ಆಂಧ್ರಪ್ರದೇಶದಲ್ಲಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗಳು ಮೃತಪಟ್ಟಿದ್ದಾರೆ. ಹುತಾತ್ಮ ಯೋಧನ ಪಾರ್ಥೀವ ಶರೀರವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಿ ಹಿಂದಿರುಗುತ್ತಿದ್ದ ವೇಳೆ ರಾಜ್ಯದ ಶ್ರೀಕಾಕುಳಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಜಿಲ್ಲೆಯ ಭೈರಿ ಸಾರಂಗಪುರಂನಲ್ಲಿರುವ ಯೋಧನ ಕುಟುಂಬಕ್ಕೆ ಯೋಧನ ಮೃತದೇಹ ಹಸ್ತಾಂತರಿಸಿದ ಬಳಿಕ ಪೊಲೀಸ್ ಸಿಬ್ಬಂದಿ ಹಿಂದಿರುಗುತ್ತಿದ್ದರು. ಈ ವೇಳೆ ಅವರ ಕಾರು ಪಲಸಾ ಬಳಿಯಿರುವ ಹೆದ್ದಾರಿ-16ರಲ್ಲಿ ಅಪಘಾತಕ್ಕೀಡಾಗಿದೆ. ದುರ್ಘಟನೆಯಲ್ಲಿ ಓರ್ವ ಸಬ್ ಇನ್ಸ್ಪೆಕ್ಟರ್ ಮತ್ತು ಮೂವರು ಸಶಸ್ತ್ರ ಮೀಸಲು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?
ಶ್ರೀಕಾಕುಳಂಗೆ ತೆರಳುತ್ತಿದ್ದ ಪೊಲೀಸ್ ಜೀಪ್ಗೆ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು ಎಸ್ಐ ಜೆ. ಕೃಷ್ಣುಡು, ಹೆಡ್ ಕಾನ್ಸ್ಟೇಬಲ್ಗಳಾದ ವೈ ಬಾಬು ರಾವ್, ಟಿ. ಆಂಟೋನಿ ಮತ್ತು ಚಾಲಕ ಪಿ. ಜನಾರ್ಧನ ರಾವ್ ಎಂದು ಗುರುತಿಸಲಾಗಿದೆ.
ಅಪಘಾತದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಆದಷ್ಟು ಬೇಗ ವರದಿ ಸಲ್ಲಿಸುವಂತೆ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಮತ್ತು ಶ್ರೀಕಾಕುಳಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿರುವುದಾಗಿ ಪೊಲೀಸ್ ಮಹಾನಿರ್ದೇಶಕ ಡಿ. ಗೌತಮ್ ಸಾವಂಗ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ನಾಲ್ವರು ಸಿಬ್ಬಂದಿಯನ್ನು ಕಳೆದುಕೊಂಡಿರುವುದು ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟ, ಮೃತರ ಕುಟುಂಬದ ನೆರವಿಗೆ ಇಲಾಖೆ ನಿಲ್ಲಲಿದೆ ಎಂದು ಡಿಜಿಪಿ ಸಾವಂಗ್ ತಿಳಿಸಿದ್ದಾರೆ.
ಇದನ್ನೂ ಓದಿ: ಸಿಎಎ ವಿರೋಧಿ ನಾಟಕಕ್ಕೆ ಪೊಲೀಸ್ ವಿಚಾರಣೆ: ಜೆಜೆ ಕಾಯ್ದೆಯಡಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ – ಹೈಕೋರ್ಟ್
ನಾನುಗೌರಿ ಯೂಟ್ಯೂಬ್ ಚಾನೆಲ್ Subscribe ಮಾಡಿ


