Homeಮುಖಪುಟ`ಗಾಂಧಿ ಕೊಂದ ಗೋಡ್ಸೆ ದೇಶಭಕ್ತ’ – ಬಿಜೆಪಿ ನಾಯಕಿ ಪ್ರಗ್ಯಾ ಸಿಂಗ್ ವಿವಾದಿತ ಹೇಳಿಕೆ

`ಗಾಂಧಿ ಕೊಂದ ಗೋಡ್ಸೆ ದೇಶಭಕ್ತ’ – ಬಿಜೆಪಿ ನಾಯಕಿ ಪ್ರಗ್ಯಾ ಸಿಂಗ್ ವಿವಾದಿತ ಹೇಳಿಕೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಕೊಂದ `ನಾಥೂರಾಮ್ ಗೂಡ್ಸೆ ನಿಜವಾದ ದೇಶಭಕ್ತ’ ಎಂದು ಹೇಳುವ ಮೂಲಕ ಬಿಜೆಪಿಯ ಭೂಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇತ್ತೀಚೆಗಷ್ಟೆ ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಸನ್ ಅವರು ಹೇಳಿದ್ದ “ಸ್ವತಂತ್ರ ಭಾರತದ ಪ್ರಥಮ ಭಯೋತ್ಪಾದಕ ಹಿಂದೂ ಆಗಿದ್ದ, ಆತ ಗೋಡ್ಸೆ” ಹೇಳಿಕೆಗೆ ಪ್ರತಿಯಾಗಿ `ಸಾಧ್ವಿ’ ಇಂಥಾ ಯಡವಟ್ಟು ಹೇಳಿಕೆ ನೀಡಿದ್ದಾರೆ.

2008ರ ಮಲೆಗಾಂವ್ ಬಾಂಬ್ ಸ್ಫೋಟದ ಪ್ರಧಾನ ಆರೋಪಿಯಾಗಿರುವ ಪ್ರಗ್ಯಾಸಿಂಗ್ ಹಿಂದೂ ಭಯೋತ್ಪಾದಕಿ ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದರು. ಆ ಸ್ಪೋಟದಿಂದ ಆರು ಜನ ಪ್ರಾಣ ಕಳೆದುಕೊಂಡಿದ್ದರೆ, ನೂರಕ್ಕು ಹೆಚ್ಚು ಜನ ಗಾಯಗೊಂಡಿದ್ದರು. ಸದ್ಯ ನ್ಯಾಯಾಲಯದಡಿ ವಿಚಾರಣೆ ನಡೆಯುತ್ತಿರುವ ಆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದು ಮಧ್ಯಪ್ರದೇಶದ ಭೂಪಾಲ್ ಕ್ಷೇತ್ರದಲ್ಲಿ ಕಾಂಗ್ರೆಸಿನ ದಿಗ್ವಿಜಯ್ ಸಿಂಗ್ ಎದುರು ಸ್ಪರ್ಧಿಸಿದ್ದಾರೆ.

ಕಮಲ್ ಹಸನ್ ಹೇಳಿಕೆಯನ್ನು ಉಲ್ಲೇಖಿಸಿ, ಸ್ವತಃ ತಾವೇ ಹಿಂದೂ ಭಯೋತ್ಪಾದನೆಯ ಆರೋಪಕ್ಕೆ ತುತ್ತಾಗಿರುವುದನ್ನು ಲಿಂಕ್ ಮಾಡಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರ ನೀಡುತ್ತಾ “ನಾಥೂರಾಂ ಗೂಡ್ಸೆ ದೇಶಭಕ್ತರಾಗಿದ್ದರು, ದೇಶಭಕ್ತರಾಗಿದ್ದಾರೆ ಮತ್ತು ದೇಶಭಕ್ತರಾಗಿಯೇ ಇರುತ್ತಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುವವರು ಮೊದಲು ತಮ್ಮನ್ನು ತಾವು ನೋಡಿಕೊಳ್ಳಲಿ. ಇಂಥಾ ಜನರಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು” ಎಂದು ಉತ್ತರ ನೀಡಿದ್ದಾರೆ. 1948ರಲ್ಲಿ ಮಹಾತ್ಮಾ ಗಾಂಧಿಯವರನ್ನು ಗುಂಡಿಕ್ಕಿ ಕೊಂದ ನಾಥೂರಾಂ ಗೋಡ್ಸೆ ಹಿಂದೂ ಮಹಾಸಭಾದ ಸದಸ್ಯರಾಗಿದ್ದರು.

49 ವಯೋಮಾನದ ಪ್ರಗ್ಯಾಸಿಂಗ್ ಚುನಾವಣೆಗೆ ಇಳಿಯುವ ನಿರ್ಧಾರ ಪ್ರಕಟಿಸಿದಾಗಿನಿಂದ ಒಂದಿಲ್ಲೊಂದು ವಿವಾದಿತ ಹೇಳಿಕೆ ನೀಡಿ ವಿವಾದಕ್ಕೆ ಈಡಾಗುತ್ತಿದ್ದಾರೆ. 26/11 ಮುಂಬೈ ಉಗ್ರರ ದಾಳಿಯ ಸಂದರ್ಭದಲ್ಲಿ ಕಾದಾಡುತ್ತಾ ಉಗ್ರರ ಗುಂಡೇಟಿಗೆ ಬಲಿಯಾದ ನಿಷ್ಠಾವಂತ ಅಧಿಕಾರಿ ‘ಹೇಮಂತ್ ಕರ್ಕರೆಯವರಿಗೆ ನಾನು ಶಾಪ ಕೊಟ್ಟಿದ್ದರಿಂದಲೇ ಆ ಗತಿ ಉಂಟಾಯ್ತು’ (ಮಲೆಗಾಂವ್ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಪ್ರಗ್ಯಾಸಿಂಗ್, ಕರ್ನಲ್ ಪುರೋಹಿತ್ ಮೊದಲಾದ ಆರೋಪಿಗಳ ಕೈವಾಡವನ್ನು ಪತ್ತೆ ಹಚ್ಚಿ ಬಂಧಿಸಿದ್ದ ತಂಡದಲ್ಲಿ ಈ ಅಧಿಕಾರಿ ಪ್ರಮುಖರಾಗಿದ್ದರು) ಎಂದಿದ್ದ ಪ್ರಗ್ಯಾ ಠಾಕೂರ್ ಆನಂತರ ಬಾಬ್ರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದಕ್ಕೆ ನನಗೆ ಹೆಮ್ಮೆ ಇದೆ ಎಂಬ ಹೇಳಿಕೆ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಈಗಾಗಲೇ ಇಂಥಾ ಹಲವು ವಿವಾದಗಳಿಂದ ಹೈರಾಣಾಗಿರುವ ಬಿಜೆಪಿ ಪ್ರಗ್ಯಾರ ಈ ಹೊಸ ಹೇಳಿಕೆಯಿಂದ ಮತ್ತಷ್ಟು ಮುಜುಗರಕ್ಕೆ ತುತ್ತಾಗಿದ್ದು, ಪಕ್ಷದ ವಕ್ತಾರ ಜಿವಿಎಲ್ ನರಸಿಂಹರಾವ್, “ನಾಥೂರಾಂ ಗೋಡ್ಸೆ ಕುರಿತು ಪ್ರಗ್ಯಾ ಸಿಂಗರ ಹೇಳಿಕೆಯನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ. ಅದಕ್ಕಾಗಿ ಪಕ್ಷ ಅವರಿಂದ ಸ್ಪಷ್ಟೀಕರಣವನ್ನೂ ಕೇಳಲಿದೆ. ಅವರು ಈ ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...