Homeಮುಖಪುಟಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ವಿರೋಧ ಪಕ್ಷಗಳೆಲ್ಲವೂ ಗೌರವಿಸುವ ಸೋನಿಯಾ ಗಾಂಧಿಯವರೇ ಸಭೆ ಕರೆಯುವ ಮೂಲಕ ಕಾಂಗ್ರೆಸ್ ಜಾಣ ಹೆಜ್ಜೆ ಇರಿಸಿದೆ.

- Advertisement -
- Advertisement -

/ನಾನುಗೌರಿ ಡೆಸ್ಕ್/
ಆಶ್ಚರ್ಯಕರವಾದ ಬೆಳವಣಿಗೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿಯವರು ಮೇ 23ರಂದು ಎಲ್ಲಾ ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಪದವಿಯನ್ನು ರಾಹುಲ್‍ಗಾಂಧಿಗೆ ವಹಿಸಿಕೊಟ್ಟ ನಂತರವೂ ಸೋನಿಯಾರೇ ಯುಪಿಎ ಅಧ್ಯಕ್ಷೆಯಾಗಿ ಮುಂದುವರೆದಿದ್ದಾರೆ. ಈ ಸಾರಿಯ ಚುನಾವಣೆಯಲ್ಲಿ ದೇಶಾದ್ಯಂತ ಪ್ರಚಾರದ ಕೆಲಸವನ್ನು ರಾಹುಲ್‍ಗಾಂಧಿ ಮಾಡಿದರೆ, ಉತ್ತರ ಪ್ರದೇಶದಲ್ಲಿ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಬಿರುಸಿನ ಪ್ರಚಾರ ನಡೆಸಿದ್ದರು. ರಾಯ್‍ಬರೇಲಿಗೆ ಒಮ್ಮೆ ಹೋಗಿದ್ದು ಬಿಟ್ಟರೆ ಸೋನಿಯಾ ಎಲ್ಲೂ ಕಾಣಿಸದೇ ಇದ್ದುದಕ್ಕೆ ಅನಾರೋಗ್ಯ ಕಾರಣವೆಂದು ಹೇಳಲಾಗಿತ್ತು. ಆದರೆ, ಕಳೆದ 15 ದಿನಗಳಿಂದಲೂ ದೇಶದ ವಿವಿಧ ವಿರೋಧ ಪಕ್ಷಗಳ ನಾಯಕರ ಜೊತೆ ಸೋನಿಯಾ ಸತತವಾಗಿ ಸಂಪರ್ಕದಲ್ಲಿದ್ದರೆಂದು ಎನ್‍ಡಿಟಿವಿ ವರದಿ ಮಾಡಿದೆ.
ಎನ್‍ಡಿಟಿವಿ ವರದಿ
ಇದೀಗ ಮೇ 23ರ ಸಂಜೆಯ ಸಭೆಗೆ ಆಹ್ವಾನಿಸಿ ಸೋನಿಯಾ ಅವರು ಪತ್ರ ಬರೆದಿದ್ದಾರೆ. ಈಗಾಗಲೇ ಪತ್ರವು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಜೆಡಿಎಸ್‍ನ ಎಚ್.ಡಿ.ದೇವೇಗೌಡ ಮತ್ತು ಜೆಡಿಯುನ ಶರದ್‍ಪವಾರ್ ಅವರಿಗೆ ತಲುಪಿದ್ದು, ಇವರೇ ಅಲ್ಲದೇ ಎಲ್ಲಾ ವಿರೋಧ ಪಕ್ಷಗಳನ್ನೂ ಆಹ್ವಾನಿಸಲಾಗುತ್ತಿದೆಯೆಂದು ವರದಿ ಹೇಳುತ್ತದೆ.

