Homeಮುಖಪುಟರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆ: ದೊಡ್ಡ ಪಕ್ಷಗಳನ್ನು ಎದುರಿಸಲು ಸಿದ್ಧವಾಗಿವೆ ಸಣ್ಣ ಪಕ್ಷಗಳು

ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆ: ದೊಡ್ಡ ಪಕ್ಷಗಳನ್ನು ಎದುರಿಸಲು ಸಿದ್ಧವಾಗಿವೆ ಸಣ್ಣ ಪಕ್ಷಗಳು

- Advertisement -
- Advertisement -

ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪ್ರಮುಖ ಪಕ್ಷಗಳು ಪ್ರಾಬಲ್ಯವಿರುವ ರಾಜಕೀಯ ಕಣವಾಗಿರುವ ಕರ್ನಾಟಕದಲ್ಲಿ ಯಾವುದೇ ಆಧಾರವಿಲ್ಲದ ಸಣ್ಣ ಪಕ್ಷಗಳು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಮ್ಮ ನೆಲೆಯನ್ನು ಕಂಡುಕೊಳ್ಳಲು ಸಿದ್ದತೆ ನಡೆಸುತ್ತಿವೆ.

ಸೆಪ್ಟೆಂಬರ್‌ ತಿಂಗಳಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಆರಂಭವಾಗಲಿದ್ದು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರ ಪಾಲಿಕೆಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ. ಅಲ್ಲಿಂದ ಬೆಂಗಳೂರಿನಲ್ಲಿ ವರ್ಷಾಂತ್ಯದಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ.

ಆಮ್ ಆದ್ಮಿ ಪಕ್ಷ (ಎಎಪಿ) ಮೊದಲ ಬಾರಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. “ನಾವು ಸ್ಥಳದ ಐತಿಹಾಸಿಕ ಮಹತ್ವವನ್ನು ಎತ್ತಿ ತೋರಿಸುವ ಮೂಲಕ ವಿಶ್ವ ದರ್ಜೆಯ ನಗರಗಳ ನಿರ್ಮಾಣದ ಭರವಸೆಯನ್ನು ಹೊಂದಿದ್ದೇವೆ. ಮಹಿಳೆಯರು ಮತ್ತು ಯುವಕರ ಮತಗಳನ್ನು ಪಡೆಯಲು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರಬಹುದು, ಆದರೆ ನಾವು ಎಲ್ಲರನ್ನೂ ಒಳಗೊಳ್ಳುವ ರಾಜಕೀಯಕ್ಕಾಗಿ ಕಣಕ್ಕಿಳಿಯಲಿದ್ದೇವೆ” ಎಂದು ಎಎಪಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಮಸೂದೆ 2021; ಕೃಷಿಗೆ ಮತ್ತು ವಿದ್ಯುತ್ ವಲಯದ ಕಾರ್ಮಿಕರಿಗೆ ಮಾರಕ

ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆಗಳ  ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಂಟು ವಾರ್ಡ್‌ಗಳಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಕೂಡ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. “ನಾವು ಪಕ್ಷದ ಬದ್ದತೆಯ ಕಾರ್ಯಕರ್ತರು. ಕೊಳ್ಳೇಗಾಲದ ಶಾಸಕ ಎನ್ ಮಹೇಶ್ ಅವರ ಉಚ್ಚಾಟಣೆಯಿಂದ ಪಕ್ಷವು ಶುದ್ದೀಕರಣಗೊಂಡಿದೆ. ಇದರಿಂದಾಗಿಜನರು ನಮ್ಮನ್ನು ಆರ್ಶೀವದಿಸುತ್ತಾರೆ” ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಡಾ. ಕೃಷ್ಣಮೂರ್ತಿ ಹೇಳಿದ್ದಾರೆ.

“ಬಿಎಸ್‌ಪಿ ನಿರ್ದಿಷ್ಟ ಸಮುದಾಯದ ಮತಗಳ ವಿಭಜನೆ ಮಾಡುತ್ತದೆ ಎಂಬುದು ಅಪ್ರಸ್ತುತ. ಬದಲಾಗಿ, ಹಿಂದಿನ ಆಡಳಿತಗಳಲ್ಲಿ ಬಹುಜನರ (ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ) ಜೀವನವು ಹೇಗೆ ಸುಧಾರಿಸಿಲ್ಲ ಎಂಬುದನ್ನು ಬಿಎಸ್‌ಪಿ ಎತ್ತಿ ತೋರಿಸುತ್ತದೆ” ಎಂದು ಹೇಳಿದ್ದಾರೆ.

ಬಿಎಸ್‌ಪಿ ಪಕ್ಷವು ರಾಜ್ಯದಾದ್ಯಂತ ತನ್ನ ಕಾರ್ಯಕರ್ತರಿಗಾಗಿ ಸರಣಿ ಕಾರ್ಯಾಗಾರಗಳನ್ನು ನಡೆಸುತ್ತಿದೆ ಎಂದು ವರದಿಯಾಗುತ್ತಿದೆ. ಪಕ್ಷವು 2018 ರ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಲ ಕ್ಷೇತ್ರವನ್ನು ಗೆಲ್ಲುವ ಮೂಲಕ ತನ್ನ ಮೊದಲ ಗೆಲುವನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

2004ರಲ್ಲಿ, ಪಕ್ಷದ ನಾಯಕಿ ಮಾಯಾವತಿ ಅವರ ಪ್ರಭಾವ ಉತ್ತುಂಗದಲ್ಲಿದ್ದಾಗ, ಬಿಎಸ್‌ಪಿ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೇವಲ 2.5% ಮತಗಳನ್ನು ಗಳಿಸುವ ಮೂಲಕ, ಸುಮಾರು 45 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯದ ಮೇಲೆ ಪ್ರಭಾವ ಬೀರಿದೆ ಎಂದು ಹೇಳಲಾಗಿದೆ.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ), ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಾಳೆ, ಎಂ.ವೆಂಕಟಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ತಮ್ಮ ಕಾರ್ಯಕರ್ತರನ್ನು  ಸಂಘಟಿಸುತ್ತಿದ್ದಾರೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶವು ಬಿಬಿಎಂಪಿ ಚುನಾವಣೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಗಳಿಗೆ ಮೆಟ್ಟಿಲಾಗಲಿವೆ. ಅಲ್ಲದೆ, ಈ ಸಣ್ಣ ಪಕ್ಷಗಳು ಯಾರ ಭವಿಷ್ಯವನ್ನು ಕಸಿದುಕೊಳ್ಳುತ್ತವೆ ಎಂಬುದರ ಬಗ್ಗೆ ಸುಳಿವು ನೀಡಬಹುದು.


ಇದನ್ನೂ ಓದಿ: ಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸ್ಪರ್ಧೆಯ ಬಗ್ಗೆ ಯಾಕೆ ಉಲ್ಲೇಖಿಸಿಲ್ಲ?

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...