಾವು: ವಿಶ್ವಬ್ಯಾಂಕ್ ಸಂಶೋಧನಾ ವರದಿ

ಕೊರೊನಾ ಆರ್ಥಿಕ ಕುಸಿತದಿಂದ ಭಾರತದಲ್ಲಿ ಸುಮಾರು 1 ಲಕ್ಷ ಶಿಶುಗಳ ಸಾವು: ವಿಶ್ವಬ್ಯಾಂಕ್ ಸಂಶೋಧನಾ ವರದಿ

ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಕಳೆದ ವರ್ಷ ದೇಶದಾದ್ಯಂತ ಏಕಾಏಕಿ ಲಾಕ್‌ಡೌನ್‌ ಘೋಷಿಸಿತ್ತು. ಇದು ದೇಶದ ಆರ್ಥಿಕತೆಗೆ ಭಾರಿ ಹೊಡೆತ ನೀಡಿದವು.

- Advertisement -
- Advertisement -

ಕೊರೊನಾ ಜೊತೆ ಜೊತೆಗೆ ಆದ ಆರ್ಥಿಕ ಕುಸಿತದಿಂದಾಗಿ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ, ಕಳೆದೊಂದು ವರ್ಷದಲ್ಲಿ 2.67 ಲಕ್ಷ ಶಿಶುಗಳ ಸಾವಿಗೀಡಾಗಿದ್ದಾರೆ ಎಂದು ವಿಶ್ವ ಬ್ಯಾಂಕ್ ಸಂಶೋಧಕರು ಅಂದಾಜಿಸಿದ್ದಾರೆ. ಅದರಲ್ಲಿ ಮೂರನೇ ಒಂದು ಭಾಗದಷ್ಟು ಭಾರತದಲ್ಲಿ ಸಂಭವಿಸಿದೆ ಸಂಶೋಧನೆಯು ತಿಳಿಸಿದೆ.

ಸಂಶೋಧಕರು 128 ದೇಶಗಳಲ್ಲಿ 2,67,208 ಅಧಿಕ ಶಿಶು ಸಾವುಗಳನ್ನು ಅಂದಾಜಿಸಿದ್ದಾರೆ. ಇದು 2020 ರಲ್ಲಿ ನಿರೀಕ್ಷಿತ ಒಟ್ಟು ಶಿಶು ಸಾವಿನ ಸಂಖ್ಯೆಯಲ್ಲಿ 6.8% ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. ಕೊರೊನಾ ಸಾಂಕ್ರಾಮಿಕದಿಂದ ಉಂಟಾದ ನಕಾರಾತ್ಮಕ ಆದಾಯದಿಂದಾಗಿ ಇದು ಸಂಭವಿಸಿದೆ ಎಂದು ವಿಶ್ವ ಬ್ಯಾಂಕ್ ಒತ್ತಿ ಹೇಳಿದೆ.

ಭಾರತದಲ್ಲಿ ಕೊರೊನಾ ಪತ್ತೆಯಾಗುವುದಕ್ಕಿಂಲೂ ಮೊದಲೇ ದೇಶದ ಆರ್ಥಿಕತೆಯೂ ಇಳಿಕೆಯ ಹಾದಿಯಲ್ಲೇ ಇದ್ದವು. ಇದರ ಜೊತೆಗೆ ಯಾವುದೇ ಮುನ್ಸೂಚನೆಯಿಲ್ಲದೆ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರವು ಕಳೆದ ವರ್ಷ ದೇಶದಾದ್ಯಂತ ಏಕಾಏಕಿ ಲಾಕ್‌ಡೌನ್‌ ಘೋಷಿಸಿತ್ತು. ಇದು ದೇಶದ ಆರ್ಥಿಕತೆಗೆ ಭಾರಿ ಹೊಡೆತ ನೀಡಿದವು.

ಇದನ್ನೂ ಓದಿ: ಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

“ಕೊರೊನಾ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯ ಕಡೆಗೆ ಪ್ರಯತ್ನಗಳು ಅತ್ಯುನ್ನತವಾಗಿದ್ದರೂ, ಜಾಗತಿಕ ಸಮುದಾಯವು ಸಾಮಾಜಿಕ ಸುರಕ್ಷತಾ ಜಾಲಗಳನ್ನು ಬಲಪಡಿಸಬೇಕು. ಅಗತ್ಯ ಆರೋಗ್ಯ ಸೇವೆಯ ನಿರಂತರತೆಯನ್ನು ಖಾತರಿಪಡಿಸಬೇಕು” ಎಂದು ಸಂಶೋಧಕರು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಪ್ರಾರಂಭದ ಮೊದಲ ಆರು ತಿಂಗಳಲ್ಲಿ ಪ್ರಪಂಚವು 2.5 ಲಕ್ಷದಿಂದ 11.5 ಲಕ್ಷ ಚಿಕ್ಕ ಮಕ್ಕಳ ಸಾವುಗಳಾಗುತ್ತದೆ ಎಂದು ಊಹಿಸಲಾಗಿತ್ತು.

ಬ್ರಿಟಿಷ್ ಮೆಡಿಕಲ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ವಿಶ್ಲೇಷಣೆಯು ಅಧಿಕ ಶಿಶು ಮರಣದ ಮೂರನೇ ಒಂದು ಭಾಗಕ್ಕಿಂತ ಹೆಚ್ಚು (99, 642) ಭಾರತದಲ್ಲಿ ಆಗಿದೆ ಎಂದು ಅಂದಾಜಿಸಿದೆ.

ಭಾರತವು ಹೆಚ್ಚಿನ ಸಂಖ್ಯೆಯ ವಾರ್ಷಿಕ ಜನನಗಳನ್ನು ಹೊಂದಿದೆ (2,42,38,000) ಹಾಗೂ ನಿರ್ದಿಷ್ಟವಾಗಿ ದೊಡ್ಡ ಯೋಜಿತ ಆರ್ಥಿಕ ಕೊರತೆ (17.3%)ಯನ್ನೂ ಎದುರಿಸಿದೆ ಎಂದು ಸಂಶೋಧನೆ ತಿಳಿಸಿದೆ.

“ಈ ಕಾರಣದಿಂದಾಗಿ, ದಕ್ಷಿಣ ಏಷ್ಯಾವು ಅತಿ ಹೆಚ್ಚು ಶಿಶು ಮರಣವನ್ನು ನಿರೀಕ್ಷಿಸಿದ ಪ್ರದೇಶವಾಗಿದೆ. ಆದರೂ ಎಂಟು ದೇಶಗಳು ಮಾತ್ರ ಈ ವಿಶ್ಲೇಷಣೆಯಲ್ಲಿ ಒಳಗೊಂಡಿವೆ” ಎಂದು ಸಂಶೋಧನಾ ಲೇಖನವು ತಿಳಿಸಿದೆ.

ಇದನ್ನೂ ಓದಿ: ಪದ್ಮ ಪ್ರಶಸ್ತಿ: ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ಶಿಫಾರಸ್ಸು ಮಾಡಲಿರುವ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...