Homeಕರ್ನಾಟಕಉತ್ತರ ಕನ್ನಡಕ್ಕೆ ಏಮ್ಸ್ ಆದರೂ ಕೊಡಿ; ಸಾಮಾಜಿಕ ಜಾಲತಾಣದಲ್ಲಿ ಹಕ್ಕೊತ್ತಾಯ

ಉತ್ತರ ಕನ್ನಡಕ್ಕೆ ಏಮ್ಸ್ ಆದರೂ ಕೊಡಿ; ಸಾಮಾಜಿಕ ಜಾಲತಾಣದಲ್ಲಿ ಹಕ್ಕೊತ್ತಾಯ

- Advertisement -
- Advertisement -

ಉತ್ತರ ಕನ್ನಡವೆಂದರೆ ಒಂಥರಾ ನತದೃಷ್ಟ, ಅವಜ್ಞೆಗೊಳಪಟ್ಟ ಜಿಲ್ಲೆ! ಅಕ್ಕ-ಪಕ್ಕದ ಜಿಲ್ಲೆಗಳು ಅದೆಷ್ಟೋ ಅಭಿವೃದ್ಧಿಯಾಗುತ್ತಿದ್ದರೂ ಉತ್ತರ ಕನ್ನಡ ಮಾತ್ರ ಹಾಗೆ ಶಾಪಗ್ರಸ್ಥ ಭೂ ಪ್ರದೇಶದಂತೆ ಉಳಿದುಬಿಟ್ಟಿದೆ. ಇದಕ್ಕೆ ಜಿಲ್ಲೆಯ ಬೇಕು-ಬೇಡಗಳ ಅರಿವಿಲ್ಲದ, ಇಚ್ಛಾ ಶಕ್ತಿಯಿಲ್ಲದ ಜನ ಪ್ರತಿನಿಧಿಗಳ ಉದಾಸೀನವೇ ಕಾರಣವೆಂಬ ಆಕ್ರೋಶವೀಗ ಮಡುಗಟ್ಟುತ್ತಿದೆ!

ರೈತ, ಕೂಲಿಕಾರ ಪರ ಹೋರಾಟಗಾರ, ಹಲವು ಶಾಲೆ-ಕಾಲೇಜುಗಳ ಸ್ಥಾಪಕ ಕವಿ ದಿನಕರ ದೇಸಾಯಿ ಒಬ್ಬರ ಬಿಟ್ಟರೆ ಉತ್ತರ ಕನ್ನಡಕ್ಕೆ ಸಮರ್ಥ ನಾಯಕತ್ವವೆ ಸ್ವಾತಂತ್ರ್ಯಾ ನಂತರದ ಈ ಮುಕ್ಕಾಲು ಶತಮಾನದಲ್ಲಿ ಸಿಕ್ಕಿಲ್ಲ. ರಸ್ತೆ, ಚರಂಡಿ ಬಿಟ್ಟರೆ ಇನ್ಯಾವ ಪ್ರಗತಿಯೂ ಜಿಲ್ಲೆ ಕಂಡಿಲ್ಲ. ಅರಣ್ಯ ಉತ್ಪನ್ನ, ವಿದ್ಯುತ್ ಯೋಜನೆಗಳು, ಮೀನುಗಾರಿಕೆಯೇ ಮುಂತಾದ ಬಾಬತ್ತಿನಲ್ಲಿ ಸರಕಾರದ ಬೊಕ್ಕಸಕ್ಕೆ ಕೋಟಿ-ಕೋಟಿ ತುಂಬುತ್ತಿರುವ ಉತ್ತರ ಕನ್ನಡದಲ್ಲಿ ದುಡಿವ ಕೈಗಳಿಗೆ ಕೆಲಸ ಕೊಡುವಂಥ ಕೈಗಾರಿಕೆಗಳಿಲ್ಲ; ನದಿಗಳು ತುಂಬಿ ಹರಿಯುತ್ತಿದ್ದರು ನೀರಾವರಿ ಯೋಜನೆಗಳಿಲ್ಲ. ಪ್ರಕೃತಿ ಸೋಬಗಿನ ಈ ಜಿಲ್ಲೆಯಲ್ಲಿ ವ್ಯವಸ್ಥಿತ ಪ್ರವಾಸೋದ್ಯಮ ಜನಪ್ರತಿನಿಧಿಗಳಿಂದ ಸ್ಥಾಪಿಸಲಾಗಿಲ್ಲ. ಹಾಗಂತ ಲಾಗಾಯ್ತಿನಿಂದ ಪ್ರಳಯಾಂತಕ ಸರ್ಕಾರಿ ಯೋಜನೆಗಳಿಗೆ ಜನರನ್ನು ಬಲಿ ಪಡೆಯುವುದೇನೂ ನಿಂತಿಲ್ಲ. ರಾಜ್ಯ, ರಾಷ್ಟ್ರ ಮಹತ್ವದ ಹಲವು ಯೋಜನೆಗಳಿಗೆ ಜಿಲ್ಲೆಯ ದೊಡ್ಡ ಜನ ಸಮೂಹ ತಮ್ಮದೆಲ್ಲವನ್ನು ತ್ಯಾಗ ಮಾಡಿ ಬೀದಿ ಪಾಲಾಗಿದ್ದಾರೆ. ಬೆಂಗಾಡಂತಾಗಿರುವ ಉತ್ತರ ಕನ್ನಡದಲ್ಲಿ ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹ ಇಲ್ಲ.

