Homeಮುಖಪುಟಮಹಾಶ್ವೇತಾದೇವಿ ಸೇರಿದಂತೆ ಹಲವು ದಲಿತ ಲೇಖಕರ ಪಠ್ಯ ಕೈಬಿಟ್ಟ ದೆಹಲಿ ವಿವಿ: ಭುಗಿಲೆದ್ದ ಆಕ್ರೋಶ

ಮಹಾಶ್ವೇತಾದೇವಿ ಸೇರಿದಂತೆ ಹಲವು ದಲಿತ ಲೇಖಕರ ಪಠ್ಯ ಕೈಬಿಟ್ಟ ದೆಹಲಿ ವಿವಿ: ಭುಗಿಲೆದ್ದ ಆಕ್ರೋಶ

ಮೇಲ್ವೀಚಾರಣ ಸಮಿತಿಯು ದಲಿತ ಲೇಖಕರಾದ ಸೂಸೈರಾಜ್ ಮತ್ತು ಸುಕೀರ್ಥರಾಣಿ ಅವರ ಬರಹಗಳನ್ನು ತೆಗೆದು ಆ ಜಾಗದಲ್ಲಿ "ಮೇಲ್ಜಾತಿ ಬರಹಗಾರ್ತಿಯಾದ ರಮಾಬಾಯಿ"ಯವರ ಪಠ್ಯ ಸೇರಿಸಿದೆ.

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯವು ಪದವಿ ಪೂರ್ವ ತರಗತಿಗಳಿಗೆ ನಿಗಧಿ ಮಾಡಿದ್ದ ಇಂಗ್ಲಿಷ್ ಪಠ್ಯದಲ್ಲಿ ಸ್ತ್ರೀವಾದಿ ಪಠ್ಯ ಸೇರಿದಂತೆ ಹಲವು ದಲಿತರ ಲೇಖಕರ ಪಠ್ಯ ಕೈಬಿಟ್ಟಿರುವುದು ತೀವ್ರ ಟೀಕೆಗೆ ಕಾರಣವಾಗಿವೆ.

ವಿವಿಯ ಮೇಲ್ವೀಚಾರಣ ಸಮಿತಿಯು ದಲಿತ ಲೇಖಕರಾದ ಬಾಮಾ ಫೌಸ್ಟಿನಾ ಸೂಸೈರಾಜ್, ಸುಕೀರ್ಥರಾಣಿ ಮತ್ತು ಬಂಗಾಳಿ ಲೇಖಕಿ ಮಹಾಶ್ವೇತಾ ದೇವಿ ಅವರ ಬರಹಗಳನ್ನು ಪಠ್ಯದಿಂದ ತೆಗೆದುಹಾಕಿದೆ ಎಂದು ವರದಿಯಾಗಿದೆ.

ವಿವಿಯ ಈ ಕ್ರಮವನ್ನು ಅಕಾಡೆಮಿಕ್ ಕೌನ್ಸಿಲ್‌ನ 15 ಸದಸ್ಯರ ಸಮಿತಿಯು ತೀವ್ರವಾಗಿ ವಿರೋಧಿಸಿ ತನ್ನ ಭಿನ್ನಮತವನ್ನು ದಾಖಲಿಸಿದೆ. ಇದು ಪಠ್ಯಕ್ರಮದಲ್ಲಿ ಅತಿ ದೊಡ್ಡ ಧ್ವಂಸ ಎಂದು ಅದು ಟೀಕಿಸಿದೆ.

ಮೇಲ್ವಿಚಾರಣಾ ಸಮಿತಿಯು ಮೊದಲು ಸೂಸೈರಾಜ್ ಮತ್ತು ಸುಕೀರ್ಥರಾಣಿ ಅವರ ಬರಹಗಳನ್ನು ತೆಗೆದು ಆ ಜಾಗದಲ್ಲಿ “ಮೇಲ್ಜಾತಿ ಬರಹಗಾರ್ತಿಯಾದ ರಮಾಬಾಯಿ”ಯವರ ಪಠ್ಯ ಸೇರಿಸಿದೆ. ನಂತರ ಆಂಗ್ಲ ವಿಭಾಗದಲ್ಲಿ ಮಹಾಶ್ವೇತಾ ದೇವಿಯವರ ಬುಡಕಟ್ಟು ಮಹಿಳೆಯ ಕುರಿತ ಕಥೆ ‘ದ್ರೌಪದಿ’ ಯಾವುದೇ ಶೈಕ್ಷಣಿಕ ತರ್ಕವನ್ನು ನೀಡದೆ ಅಳಿಸಿಹಾಕಿದೆ ಅಕಾಡೆಮಿಕ್ ಕೌನ್ಸಿಲ್‌ ಆಕ್ರೋಶ ವ್ಯಕ್ತಪಡಿಸಿದೆ.

ವಸಾಹತುಶಾಹಿ ಪೂರ್ವ ಭಾರತೀಯ ಸಾಹಿತ್ಯ ವಿಭಾಗದಲ್ಲಿ ಚಂದ್ರವತಿ ರಾಮಾಯಣವನ್ನು ತೆಗೆದು ಅಲ್ಲಿ ತುಳಸಿದಾಸರ ಪಠ್ಯ ಸೇರಿಸಿಲಾಗಿದೆ. ರಾಮಾಯಣ ಮಹಾಕಾವ್ಯದ “ಸ್ತ್ರೀವಾದಿ ಓದು” ಪಠ್ಯ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ಮೇಲ್ವಿಚಾರಣಾ ಸಮಿತಿಯಲ್ಲಿ ದಲಿತರು ಮತ್ತು ಆದಿವಾಸಿ ಸಮುದಾಯದ ಸದಸ್ಯರಿಲ್ಲ. ಹಾಗಾಗಿ ಅದು ಸದಾ ದಲಿತರು, ಆದಿವಾಸಿಗಳು, ಮಹಿಳೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರ ಪ್ರಾತಿನಿಧ್ಯದ ವಿರುದ್ಧ ಪೂರ್ವಾಗ್ರಹವನ್ನು ಹೊಂದಿದೆ. ಹಾಗಾಗಿ ಅಂತಹ ಎಲ್ಲಾ ಧ್ವನಿಗಳನ್ನು ಪಠ್ಯಕ್ರಮದಿಂದ ತೆಗೆದುಹಾಕಲು ಅದು ಸಂಘಟಿತ ಪ್ರಯತ್ನ ನಡೆಸುತ್ತಿದೆ ಎಂದು ಕೌನ್ಸಿಲ್ ಆರೋಪಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎಂ.ಕೆ.ಪಂಡಿತ್, “ರದ್ದುಗೊಳಿಸಿರುವ ಪಠ್ಯಗಳ ಲೇಖಕರ ಜಾತಿಯ ಬಗ್ಗೆ ನನಗೆ ತಿಳಿದಿಲ್ಲ. ನಾನು ಜಾತೀಯತೆಯನ್ನು ನಂಬುವುದಿಲ್ಲ. ಭಾರತೀಯರು ವಿವಿಧ ಜಾತಿಗೆ ಸೇರಿದ್ದಾರೆ ಎಂದು ನಾನು ನೋಡುವುದಿಲ್ಲ” ಎಂದಿದ್ದಾರೆ.

ಒಂದು “ನಿರ್ದಿಷ್ಟ ಕಥೆ” ಯನ್ನು ಹಲವು ವರ್ಷಗಳಿಂದ ಕಲಿಸಿದ ನಂತರ ಕೋರ್ಸ್ ರಚನೆಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಹಲವರು ಪಠ್ಯವನ್ನು ಬದಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...