Homeಮುಖಪುಟಬಹುಜನ ಚಳವಳಿಯ ಚಿಂತಕಿ, ಸಮಾಜಶಾಸ್ತ್ರಜ್ಞೆ ಗೇಲ್ ಆಂವೆಡ್ತ್ (81) ನಿಧನ

ಬಹುಜನ ಚಳವಳಿಯ ಚಿಂತಕಿ, ಸಮಾಜಶಾಸ್ತ್ರಜ್ಞೆ ಗೇಲ್ ಆಂವೆಡ್ತ್ (81) ನಿಧನ

- Advertisement -
- Advertisement -

ಸಮಾಜಶಾಸ್ತ್ರಜ್ಞೆ, ಸ್ತ್ರೀವಾದಿ ಚಿಂತಕಿ, ಮಾನವ ಹಕ್ಕುಗಳ ಹೋರಾಟಗಾರ್ತಿ, ಜಾತಿ ವಿನಾಶ ಚಳುವಳಿಯ ಬಹು ಮುಖ್ಯ ಧ್ವನಿ, ಬಹುಜನ ಚಳವಳಿಯ ಮೇರು ಚಿಂತಕರಲ್ಲಿ ಒಬ್ಬರಾಗಿದ್ದ 81 ವರ್ಷದ ಗೇಲ್ ಆಂವೆಡ್ತ್ ಇಂದು (ಆಗಸ್ಟ್ 25) ನಿಧನರಾಗಿದ್ದಾರೆ.

ಗೇಲ್ ಆಂವೆಡ್ತ್ ಅಮೆರಿಕ ಮೂಲದ ಭಾರತೀಯ ವಿದ್ವಾಂಸರಾಗಿದ್ದು, ದಲಿತ ರಾಜಕೀಯ, ಮಹಿಳಾ ಹೋರಾಟ ಮತ್ತು ಜಾತಿ ವಿರೋಧಿ ಚಳವಳಿಯ ಕುರಿತು ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಕೊಯ್ನಾ ಅಣೆಕಟ್ಟಿನಿಂದ ಸ್ಥಳಾಂತರಗೊಂಡ ಜನರ ಹಕ್ಕುಗಳನ್ನು ಉಳಿಸುವ ಹೋರಾಟ ಸೇರಿದಂತೆ ದೇಶದ ವಿವಿಧ ಚಳುವಳಿಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅಮೆರಿಕಾದಲ್ಲಿ ಜನಿಸಿದ ಗೇಲ್ ತಮ್ಮ ಪಿಎಚ್‌ಡಿ ಅಧ್ಯಯನಕ್ಕೆಂದು ಭಾರತಕ್ಕೆ ಬಂದವರು. ‘ಅಂಬೇಡ್ಕರ್ ಚಿಂತನೆ ಮತ್ತು ಹೋರಾಟ’ದ ಬಗ್ಗೆ ಅಧ್ಯಯನ ಮಾಡಿ ಡಾಕ್ಟರೇಟ್ ಪಡೆದು ಭಾರತದಲ್ಲಿಯೇ ನೆಲೆಸಿದರು. ತಮ್ಮ ಸಂಗಾತಿ, ಹೋರಾಟಗಾರ ಭರತ್ ಪಟ್ನಾಕರ್ ಜೊತೆಗೂಡಿ ತಮ್ಮ ಇಡೀ ಬದುಕನ್ನು ದಮನಿತ ಸಮುದಾಯಗಳ ಪರ ಹೋರಾಟಗಳಿಗೆ, ದಮನಿತ ಸಮುದಾಯಗಳ ಅಧ್ಯಯನಕ್ಕೆ ಮುಡುಪಾಗಿಟ್ಟವರು.