ಅಪಘಾತ, ಗಂಭೀರ ಆರೋಗ್ಯ ಸಮಸ್ಯೆ ಎದುರಾದರೆ ಆಚೀಚೆ ಜಿಲ್ಲೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ರೋಗಿಯನ್ನು ಕೊಂಡೊಯ್ಯಬೇಕು. ದೂರದ ಆಸ್ಪತ್ರೆ ಸೇರುವಷ್ಟರಲ್ಲಿ ದಾರಿಯಲ್ಲಿ ಸಾವು ಸಂಭವಿಸುವುದೇ ಹೆಚ್ಚು. ಹೃದಯಾಘಾತದ ತುರ್ತು ಸಂದರ್ಭದಲ್ಲಿ ಎಂಜಿಯೋಗ್ರಾಮ್ ಮಾಡಿ ಸ್ಟಂಟ್ ಅಳವಡಿಸಿ ಜೀವ ಕಾಪಾಡಲು ಜಿಲ್ಲೆಯಲ್ಲಿ ತಜ್ಞ ವೈದ್ಯರಿಲ್ಲ; ಕ್ಯಾಥ್ ಲ್ಯಾಬ್‌ಗಳೂ ಇಲ್ಲ. ಹೀಗಾಗಿ ಜಿಲ್ಲೆಯಲ್ಲೀಗ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಗಾಗಿ ದೊಡ್ಡ ಕೂಗೆದ್ದಿದೆ. ಕೆಲವು ಶಾಸಕರು ಅನಿವಾಸಿ ಭಾರತೀಯ ಆರೋಗ್ಯ ಉದ್ಯಮಿ ಅಬುದಾಬಿಯ ಬಿ.ಆರ್.ಶೆಟ್ಟಿಯಿಂದ ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡಿಸುವುದಾಗಿ ಹೇಳಿದ್ದರು. ಆದರೆ ಶೆಟ್ಟಿ ಕುಮಟಕ್ಕೆ ಬಂದು ಹೋಗಿದ್ದೆ ಆತನ ದುಬೈನ ಆರೋಗ್ಯ ಉದ್ಯಮ ಸಾಮ್ರಾಜ್ಯ ಪತನವಾಗಿ ಹೋಯ್ತು.

