Homeರಾಜಕೀಯಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

ಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

- Advertisement -
- Advertisement -

ಟಿ.ಎನ್ ಷಣ್ಮುಖ |

ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ತನ್ನ ಪಾರಂಪರಿಕ `ಕೈ’ ಪ್ರಾಬಲ್ಯವನ್ನೇ ಈ ಸಲವೂ ಮುಂದುವರೆಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಎಲೆಕ್ಷನ್‍ನಲ್ಲಿ ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರೆ ತಲಾ ಒಂದರಲ್ಲಿ ಬಿಜೆಪಿ ಮತ್ತು ಬಿಎಸ್‍ಆರ್ ಕಾಂಗ್ರೆಸ್ ಹುರಿಯಾಳುಗಳು ವಿಜಯಪತಾಕೆ ಹಾರಿಸಿದ್ದರು.

ಬಳ್ಳಾರಿ ಗಣಿ ಮಾಫಿಯಾದ ಶ್ರೀರಾಮುಲು ಮೊಳಕಾಲ್ಮೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋದು ಕುತೂಹಲದ ಸಂಗತಿ. ಆತನಿಗೆ ಎದುರಾಗಿ ಕಾಂಗ್ರೆಸ್‍ನಿಂದ ಯೋಗೀಶ್ ಬಾಬು, ಜೆಡಿಎಸ್‍ನಿಂದ ಸತತ ನಾಲ್ಕು ಬಾರಿ ಸೋತಿರುವ ಯತ್ನಟ್ಟಿ ಗೌಡ ಕಣದಲ್ಲಿದ್ದಾರೆ. ಇಲ್ಲಿ ರಾಮುಲು ಸ್ಪರ್ಧೆ ಸಂಚಲನ ಮೂಡಿಸಿದ್ದರೂ ಗೆಲುವು ಅಷ್ಟು ಸುಲಭದ ತುತ್ತಲ್ಲ. ಬಿಜೆಪಿ ಟಿಕೇಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದಿರುವ ತಿಪ್ಪೇಸ್ವಾಮಿಯ ಬಂಡಾಯ ಶ್ರೀರಾಮುಲುಗೆ ಬಿಸಿ ತುಪ್ಪವಾಗುವ ಸಾಧ್ಯತೆಯಿದೆ. ಯಾವ ನಾಯಕರ ಸ್ವಜಾತಿ ಮತಗಳನ್ನು ನಂಬಿ ರಾಮುಲು ಇಲ್ಲಿಗೆ ಕಾಲಿಟ್ಟಿದ್ದಾನೊ ಆ ಸಮುದಾಯದ ಒಳಜಾತಿ ಬೇಗುದಿಗೆ ತಿಪ್ಪೇಸ್ವಾಮಿ ಒಳಗಿಂದೊಳಗೇ ತುಪ್ಪ ಸುರಿಯುವ ಯತ್ನ ನಡೆಸಿದ್ದಾನೆ. ಜಾತ್ಯಸ್ಥ ಚಿತ್ರನಟ ಸುದೀಪ್‍ನನ್ನು ಕರೆಸಿ ಒಂದುಸುತ್ತು ಪ್ರಚಾರ ನಡೆಸಿರುವ ರಾಮುಲು ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿರುವಂತೆ ಕಂಡುಬಂದರೂ ಕಾಂಗ್ರೆಸ್‍ನ ಬಾಬು ಟಫ್ ಕಾಂಪಿಟೇಶನ್ ಕೊಡುತ್ತಿದ್ದಾನೆ.

ಚಳ್ಳಕೆರೆಯಲ್ಲಿ ಖುದ್ದು ಅಮಿತ್ ಶಾನೇ ಸ್ಪರ್ಧಿಸಿದರೂ ಕಾಂಗ್ರೆಸಿನ ರಘುಮೂರ್ತಿಯೆದುರು ಗೆಲ್ಲುವುದು ಕಷ್ಟ ಅಂತ ಅಲ್ಲಿನ ಜನ ಮಾತಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯಿಂದ ಮಾಜಿ ಸಚಿವ ತಿಪ್ಪೇಸ್ವಾಮಿ ಮಗ ಕೆಟಿ ಕುಮಾರಸ್ವಾಮಿ ಹಾಗೂ ಜೆಡಿಎಸ್‍ನಿಂದ ರವೀಶ್ ಕುಮಾರ್‍ರ ಸ್ಪರ್ಧೆ, ಶಾಸಕನಾಗಿ ರಘುಮೂರ್ತಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮುಂದೆ ಸಪ್ಪೆ ಎನಿಸುವಂತಿದೆ.

ಹಿರಿಯೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಕಾಂಗ್ರೆಸಿನ ಸುಧಾಕರ್‍ಗೆ ಎದುರಾಗಿ ಬಿಜೆಪಿಯಿಂದ ಪೂರ್ಣಿಮಾ ಶ್ರೀನಿವಾಸ್, ಜೆಡಿಎಸ್‍ನಿಂದ ಯಶೋಧರ ಕಣದಲ್ಲಿದ್ದಾರೆ. ತನ್ನ ತಂದೆ ಕೃಷ್ಣಪ್ಪನ ನಾಮಬಲದ ಮೇಲೆ ಸ್ಪರ್ಧಿಸಿರುವ ಪೂರ್ಣಿಮ ಸ್ವಜಾತಿ ಯಾದವರ ಮತವನ್ನು ನಂಬಿಕೊಂಡಿದ್ದಾರೆ. ಮತ್ತೊಂದೆಡೆ ಜೆಡಿಎಸ್‍ನ ಯಶೋಧರ ಒಕ್ಕಲಿಗ ಮತ ನಂಬಿ ಕಣದಲ್ಲಿದ್ದಾರೆ. ಜನ ಬಳಕೆ ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಸೈ ಎನಿಸಿಕೊಂಡಿರುವ ಕೈ ಪಾರ್ಟಿಯ ಸುಧಾಕರನದ್ದೇ ಇಲ್ಲಿ ಹವಾ ಜೋರಾಗಿದೆ.

ಹೊಸದುರ್ಗದಲ್ಲಿ ಕಾಂಗ್ರೆಸ್‍ನಿಂದ ಹಾಲಿ ಶಾಸಕ ಗೋವಿಂದಪ್ಪ, ಬಿಜೆಪಿಯಿಂದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಜೆಡಿಎಸ್‍ನಿಂದ ಚಿತ್ರನಟ ಶಶಿಕುಮಾರ್ ಕಣದಲ್ಲಿದ್ದಾರೆ. ಶಶಿಕುಮಾರ್ ಒಂದಷ್ಟು ಕಾಂಗ್ರೆಸ್‍ನ ಮತಗಳಿಗೇ ಲಗ್ಗೆ ಹಾಕುವ ಸಾಧ್ಯತೆ ಇರೋದರಿಂದ ಈ ಬಾರಿ ಗೋವಿಂದಪ್ಪನಿಗೆ ಗೂಳಿ ಗುಮ್ಮುವ ಲಕ್ಷಣಗಳು ದಟ್ಟವಾಗಿವೆ.

ಚಿತ್ರದುರ್ಗದಲ್ಲಿ ಕಾಂಗ್ರೆಸ್‍ನ ಹನುಮಲಿ ಷಣ್ಮುಖಪ್ಪ, ಜೆಡಿಎಸ್‍ನ ವಿರೇಂದ್ರ ಬಿಜೆಪಿಯ ಹಾಲಿ ಶಾಸಕ ತಿಪ್ಪಾರೆಡ್ಡಿಯ ಬೆವರಿಳಿಸುತ್ತಿದ್ದಾರೆ. ಷಣ್ಮುಖಪ್ಪ ಮತ್ತು ವೀರೇಂದ್ರ ಕುಮಾರ ಅಲಿಯಾಸ್ ಪಪ್ಪಿ,ಇಬ್ಬರೂ ಲಿಂಗಾಯತರಾದ್ದರಿಂದ ಲಿಂಗಾಯತ ಮತಗಳು ಹಂಚಿಹೋಗುವ ಸಾಧ್ಯತೆಯಿದೆ. ಆದಾಗ್ಯೂ ಕ್ಷೇತ್ರದಲ್ಲಿ ದಟ್ಟವಾಗಿರುವ ಮುಸ್ಲಿಂ, ನಾಯಕರು, ಕುರುಬರು, ದಲಿತರು ಮೊದಲಾದ ಅಹಿಂದ ಮತಗಳು ಷಣ್ಮುಖಪ್ಪನತ್ತ ದೃಷ್ಟಿ ಹರಿಸುತ್ತಿವೆ. ತ್ರಿಕೋನ ಸ್ಪರ್ಧೆಯಂತೆ ಕಂಡುಬಂದರೂ ಗೆಲುವು ಬಿಜೆಪಿ, ಕಾಂಗ್ರೆಸ್ ನಡುವೆ ತೂಗಾಡುತ್ತಿದೆ.

ಹೊಳಲ್ಕೆರೆಯಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಆಂಜನೇಯ ಮತ್ತು ಬಿಜೆಪಿಯ ಮಾಜಿ ಶಾಸಕ ಚಂದ್ರಪ್ಪನ ನಡುವೆಯೇ ನೇರ ಹಣಾಹಣಿ. ಜೆಡಿಎಸ್‍ನ ಶ್ರೀನಿವಾಸ್ ಗದ್ದಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ. ಸದ್ಯದ ಮಟ್ಟಿಗೆ ಆಂಜನೇಯರ ಗೆಲುವೇ ಎದ್ದು ಕಾಣುತ್ತಿದೆ. ಬಿಜೆಪಿ ಟಿಕೇಟ್ ಸಿಗದ ಕಾರಣಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹನುಮಕ್ಕನಿಗೆ ಬಿಜೆಪಿಯವರೇ ಸಾಥ್ ನೀಡುತ್ತಿರೋದು ಚಂದ್ರಪ್ಪನನ್ನು ಗೆಲುವಿನಿಂದ ದೂರಾಗಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...