Homeಚಳವಳಿತೆಲಂಗಾಣದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಶೇ. 33.3 ರಷ್ಟು ಮೀಸಲಾತಿ

ತೆಲಂಗಾಣದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಶೇ. 33.3 ರಷ್ಟು ಮೀಸಲಾತಿ

- Advertisement -
- Advertisement -

ಆರ್ಥಿಕವಾಗಿ ಹಿಂದುಳಿದ ವರ್ಗಗಳ (ಇಡಬ್ಲ್ಯೂಎಸ್) ಕೋಟಾದಡಿ ರಾಜ್ಯ ಸರ್ಕಾರಿ ಹುದ್ದೆಗಳು ಮತ್ತು ಸೇವೆಗಳಲ್ಲಿ ಮಹಿಳೆಯರಿಗೆ ಶೇಕಡಾ 33.3 ರಷ್ಟು ಮೀಸಲಾತಿ ನೀಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.

ತೆಲಂಗಾಣದಾದ್ಯಂತ ಶೇಕಡಾ 10 ರಷ್ಟು ಇಡಬ್ಲ್ಯೂಎಸ್ ಮೀಸಲಾತಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ. ತೆಲಂಗಾಣದ ಪ್ರತಿ ಉನ್ನತ ಶಿಕ್ಷಣ ಸಂಸ್ಥೆಯು ತಮ್ಮ ಪ್ರತಿ ಶಾಖೆಯಲ್ಲಿ ಮತ್ತು ಅಧ್ಯಾಪಕರ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಿ ಇಎಡಬ್ಲ್ಯುಎಸ್ ಅಭ್ಯರ್ಥಿಗಳನ್ನು ನೇಮಕ ಮಾಡಲು ಸೂಚನೆ ನೀಡಿದೆ.

“EWS ವರ್ಗಕ್ಕೆ ಮೀಸಲಾಗಿರುವ ರಾಜ್ಯ ಸರ್ಕಾರದ ಅಡಿಯಲ್ಲಿನ ಹುದ್ದೆಗಳು ಮತ್ತು ಸೇವೆಗಳಲ್ಲಿನ ಆರಂಭಿಕ ನೇಮಕಾತಿಯಲ್ಲಿ 33.3% ಅಷ್ಟು ಮಹಿಳೆಯರಿಗೆ ಹಂಚಿಕೆಯಾಗಬೇಕು” ಎಂದು ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್  ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕವೇ ಮೊದಲ ರಾಜ್ಯ: ಸರ್ಕಾರಿ ಉದ್ಯೋಗಗಳಲ್ಲಿ ಟ್ರಾನ್ಸ್‌ಜೆಂಡರ್‌ ಸಮುದಾಯಕ್ಕೆ 1% ಮೀಸಲಾತಿ ಘೋಷಣೆ

ಕೇಂದ್ರವು ಶಿಕ್ಷಣ ಮತ್ತು ಉದ್ಯೋಗದಲ್ಲಿ 10 % EWS ಮೀಸಲಾತಿಯನ್ನು ಘೋಷಿಸಿದೆ. ಇದರ ಎರಡು ವರ್ಷಗಳ ನಂತರ ತೆಲಂಗಾಣದಲ್ಲಿ ಇದೇ ಕೋಟಾದ ಅಡಿಯಲ್ಲಿ ಶೇಕಡಾ 33.3 ರಷ್ಟು ಮೀಸಲಾತಿ ನೀಡಲು ಮಾರ್ಗಸೂಚಿಗಳನ್ನು ನೀಡಲಾಗಿದೆ.

ಪ್ರಸ್ತುತ ರಾಜ್ಯದಲ್ಲಿ ಶೇ 50 ರಷ್ಟು ಮೀಸಲಾತಿಯನ್ನು ಹಿಂದುಳಿದ, ದುರ್ಬಲ ವರ್ಗಗಳಿಗೆ ಜಾರಿಗೊಳಿಸಲಾಗುತ್ತಿದೆ. ಈಗ EWSನ ಶೇಕಡಾ 10 ರಷ್ಟು ಮೀಸಲಾತಿಯೊಂದಿಗೆ, ಒಟ್ಟು ಶೇಕಡಾ 60 ರಷ್ಟು ಮೀಸಲಾತಿ ಸಿಕ್ಕಿದಂತಾಗುತ್ತದೆ.

ಎಸ್‌ಸಿ, ಎಸ್‌ಟಿ ಮತ್ತು ಬಿಸಿಗಳಿಗೆ ಮೀಸಲಾತಿ ಯೋಜನೆಯ ವ್ಯಾಪ್ತಿಗೆ ಒಳಪಡದ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಎಂಟು ಲಕ್ಷಕ್ಕಿಂತ ಕಡಿಮೆ ಇರುವ ವ್ಯಕ್ತಿಗಳನ್ನು ಇಡಬ್ಲ್ಯೂಎಸ್ ಕೋಡಾದಡಿ ಮೀಸಲಾತಿಗೆ ಅರ್ಹರು ಎಂದು ಗುರುತಿಸಬೇಕು ಎಂದು ಮಾರ್ಗಸೂಚಿಗಳಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ಮರಾಠಾ ಮೀಸಲಾತಿ ರದ್ದುಗೊಳಿಸಿದ ಸುಪ್ರೀಂ; ರಾಜ್ಯದ ಮೇಲೂ ಪರಿಣಾಮ, ಜನಸಂಖ್ಯೆ ಆಧರಿಸಿದ ಮೀಸಲಾತಿ ಚರ್ಚೆ ಮುನ್ನೆಲೆಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...