ಇದಲ್ಲದೇ, ಒರಿಸ್ಸಾದ ನವೀನ್ ಪಟ್ನಾಯಕ್ ಅವರ ಶಾಲಾ ಸಹಪಾಠಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‍ನಾಥ್ ಮಾತಾಡಿದ್ದರೆ, ಯುಪಿಎ ಒಡನಾಡಿ ಶರದ್‍ಪವಾರ್ ಮಾಯಾವತಿಯವರ ಜೊತೆ ಮಾತಾಡಿದ್ದಾರೆ. ಫೆಡರಲ್ ಫ್ರಂಟ್ ರಚನೆಯ ಪ್ರಯತ್ನದಲ್ಲಿರುವ ಕೆ.ಚಂದ್ರಶೇಖರ ರಾವ್‍ರ ಜೊತೆ ಕಾಂಗ್ರೆಸ್‍ನ ಖಜಾಂಚಿ ಅಹ್ಮದ್ ಪಟೇಲ್ ಮತ್ತು ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸಂಪರ್ಕದಲ್ಲಿದ್ದಾರೆ.

ಈ ಸಭೆಯ ವಿಚಾರ ಬಹಿರಂಗವಾಗುವುದಕ್ಕೆ ಒಂದು ದಿನ ಮುಂಚೆಯಷ್ಟೇ ಗುಲಾಂ ನಬಿ ಆಜಾದ್ ಒಂದು ಮುಖ್ಯವಾದ ಸಂಗತಿಯನ್ನು ಮಾಧ್ಯಮಗಳ ಮುಂದೆ ಹೇಳಿದ್ದರು. ‘ಕಾಂಗ್ರೆಸ್‍ಗೇ ಪ್ರಧಾನಿ ಪಟ್ಟ ಕೊಡಲೇಬೇಕೆಂದೇನೂ ನಾವು ಬಯಸುವುದಿಲ್ಲ’ ಎಂದು ಗುಲಾಂ ನಬಿ ಹೇಳಿದ್ದಾರೆಂದರೆ, ಸ್ವತಃ ಸೋನಿಯಾಗಾಂಧಿಯವರ ಕುಟುಂಬವೇ ಮಾತಾಡಿದೆ ಎಂದೇ ಅರ್ಥ.


