Homeಕರ್ನಾಟಕಉತ್ತರ ಕನ್ನಡಕ್ಕೆ ಏಮ್ಸ್ ಆದರೂ ಕೊಡಿ; ಸಾಮಾಜಿಕ ಜಾಲತಾಣದಲ್ಲಿ ಹಕ್ಕೊತ್ತಾಯ

ಉತ್ತರ ಕನ್ನಡಕ್ಕೆ ಏಮ್ಸ್ ಆದರೂ ಕೊಡಿ; ಸಾಮಾಜಿಕ ಜಾಲತಾಣದಲ್ಲಿ ಹಕ್ಕೊತ್ತಾಯ

- Advertisement -
- Advertisement -

ಉತ್ತರ ಕನ್ನಡವೆಂದರೆ ಒಂಥರಾ ನತದೃಷ್ಟ, ಅವಜ್ಞೆಗೊಳಪಟ್ಟ ಜಿಲ್ಲೆ! ಅಕ್ಕ-ಪಕ್ಕದ ಜಿಲ್ಲೆಗಳು ಅದೆಷ್ಟೋ ಅಭಿವೃದ್ಧಿಯಾಗುತ್ತಿದ್ದರೂ ಉತ್ತರ ಕನ್ನಡ ಮಾತ್ರ ಹಾಗೆ ಶಾಪಗ್ರಸ್ಥ ಭೂ ಪ್ರದೇಶದಂತೆ ಉಳಿದುಬಿಟ್ಟಿದೆ. ಇದಕ್ಕೆ ಜಿಲ್ಲೆಯ ಬೇಕು-ಬೇಡಗಳ ಅರಿವಿಲ್ಲದ, ಇಚ್ಛಾ ಶಕ್ತಿಯಿಲ್ಲದ ಜನ ಪ್ರತಿನಿಧಿಗಳ ಉದಾಸೀನವೇ ಕಾರಣವೆಂಬ ಆಕ್ರೋಶವೀಗ ಮಡುಗಟ್ಟುತ್ತಿದೆ!

ರೈತ, ಕೂಲಿಕಾರ ಪರ ಹೋರಾಟಗಾರ, ಹಲವು ಶಾಲೆ-ಕಾಲೇಜುಗಳ ಸ್ಥಾಪಕ ಕವಿ ದಿನಕರ ದೇಸಾಯಿ ಒಬ್ಬರ ಬಿಟ್ಟರೆ ಉತ್ತರ ಕನ್ನಡಕ್ಕೆ ಸಮರ್ಥ ನಾಯಕತ್ವವೆ ಸ್ವಾತಂತ್ರ್ಯಾ ನಂತರದ ಈ ಮುಕ್ಕಾಲು ಶತಮಾನದಲ್ಲಿ ಸಿಕ್ಕಿಲ್ಲ. ರಸ್ತೆ, ಚರಂಡಿ ಬಿಟ್ಟರೆ ಇನ್ಯಾವ ಪ್ರಗತಿಯೂ ಜಿಲ್ಲೆ ಕಂಡಿಲ್ಲ. ಅರಣ್ಯ ಉತ್ಪನ್ನ, ವಿದ್ಯುತ್ ಯೋಜನೆಗಳು, ಮೀನುಗಾರಿಕೆಯೇ ಮುಂತಾದ ಬಾಬತ್ತಿನಲ್ಲಿ ಸರಕಾರದ ಬೊಕ್ಕಸಕ್ಕೆ ಕೋಟಿ-ಕೋಟಿ ತುಂಬುತ್ತಿರುವ ಉತ್ತರ ಕನ್ನಡದಲ್ಲಿ ದುಡಿವ ಕೈಗಳಿಗೆ ಕೆಲಸ ಕೊಡುವಂಥ ಕೈಗಾರಿಕೆಗಳಿಲ್ಲ; ನದಿಗಳು ತುಂಬಿ ಹರಿಯುತ್ತಿದ್ದರು ನೀರಾವರಿ ಯೋಜನೆಗಳಿಲ್ಲ. ಪ್ರಕೃತಿ ಸೋಬಗಿನ ಈ ಜಿಲ್ಲೆಯಲ್ಲಿ ವ್ಯವಸ್ಥಿತ ಪ್ರವಾಸೋದ್ಯಮ ಜನಪ್ರತಿನಿಧಿಗಳಿಂದ ಸ್ಥಾಪಿಸಲಾಗಿಲ್ಲ. ಹಾಗಂತ ಲಾಗಾಯ್ತಿನಿಂದ ಪ್ರಳಯಾಂತಕ ಸರ್ಕಾರಿ ಯೋಜನೆಗಳಿಗೆ ಜನರನ್ನು ಬಲಿ ಪಡೆಯುವುದೇನೂ ನಿಂತಿಲ್ಲ. ರಾಜ್ಯ, ರಾಷ್ಟ್ರ ಮಹತ್ವದ ಹಲವು ಯೋಜನೆಗಳಿಗೆ ಜಿಲ್ಲೆಯ ದೊಡ್ಡ ಜನ ಸಮೂಹ ತಮ್ಮದೆಲ್ಲವನ್ನು ತ್ಯಾಗ ಮಾಡಿ ಬೀದಿ ಪಾಲಾಗಿದ್ದಾರೆ. ಬೆಂಗಾಡಂತಾಗಿರುವ ಉತ್ತರ ಕನ್ನಡದಲ್ಲಿ ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹ ಇಲ್ಲ.

