Homeಮುಖಪುಟಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

- Advertisement -
- Advertisement -

ಮಧ್ಯಪ್ರದೇಶದ ಇಂದೋರ್‌ನಲ್ಲಿ ಬಳೆ ಮಾರಾಟ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಕಳೆದ ಭಾನುವಾರ ದುಷ್ಕರ್ಮಿಗಳ ಗುಂಪೊಂದು ಕೋಮು ನಿಂದನೆ ಮಾಡುತ್ತಾ ಕ್ರೂರವಾಗಿ ಹಲ್ಲೆ ನಡೆಸಿತ್ತು. ಸಂತ್ರಸ್ತ ಯುವಕನನ್ನು ತಸ್ಲೀಂ ಎಂದು ಗುರುತಿಸಲಾಗಿದ್ದು, ತನ್ನ ಮೇಲೆ ಗುಂಪು ಹಲ್ಲೆ ನಡೆಸಿ, ತನ್ನ ವಸ್ತುಗಳನ್ನು ನಾಶ ಮಾಡಿ, 10 ಸಾವಿರ ರೂ.ಗಳನ್ನು ದೂಚಿಕೊಂಡು ಹೋಗಲಾಗಿದೆ ಎಂದು ಅವರು ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಮೂವರನ್ನು ಇದುವರೆಗೂ ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.

ಆದರೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌‌ ಮಿಶ್ರಾ ಅವರು ಯುವಕ ತನ್ನ ಬಳಿ ಎರಡು ಆಧಾರ್‌ ಕಾರ್ಡ್‌ಗಳನ್ನು ಹೊಂದಿದ್ದು, ಹಿಂದೂ ಹೆಸರನ್ನು ಬಳಸಿಕೊಂಡಿದ್ದಾರೆ. ಅಲ್ಲಿಂದ ವಿವಾದ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ ಬಿಜೆಪಿಯ ಕೆಲವು ನಾಯಕರು ಪ್ರಕರಣವನ್ನು ಲವ್ ಜಿಹಾದ್ ಅಡಿಯಲ್ಲಿ ತನಿಖೆ ನಡೆಸಬೇಕು ಎಂದು ಘಟನೆಯನ್ನು ಕೋಮು ಪ್ರಚೋದನೆಗೂ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ಪೊಲಿಟಿಕಲ್ ಕರೆಕ್ಟ್‌ನೆಸ್ ಮತ್ತು ಸಂವೇದನೆ; ಚಿತ್ರ, ಕಾರ್ಟೂನು, ಮಾಧ್ಯಮ ಮತ್ತು ತಿಳಿವಳಿಕೆಯ ಸಂವಾದ

ಅದಾಗ್ಯೂ, ನ್ಯೂಸ್18ಎಂಪಿ ಛತ್ತೀಸ್‌ಗಡ್‌ ಮತ್ತು ಝೀ ಹಿಂದೂಸ್ತಾನ್ ಪ್ರಕರಣವನ್ನು ತಿರುಚಿ, ಕೋಮು ಪ್ರಚೋದನೆಗೆ ಬಳಸಿಕೊಂಡಿದೆ. ಪ್ರಕರಣವನ್ನು ಬಳಸಿಕೊಂಡು, “ಬಳೆ ಜಿಹಾ‌ದ್‌” ನಡೆಯುತ್ತಿದೆ ಎಂದು ಪ್ರತಿಪಾದಿಸಿ, ಪ್ರಕರಣವನ್ನು ಕಾಲ್ಪನಿಕ “ಲವ್ ಜಿಹಾದ್‌”ಗೆ ತಗಲು ಹಾಕಿದೆ.

ಪ್ರಕರಣದ ಕುರಿತು ಝೀ ಹಿಂದೂಸ್ತಾನ್‌ ಮಾಡಿರುವ ವಿಶೇಷ ವರದಿಗೆ, “ಹಿಂದೂಸ್ತಾನದಲ್ಲಿ ಹಿಂದೂಗಳ ಮೇಲೆ ಬಳೆ ಜಿಹಾದ್?” ಎಂಬ ಹೆಸರನ್ನು ನೀಡಿದೆ. ಈ ಕಾರ್ಯಕ್ರಮದ ಪ್ರೊಮೋವನ್ನು ಝೀ ಹಿಂದೂಸ್ತಾನ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಅದರಲ್ಲಿ, “ಇಂದೂರ್‌ನ ತಸ್ಲೀಂ, ತುಷಾರ್‌ ಯಾಕೆ ಆದ? ಸೇಡಿನ ಹೆಸರು, ಸೇಡಿನ ಕೆಲಸ, ಹಿಂದೂಗಳ ಮೇಲೆ ಪಿತೂರಿ? ಬಳೆಗಾರ ಆಗಿ ಸನಾತನದ ಮೇಲೆ ಮೋಸ? ಹಿಂದೂಸ್ತಾನದಲ್ಲಿ ಹಿಂದೂಗಳ ಮೇಲೆ ‘ಬಳೆ ಜಿಹಾದ್’?” ಎಂದು ಪ್ರಶ್ನೆಗಳನ್ನು ಹಾಕಿ ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಪೆಗಾಸಸ್ ಬಗ್ಗೆ ಮಾಧ್ಯಮ ವರದಿ ನಿಜವಾಗಿದ್ದರೆ ‘ಹಗರಣ ನಿಜಕ್ಕೂ ಗಂಭೀರ’: ಸುಪ್ರೀಂಕೋರ್ಟ್‌