ಯಾರಿಗೂ ಬಹುಮತ ಬರುವುದಿಲ್ಲವೆಂಬುದು ಬಹುತೇಕ ಖಚಿತ. ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಇಬ್ಬರೂ ಕಾಂಗ್ರೆಸ್, ಬಿಜೆಪಿಗಳಿಂದ ಸಮಾನ ದೂರ ಎನ್ನುತ್ತಿದ್ದಾರಾದರೂ, ಎಸ್‍ಪಿ, ಬಿಎಸ್‍ಪಿ ಮತ್ತು ಟಿಎಂಸಿಗಳಿಗೆ ಪ್ರಧಾನ ಗುರಿ ಮೋದಿ-ಷಾಗಳೇ ಆಗಿದ್ದಾರೆ. ಇನ್ನು ಟಿಡಿಪಿಯ ಚಂದ್ರಬಾಬು ಜೊತೆ ಈ ಸಾರಿ ಕಾಂಗ್ರೆಸ್‍ಗೆ ಮೈತ್ರಿ ಇಲ್ಲವಾದರೂ, ಅವರು ಕಾಂಗ್ರೆಸ್ ಜೊತೆಗೆ ಇರುವ ಸುಳಿವು ನೀಡಿದ್ದಾರೆ. ಡಿಎಂಕೆಯ ಸ್ಟಾಲಿನ್ ಅಂತೂ ರಾಹುಲ್‍ಗಾಂಧಿಯ ಹೆಸರನ್ನು ಮೊದಲು ಪ್ರಧಾನಿ ಪಟ್ಟಕ್ಕೆ ಸೂಚಿಸಿದವರು. ಕೆಸಿಆರ್ ‘ಫೆಡರಲ್ ಫ್ರಂಟ್ ಮಾಡೋಣ ಬನ್ನಿ’ ಎಂದಾಗ, ‘ನೀವೇ ಬನ್ನಿ ಯುಪಿಎ ಜೊತೆಗೆ ಸರ್ಕಾರ ಮಾಡೋಣ. ಈ ಸಾರಿ ನೀವು ಹೇಳೋದು ಸಾಧ್ಯವಿಲ್ಲ’ ಎಂದು ಸ್ಪಷ್ಟವಾಗಿ ಸ್ಟಾಲಿನ್ ಹೇಳಿದ್ದಾರೆ.
ಇವೆಲ್ಲದರ ಹಿನ್ನೆಲೆಯಲ್ಲಿ ಸೋನಿಯಾರ ಸಭೆಗೆ ಮಹತ್ವ ಬಂದಿದೆ. ಸರ್ಕಾರ ರಚನೆಯಾಗುವುದಾದರೆ, ಕಾಂಗ್ರೆಸ್‍ಗೆ ಮಹತ್ವದ ಪಾತ್ರ ಇರಬೇಕು, ಆದರೆ ರಾಹುಲ್‍ಗಾಂಧಿಯೇ ಪ್ರಧಾನಿಯಾಗಬೇಕೆಂದೇನಿಲ್ಲ ಎಂಬುದು ಅವರ ಇರಾದೆ ಇದ್ದಂತಿದೆ.
ಇದನ್ನೂ ಓದಿ: ಸರ್ಕಾರ ಮಾಡಲು ಒಲವು ತೋರದ ರಾಹುಲ್
ಈ ಮಧ್ಯೆ 30ರಷ್ಟು ಸೀಟುಗಳನ್ನು ಗೆಲ್ಲಲಿರುವ ಮಮತಾ ಬ್ಯಾನರ್ಜಿಯವರ ನಿಲುವಿಗೆ ಹೆಚ್ಚಿನ ಮಹತ್ವ ಇರಲಿದೆ. ಎನ್‍ಡಿಟಿವಿಯಲ್ಲಿ ಪತ್ರಕರ್ತೆ ಸ್ವಾತಿ ಚತುರ್ವೇದಿ ಬರೆದಿರುವ ಲೇಖನದಲ್ಲಿ ಇದರ ಕುರಿತು ಒಂದು ವಿಶೇಷ ಸುಳಿವಿದೆ. ಟಿಎಂಸಿ ನಾಯಕರ ಪ್ರಕಾರ, ‘ಬಿಜೆಪಿಯ ಜೊತೆಗೆ ಹೋಗಲು ಅಂತಹ ಸಮಸ್ಯೆ ಇಲ್ಲ. ಆದರೆ ವಿಷಕಾರಿ ರಾಜಕಾರಣ ಮಾಡುವ ಮೋದಿ-ಷಾ ತೊಲಗಬೇಕು’. ಮೇ 23ರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಮಾಯಾವತಿಯವರು ಭಾಗವಹಿಸುವ ಸಾಧ್ಯತೆ ಇಲ್ಲ. ಅಖಿಲೇಶ್ ಯಾದವ್, ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಸಹಾ ಫಲಿತಾಂಶ ಸಂಪೂರ್ಣ ನಿಚ್ಚಳವಾದ ನಂತರವೇ ತಮ್ಮ ಮನದಿಂಗಿತ ವ್ಯಕ್ತಪಡಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:ಫೆಡರಲ್ ಫ್ರಂಟ್ ರಚನೆಯ ಸಿದ್ಧತೆಯಲ್ಲಿ ಕೆಸಿಆರ್
ಆದರೆ, ಕಾಂಗ್ರೆಸ್ ತನ್ನ ದಾಳವನ್ನು ಉರುಳಿಸಿ ಆಗಿದೆ. ಸೋನಿಯಾಗಾಂಧಿಯವರೇ ಸಭೆ ಕರೆಯಲೂ ಕಾರಣವಿದೆ. ಯುಪಿಎ ಜೊತೆಗಿಲ್ಲದ ಪಕ್ಷಗಳಾಗಲೀ, ಯುಪಿಎ ಭಾಗವಾಗಿರುವ ಪಕ್ಷಗಳೇ ಆಗಲಿ, ಸೋನಿಯಾರ ಬಗ್ಗೆ ವಿಶೇಷ ಗೌರವವನ್ನು ಹೊಂದಿದ್ದಾರೆ. ಹಾಗಾಗಿ ಈ ನಡೆಯು ರಾಜಕೀಯ ವಲಯಗಳಲ್ಲಿ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...