ಅಪಘಾತ, ಗಂಭೀರ ಆರೋಗ್ಯ ಸಮಸ್ಯೆ ಎದುರಾದರೆ ಆಚೀಚೆ ಜಿಲ್ಲೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ರೋಗಿಯನ್ನು ಕೊಂಡೊಯ್ಯಬೇಕು. ದೂರದ ಆಸ್ಪತ್ರೆ ಸೇರುವಷ್ಟರಲ್ಲಿ ದಾರಿಯಲ್ಲಿ ಸಾವು ಸಂಭವಿಸುವುದೇ ಹೆಚ್ಚು. ಹೃದಯಾಘಾತದ ತುರ್ತು ಸಂದರ್ಭದಲ್ಲಿ ಎಂಜಿಯೋಗ್ರಾಮ್ ಮಾಡಿ ಸ್ಟಂಟ್ ಅಳವಡಿಸಿ ಜೀವ ಕಾಪಾಡಲು ಜಿಲ್ಲೆಯಲ್ಲಿ ತಜ್ಞ ವೈದ್ಯರಿಲ್ಲ; ಕ್ಯಾಥ್ ಲ್ಯಾಬ್‌ಗಳೂ ಇಲ್ಲ. ಹೀಗಾಗಿ ಜಿಲ್ಲೆಯಲ್ಲೀಗ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಗಾಗಿ ದೊಡ್ಡ ಕೂಗೆದ್ದಿದೆ. ಕೆಲವು ಶಾಸಕರು ಅನಿವಾಸಿ ಭಾರತೀಯ ಆರೋಗ್ಯ ಉದ್ಯಮಿ ಅಬುದಾಬಿಯ ಬಿ.ಆರ್.ಶೆಟ್ಟಿಯಿಂದ ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡಿಸುವುದಾಗಿ ಹೇಳಿದ್ದರು. ಆದರೆ ಶೆಟ್ಟಿ ಕುಮಟಕ್ಕೆ ಬಂದು ಹೋಗಿದ್ದೆ ಆತನ ದುಬೈನ ಆರೋಗ್ಯ ಉದ್ಯಮ ಸಾಮ್ರಾಜ್ಯ ಪತನವಾಗಿ ಹೋಯ್ತು.