ಇದನ್ನೂ ಓದಿ: ಹೋರಾಟಗಾರ, ಬಂಡಾಯ ಲೇಖಕ ಡಾ.ಎಂ.ಚಿತ್ರಲಿಂಗಸ್ವಾಮಿ(54) ನಿಧನ

ಸಂಶೋಧಕಿ, ಲೇಖಕಿ ಮತ್ತು ಬಹುಜನ ಚಳುವಳಿಯ ಬೌದ್ಧಿಕ ಧ್ವನಿಗಳಲ್ಲಿ ಒಂದಾದ ಗೇಲ್ ಆಂವೆಡ್ತ್, ತಮ್ಮ ಪ್ರಖರ ಬೌದ್ಧಿಕತೆಯ ಮೂಲಕ ಅಂಬೇಡ್ಕರ್ ಚಿಂತನೆ ಮತ್ತು ದಲಿತ ಅಧ್ಯಯನವನ್ನು ವಿಶ್ವಮಟ್ಟಕ್ಕೆ ಬೆಳೆಸಿದವರು.

ಭಾರತದಲ್ಲಿ ವಾಸಿಸಲು ನಿರ್ಧರಿಸಿದ ನಂತರ, ಹಿರಿಯ ಸಾಮಾಜಿಕ ಹೋರಾಟಗಾರ್ತಿ ಇಂದುತಾಯಿ ಪಟ್ನಾಕರ್ (Indumati Babuji Patankar) ಅವರೊಂದಿಗಿನ ಒಡನಾಟವು ದೇಶದಲ್ಲಿ ಮಹಿಳಾ ಹೋರಾಟಗಳ ಕುರಿತು ಅಧ್ಯಯನ ಮಾಡಲು ಮತ್ತು ಹೋರಾಟಗಳಲ್ಲಿ ಭಾಗವಹಿಸಲು ಪ್ರೇರೆಪಣೆ ನೀಡಿತು.

ತಮ್ಮ ಪತಿ, ಹೋರಾಟಗಾರ ಭರತ್ ಪಟ್ನಾಕರ್ ಜೊತೆಗೂಡಿ ಶ್ರಮಿಕ್ ಮುಕ್ತಿ ದಳವನ್ನು ಸ್ಥಾಪಿಸಿದವರು. ಪುಣೆ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದ ಫುಲೆ-ಅಂಬೇಡ್ಕರ್ ಪೀಠದ ಮುಖ್ಯಸ್ಥರಾಗಿದ್ದರು. ಕೋಪನ್‌ಹೆಗನ್‌ನ Institute of Asian studies ನಲ್ಲಿ ಪ್ರಾಧ್ಯಾಪರಾಗಿದ್ದರು. ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಹೊಸದಿಲ್ಲಿಯ ಗ್ರಂಥಾಲಯಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ.

ಇವರು 25 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅದರಲ್ಲಿ ಇನ್ ಕಲೋನಿಯಲ್ ಸೊಸೈಟಿ-ನಾನ್ ಬ್ರಾಹ್ಮಿಣ್ ಮೂಮೆಂಟ್ ಇನ್ ವೆಸ್ಟ್ರನ್ ಇಂಡಿಯಾ, ಸೀಕಿಂಗ್ ಆಪ್ ಬೇಗಂಪುರ, ಬುದ್ದಿಸಮ್ ಇನ್ ಇಂಡಿಯಾ, ಡಾ ಬಾಬಾಸಾಹೇಬ್ ಅಂಬೇಡ್ಕರ್, ಮಹಾತ್ಮ ಫುಲೆ, ದಲಿತ್ ಅಂಡ್‌ ಡೆಮಾಕ್ರಿಟಿಕ್ ರೆವಲ್ಯೂಷನ್, ಅಂಡರ್‌ಸ್ಟಾಂಡಿಂಗ್ ಕ್ಯಾಸ್ಟ್ ಮತ್ತು ನ್ಯೂ ಸೋಷಿಯಲ್ ಮೂಮೆಂಟ್ ಇನ್ ಇಂಡಿಯಾ ಪ್ರಮುಖವಾದವುಗಳು.

ಆಗಸ್ಟ್ 26 ರಂದು ಸಾಂಗ್ಲಿ ಜಿಲ್ಲೆಯ ಕಾಸೆಗಾಂವ್‌ನಲ್ಲಿ ಗೇಲ್ ಆಂವೆಡ್ತ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.


ಇದನ್ನೂ ಓದಿ: ಮಹಾ ಸಿಎಂಗೆ ಕಪಾಳಮೋಕ್ಷ ಹೇಳಿಕೆ: ಒಕ್ಕೂಟ ಸರ್ಕಾರದ ಸಚಿವ ಅರೆಸ್ಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...