Homeಮುಖಪುಟಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ...

ಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ ಮಾರಾಟಗೊಂಡ ಸಂಸ್ಥೆಗಳ ಪಟ್ಟಿ ಇಲ್ಲಿದೆ

- Advertisement -
- Advertisement -

ಸೋಮವಾರ (ಆಗಸ್ಟ್ 23) ಕೇಂದ್ರದ ಹಣಕಾಸು ಇಲಾಖೆಯು ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ವಿತ್ತೀಯ ಕೊರತೆ ನೀಗಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ಹಲವು ಕಂಪನಿಗಳಲ್ಲಿ ಬಂಡವಾಳ ಹಿಂಪಡೆತ ಮತ್ತು ಖಾಸಗೀಕರಣದಂತಹ ಯೋಜನೆಗಳಿಗೆ ಒಕ್ಕೂಟ ಸರ್ಕಾರ ಚಾಲನೆ ನೀಡಿದೆ. ಇದರ ಜೊತೆಯಲ್ಲೇ ಈಗ 4 ವರ್ಷಗಳ ಅವಧಿಗೆ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂಲಭೂತ ಸೌಲಭ್ಯಗಳ ಖಾಸಗೀಕರಣದ ಯೋಜನೆಯನ್ನು ಘೋಷಿಸಿದೆ.

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿಯಲ್ಲಿ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ. ಇದರ ಮೂಲಕ ಸರ್ಕಾರಿ- ಖಾಸಗಿ ವಲಯಗಳು ಭಾಗಿ ಆಗಬಹುದು. ಆಸ್ತಿಯನ್ನು ಖಾಸಗಿಯವರು ಮಾರಾಟ ಮಾಡುತ್ತಿಲ್ಲ. ಆಸ್ತಿಯ ಮಾಲೀಕತ್ವ ಸರ್ಕಾರದ ಬಳಿಯೇ ಇರುತ್ತದೆ. ಕಡ್ಡಾಯವಾಗಿ ಆಸ್ತಿಯನ್ನು ಸರ್ಕಾರಕ್ಕೆ ವಾಪಸ್ ನೀಡಬೇಕು ಎನ್ನಲಾಗಿದೆ.

ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿ ಭಾರತೀಯ ರೈಲ್ವೆ, ವಿಮಾನ ನಿಲ್ದಾಣಗಳು ಮತ್ತು ಕಲ್ಲಿದ್ದಲು ಗಣಿಯನ್ನು ಮುಖ್ಯವಾಗಿ ಖಾಸಗೀಕರಣಗೊಳಿಸಲು ಆಯ್ದೆ ಮಾಡಿಕೊಳ್ಳಲಾಗಿದೆ.

ಇದರಲ್ಲಿ 15 ರೈಲ್ವೆ ಸ್ಟೇಡಿಯಂಗಳು, 25 ವಿಮಾನ ನಿಲ್ದಾಣಗಳು ಮತ್ತು 160 ಕಲ್ಲಿದ್ದಲು ಗಣಿಗಾರಿಕೆ ಯೋಜನೆಗಳನ್ನು ಖಾಸಗೀಕರಣಗೊಳಿಸಲಾಗುವುದು. ಇದರ ಹೊರತಾಗಿ ರಸ್ತೆ, ವಿದ್ಯುತ್ ಪೂರೈಕೆ ವ್ಯವಸ್ಥೆ ಮತ್ತು ಗ್ಯಾಸ್ ಪೈಪ್ ಲೈನ್‌ಗಳನ್ನೂ ಖಾಸಗೀಕರಣಗೊಳಿಸಲಾಗುತ್ತದೆ.

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೆ ಬಂದಾಗಿನಿಂದ ದೇಶದ ಆಸ್ತಿಯನ್ನು ಮಾರಾಟ ಮಾಡುವುದು ಮತ್ತು ಖಾಸಗೀಕರಣಗೊಳಿಸುವ ಪ್ರಕ್ರಿಯೆ ನಡೆಯುತ್ತಲೇ ಇದೆ. ಸಾಮಾಜಿಕ ಹೋರಾಟಗಾರರು ಬ್ಯಾಂಕ್ ನೌಕರರು, ರೈತರು, ವಿದ್ಯಾರ್ಥಿಗಳು ಈ ಬಗ್ಗೆ ದನಿ ಎತ್ತಿದರೂ ಸರ್ಕಾರ ಮಾತ್ರ ಖಾಸಗೀಕರಣಗೊಳಿಸುವ ಪ್ರಕ್ರಿಯೆ ಮುಂದುವರೆಸುತ್ತಿದೆ.