ಆ ನಂತರ ಕಾರ್ಯ ಸಾಧ್ಯವಲ್ಲದ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ಸ್ಥಾಪನೆ ನಾಟಕ ಭರಪೂರ ನಡೆಯಿತೆ ವಿನಃ ಗಂಭೀರ ಪ್ರಯತ್ನಗಳಾಗಲಿಲ್ಲ. ಜನರನ್ನು ದಿಕ್ಕು ತಪ್ಪಿಸುವ ಕೆಲಸಗಳಾದವು. ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಮತ್ತು ಕುಮಟಾ ಶಾಸಕ ದಿನಕರ ಶೆಟ್ಟಿ ಜಿದ್ಧಿಗೆ ಬಿದ್ದವರಂತೆ ತಂತಮ್ಮ ಕ್ಷೇತ್ರದಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಮಾಡೇಬಿಟ್ಟೆವೆಂಬಂತೆ ಮಾತುಗಾರಿಕೆ ನಡೆಸಿದ್ದು ಬಿಟ್ಟರೆ ಬೇರೇನು ಆಗಲಿಲ್ಲವೆಂದು ಜನರಾಡಿಕೊಳ್ಳುತ್ತಿದ್ದಾರೆ. ತಕ್ಕ ಮಟ್ಟಿನ ಸೌಲಭ್ಯ ಹೊಂದಿಸಿಕೊಳ್ಳುತ್ತಿರುವ ಕಾರವರ ಮೆಡಿಕಲ್ ಕಾಲೇಜಿನಲ್ಲಿ ಕನಿಷ್ಟ ಟ್ರಾಮಾ ಸೆಂಟರ್ ಸಹ ಸ್ಥಾಪಿಸಲಾಗಲಿಲ್ಲ. ಈ ಶಾಸಕರೆದುರು ಮ.ಸ್ಪೆ.ಆಸ್ಪತ್ರೆಗಾಗಿ ಕಾಳಜಿಯಿಂದ ಹೋರಾಟಕ್ಕಿಳಿದಿದ್ದ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ ಎಂಬ ಅಭಿಪ್ರಾಯವೂ ಇದೆ. ಎಲ್ಲ ಸೌಲಭ್ಯ ಒದಗಿಸಿ ಕೊಡಲು ಸರ್ಕಾರದಿಂದಲೂ ಸಾಧ್ಯವಿಲ್ಲ.. ತಜ್ಞ್ಲ ವೈದ್ಯರು ಉತ್ತರ ಕನ್ನಡದಂತ ಹಿಂದುಳಿದ ಪ್ರದೇಶಕ್ಕೆ ಬಂದು ಕೆಲಸಮಾಡಲು ಸಿದ್ದರಾಗಲಿಕ್ಕಿಲ್ಲ; ದೊಡ್ಡ ನಗರಗಳಲ್ಲಿ ಸಿಗುವ ಆಕರ್ಷಕ ಸಂಬಳದ ಸೆಳೆತ ಹಾಗಿರುತ್ತದೆ. ಯಡಿಯೂರಪ್ಪನಂಥ ದಿಗ್ಗಜನಿದ್ದರೂ ಶಿವಮೊಗ್ಗ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇನ್ನು ಪರಿಪೂರ್ಣವಾಗಿಲ್ಲ.

ಖಾಸಗಿಯವರು ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಗೆ ಹಣ ಹೂಡಿದರೆ ನಿರೀಕ್ಷಿತ ಲಾಭ ಬರದ ಭಯದಲ್ಲಿ ಹಿಂದೆಸರಿಯುತ್ತಾರೆ. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರಲ್ಲಿ ಇಂಥದೊಂದು ಬೇಡಿಕೆ ಇಟ್ಟಾಗ-ನನ್ನಿಂದ ಸಾಧ್ಯವಿಲ್ಲ; ಮಣಿಪಾಲ ಉತ್ತರ ಕನ್ನಡಕ್ಕೆ ಹತ್ತಿರದಲ್ಲಿದೆ; ಟ್ರಾಮಾ ಸೆಂಟರ್ ಮಾಡಿದರೆ ಮಣಿಪಾಲ ಕೆಎಮ್‌ಸಿಯವರು ಮಾಡಬಹುದು. ಬೇಕಿದ್ದರೆ ನಾನೊಂದು ಮಾತು ಹೇಳ್ತೇನೆ ಅಂದಿದ್ದರು. ಆದ್ದರಿಂದ ಭಾರತ ಸರ್ಕಾರವೇ ಉತ್ತರ ಕನ್ನಡದ ಪರಸ್ಥಿತಿ ಅರ್ಥ ಮಾಡಿಕೊಂಡು ಜಿಲ್ಲೆಗೆ ಏಮ್ಸ್ ಅಖಿಲ ಭಾರತೀಯ ವೈದೈಕೀಯ ವಿಜ್ಞಾನ ಸಂಸ್ಥೆ ಮಂಜೂರಿ ಮಾಡಿದರೆ ಅತ್ಯಗತ್ಯ ಬೇಡಿಕೆ ಈಡೇರಿದಂತಾಗುತ್ತದೆ. ಅಂತದೊಂದು ಆಸೆ ಈಗ ಉತ್ತರ ಕನ್ನಡದಲ್ಲಿ ಮೂಡಿದೆ. ಭಾರತ ಸರ್ಕಾರದ ನೀತಿ ಆಯೋಗದ ನಿರ್ದೇಶನದಂತೆ ಕರ್ನಾಟಕಕ್ಕೆ ಒಂದು ಏಮ್ಸ್ ಮಂಜೂರಿಯಾಗುವ ಸಂದರ್ಭ ಬಂದಿರುವುದೇ ಈ ನಿರೀಕ್ಷೆಗೆ ಕಾರಣ.