ಆ ನಂತರ ಕಾರ್ಯ ಸಾಧ್ಯವಲ್ಲದ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ಸ್ಥಾಪನೆ ನಾಟಕ ಭರಪೂರ ನಡೆಯಿತೆ ವಿನಃ ಗಂಭೀರ ಪ್ರಯತ್ನಗಳಾಗಲಿಲ್ಲ. ಜನರನ್ನು ದಿಕ್ಕು ತಪ್ಪಿಸುವ ಕೆಲಸಗಳಾದವು. ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಮತ್ತು ಕುಮಟಾ ಶಾಸಕ ದಿನಕರ ಶೆಟ್ಟಿ ಜಿದ್ಧಿಗೆ ಬಿದ್ದವರಂತೆ ತಂತಮ್ಮ ಕ್ಷೇತ್ರದಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಮಾಡೇಬಿಟ್ಟೆವೆಂಬಂತೆ ಮಾತುಗಾರಿಕೆ ನಡೆಸಿದ್ದು ಬಿಟ್ಟರೆ ಬೇರೇನು ಆಗಲಿಲ್ಲವೆಂದು ಜನರಾಡಿಕೊಳ್ಳುತ್ತಿದ್ದಾರೆ. ತಕ್ಕ ಮಟ್ಟಿನ ಸೌಲಭ್ಯ ಹೊಂದಿಸಿಕೊಳ್ಳುತ್ತಿರುವ ಕಾರವರ ಮೆಡಿಕಲ್ ಕಾಲೇಜಿನಲ್ಲಿ ಕನಿಷ್ಟ ಟ್ರಾಮಾ ಸೆಂಟರ್ ಸಹ ಸ್ಥಾಪಿಸಲಾಗಲಿಲ್ಲ. ಈ ಶಾಸಕರೆದುರು ಮ.ಸ್ಪೆ.ಆಸ್ಪತ್ರೆಗಾಗಿ ಕಾಳಜಿಯಿಂದ ಹೋರಾಟಕ್ಕಿಳಿದಿದ್ದ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ ಎಂಬ ಅಭಿಪ್ರಾಯವೂ ಇದೆ. ಎಲ್ಲ ಸೌಲಭ್ಯ ಒದಗಿಸಿ ಕೊಡಲು ಸರ್ಕಾರದಿಂದಲೂ ಸಾಧ್ಯವಿಲ್ಲ.. ತಜ್ಞ್ಲ ವೈದ್ಯರು ಉತ್ತರ ಕನ್ನಡದಂತ ಹಿಂದುಳಿದ ಪ್ರದೇಶಕ್ಕೆ ಬಂದು ಕೆಲಸಮಾಡಲು ಸಿದ್ದರಾಗಲಿಕ್ಕಿಲ್ಲ; ದೊಡ್ಡ ನಗರಗಳಲ್ಲಿ ಸಿಗುವ ಆಕರ್ಷಕ ಸಂಬಳದ ಸೆಳೆತ ಹಾಗಿರುತ್ತದೆ. ಯಡಿಯೂರಪ್ಪನಂಥ ದಿಗ್ಗಜನಿದ್ದರೂ ಶಿವಮೊಗ್ಗ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇನ್ನು ಪರಿಪೂರ್ಣವಾಗಿಲ್ಲ.

ಖಾಸಗಿಯವರು ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಗೆ ಹಣ ಹೂಡಿದರೆ ನಿರೀಕ್ಷಿತ ಲಾಭ ಬರದ ಭಯದಲ್ಲಿ ಹಿಂದೆಸರಿಯುತ್ತಾರೆ. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರಲ್ಲಿ ಇಂಥದೊಂದು ಬೇಡಿಕೆ ಇಟ್ಟಾಗ-ನನ್ನಿಂದ ಸಾಧ್ಯವಿಲ್ಲ; ಮಣಿಪಾಲ ಉತ್ತರ ಕನ್ನಡಕ್ಕೆ ಹತ್ತಿರದಲ್ಲಿದೆ; ಟ್ರಾಮಾ ಸೆಂಟರ್ ಮಾಡಿದರೆ ಮಣಿಪಾಲ ಕೆಎಮ್‌ಸಿಯವರು ಮಾಡಬಹುದು. ಬೇಕಿದ್ದರೆ ನಾನೊಂದು ಮಾತು ಹೇಳ್ತೇನೆ ಅಂದಿದ್ದರು. ಆದ್ದರಿಂದ ಭಾರತ ಸರ್ಕಾರವೇ ಉತ್ತರ ಕನ್ನಡದ ಪರಸ್ಥಿತಿ ಅರ್ಥ ಮಾಡಿಕೊಂಡು ಜಿಲ್ಲೆಗೆ ಏಮ್ಸ್ ಅಖಿಲ ಭಾರತೀಯ ವೈದೈಕೀಯ ವಿಜ್ಞಾನ ಸಂಸ್ಥೆ ಮಂಜೂರಿ ಮಾಡಿದರೆ ಅತ್ಯಗತ್ಯ ಬೇಡಿಕೆ ಈಡೇರಿದಂತಾಗುತ್ತದೆ. ಅಂತದೊಂದು ಆಸೆ ಈಗ ಉತ್ತರ ಕನ್ನಡದಲ್ಲಿ ಮೂಡಿದೆ. ಭಾರತ ಸರ್ಕಾರದ ನೀತಿ ಆಯೋಗದ ನಿರ್ದೇಶನದಂತೆ ಕರ್ನಾಟಕಕ್ಕೆ ಒಂದು ಏಮ್ಸ್ ಮಂಜೂರಿಯಾಗುವ ಸಂದರ್ಭ ಬಂದಿರುವುದೇ ಈ ನಿರೀಕ್ಷೆಗೆ ಕಾರಣ.

