Homeಕರ್ನಾಟಕನಟಿ ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿದ್ದು FSL ಪರೀಕ್ಷೆಯಲ್ಲಿ ದೃಢ

ನಟಿ ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿದ್ದು FSL ಪರೀಕ್ಷೆಯಲ್ಲಿ ದೃಢ

- Advertisement -
- Advertisement -

ಡ್ರಗ್ ಕೇಸ್‌ಗೆ ಸಂಬಂಧಿಸಿದಂತೆ ಬಂಧನದಲ್ಲಿದ್ದು ಜಾಮೀನಿನ ಮೇಲೆ ಹೊರ ಬಂದಿರುವ ಸ್ಯಾಂಡಲ್‌ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಡ್ರಗ್ಸ್ ಸೇವಿಸಿದ್ದರು ಎಂದು FSL ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇಂತಹದ್ದೆ ಡ್ರಗ್ಸ್ ಸೇವಿಸಿದ್ದರು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಗಿಣಿ ಮತ್ತು ಸಂಜನಾ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಇವರಿಂದ ಕೂದಲಿನ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳಿಸಲಾಗಿದ್ದು, ನಿನ್ನೆ ಪರೀಕ್ಷಾ ವರದಿ ಬಂದಿದೆ. ವರದಿಯಲ್ಲಿ ಇವರಿಬ್ಬರಿಗೂ ಡ್ರಗ್ಸ್ ತೆಗೆದುಕೊಳ್ಳುವ ಅಭ್ಯಾಸವಿತ್ತು ಎನ್ನಲಾಗಿದೆ.

ಸಿಸಿಬಿ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದು, ನಟಿಯರ ಕೂದಲು ಸೇರಿದ ವಿವಿಧ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್ ಪರೀಕ್ಷೆಗೆ ಕಳಿಸಲಾಗಿತ್ತು. ಸ್ಯಾಂಪಲ್ ಪರೀಕ್ಷೆಯಲ್ಲಿ ಇವರು ಡ್ರಗ್ ಸೇವಿಸಿರುವುದು ದೃಢಪಟ್ಟಿದೆ. ತನಿಖಾಧಿಕಾರಿ ಇನ್ಸ್​ಪೆಕ್ಟರ್​ ಪುನೀತ್​ ಬೆಂಗಳೂರಿನ 33ನೇ CCH​ ಕೋರ್ಟ್​ಗೆ FSL  ವರದಿಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

10 ತಿಂಗಳ ನಂತರ ಹೈದರಾಬಾದ್ FSL ಕೇಂದ್ರದಿಂದ ರಿಪೋರ್ಟ್ ಬಂದಿದ್ದು, ಆರೋಪ ಸಾಬೀತಾಗಿರುವುದರಿಂದ ನಟಿಯರಿಗೆ ಮತ್ತೆ ಸಂಕಷ್ಟ ಎದುರಾಗಲಿದೆ. ಎಫ್‌ಎಸ್‌ಎಲ್ ವರದಿ ಕೈ ಸೇರಿರುವುದರಿಂದ ಸಿಸಿಬಿ ತನಿಖೆ ಮತ್ತಷ್ಟು ತೀವ್ರಗೊಳ್ಳಲಿದೆ ಎನ್ನಲಾಗಿದೆ. ಆದರೆ, ಜಾಮೀನಿನ ಮೇಲೆ ಇರುವುದರಿಂದ ಸದ್ಯಕ್ಕೆ ಬಂಧನದ ಭೀತಿ ಇಲ್ಲ ಎನ್ನಲಾಗುತ್ತಿದೆ.

ಪಾರ್ಟಿಗಳಲ್ಲಿ ಡ್ರಗ್ಸ್ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಪ್ರಕರಣವನ್ನು ಬೆನ್ನತ್ತಿದ ಸಿಸಿಬಿ ಪೊಲೀಸರು, ಕೆಲವರನ್ನು ಬಂಧಿಸಿದ್ದರು. ಕೆಲವರು ಈಗಾಗಲೇ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದ ಪೊಲೀಸರು, 2,900 ಪುಟಗಳ ದೋಷಾರೋಪ ಪಟ್ಟಿಯನ್ನು ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಬಾಲಿವುಡ್‌ ನಟ ಸುಶಾಂತ್ ಸಿಂಗ್ ಅಸಹಜ ಸಾವಿನ ನಂತರ ದೇಶದ ಚಿತ್ರರಂಗ ವಲಯದಲ್ಲಿ ಡ್ರಗ್ಸ್‌ ಮಾಫಿಯಾ ಬಗ್ಗೆ ಸಾಕಷ್ಟು ಸುದ್ದಿಗಳು ಹೊರಬಂದಿದ್ದವು. ಇದರಲ್ಲಿ ಹಲವಾರು ತಾರೆಯರೂ ಸೇರಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದಲ್ಲಿಯೂ ಈ ಜಾಲ ಹರಡಿಕೊಂಡಿದೆ ಎಂಬ ಸುಳಿವು ಸಿಕ್ಕ ನಂತರ ಪೊಲೀಸರು ತನಿಖೆ ಆರಂಭಿಸಿದ್ದರು.


ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ರಾಗಿಣಿ, ಸಂಜನಾ ಸೇರಿದಂತೆ 25 ಜನರ ವಿರುದ್ಧ 2,900 ಪುಟಗಳ ಚಾರ್ಜ್‌ಶೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...