ಕೆಲ ದಿನಗಳ ಹಿಂದೆ ಸಿಎಂ ಬೊಮ್ಮಾಯಿ ಪ್ರಧಾನಿ ಭೇಟಿ ಮಾಡಿದಾಗ ತನ್ನ ತವರು ಕ್ಷೇತ್ರ (ಶಿಗ್ಗಾವಿ)ದ ಪಕ್ಕದ ಹುಬ್ಬಳ್ಳಿಗೆ ಏಮ್ಸ್ ಕೇಳಿದ್ದರು. ಅದು ದಿ ಹಿಂದು ಪತ್ರಿಕೆಯ ವೆಬ್ ಸೈಟ್‌ನಲ್ಲಿ ಸುದ್ದಿಯಾಗಿತ್ತು. ಆ ಲಿಂಕ್ ಶೇರ್ ಮಾಡುವ ಮೂಲಕ ಮಂಗಳೂರಿನ ಕೆಎಮ್‌ಸಿಯ ಹೃದಯ ತಜ್ಞ ಡಾ.ಪದ್ಮನಾಭ ಕಾಮತ್ ಪ್ರಧಾನಿಗೆ ಏಮ್ಸ್ ಉತ್ತರ ಕನ್ನಡಕ್ಕೆ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದರು. ಆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಉತ್ತರ ಕನ್ನಡಕ್ಕೆ ಏಮ್ಸ್ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗತೊಡಗಿತು. ಜತೆಗೆ ಜಿಲ್ಲೆಯ ಮಂತ್ರಿ, ಶಾಸಕರು ವಿಶೇಷವಾಗಿ ಸಂಸದ ಆನಂತಕುಮಾರ್ ಹೆಗಡೆ ವಿರುದ್ದ ಆಕ್ರೋಶ ಭುಗಿಲೆದ್ದಿತು!

ದುರಂತವೆಂದರೆ ಇತ್ತ ಉತ್ತರ ಕನ್ನಡಿಗರು ಅಗತ್ಯ-ಅನಿವಾರ್ಯವಾದ ಎಮ್ಸ್‌ನ ಕನಸು ಕಾಣುತ್ತಿದ್ದರೆ, ಅತ್ತ ಸಿಎಂ ಸಾಹೇಬರು ಅಗತ್ಯ ಇಲ್ಲದಿದ್ದರು ಹುಬ್ಬಳ್ಳಿಗೆ ಏಮ್ಸ್ ಹೊತ್ತೊಯ್ಯಲು ಹವಣಿಸುತ್ತಿದ್ದಾರೆಂದು ಜಿಲ್ಲೆಯ ಜನರು ಬೇಸರ ವ್ಯಕ್ತ ಪಡಿಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಮೂರ್ನಾಲ್ಕು ಮೆಡಿಕಲ್ ಕಾಲೇಜು ಹಾಗೂ ಹಲವು ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿವೆ. ಆದರೂ ಏಮ್ಸ್ ಬೇಕೆನ್ನುವುದು ಯಾವ ನ್ಯಾಯವೆಂದು ಮಾತಾಡಿಕೊಳ್ಳಲಾಗುತ್ತಿದೆ. ಅವಿಭಜಿತ ಧಾರವಾಡ ಜಿಲ್ಲೆ ಈಗ ರಾಜಕೀಯವಾಗಿ ತುಂಬ ಪ್ರಭಾವಶಾಲಿ. ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಲಿ ಮುಖ್ಯ ಮಂತ್ರಿ ಬೊಮ್ಮಾಯಿ ಕರ್ಮ ಭೂಮಿಯಿದು. ಈ ರಾಜಕೀಯ ಒತ್ತಡದಿಂದಲೇ ಏಮ್ಸ್ ಹುಬ್ಬಳ್ಳಿಯತ್ತ ಮುಖ ಮಾಡಿದೆ ಎನ್ನಲಾಗುತ್ತಿದೆ; ಉತ್ತರ ಕನ್ನಡದ ಮಂತ್ರಿ-ಶಾಸಕರು-ಸಂಸದರು ಬಾರೀ ಬಾಯಿ ಪಟಾಕಿಯರು. ಹಾಗಾಗಿ ಇವರಿಂದ ಏಮ್ಸ್ ಜಿಲ್ಲೆಗೆ ತರುವ ಬದ್ಧತೆ-ನಿಯತ್ತಿನ ಪ್ರಯತ್ನ ಮಾಡಲಾಗುತ್ತಿಲ್ಲವೆಂದು ಜನರು ಮೂಗು ಮುರಿಯತ್ತಿದ್ದಾರೆ.


ಇದನ್ನೂ ಓದಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...