Homeಮುಖಪುಟಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

- Advertisement -
- Advertisement -

ಮಧ್ಯಪ್ರದೇಶದ ಇಂದೋರ್‌ನಲ್ಲಿ ಬಳೆ ಮಾರಾಟ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಕಳೆದ ಭಾನುವಾರ ದುಷ್ಕರ್ಮಿಗಳ ಗುಂಪೊಂದು ಕೋಮು ನಿಂದನೆ ಮಾಡುತ್ತಾ ಕ್ರೂರವಾಗಿ ಹಲ್ಲೆ ನಡೆಸಿತ್ತು. ಸಂತ್ರಸ್ತ ಯುವಕನನ್ನು ತಸ್ಲೀಂ ಎಂದು ಗುರುತಿಸಲಾಗಿದ್ದು, ತನ್ನ ಮೇಲೆ ಗುಂಪು ಹಲ್ಲೆ ನಡೆಸಿ, ತನ್ನ ವಸ್ತುಗಳನ್ನು ನಾಶ ಮಾಡಿ, 10 ಸಾವಿರ ರೂ.ಗಳನ್ನು ದೂಚಿಕೊಂಡು ಹೋಗಲಾಗಿದೆ ಎಂದು ಅವರು ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಮೂವರನ್ನು ಇದುವರೆಗೂ ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌‌ ಮಿಶ್ರಾ ಅವರು ಯುವಕ ತನ್ನ ಬಳಿ ಎರಡು ಆಧಾರ್‌ ಕಾರ್ಡ್‌ಗಳನ್ನು ಹೊಂದಿದ್ದು, ಹಿಂದೂ ಹೆಸರನ್ನು ಬಳಸಿಕೊಂಡಿದ್ದಾರೆ. ಅಲ್ಲಿಂದ ವಿವಾದ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ ಬಿಜೆಪಿಯ ಕೆಲವು ನಾಯಕರು ಪ್ರಕರಣವನ್ನು ಲವ್ ಜಿಹಾದ್ ಅಡಿಯಲ್ಲಿ ತನಿಖೆ ನಡೆಸಬೇಕು ಎಂದು ಘಟನೆಯನ್ನು ಕೋಮು ಪ್ರಚೋದನೆಗೂ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ಪೊಲಿಟಿಕಲ್ ಕರೆಕ್ಟ್‌ನೆಸ್ ಮತ್ತು ಸಂವೇದನೆ; ಚಿತ್ರ, ಕಾರ್ಟೂನು, ಮಾಧ್ಯಮ ಮತ್ತು ತಿಳಿವಳಿಕೆಯ ಸಂವಾದ

ಅದಾಗ್ಯೂ, ನ್ಯೂಸ್18ಎಂಪಿ ಛತ್ತೀಸ್‌ಗಡ್‌ ಮತ್ತು ಝೀ ಹಿಂದೂಸ್ತಾನ್ ಪ್ರಕರಣವನ್ನು ತಿರುಚಿ, ಕೋಮು ಪ್ರಚೋದನೆಗೆ ಬಳಸಿಕೊಂಡಿದೆ. ಪ್ರಕರಣವನ್ನು ಬಳಸಿಕೊಂಡು, “ಬಳೆ ಜಿಹಾ‌ದ್‌” ನಡೆಯುತ್ತಿದೆ ಎಂದು ಪ್ರತಿಪಾದಿಸಿ, ಪ್ರಕರಣವನ್ನು ಕಾಲ್ಪನಿಕ “ಲವ್ ಜಿಹಾದ್‌”ಗೆ ತಗಲು ಹಾಕಿದೆ.

ಪ್ರಕರಣದ ಕುರಿತು ಝೀ ಹಿಂದೂಸ್ತಾನ್‌ ಮಾಡಿರುವ ವಿಶೇಷ ವರದಿಗೆ, “ಹಿಂದೂಸ್ತಾನದಲ್ಲಿ ಹಿಂದೂಗಳ ಮೇಲೆ ಬಳೆ ಜಿಹಾದ್?” ಎಂಬ ಹೆಸರನ್ನು ನೀಡಿದೆ. ಈ ಕಾರ್ಯಕ್ರಮದ ಪ್ರೊಮೋವನ್ನು ಝೀ ಹಿಂದೂಸ್ತಾನ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಅದರಲ್ಲಿ, “ಇಂದೂರ್‌ನ ತಸ್ಲೀಂ, ತುಷಾರ್‌ ಯಾಕೆ ಆದ? ಸೇಡಿನ ಹೆಸರು, ಸೇಡಿನ ಕೆಲಸ, ಹಿಂದೂಗಳ ಮೇಲೆ ಪಿತೂರಿ? ಬಳೆಗಾರ ಆಗಿ ಸನಾತನದ ಮೇಲೆ ಮೋಸ? ಹಿಂದೂಸ್ತಾನದಲ್ಲಿ ಹಿಂದೂಗಳ ಮೇಲೆ ‘ಬಳೆ ಜಿಹಾದ್’?” ಎಂದು ಪ್ರಶ್ನೆಗಳನ್ನು ಹಾಕಿ ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಪೆಗಾಸಸ್ ಬಗ್ಗೆ ಮಾಧ್ಯಮ ವರದಿ ನಿಜವಾಗಿದ್ದರೆ ‘ಹಗರಣ ನಿಜಕ್ಕೂ ಗಂಭೀರ’: ಸುಪ್ರೀಂಕೋರ್ಟ್‌

