Homeಮುಖಪುಟಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

- Advertisement -
- Advertisement -

ಮಧ್ಯಪ್ರದೇಶದ ಇಂದೋರ್‌ನಲ್ಲಿ ಬಳೆ ಮಾರಾಟ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಕಳೆದ ಭಾನುವಾರ ದುಷ್ಕರ್ಮಿಗಳ ಗುಂಪೊಂದು ಕೋಮು ನಿಂದನೆ ಮಾಡುತ್ತಾ ಕ್ರೂರವಾಗಿ ಹಲ್ಲೆ ನಡೆಸಿತ್ತು. ಸಂತ್ರಸ್ತ ಯುವಕನನ್ನು ತಸ್ಲೀಂ ಎಂದು ಗುರುತಿಸಲಾಗಿದ್ದು, ತನ್ನ ಮೇಲೆ ಗುಂಪು ಹಲ್ಲೆ ನಡೆಸಿ, ತನ್ನ ವಸ್ತುಗಳನ್ನು ನಾಶ ಮಾಡಿ, 10 ಸಾವಿರ ರೂ.ಗಳನ್ನು ದೂಚಿಕೊಂಡು ಹೋಗಲಾಗಿದೆ ಎಂದು ಅವರು ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಮೂವರನ್ನು ಇದುವರೆಗೂ ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌‌ ಮಿಶ್ರಾ ಅವರು ಯುವಕ ತನ್ನ ಬಳಿ ಎರಡು ಆಧಾರ್‌ ಕಾರ್ಡ್‌ಗಳನ್ನು ಹೊಂದಿದ್ದು, ಹಿಂದೂ ಹೆಸರನ್ನು ಬಳಸಿಕೊಂಡಿದ್ದಾರೆ. ಅಲ್ಲಿಂದ ವಿವಾದ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ ಬಿಜೆಪಿಯ ಕೆಲವು ನಾಯಕರು ಪ್ರಕರಣವನ್ನು ಲವ್ ಜಿಹಾದ್ ಅಡಿಯಲ್ಲಿ ತನಿಖೆ ನಡೆಸಬೇಕು ಎಂದು ಘಟನೆಯನ್ನು ಕೋಮು ಪ್ರಚೋದನೆಗೂ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ಪೊಲಿಟಿಕಲ್ ಕರೆಕ್ಟ್‌ನೆಸ್ ಮತ್ತು ಸಂವೇದನೆ; ಚಿತ್ರ, ಕಾರ್ಟೂನು, ಮಾಧ್ಯಮ ಮತ್ತು ತಿಳಿವಳಿಕೆಯ ಸಂವಾದ

ಅದಾಗ್ಯೂ, ನ್ಯೂಸ್18ಎಂಪಿ ಛತ್ತೀಸ್‌ಗಡ್‌ ಮತ್ತು ಝೀ ಹಿಂದೂಸ್ತಾನ್ ಪ್ರಕರಣವನ್ನು ತಿರುಚಿ, ಕೋಮು ಪ್ರಚೋದನೆಗೆ ಬಳಸಿಕೊಂಡಿದೆ. ಪ್ರಕರಣವನ್ನು ಬಳಸಿಕೊಂಡು, “ಬಳೆ ಜಿಹಾ‌ದ್‌” ನಡೆಯುತ್ತಿದೆ ಎಂದು ಪ್ರತಿಪಾದಿಸಿ, ಪ್ರಕರಣವನ್ನು ಕಾಲ್ಪನಿಕ “ಲವ್ ಜಿಹಾದ್‌”ಗೆ ತಗಲು ಹಾಕಿದೆ.

ಪ್ರಕರಣದ ಕುರಿತು ಝೀ ಹಿಂದೂಸ್ತಾನ್‌ ಮಾಡಿರುವ ವಿಶೇಷ ವರದಿಗೆ, “ಹಿಂದೂಸ್ತಾನದಲ್ಲಿ ಹಿಂದೂಗಳ ಮೇಲೆ ಬಳೆ ಜಿಹಾದ್?” ಎಂಬ ಹೆಸರನ್ನು ನೀಡಿದೆ. ಈ ಕಾರ್ಯಕ್ರಮದ ಪ್ರೊಮೋವನ್ನು ಝೀ ಹಿಂದೂಸ್ತಾನ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಅದರಲ್ಲಿ, “ಇಂದೂರ್‌ನ ತಸ್ಲೀಂ, ತುಷಾರ್‌ ಯಾಕೆ ಆದ? ಸೇಡಿನ ಹೆಸರು, ಸೇಡಿನ ಕೆಲಸ, ಹಿಂದೂಗಳ ಮೇಲೆ ಪಿತೂರಿ? ಬಳೆಗಾರ ಆಗಿ ಸನಾತನದ ಮೇಲೆ ಮೋಸ? ಹಿಂದೂಸ್ತಾನದಲ್ಲಿ ಹಿಂದೂಗಳ ಮೇಲೆ ‘ಬಳೆ ಜಿಹಾದ್’?” ಎಂದು ಪ್ರಶ್ನೆಗಳನ್ನು ಹಾಕಿ ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಪೆಗಾಸಸ್ ಬಗ್ಗೆ ಮಾಧ್ಯಮ ವರದಿ ನಿಜವಾಗಿದ್ದರೆ ‘ಹಗರಣ ನಿಜಕ್ಕೂ ಗಂಭೀರ’: ಸುಪ್ರೀಂಕೋರ್ಟ್‌