ಈಗಾಗಲೇ ಮಾರಾಟವಾಗಿರುವ ಸಂಸ್ಥೆಗಳು

ಏರ್ ಇಂಡಿಯಾ

ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ(SCI)

ಕಂಟೇನರ್ ಕಾರ್ಪೊರೇಷನ್ ಆಫ್ ಇಂಡಿಯಾ (CONCOR)

ಬೆಮೆಲ್

ಹಿಂದೂಸ್ತಾನ್ ಮಷೀನ್ ಟೂಲ್ಸ್ ಲಿಮಿಟೆಡ್ (HMT)

ನೀಲಾಚಲ ಇಸ್ಪತ್ ನಿಗಮ್ ಲಿಮಿಟೆಡ್ (NINS)

ಪವನ್ ಹನ್ಸ್ ಲಿಮಿಟೆಡ್

ಭಾರತ್ ಅರ್ಥ್ ಮೂವರ್‍ಸ್ ಲಿಮಿಟೆಡ್ (BEML)

ಆಸ್ಪತ್ರೆ ಸೇವೆಗಳ ಸಲಹಾ ಲಿಮಿಟೆಡ್ (HSCCL)

ಎಂಜಿನಿಯರಿಂಗ್ ಪ್ರಾಜೆಕ್ಟ್(ಇಂಡಿಯಾ)ಲಿ.

ಫೆರೋ ಸ್ಕ್ರಾಪ್ ನಿಗಮ್ ಲಿಮಿಟೆಡ್ (FSNL)

ಎಚ್‌ಎಲ್‌ಎಲ್ ಲೈಫ್ ಕೇರ್‌

ರಾಷ್ಟ್ರೀಯ ಯೋಜನೆ ನಿರ್ಮಾಣ ನಿಗಮ (NPCC)

ಸ್ಕೂಟರ್ಸ್ ಇಂಡಿಯಾ ಲಿಮಿಟೆಡ್

ಸೆಂಟ್ರಲ್ ಎಲೆಕ್ಟ್ರಾನಿಕ್ ಲಿಮಿಟೆಡ್(CEL)

ಸಿಮೆಂಟ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ (CCIL) (ನಯಾಂಗಾವ್ ಘಟಕ)

ಬ್ರೀಡ್ಜ್ ಮತ್ತು ರೂಫ್ ಕಂ ಇಂಡಿಯಾ ಲಿಮಿಟೆಡ್

ಇಂಡಿಯನ್ ಮೆಡಿಸಿನ್ ಮತ್ತು ಫಾರ್ಮಸ್ಯೂಟಿಕಲ್ ಕಾರ್ಪೋರೇಷನ್ ಲಿಮಿಟೆಡ್ (IMPCL) ಸೇರಿ ಆರು ವಿಮಾನ ನಿಲ್ದಾಣ ಈಗಾಗಲೇ ಖಾಸಗೀಕರಣಗೊಂಡಿವೆ.

ಮುಂದೆ ಮಾರಲು ಸಿದ್ದಗೊಂಡಿರುವ ಸಂಸ್ಥೆಗಳು

150 ರೈಲುಗಳನ್ನು ಮತ್ತು 50 ರೈಲು ನಿಲ್ದಾಣಗಳನ್ನು ಸರ್ಕಾರವು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಸದ್ದಿಲ್ಲದೆ ನಡೆದಿದೆ.