ಝೀ ಹಿಂದೂಸ್ತಾನ್‌ ರೀತಿಯಲ್ಲೇ, ನ್ಯೂಸ್ 18 ಕೂಡ ಅಂತಹದ್ದೇ ವಿಶೇಷ ವರದಿಯನ್ನು ಮಾಡಿದೆ. ಅದು ತನ್ನ ವಿಶೇಷ ವರದಿಗೆ “ಬಳೆ ನೆಪ, ಲವ್ ಜಿಹಾದ್‌ ಗುರಿ!” ಎಂದು ಹೆಸರು ನೀಡಿದೆ.

ಅಲ್ಲದೆ ಪ್ರೋಮೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು. ಅದರಲ್ಲಿ, “ಬಳೆ ನೆಪ, ಲವ್ ಜಿಹಾದ್‌ ಗುರಿ! ಬಳೆಗಾರನ ಮೇಲೆ ಹಲ್ಲೆಯಾದ ನಂತರ ಗಲಾಟೆ! ಬಳೆಗಾರನ ‘ಧರ್ಮ’ ಯಾವುದು? ಲವ್‌ ಜಿಹಾದ್‌ಗಾಗಿ ಹೆಸರು ಬದಲಾವಣೆ?” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಆದರೆ ಪೊಲೀಸರು ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕೋಮು ಪ್ರಚೋದಕ ಹೇಳಿಕೆಗಳ ಬಗ್ಗೆ ಈ ಹಿಂದೆಯೆ ಎಚ್ಚರಿಕೆ ನೀಡಿದ್ದಾರೆ.

“ನಾವು ದೂರುದಾರರ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ತನಿಖೆ ಮಾಡುತ್ತಿದ್ದೇವೆ. ಆದರೆ ಸಾಮಾಜಿಕ ಜಾಲತಾಣದ ಕೋಮು ಪ್ರಚೋದಕ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸದಂತೆ ಜನರಿಗೆ ನಾವು ಮನವಿ ಮಾಡಿದ್ದೇವೆ. ಸಾಮಾಜಿಕ ಜಾಲತಾಣದ ಅಂತಹ ಪೋಸ್ಟ್‌ಗಳ ಮೇಲೆ ನಾವು ನಿಗಾ ಇಟ್ಟಿದ್ದೇವೆ. ವಿಡಿಯೋದಲ್ಲಿನ ಆರೋಪಿಗಳನ್ನು ಗುರುತಿಸಲಾಗುತ್ತಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಇಂದೋರ್ ಪೂರ್ವ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಅಶುತೋಷ್ ಬಾಗ್ರಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಪೊಲೀಸರ ಎಚ್ಚರಿಕೆಯ ಹೊರತಾಗಿಯು ಎರಡು ಹಿಂದಿ ಚಾನೆಲ್‌ಗಳು ಪ್ರಕರಣವನ್ನು ಕಾಲ್ಪನಿಕ ಲವ್‌ಜಿಹಾದ್‌ಗೆ ತಗಲು ಹಾಕಿ ದ್ವೇಷವನ್ನು ಬಿತ್ತುತ್ತಿದೆ. ಇದರ ವಿರುದ್ದ ಸಾಮಾಜಿಕ ಜಾತಲಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, “ಇದು ಇಂದಿನ ಪತ್ರಿಕೋದ್ಯಮದ ‘ಮಟ್ಟ’ !!! ರಾಷ್ಟ್ರೀಯ ಚಾನೆಲ್ ಮೂಲಕ ದ್ವೇಷ ಮತ್ತು ಭಯೋತ್ಪಾದನೆಯನ್ನು ಬಹಿರಂಗವಾಗಿ ಪ್ರಚೋದಿಸಲಾಗುತ್ತಿದೆ! ಅದ್ಭುತವಾಗಿದೆ! ಈಗ ನಾಶವು ತುಂಬಾ ದೂರವಿಲ್ಲ” ಎಂದು ಹೇಳಿದ್ದಾರೆ.

ಘಟನೆಯ ವಿಡಿಯೊವನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದು ನಾನುಗೌರಿ.ಕಾಂ ಫೇಸ್‌ಬುಕ್ ಪೇಜ್‌


 

ಇದನ್ನೂ ಓದಿ: ಸುಪ್ರೀಂಗೆ ಹೊಸ ನ್ಯಾಯಾಧೀಶರ ನೇಮಕಾತಿ: ಮಾಧ್ಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...