Homeಮುಖಪುಟಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಕೆಲವರು ಸತ್ಯಾಸತ್ಯತೆ ಪರಿಶೀಲಿಸದೆ, ಅಥ್ಲೆಟಿಕ್ಸ್ ಅಧ್ಯಕ್ಷರ ಹೇಳಿಕೆ ಇಟ್ಟುಕೊಂಡು ಕಾಶಿನಾಥ್ ನಾಯ್ಕ್‌ರನ್ನು ಟೀಕಿಸಿದ್ದರು. ಅದಕ್ಕೆ ಸ್ವತಃ ನೀರಜ್ ಚೋಪ್ರಾ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ.

- Advertisement -
- Advertisement -

ಒಲಿಂಪಿಕ್ಸ್‌ನಲ್ಲಿ ಚಿನ್ನಗೆದ್ದ ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ನಾಯ್ಕ್‌ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂಬ ಅಥ್ಲೆಟಿಕ್ಸ್ ಫೆಡರೇಷನ್ ಅಧ್ಯಕ್ಷ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆ ಮೂಲಕ ಎರಡು ವರ್ಷಗಳ ಕಾಲ ನೀರಜ್‌ ಚೋಪ್ರಾಗೆ ಕೋಚ್ ಆಗಿ ತರಬೇತಿ ನೀಡಿದ್ದ ಕನ್ನಡಿಗ ಕಾಶೀನಾಥ್‌ರನ್ನು ಅವಮಾನಿಸಲಾಗಿತ್ತು. ಈಗ ಕಾಶಿನಾಥ್ ಮನೆಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಭೇಟಿ ನೀಡುವ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ ಮತ್ತು ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಅತ್ತ ಟೋಕಿಯೋದಲ್ಲಿ ಜಾವಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನ ಗೆಲ್ಲುತ್ತಿದ್ದಂತೆ ಇತ್ತ ಅವರಿಗೆ ಕೋಚ್ ಆಗಿ ಕೆಲಸ ಮಾಡಿದ್ದ ಎಲ್ಲರನ್ನು ಶ್ಲಾಘಿಸಲಾಗಿತ್ತು. 2015 ರಿಂದ 2017ರವರೆಗೆ ನೀರಜ್‌ಗೆ ಕೋಚ್ ಆಗಿದ್ದ ಕನ್ನಡಿಗ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬೆಂಗಳೆ ಗ್ರಾಮದ ಕಾಶೀನಾಥ್ ನಾಯ್ಕ್‌ರವರನ್ನು ಸ್ಮರಿಸಲಾಗಿತ್ತು. ಅವರ ಸಾಧನೆ ಗುರುತಿಸಿ ಅವರಿಗೆ ರಾಜ್ಯದ ಕ್ರೀಡಾ ಸಚಿವರು 10 ಲಕ್ಷ ರೂ ಗಳ ಬಹುಮಾನ ಘೋಷಿಸಿದ್ದರು.

ಆದರೆ ಅವರ ವಿರುದ್ದ ಅಪಪ್ರಚಾರ ಸಹ ಅದೇ ಸಮಯದಲ್ಲಿ ಶುರುವಾಗಿತ್ತು. ಅವರಿಗೆ 10 ಲಕ್ಷ ಬಹುಮಾನ ಘೋಷಿಸಿದ್ದಕ್ಕೆ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. “ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ. ಅವರಿಗೆ ಕರ್ನಾಟಕ ಸರ್ಕಾರ 10 ರೂ ಲಕ್ಷ ರೂ ಬಹುಮಾನ ಘೋಷಿಸಿರುವುದು ತಿಳಿದುಬಂದಿದೆ. ಅಧಿಕೃತ ಪತ್ರ ತಲುಪಿದಾಗ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತೇವೆ” ಎಂದು  ಸುಮರಿವಾಲಾ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಹೊರಬೀಳುತ್ತಿದ್ದಂತೆ ಕನ್ನಡದ ಬಹುತೇಕ ಮಾಧ್ಯಮಗಳು ಕಾಶೀನಾಥ್ ನಾಯ್ಕ್‌ ವಿರುದ್ಧ ಕಿಡಿಕಾರಿದ್ದವು. ಪತ್ರಕರ್ತರು ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಾಶಿನಾಥ್‌ರನ್ನು ಟೀಕಿಸಿದ್ದರು. ಆ ಸಂದರ್ಭದಲ್ಲಿ ನಾನುಗೌರಿ.ಕಾಂ ಕಾಶೀನಾಥ್ ನಾಯ್ಕ್‌ ರವರನ್ನು ಸಂಪರ್ಕಿಸಿ ಅವರ ಕ್ರೀಡಾಸಾಧನೆ, ಕೋಚ್ ಆಗಿ ಕೆಲಸ ಮಾಡಿದ್ದರ ಕುರಿತು ವಿವರವಾದ ವರದಿ ಪ್ರಕಟಿಸಿತ್ತು. ಅದನ್ನು ಇಲ್ಲಿ ಓದಬಹುದು.