ಕೆಲ ದಿನಗಳ ಹಿಂದೆ ಸಿಎಂ ಬೊಮ್ಮಾಯಿ ಪ್ರಧಾನಿ ಭೇಟಿ ಮಾಡಿದಾಗ ತನ್ನ ತವರು ಕ್ಷೇತ್ರ (ಶಿಗ್ಗಾವಿ)ದ ಪಕ್ಕದ ಹುಬ್ಬಳ್ಳಿಗೆ ಏಮ್ಸ್ ಕೇಳಿದ್ದರು. ಅದು ದಿ ಹಿಂದು ಪತ್ರಿಕೆಯ ವೆಬ್ ಸೈಟ್‌ನಲ್ಲಿ ಸುದ್ದಿಯಾಗಿತ್ತು. ಆ ಲಿಂಕ್ ಶೇರ್ ಮಾಡುವ ಮೂಲಕ ಮಂಗಳೂರಿನ ಕೆಎಮ್‌ಸಿಯ ಹೃದಯ ತಜ್ಞ ಡಾ.ಪದ್ಮನಾಭ ಕಾಮತ್ ಪ್ರಧಾನಿಗೆ ಏಮ್ಸ್ ಉತ್ತರ ಕನ್ನಡಕ್ಕೆ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದರು. ಆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಉತ್ತರ ಕನ್ನಡಕ್ಕೆ ಏಮ್ಸ್ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗತೊಡಗಿತು. ಜತೆಗೆ ಜಿಲ್ಲೆಯ ಮಂತ್ರಿ, ಶಾಸಕರು ವಿಶೇಷವಾಗಿ ಸಂಸದ ಆನಂತಕುಮಾರ್ ಹೆಗಡೆ ವಿರುದ್ದ ಆಕ್ರೋಶ ಭುಗಿಲೆದ್ದಿತು!

ದುರಂತವೆಂದರೆ ಇತ್ತ ಉತ್ತರ ಕನ್ನಡಿಗರು ಅಗತ್ಯ-ಅನಿವಾರ್ಯವಾದ ಎಮ್ಸ್‌ನ ಕನಸು ಕಾಣುತ್ತಿದ್ದರೆ, ಅತ್ತ ಸಿಎಂ ಸಾಹೇಬರು ಅಗತ್ಯ ಇಲ್ಲದಿದ್ದರು ಹುಬ್ಬಳ್ಳಿಗೆ ಏಮ್ಸ್ ಹೊತ್ತೊಯ್ಯಲು ಹವಣಿಸುತ್ತಿದ್ದಾರೆಂದು ಜಿಲ್ಲೆಯ ಜನರು ಬೇಸರ ವ್ಯಕ್ತ ಪಡಿಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಮೂರ್ನಾಲ್ಕು ಮೆಡಿಕಲ್ ಕಾಲೇಜು ಹಾಗೂ ಹಲವು ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿವೆ. ಆದರೂ ಏಮ್ಸ್ ಬೇಕೆನ್ನುವುದು ಯಾವ ನ್ಯಾಯವೆಂದು ಮಾತಾಡಿಕೊಳ್ಳಲಾಗುತ್ತಿದೆ. ಅವಿಭಜಿತ ಧಾರವಾಡ ಜಿಲ್ಲೆ ಈಗ ರಾಜಕೀಯವಾಗಿ ತುಂಬ ಪ್ರಭಾವಶಾಲಿ. ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಲಿ ಮುಖ್ಯ ಮಂತ್ರಿ ಬೊಮ್ಮಾಯಿ ಕರ್ಮ ಭೂಮಿಯಿದು. ಈ ರಾಜಕೀಯ ಒತ್ತಡದಿಂದಲೇ ಏಮ್ಸ್ ಹುಬ್ಬಳ್ಳಿಯತ್ತ ಮುಖ ಮಾಡಿದೆ ಎನ್ನಲಾಗುತ್ತಿದೆ; ಉತ್ತರ ಕನ್ನಡದ ಮಂತ್ರಿ-ಶಾಸಕರು-ಸಂಸದರು ಬಾರೀ ಬಾಯಿ ಪಟಾಕಿಯರು. ಹಾಗಾಗಿ ಇವರಿಂದ ಏಮ್ಸ್ ಜಿಲ್ಲೆಗೆ ತರುವ ಬದ್ಧತೆ-ನಿಯತ್ತಿನ ಪ್ರಯತ್ನ ಮಾಡಲಾಗುತ್ತಿಲ್ಲವೆಂದು ಜನರು ಮೂಗು ಮುರಿಯತ್ತಿದ್ದಾರೆ.


ಇದನ್ನೂ ಓದಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...