Homeಮುಖಪುಟಬಹುಜನ ಚಳವಳಿಯ ಚಿಂತಕಿ, ಸಮಾಜಶಾಸ್ತ್ರಜ್ಞೆ ಗೇಲ್ ಆಂವೆಡ್ತ್ (81) ನಿಧನ

ಬಹುಜನ ಚಳವಳಿಯ ಚಿಂತಕಿ, ಸಮಾಜಶಾಸ್ತ್ರಜ್ಞೆ ಗೇಲ್ ಆಂವೆಡ್ತ್ (81) ನಿಧನ

- Advertisement -
- Advertisement -

ಸಮಾಜಶಾಸ್ತ್ರಜ್ಞೆ, ಸ್ತ್ರೀವಾದಿ ಚಿಂತಕಿ, ಮಾನವ ಹಕ್ಕುಗಳ ಹೋರಾಟಗಾರ್ತಿ, ಜಾತಿ ವಿನಾಶ ಚಳುವಳಿಯ ಬಹು ಮುಖ್ಯ ಧ್ವನಿ, ಬಹುಜನ ಚಳವಳಿಯ ಮೇರು ಚಿಂತಕರಲ್ಲಿ ಒಬ್ಬರಾಗಿದ್ದ 81 ವರ್ಷದ ಗೇಲ್ ಆಂವೆಡ್ತ್ ಇಂದು (ಆಗಸ್ಟ್ 25) ನಿಧನರಾಗಿದ್ದಾರೆ.

ಗೇಲ್ ಆಂವೆಡ್ತ್ ಅಮೆರಿಕ ಮೂಲದ ಭಾರತೀಯ ವಿದ್ವಾಂಸರಾಗಿದ್ದು, ದಲಿತ ರಾಜಕೀಯ, ಮಹಿಳಾ ಹೋರಾಟ ಮತ್ತು ಜಾತಿ ವಿರೋಧಿ ಚಳವಳಿಯ ಕುರಿತು ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಕೊಯ್ನಾ ಅಣೆಕಟ್ಟಿನಿಂದ ಸ್ಥಳಾಂತರಗೊಂಡ ಜನರ ಹಕ್ಕುಗಳನ್ನು ಉಳಿಸುವ ಹೋರಾಟ ಸೇರಿದಂತೆ ದೇಶದ ವಿವಿಧ ಚಳುವಳಿಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅಮೆರಿಕಾದಲ್ಲಿ ಜನಿಸಿದ ಗೇಲ್ ತಮ್ಮ ಪಿಎಚ್‌ಡಿ ಅಧ್ಯಯನಕ್ಕೆಂದು ಭಾರತಕ್ಕೆ ಬಂದವರು. ‘ಅಂಬೇಡ್ಕರ್ ಚಿಂತನೆ ಮತ್ತು ಹೋರಾಟ’ದ ಬಗ್ಗೆ ಅಧ್ಯಯನ ಮಾಡಿ ಡಾಕ್ಟರೇಟ್ ಪಡೆದು ಭಾರತದಲ್ಲಿಯೇ ನೆಲೆಸಿದರು. ತಮ್ಮ ಸಂಗಾತಿ, ಹೋರಾಟಗಾರ ಭರತ್ ಪಟ್ನಾಕರ್ ಜೊತೆಗೂಡಿ ತಮ್ಮ ಇಡೀ ಬದುಕನ್ನು ದಮನಿತ ಸಮುದಾಯಗಳ ಪರ ಹೋರಾಟಗಳಿಗೆ, ದಮನಿತ ಸಮುದಾಯಗಳ ಅಧ್ಯಯನಕ್ಕೆ ಮುಡುಪಾಗಿಟ್ಟವರು.

