Homeರಾಜಕೀಯಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

ಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

- Advertisement -
- Advertisement -

ಟಿ.ಎನ್ ಷಣ್ಮುಖ |

ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ತನ್ನ ಪಾರಂಪರಿಕ `ಕೈ’ ಪ್ರಾಬಲ್ಯವನ್ನೇ ಈ ಸಲವೂ ಮುಂದುವರೆಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಎಲೆಕ್ಷನ್‍ನಲ್ಲಿ ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರೆ ತಲಾ ಒಂದರಲ್ಲಿ ಬಿಜೆಪಿ ಮತ್ತು ಬಿಎಸ್‍ಆರ್ ಕಾಂಗ್ರೆಸ್ ಹುರಿಯಾಳುಗಳು ವಿಜಯಪತಾಕೆ ಹಾರಿಸಿದ್ದರು.

ಬಳ್ಳಾರಿ ಗಣಿ ಮಾಫಿಯಾದ ಶ್ರೀರಾಮುಲು ಮೊಳಕಾಲ್ಮೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋದು ಕುತೂಹಲದ ಸಂಗತಿ. ಆತನಿಗೆ ಎದುರಾಗಿ ಕಾಂಗ್ರೆಸ್‍ನಿಂದ ಯೋಗೀಶ್ ಬಾಬು, ಜೆಡಿಎಸ್‍ನಿಂದ ಸತತ ನಾಲ್ಕು ಬಾರಿ ಸೋತಿರುವ ಯತ್ನಟ್ಟಿ ಗೌಡ ಕಣದಲ್ಲಿದ್ದಾರೆ. ಇಲ್ಲಿ ರಾಮುಲು ಸ್ಪರ್ಧೆ ಸಂಚಲನ ಮೂಡಿಸಿದ್ದರೂ ಗೆಲುವು ಅಷ್ಟು ಸುಲಭದ ತುತ್ತಲ್ಲ. ಬಿಜೆಪಿ ಟಿಕೇಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದಿರುವ ತಿಪ್ಪೇಸ್ವಾಮಿಯ ಬಂಡಾಯ ಶ್ರೀರಾಮುಲುಗೆ ಬಿಸಿ ತುಪ್ಪವಾಗುವ ಸಾಧ್ಯತೆಯಿದೆ. ಯಾವ ನಾಯಕರ ಸ್ವಜಾತಿ ಮತಗಳನ್ನು ನಂಬಿ ರಾಮುಲು ಇಲ್ಲಿಗೆ ಕಾಲಿಟ್ಟಿದ್ದಾನೊ ಆ ಸಮುದಾಯದ ಒಳಜಾತಿ ಬೇಗುದಿಗೆ ತಿಪ್ಪೇಸ್ವಾಮಿ ಒಳಗಿಂದೊಳಗೇ ತುಪ್ಪ ಸುರಿಯುವ ಯತ್ನ ನಡೆಸಿದ್ದಾನೆ. ಜಾತ್ಯಸ್ಥ ಚಿತ್ರನಟ ಸುದೀಪ್‍ನನ್ನು ಕರೆಸಿ ಒಂದುಸುತ್ತು ಪ್ರಚಾರ ನಡೆಸಿರುವ ರಾಮುಲು ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿರುವಂತೆ ಕಂಡುಬಂದರೂ ಕಾಂಗ್ರೆಸ್‍ನ ಬಾಬು ಟಫ್ ಕಾಂಪಿಟೇಶನ್ ಕೊಡುತ್ತಿದ್ದಾನೆ.

ಚಳ್ಳಕೆರೆಯಲ್ಲಿ ಖುದ್ದು ಅಮಿತ್ ಶಾನೇ ಸ್ಪರ್ಧಿಸಿದರೂ ಕಾಂಗ್ರೆಸಿನ ರಘುಮೂರ್ತಿಯೆದುರು ಗೆಲ್ಲುವುದು ಕಷ್ಟ ಅಂತ ಅಲ್ಲಿನ ಜನ ಮಾತಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯಿಂದ ಮಾಜಿ ಸಚಿವ ತಿಪ್ಪೇಸ್ವಾಮಿ ಮಗ ಕೆಟಿ ಕುಮಾರಸ್ವಾಮಿ ಹಾಗೂ ಜೆಡಿಎಸ್‍ನಿಂದ ರವೀಶ್ ಕುಮಾರ್‍ರ ಸ್ಪರ್ಧೆ, ಶಾಸಕನಾಗಿ ರಘುಮೂರ್ತಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮುಂದೆ ಸಪ್ಪೆ ಎನಿಸುವಂತಿದೆ.

ಹಿರಿಯೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಕಾಂಗ್ರೆಸಿನ ಸುಧಾಕರ್‍ಗೆ ಎದುರಾಗಿ ಬಿಜೆಪಿಯಿಂದ ಪೂರ್ಣಿಮಾ ಶ್ರೀನಿವಾಸ್, ಜೆಡಿಎಸ್‍ನಿಂದ ಯಶೋಧರ ಕಣದಲ್ಲಿದ್ದಾರೆ. ತನ್ನ ತಂದೆ ಕೃಷ್ಣಪ್ಪನ ನಾಮಬಲದ ಮೇಲೆ ಸ್ಪರ್ಧಿಸಿರುವ ಪೂರ್ಣಿಮ ಸ್ವಜಾತಿ ಯಾದವರ ಮತವನ್ನು ನಂಬಿಕೊಂಡಿದ್ದಾರೆ. ಮತ್ತೊಂದೆಡೆ ಜೆಡಿಎಸ್‍ನ ಯಶೋಧರ ಒಕ್ಕಲಿಗ ಮತ ನಂಬಿ ಕಣದಲ್ಲಿದ್ದಾರೆ. ಜನ ಬಳಕೆ ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಸೈ ಎನಿಸಿಕೊಂಡಿರುವ ಕೈ ಪಾರ್ಟಿಯ ಸುಧಾಕರನದ್ದೇ ಇಲ್ಲಿ ಹವಾ ಜೋರಾಗಿದೆ.

ಹೊಸದುರ್ಗದಲ್ಲಿ ಕಾಂಗ್ರೆಸ್‍ನಿಂದ ಹಾಲಿ ಶಾಸಕ ಗೋವಿಂದಪ್ಪ, ಬಿಜೆಪಿಯಿಂದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಜೆಡಿಎಸ್‍ನಿಂದ ಚಿತ್ರನಟ ಶಶಿಕುಮಾರ್ ಕಣದಲ್ಲಿದ್ದಾರೆ. ಶಶಿಕುಮಾರ್ ಒಂದಷ್ಟು ಕಾಂಗ್ರೆಸ್‍ನ ಮತಗಳಿಗೇ ಲಗ್ಗೆ ಹಾಕುವ ಸಾಧ್ಯತೆ ಇರೋದರಿಂದ ಈ ಬಾರಿ ಗೋವಿಂದಪ್ಪನಿಗೆ ಗೂಳಿ ಗುಮ್ಮುವ ಲಕ್ಷಣಗಳು ದಟ್ಟವಾಗಿವೆ.

ಚಿತ್ರದುರ್ಗದಲ್ಲಿ ಕಾಂಗ್ರೆಸ್‍ನ ಹನುಮಲಿ ಷಣ್ಮುಖಪ್ಪ, ಜೆಡಿಎಸ್‍ನ ವಿರೇಂದ್ರ ಬಿಜೆಪಿಯ ಹಾಲಿ ಶಾಸಕ ತಿಪ್ಪಾರೆಡ್ಡಿಯ ಬೆವರಿಳಿಸುತ್ತಿದ್ದಾರೆ. ಷಣ್ಮುಖಪ್ಪ ಮತ್ತು ವೀರೇಂದ್ರ ಕುಮಾರ ಅಲಿಯಾಸ್ ಪಪ್ಪಿ,ಇಬ್ಬರೂ ಲಿಂಗಾಯತರಾದ್ದರಿಂದ ಲಿಂಗಾಯತ ಮತಗಳು ಹಂಚಿಹೋಗುವ ಸಾಧ್ಯತೆಯಿದೆ. ಆದಾಗ್ಯೂ ಕ್ಷೇತ್ರದಲ್ಲಿ ದಟ್ಟವಾಗಿರುವ ಮುಸ್ಲಿಂ, ನಾಯಕರು, ಕುರುಬರು, ದಲಿತರು ಮೊದಲಾದ ಅಹಿಂದ ಮತಗಳು ಷಣ್ಮುಖಪ್ಪನತ್ತ ದೃಷ್ಟಿ ಹರಿಸುತ್ತಿವೆ. ತ್ರಿಕೋನ ಸ್ಪರ್ಧೆಯಂತೆ ಕಂಡುಬಂದರೂ ಗೆಲುವು ಬಿಜೆಪಿ, ಕಾಂಗ್ರೆಸ್ ನಡುವೆ ತೂಗಾಡುತ್ತಿದೆ.

ಹೊಳಲ್ಕೆರೆಯಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಆಂಜನೇಯ ಮತ್ತು ಬಿಜೆಪಿಯ ಮಾಜಿ ಶಾಸಕ ಚಂದ್ರಪ್ಪನ ನಡುವೆಯೇ ನೇರ ಹಣಾಹಣಿ. ಜೆಡಿಎಸ್‍ನ ಶ್ರೀನಿವಾಸ್ ಗದ್ದಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ. ಸದ್ಯದ ಮಟ್ಟಿಗೆ ಆಂಜನೇಯರ ಗೆಲುವೇ ಎದ್ದು ಕಾಣುತ್ತಿದೆ. ಬಿಜೆಪಿ ಟಿಕೇಟ್ ಸಿಗದ ಕಾರಣಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹನುಮಕ್ಕನಿಗೆ ಬಿಜೆಪಿಯವರೇ ಸಾಥ್ ನೀಡುತ್ತಿರೋದು ಚಂದ್ರಪ್ಪನನ್ನು ಗೆಲುವಿನಿಂದ ದೂರಾಗಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...