ಝೀ ಹಿಂದೂಸ್ತಾನ್‌ ರೀತಿಯಲ್ಲೇ, ನ್ಯೂಸ್ 18 ಕೂಡ ಅಂತಹದ್ದೇ ವಿಶೇಷ ವರದಿಯನ್ನು ಮಾಡಿದೆ. ಅದು ತನ್ನ ವಿಶೇಷ ವರದಿಗೆ “ಬಳೆ ನೆಪ, ಲವ್ ಜಿಹಾದ್‌ ಗುರಿ!” ಎಂದು ಹೆಸರು ನೀಡಿದೆ.

ಅಲ್ಲದೆ ಪ್ರೋಮೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು. ಅದರಲ್ಲಿ, “ಬಳೆ ನೆಪ, ಲವ್ ಜಿಹಾದ್‌ ಗುರಿ! ಬಳೆಗಾರನ ಮೇಲೆ ಹಲ್ಲೆಯಾದ ನಂತರ ಗಲಾಟೆ! ಬಳೆಗಾರನ ‘ಧರ್ಮ’ ಯಾವುದು? ಲವ್‌ ಜಿಹಾದ್‌ಗಾಗಿ ಹೆಸರು ಬದಲಾವಣೆ?” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಆದರೆ ಪೊಲೀಸರು ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕೋಮು ಪ್ರಚೋದಕ ಹೇಳಿಕೆಗಳ ಬಗ್ಗೆ ಈ ಹಿಂದೆಯೆ ಎಚ್ಚರಿಕೆ ನೀಡಿದ್ದಾರೆ.

“ನಾವು ದೂರುದಾರರ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ತನಿಖೆ ಮಾಡುತ್ತಿದ್ದೇವೆ. ಆದರೆ ಸಾಮಾಜಿಕ ಜಾಲತಾಣದ ಕೋಮು ಪ್ರಚೋದಕ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸದಂತೆ ಜನರಿಗೆ ನಾವು ಮನವಿ ಮಾಡಿದ್ದೇವೆ. ಸಾಮಾಜಿಕ ಜಾಲತಾಣದ ಅಂತಹ ಪೋಸ್ಟ್‌ಗಳ ಮೇಲೆ ನಾವು ನಿಗಾ ಇಟ್ಟಿದ್ದೇವೆ. ವಿಡಿಯೋದಲ್ಲಿನ ಆರೋಪಿಗಳನ್ನು ಗುರುತಿಸಲಾಗುತ್ತಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಇಂದೋರ್ ಪೂರ್ವ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಅಶುತೋಷ್ ಬಾಗ್ರಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಪೊಲೀಸರ ಎಚ್ಚರಿಕೆಯ ಹೊರತಾಗಿಯು ಎರಡು ಹಿಂದಿ ಚಾನೆಲ್‌ಗಳು ಪ್ರಕರಣವನ್ನು ಕಾಲ್ಪನಿಕ ಲವ್‌ಜಿಹಾದ್‌ಗೆ ತಗಲು ಹಾಕಿ ದ್ವೇಷವನ್ನು ಬಿತ್ತುತ್ತಿದೆ. ಇದರ ವಿರುದ್ದ ಸಾಮಾಜಿಕ ಜಾತಲಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, “ಇದು ಇಂದಿನ ಪತ್ರಿಕೋದ್ಯಮದ ‘ಮಟ್ಟ’ !!! ರಾಷ್ಟ್ರೀಯ ಚಾನೆಲ್ ಮೂಲಕ ದ್ವೇಷ ಮತ್ತು ಭಯೋತ್ಪಾದನೆಯನ್ನು ಬಹಿರಂಗವಾಗಿ ಪ್ರಚೋದಿಸಲಾಗುತ್ತಿದೆ! ಅದ್ಭುತವಾಗಿದೆ! ಈಗ ನಾಶವು ತುಂಬಾ ದೂರವಿಲ್ಲ” ಎಂದು ಹೇಳಿದ್ದಾರೆ.

ಘಟನೆಯ ವಿಡಿಯೊವನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದು ನಾನುಗೌರಿ.ಕಾಂ ಫೇಸ್‌ಬುಕ್ ಪೇಜ್‌


 

ಇದನ್ನೂ ಓದಿ: ಸುಪ್ರೀಂಗೆ ಹೊಸ ನ್ಯಾಯಾಧೀಶರ ನೇಮಕಾತಿ: ಮಾಧ್ಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...