Homeಮುಖಪುಟ`ಗಾಂಧಿ ಕೊಂದ ಗೋಡ್ಸೆ ದೇಶಭಕ್ತ’ – ಬಿಜೆಪಿ ನಾಯಕಿ ಪ್ರಗ್ಯಾ ಸಿಂಗ್ ವಿವಾದಿತ ಹೇಳಿಕೆ

`ಗಾಂಧಿ ಕೊಂದ ಗೋಡ್ಸೆ ದೇಶಭಕ್ತ’ – ಬಿಜೆಪಿ ನಾಯಕಿ ಪ್ರಗ್ಯಾ ಸಿಂಗ್ ವಿವಾದಿತ ಹೇಳಿಕೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಕೊಂದ `ನಾಥೂರಾಮ್ ಗೂಡ್ಸೆ ನಿಜವಾದ ದೇಶಭಕ್ತ’ ಎಂದು ಹೇಳುವ ಮೂಲಕ ಬಿಜೆಪಿಯ ಭೂಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇತ್ತೀಚೆಗಷ್ಟೆ ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಸನ್ ಅವರು ಹೇಳಿದ್ದ “ಸ್ವತಂತ್ರ ಭಾರತದ ಪ್ರಥಮ ಭಯೋತ್ಪಾದಕ ಹಿಂದೂ ಆಗಿದ್ದ, ಆತ ಗೋಡ್ಸೆ” ಹೇಳಿಕೆಗೆ ಪ್ರತಿಯಾಗಿ `ಸಾಧ್ವಿ’ ಇಂಥಾ ಯಡವಟ್ಟು ಹೇಳಿಕೆ ನೀಡಿದ್ದಾರೆ.

2008ರ ಮಲೆಗಾಂವ್ ಬಾಂಬ್ ಸ್ಫೋಟದ ಪ್ರಧಾನ ಆರೋಪಿಯಾಗಿರುವ ಪ್ರಗ್ಯಾಸಿಂಗ್ ಹಿಂದೂ ಭಯೋತ್ಪಾದಕಿ ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದರು. ಆ ಸ್ಪೋಟದಿಂದ ಆರು ಜನ ಪ್ರಾಣ ಕಳೆದುಕೊಂಡಿದ್ದರೆ, ನೂರಕ್ಕು ಹೆಚ್ಚು ಜನ ಗಾಯಗೊಂಡಿದ್ದರು. ಸದ್ಯ ನ್ಯಾಯಾಲಯದಡಿ ವಿಚಾರಣೆ ನಡೆಯುತ್ತಿರುವ ಆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದು ಮಧ್ಯಪ್ರದೇಶದ ಭೂಪಾಲ್ ಕ್ಷೇತ್ರದಲ್ಲಿ ಕಾಂಗ್ರೆಸಿನ ದಿಗ್ವಿಜಯ್ ಸಿಂಗ್ ಎದುರು ಸ್ಪರ್ಧಿಸಿದ್ದಾರೆ.

ಕಮಲ್ ಹಸನ್ ಹೇಳಿಕೆಯನ್ನು ಉಲ್ಲೇಖಿಸಿ, ಸ್ವತಃ ತಾವೇ ಹಿಂದೂ ಭಯೋತ್ಪಾದನೆಯ ಆರೋಪಕ್ಕೆ ತುತ್ತಾಗಿರುವುದನ್ನು ಲಿಂಕ್ ಮಾಡಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರ ನೀಡುತ್ತಾ “ನಾಥೂರಾಂ ಗೂಡ್ಸೆ ದೇಶಭಕ್ತರಾಗಿದ್ದರು, ದೇಶಭಕ್ತರಾಗಿದ್ದಾರೆ ಮತ್ತು ದೇಶಭಕ್ತರಾಗಿಯೇ ಇರುತ್ತಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುವವರು ಮೊದಲು ತಮ್ಮನ್ನು ತಾವು ನೋಡಿಕೊಳ್ಳಲಿ. ಇಂಥಾ ಜನರಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು” ಎಂದು ಉತ್ತರ ನೀಡಿದ್ದಾರೆ. 1948ರಲ್ಲಿ ಮಹಾತ್ಮಾ ಗಾಂಧಿಯವರನ್ನು ಗುಂಡಿಕ್ಕಿ ಕೊಂದ ನಾಥೂರಾಂ ಗೋಡ್ಸೆ ಹಿಂದೂ ಮಹಾಸಭಾದ ಸದಸ್ಯರಾಗಿದ್ದರು.

49 ವಯೋಮಾನದ ಪ್ರಗ್ಯಾಸಿಂಗ್ ಚುನಾವಣೆಗೆ ಇಳಿಯುವ ನಿರ್ಧಾರ ಪ್ರಕಟಿಸಿದಾಗಿನಿಂದ ಒಂದಿಲ್ಲೊಂದು ವಿವಾದಿತ ಹೇಳಿಕೆ ನೀಡಿ ವಿವಾದಕ್ಕೆ ಈಡಾಗುತ್ತಿದ್ದಾರೆ. 26/11 ಮುಂಬೈ ಉಗ್ರರ ದಾಳಿಯ ಸಂದರ್ಭದಲ್ಲಿ ಕಾದಾಡುತ್ತಾ ಉಗ್ರರ ಗುಂಡೇಟಿಗೆ ಬಲಿಯಾದ ನಿಷ್ಠಾವಂತ ಅಧಿಕಾರಿ ‘ಹೇಮಂತ್ ಕರ್ಕರೆಯವರಿಗೆ ನಾನು ಶಾಪ ಕೊಟ್ಟಿದ್ದರಿಂದಲೇ ಆ ಗತಿ ಉಂಟಾಯ್ತು’ (ಮಲೆಗಾಂವ್ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಪ್ರಗ್ಯಾಸಿಂಗ್, ಕರ್ನಲ್ ಪುರೋಹಿತ್ ಮೊದಲಾದ ಆರೋಪಿಗಳ ಕೈವಾಡವನ್ನು ಪತ್ತೆ ಹಚ್ಚಿ ಬಂಧಿಸಿದ್ದ ತಂಡದಲ್ಲಿ ಈ ಅಧಿಕಾರಿ ಪ್ರಮುಖರಾಗಿದ್ದರು) ಎಂದಿದ್ದ ಪ್ರಗ್ಯಾ ಠಾಕೂರ್ ಆನಂತರ ಬಾಬ್ರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದಕ್ಕೆ ನನಗೆ ಹೆಮ್ಮೆ ಇದೆ ಎಂಬ ಹೇಳಿಕೆ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಈಗಾಗಲೇ ಇಂಥಾ ಹಲವು ವಿವಾದಗಳಿಂದ ಹೈರಾಣಾಗಿರುವ ಬಿಜೆಪಿ ಪ್ರಗ್ಯಾರ ಈ ಹೊಸ ಹೇಳಿಕೆಯಿಂದ ಮತ್ತಷ್ಟು ಮುಜುಗರಕ್ಕೆ ತುತ್ತಾಗಿದ್ದು, ಪಕ್ಷದ ವಕ್ತಾರ ಜಿವಿಎಲ್ ನರಸಿಂಹರಾವ್, “ನಾಥೂರಾಂ ಗೋಡ್ಸೆ ಕುರಿತು ಪ್ರಗ್ಯಾ ಸಿಂಗರ ಹೇಳಿಕೆಯನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ. ಅದಕ್ಕಾಗಿ ಪಕ್ಷ ಅವರಿಂದ ಸ್ಪಷ್ಟೀಕರಣವನ್ನೂ ಕೇಳಲಿದೆ. ಅವರು ಈ ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...