ಝೀ ಹಿಂದೂಸ್ತಾನ್‌ ರೀತಿಯಲ್ಲೇ, ನ್ಯೂಸ್ 18 ಕೂಡ ಅಂತಹದ್ದೇ ವಿಶೇಷ ವರದಿಯನ್ನು ಮಾಡಿದೆ. ಅದು ತನ್ನ ವಿಶೇಷ ವರದಿಗೆ “ಬಳೆ ನೆಪ, ಲವ್ ಜಿಹಾದ್‌ ಗುರಿ!” ಎಂದು ಹೆಸರು ನೀಡಿದೆ.

ಅಲ್ಲದೆ ಪ್ರೋಮೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು. ಅದರಲ್ಲಿ, “ಬಳೆ ನೆಪ, ಲವ್ ಜಿಹಾದ್‌ ಗುರಿ! ಬಳೆಗಾರನ ಮೇಲೆ ಹಲ್ಲೆಯಾದ ನಂತರ ಗಲಾಟೆ! ಬಳೆಗಾರನ ‘ಧರ್ಮ’ ಯಾವುದು? ಲವ್‌ ಜಿಹಾದ್‌ಗಾಗಿ ಹೆಸರು ಬದಲಾವಣೆ?” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಆದರೆ ಪೊಲೀಸರು ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕೋಮು ಪ್ರಚೋದಕ ಹೇಳಿಕೆಗಳ ಬಗ್ಗೆ ಈ ಹಿಂದೆಯೆ ಎಚ್ಚರಿಕೆ ನೀಡಿದ್ದಾರೆ.

“ನಾವು ದೂರುದಾರರ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ತನಿಖೆ ಮಾಡುತ್ತಿದ್ದೇವೆ. ಆದರೆ ಸಾಮಾಜಿಕ ಜಾಲತಾಣದ ಕೋಮು ಪ್ರಚೋದಕ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸದಂತೆ ಜನರಿಗೆ ನಾವು ಮನವಿ ಮಾಡಿದ್ದೇವೆ. ಸಾಮಾಜಿಕ ಜಾಲತಾಣದ ಅಂತಹ ಪೋಸ್ಟ್‌ಗಳ ಮೇಲೆ ನಾವು ನಿಗಾ ಇಟ್ಟಿದ್ದೇವೆ. ವಿಡಿಯೋದಲ್ಲಿನ ಆರೋಪಿಗಳನ್ನು ಗುರುತಿಸಲಾಗುತ್ತಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಇಂದೋರ್ ಪೂರ್ವ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಅಶುತೋಷ್ ಬಾಗ್ರಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಪೊಲೀಸರ ಎಚ್ಚರಿಕೆಯ ಹೊರತಾಗಿಯು ಎರಡು ಹಿಂದಿ ಚಾನೆಲ್‌ಗಳು ಪ್ರಕರಣವನ್ನು ಕಾಲ್ಪನಿಕ ಲವ್‌ಜಿಹಾದ್‌ಗೆ ತಗಲು ಹಾಕಿ ದ್ವೇಷವನ್ನು ಬಿತ್ತುತ್ತಿದೆ. ಇದರ ವಿರುದ್ದ ಸಾಮಾಜಿಕ ಜಾತಲಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, “ಇದು ಇಂದಿನ ಪತ್ರಿಕೋದ್ಯಮದ ‘ಮಟ್ಟ’ !!! ರಾಷ್ಟ್ರೀಯ ಚಾನೆಲ್ ಮೂಲಕ ದ್ವೇಷ ಮತ್ತು ಭಯೋತ್ಪಾದನೆಯನ್ನು ಬಹಿರಂಗವಾಗಿ ಪ್ರಚೋದಿಸಲಾಗುತ್ತಿದೆ! ಅದ್ಭುತವಾಗಿದೆ! ಈಗ ನಾಶವು ತುಂಬಾ ದೂರವಿಲ್ಲ” ಎಂದು ಹೇಳಿದ್ದಾರೆ.

ಘಟನೆಯ ವಿಡಿಯೊವನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದು ನಾನುಗೌರಿ.ಕಾಂ ಫೇಸ್‌ಬುಕ್ ಪೇಜ್‌


 

ಇದನ್ನೂ ಓದಿ: ಸುಪ್ರೀಂಗೆ ಹೊಸ ನ್ಯಾಯಾಧೀಶರ ನೇಮಕಾತಿ: ಮಾಧ್ಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...