2000 ದಲ್ಲಿ ದೇಶ ಸೇವೆಗೆ ಸೈನಿಕರಾಗಿ ಸೇರಿದ್ದ ಕಾಶಿನಾಥ್‌ ನಾಯ್ಕರವರು 2010ರಲ್ಲಿ ನವದೆಹಲಿಯಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಪಡೆದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಏಕಲವ್ಯ ಪ್ರಶಸ್ತಿ ಸಂದಿವೆ. 2015 ರಿಂದ 2017ರವರೆಗೆ ನೀರಜ್ ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದಾರೆ.

“ನಾನು ಯಾರು ಅಂತ ಗೊತ್ತಿಲ್ಲವೆಂದು ಅದಿಲ್ಲೆ ಸುಮರಿವಾಲಾ ಹೇಳಿದ್ದಾರೆ. ಹಾಗಾದರೆ ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? 2015 ರಿಂದ 2017ರ ವರೆಗೆ ಪಟಿಯಾಲದಲ್ಲಿ ನಾನು ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದೇನೆ. ಈ ಮಧ್ಯೆ 2016ರಲ್ಲಿ ವಿದೇಶಿ ಕೋಚ್ ಗ್ಯಾರಿ ಕ್ಯಾಲ್ವರ್ಟ್ ನೇಮಕವಾದರು. ಆಗ ನಾವೆಲ್ಲರೂ ಪೋಲಾಂಡ್‌ಗೆ ತೆರಳಿ 20 ವರ್ಷದೊಳಗಿನ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದಾಗ ನೀರಜ್ ಚಿನ್ನ ಗೆದ್ದಿದ್ದರು” ಎಂದು ಕಾಶಿನಾಥ್ ಹೇಳಿದ್ದರು.

ಇಂತಹ ಅಪ್ರತಿಮ ಸಾಧನೆಗೈದ ಕಾಶಿನಾಥ್‌ರವರ ಪುಣೆಯಲ್ಲಿನ ಮನೆಗೆ ನೀರಜ್ ಚೋಪ್ರಾ ಭೇಟಿ ನೀಡಿ ಗುರುಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಕಾಶಿನಾಥ್‌ರವರ ಮಕ್ಕಳನ್ನು ಎತ್ತಿಕೊಂಡು ಮುದ್ದಿಸಿದ್ದಾರೆ. ಕಾಶಿನಾಥ್ ಕುಟುಂಬದ ಜೊತೆ ಫೋಟೊ ತೆಗೆದುಕೊಂಡಿದ್ದಾರೆ. ಯಾವುದೇ ಅಹಂಭಾವವಿಲ್ಲದೇ ಗುರುಗಳ ಜೊತೆ ಪ್ರೀತಿಯಿಂದ ಬೆರೆತಿದ್ದಾರೆ. ಈ ಎಲ್ಲಾ ಫೋಟೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಲ್ಲದೇ ಕಾಶಿನಾಥ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದವರ ಬಾಯಿ ಮುಚ್ಚಿಸಿವೆ.

ಆಗಸ್ಟ್ 24ರ ಮಧ್ಯಾಹ್ನ ನೀರಜ್ ಚೋಪ್ರಾ ಕಾಶೀನಾಥ್ ನಾಯ್ಕ್‌ರವರ ಮನೆಗೆ ಭೇಟಿ ನೀಡಿದಾಗ ಕಾಶಿನಾಥ್‌ರವರ ಪತ್ನಿ ಚೈತ್ರಾ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಸ್ವಾಗತಿಸಿದ್ದಾರೆ. ನೀರಜ್ ಅಂತೂ ಮನೆಯೊಳಗೆ ಬಂದ ಕೂಡಲೇ ಮನೆಯೊಳಗಿದ್ದ ಲ್ಯಾಬ್ರೊಡರ್ ನಾಯಿಯ ತಲೆ ಸವರಿ ಮುದ್ದು ಮಾಡಿದ್ದಾರೆ. ನಂತರ ಮಕ್ಕಳನ್ನು ಎತ್ತುಕೊಂಡಿದ್ದಾರೆ.

ಒಟ್ಟಿನಲ್ಲಿ ಕೆಲವರು ಸತ್ಯಾಸತ್ಯತೆ ಪರಿಶೀಲಿಸದೆ, ಅಥ್ಲೆಟಿಕ್ಸ್ ಅಧ್ಯಕ್ಷರ ಹೇಳಿಕೆ ಇಟ್ಟುಕೊಂಡು ಕಾಶಿನಾಥ್ ನಾಯ್ಕ್‌ರನ್ನು ಟೀಕಿಸಿದ್ದರು. ಅದಕ್ಕೆ ಸ್ವತಃ ನೀರಜ್ ಚೋಪ್ರಾ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ. ಆ ಮೂಲಕ ಗುರುಗಳ ಗೌರವ ಹೆಚ್ಚಿಸಿದ್ದಾರೆ.


ಇದನ್ನೂ ಓದಿ: ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? ನೀರಜ್ ಚೋಪ್ರಾ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್ ನಾಯ್ಕ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...