Homeಮುಖಪುಟರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆ: ದೊಡ್ಡ ಪಕ್ಷಗಳನ್ನು ಎದುರಿಸಲು ಸಿದ್ಧವಾಗಿವೆ ಸಣ್ಣ ಪಕ್ಷಗಳು

ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆ: ದೊಡ್ಡ ಪಕ್ಷಗಳನ್ನು ಎದುರಿಸಲು ಸಿದ್ಧವಾಗಿವೆ ಸಣ್ಣ ಪಕ್ಷಗಳು

- Advertisement -
- Advertisement -

ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪ್ರಮುಖ ಪಕ್ಷಗಳು ಪ್ರಾಬಲ್ಯವಿರುವ ರಾಜಕೀಯ ಕಣವಾಗಿರುವ ಕರ್ನಾಟಕದಲ್ಲಿ ಯಾವುದೇ ಆಧಾರವಿಲ್ಲದ ಸಣ್ಣ ಪಕ್ಷಗಳು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಮ್ಮ ನೆಲೆಯನ್ನು ಕಂಡುಕೊಳ್ಳಲು ಸಿದ್ದತೆ ನಡೆಸುತ್ತಿವೆ.

ಸೆಪ್ಟೆಂಬರ್‌ ತಿಂಗಳಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಆರಂಭವಾಗಲಿದ್ದು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರ ಪಾಲಿಕೆಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ. ಅಲ್ಲಿಂದ ಬೆಂಗಳೂರಿನಲ್ಲಿ ವರ್ಷಾಂತ್ಯದಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ.

ಆಮ್ ಆದ್ಮಿ ಪಕ್ಷ (ಎಎಪಿ) ಮೊದಲ ಬಾರಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. “ನಾವು ಸ್ಥಳದ ಐತಿಹಾಸಿಕ ಮಹತ್ವವನ್ನು ಎತ್ತಿ ತೋರಿಸುವ ಮೂಲಕ ವಿಶ್ವ ದರ್ಜೆಯ ನಗರಗಳ ನಿರ್ಮಾಣದ ಭರವಸೆಯನ್ನು ಹೊಂದಿದ್ದೇವೆ. ಮಹಿಳೆಯರು ಮತ್ತು ಯುವಕರ ಮತಗಳನ್ನು ಪಡೆಯಲು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರಬಹುದು, ಆದರೆ ನಾವು ಎಲ್ಲರನ್ನೂ ಒಳಗೊಳ್ಳುವ ರಾಜಕೀಯಕ್ಕಾಗಿ ಕಣಕ್ಕಿಳಿಯಲಿದ್ದೇವೆ” ಎಂದು ಎಎಪಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಮಸೂದೆ 2021; ಕೃಷಿಗೆ ಮತ್ತು ವಿದ್ಯುತ್ ವಲಯದ ಕಾರ್ಮಿಕರಿಗೆ ಮಾರಕ

ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆಗಳ  ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಂಟು ವಾರ್ಡ್‌ಗಳಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಕೂಡ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. “ನಾವು ಪಕ್ಷದ ಬದ್ದತೆಯ ಕಾರ್ಯಕರ್ತರು. ಕೊಳ್ಳೇಗಾಲದ ಶಾಸಕ ಎನ್ ಮಹೇಶ್ ಅವರ ಉಚ್ಚಾಟಣೆಯಿಂದ ಪಕ್ಷವು ಶುದ್ದೀಕರಣಗೊಂಡಿದೆ. ಇದರಿಂದಾಗಿಜನರು ನಮ್ಮನ್ನು ಆರ್ಶೀವದಿಸುತ್ತಾರೆ” ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಡಾ. ಕೃಷ್ಣಮೂರ್ತಿ ಹೇಳಿದ್ದಾರೆ.

“ಬಿಎಸ್‌ಪಿ ನಿರ್ದಿಷ್ಟ ಸಮುದಾಯದ ಮತಗಳ ವಿಭಜನೆ ಮಾಡುತ್ತದೆ ಎಂಬುದು ಅಪ್ರಸ್ತುತ. ಬದಲಾಗಿ, ಹಿಂದಿನ ಆಡಳಿತಗಳಲ್ಲಿ ಬಹುಜನರ (ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ) ಜೀವನವು ಹೇಗೆ ಸುಧಾರಿಸಿಲ್ಲ ಎಂಬುದನ್ನು ಬಿಎಸ್‌ಪಿ ಎತ್ತಿ ತೋರಿಸುತ್ತದೆ” ಎಂದು ಹೇಳಿದ್ದಾರೆ.

ಬಿಎಸ್‌ಪಿ ಪಕ್ಷವು ರಾಜ್ಯದಾದ್ಯಂತ ತನ್ನ ಕಾರ್ಯಕರ್ತರಿಗಾಗಿ ಸರಣಿ ಕಾರ್ಯಾಗಾರಗಳನ್ನು ನಡೆಸುತ್ತಿದೆ ಎಂದು ವರದಿಯಾಗುತ್ತಿದೆ. ಪಕ್ಷವು 2018 ರ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಲ ಕ್ಷೇತ್ರವನ್ನು ಗೆಲ್ಲುವ ಮೂಲಕ ತನ್ನ ಮೊದಲ ಗೆಲುವನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

2004ರಲ್ಲಿ, ಪಕ್ಷದ ನಾಯಕಿ ಮಾಯಾವತಿ ಅವರ ಪ್ರಭಾವ ಉತ್ತುಂಗದಲ್ಲಿದ್ದಾಗ, ಬಿಎಸ್‌ಪಿ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೇವಲ 2.5% ಮತಗಳನ್ನು ಗಳಿಸುವ ಮೂಲಕ, ಸುಮಾರು 45 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯದ ಮೇಲೆ ಪ್ರಭಾವ ಬೀರಿದೆ ಎಂದು ಹೇಳಲಾಗಿದೆ.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ), ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಾಳೆ, ಎಂ.ವೆಂಕಟಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ತಮ್ಮ ಕಾರ್ಯಕರ್ತರನ್ನು  ಸಂಘಟಿಸುತ್ತಿದ್ದಾರೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶವು ಬಿಬಿಎಂಪಿ ಚುನಾವಣೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಗಳಿಗೆ ಮೆಟ್ಟಿಲಾಗಲಿವೆ. ಅಲ್ಲದೆ, ಈ ಸಣ್ಣ ಪಕ್ಷಗಳು ಯಾರ ಭವಿಷ್ಯವನ್ನು ಕಸಿದುಕೊಳ್ಳುತ್ತವೆ ಎಂಬುದರ ಬಗ್ಗೆ ಸುಳಿವು ನೀಡಬಹುದು.


ಇದನ್ನೂ ಓದಿ: ಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸ್ಪರ್ಧೆಯ ಬಗ್ಗೆ ಯಾಕೆ ಉಲ್ಲೇಖಿಸಿಲ್ಲ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...