ಭಾರತೀಯ ರೈಲ್ವೇ

ಲೈಫ್ ಇನ್ಸೂರೆನ್ಸ್ ಕಾರ್ಪೋರೇಷನ್ (LIC)

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್)

ಪಂಜಾಬ್ ಸಿಂಧ್ ಬ್ಯಾಂಕ್

ಬ್ಯಾಂಕ್ ಆಫ್ ಮಹಾರಾಷ್ಟ್ರ

ಇಂಡಿಯನ್ ಓವರ್ ಸೀಸ್ ಬ್ಯಾಂಕ್

ಕಲ್ಲಿದ್ದಲು ಗಣಿಗಾರಿಕೆ

ರೈಲ್ವೆ ಸ್ಟೇಡಿಯಂಗಳು

ವಿದ್ಯುತ್ ಪೂರೈಕೆ ವ್ಯವಸ್ಥೆ

BSNL… ಇವೆಲ್ಲವೂ ಮಾರಾಟದ ಸಾಲಿನಲ್ಲಿವೆ.

ಇನ್ನು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಮಾ.15 ಮತ್ತು16 ರಂದು ಪ್ರತಿಭಟನೆ ನಡೆಸಿದೆ.

ಒಕ್ಕೂಟ ಸರ್ಕಾರದ ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 70 ವರ್ಷಗಳಲ್ಲಿ ಏನೂ ಅಭಿವೃದ್ಧಿಯಾಗಿಲ್ಲ ಎನ್ನುವ ಬಿಜೆಪಿ, ಆ ಅವಧಿಯಲ್ಲಿ ಜನರ ಹಣದಿಂದ ನಿರ್ಮಿಸಿದ ಎಲ್ಲಾ ಆಸ್ತಿಯನ್ನು ತಮ್ಮ ಎರಡು-ಮೂರು ಉದ್ಯಮಿ ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲಾಗುತ್ತಿದೆ ಎಂದಿದ್ದಾರೆ.


ಇದನ್ನೂ ಓದಿ: ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಾರ್ವಜನಿಕ ಆಸ್ತಿಯ ಅನಾಹುತಕಾರಿ ಮಾರಾಟವನ್ನು ರಾಷ್ಟ್ರದ ಜನತೆ ಒಕ್ಕೊರಲಿನಿಂದ ವಿರೋಧಿಸಬೇಕಾದ ಸಂದರ್ಭದಲ್ಲಿ ಯಾರೂ ಮಾತಾಡುತ್ತಿಲ್ಲ! ಈ ವಿಕ್ಷಿಪ್ತ ಕಾಲದಲ್ಲಿ, ರಾಹುಲ್ ಧ್ವನಿ ಒಂಟಿಯಾಗಿದೆ! ಬ್ಯಾಂಕ್ ಗಳ ಒಟ್ಟುಗೂಡಿಸುವಿಕೆ ಕೂಡಾ ಇದಕ್ಕಾಗಿಯೇ ಮಾಡಿದ್ದ ಹಿಡನ್ ಅಜೆಂಡಾ ಎಂದು ನನಗೆ ಮೊದಲೇ ಅನ್ನಿಸಿದೆ. ಬೆಕ್ಕಿಗೆ ಗಂಟೆ ಕಟ್ಟಬೇಕಾದ ವಿರೋಧ ಪಕ್ಷಗಳು ಬಲಹೀನವಾಗಿವೆ. ದುರ್ಬಲರಾದ ನಾವು, ಧರ್ಮಗ್ಲಾನಿಯ ಸಂದರ್ಭದಲ್ಲಿ ಕೃಷ್ಣ ಬರುವನೆಂದು ಕೈಕಟ್ಟಿ ಕುಳಿತಿದ್ದೇವೆ!

  2. sama vishamategala sangamavidu; adalita paksha halavaru paksha sadashyarannu serisikondu munnadeyuttide; aste satya.
    moovaru mukhya mantrigalu shasakariruvaga adarante halavu dy. mukhya mantrigalalagui karya nirvahisidavar sangama sthalavidu. yella paksha ghanategalannu kapaduva HONE ADALITAPAKSHADDE YIRUTEE ade “VIDHAN SOUDHA KARYA KALAPA VYAPTI> DHANYAVADA>
    Manjanatha Seetharamaiah
    Yestt6ierdaioty 6naot51t 07:d50h ·

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...