ಇದನ್ನೂ ಓದಿ: ಹೋರಾಟಗಾರ, ಬಂಡಾಯ ಲೇಖಕ ಡಾ.ಎಂ.ಚಿತ್ರಲಿಂಗಸ್ವಾಮಿ(54) ನಿಧನ

ಸಂಶೋಧಕಿ, ಲೇಖಕಿ ಮತ್ತು ಬಹುಜನ ಚಳುವಳಿಯ ಬೌದ್ಧಿಕ ಧ್ವನಿಗಳಲ್ಲಿ ಒಂದಾದ ಗೇಲ್ ಆಂವೆಡ್ತ್, ತಮ್ಮ ಪ್ರಖರ ಬೌದ್ಧಿಕತೆಯ ಮೂಲಕ ಅಂಬೇಡ್ಕರ್ ಚಿಂತನೆ ಮತ್ತು ದಲಿತ ಅಧ್ಯಯನವನ್ನು ವಿಶ್ವಮಟ್ಟಕ್ಕೆ ಬೆಳೆಸಿದವರು.

ಭಾರತದಲ್ಲಿ ವಾಸಿಸಲು ನಿರ್ಧರಿಸಿದ ನಂತರ, ಹಿರಿಯ ಸಾಮಾಜಿಕ ಹೋರಾಟಗಾರ್ತಿ ಇಂದುತಾಯಿ ಪಟ್ನಾಕರ್ (Indumati Babuji Patankar) ಅವರೊಂದಿಗಿನ ಒಡನಾಟವು ದೇಶದಲ್ಲಿ ಮಹಿಳಾ ಹೋರಾಟಗಳ ಕುರಿತು ಅಧ್ಯಯನ ಮಾಡಲು ಮತ್ತು ಹೋರಾಟಗಳಲ್ಲಿ ಭಾಗವಹಿಸಲು ಪ್ರೇರೆಪಣೆ ನೀಡಿತು.

ತಮ್ಮ ಪತಿ, ಹೋರಾಟಗಾರ ಭರತ್ ಪಟ್ನಾಕರ್ ಜೊತೆಗೂಡಿ ಶ್ರಮಿಕ್ ಮುಕ್ತಿ ದಳವನ್ನು ಸ್ಥಾಪಿಸಿದವರು. ಪುಣೆ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದ ಫುಲೆ-ಅಂಬೇಡ್ಕರ್ ಪೀಠದ ಮುಖ್ಯಸ್ಥರಾಗಿದ್ದರು. ಕೋಪನ್‌ಹೆಗನ್‌ನ Institute of Asian studies ನಲ್ಲಿ ಪ್ರಾಧ್ಯಾಪರಾಗಿದ್ದರು. ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಹೊಸದಿಲ್ಲಿಯ ಗ್ರಂಥಾಲಯಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ.

ಇವರು 25 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅದರಲ್ಲಿ ಇನ್ ಕಲೋನಿಯಲ್ ಸೊಸೈಟಿ-ನಾನ್ ಬ್ರಾಹ್ಮಿಣ್ ಮೂಮೆಂಟ್ ಇನ್ ವೆಸ್ಟ್ರನ್ ಇಂಡಿಯಾ, ಸೀಕಿಂಗ್ ಆಪ್ ಬೇಗಂಪುರ, ಬುದ್ದಿಸಮ್ ಇನ್ ಇಂಡಿಯಾ, ಡಾ ಬಾಬಾಸಾಹೇಬ್ ಅಂಬೇಡ್ಕರ್, ಮಹಾತ್ಮ ಫುಲೆ, ದಲಿತ್ ಅಂಡ್‌ ಡೆಮಾಕ್ರಿಟಿಕ್ ರೆವಲ್ಯೂಷನ್, ಅಂಡರ್‌ಸ್ಟಾಂಡಿಂಗ್ ಕ್ಯಾಸ್ಟ್ ಮತ್ತು ನ್ಯೂ ಸೋಷಿಯಲ್ ಮೂಮೆಂಟ್ ಇನ್ ಇಂಡಿಯಾ ಪ್ರಮುಖವಾದವುಗಳು.

ಆಗಸ್ಟ್ 26 ರಂದು ಸಾಂಗ್ಲಿ ಜಿಲ್ಲೆಯ ಕಾಸೆಗಾಂವ್‌ನಲ್ಲಿ ಗೇಲ್ ಆಂವೆಡ್ತ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.


ಇದನ್ನೂ ಓದಿ: ಮಹಾ ಸಿಎಂಗೆ ಕಪಾಳಮೋಕ್ಷ ಹೇಳಿಕೆ: ಒಕ್ಕೂಟ ಸರ್ಕಾರದ ಸಚಿವ ಅರೆಸ್ಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...