Homeಅಂತರಾಷ್ಟ್ರೀಯಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

ಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

- Advertisement -
- Advertisement -

ಈಗಿನ ತಾಲಿಬಾನ್ ಆಡಳಿತದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂಬುದನ್ನು ಒಪ್ಪಿಕೊಂಡಿರುವ ತಾಲಿಬಾನ್ ಸರ್ಕಾರ, ಅಫ್ಘಾನ್ ಮಹಿಳೆಯರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿದೆ. ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ ಎಂದು ತಿಳಿಸಿದೆ.

ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಸುದ್ದಿಗೋಷ್ಠಿಯಲ್ಲಿ, “ಮಹಿಳೆಯರು ತಮ್ಮ ಸುರಕ್ಷತೆಗಾಗಿ ಕೆಲಸಕ್ಕೆ ಹೋಗಬಾರದು, ನಮ್ಮ ಸೈನಿಕರ ಗುಂಪು ಇನ್ನು ಹಳೆಯ ಮನಸ್ಥಿತಿಯಲ್ಲಿಯೇ ಇದೆ. ಹೊಸ ಬದಲಾವಣೆ ಬರಲು ಸಮಯ ಬೇಕಾಗಿದೆ” ಎಂದಿದ್ದಾರೆ.

“ಮಹಿಳೆಯರು ಮನೆಯಲ್ಲಿಯೇ ಇರುವ ಕ್ರಮವು ಅಗತ್ಯವಾಗಿದೆ. ಏಕೆಂದರೆ ತಾಲಿಬಾನ್ ಬದಲಾಗುತ್ತಲೇ ಇದೆ ಮತ್ತು ಅವರಿಗೆ ಮಹಿಳೆಯರಿಗೆ ಗೌರವ ಕೊಡುವ ತರಬೇತಿ ನೀಡಿಲ್ಲ” ಎಂದು ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

1996 ಮತ್ತು 2001 ರ ನಡುವೆ ತಾಲಿಬಾನ್ ಅಧಿಕಾರದಲ್ಲಿದ್ದಾಗ ಮಹಿಳೆಯರು ಕೆಲಸಕ್ಕೆ ಹೋಗುವುದನ್ನು  ನಿಷೇಧಿಸಿತ್ತು. ಅವರನ್ನು ಮನೆಯಿಂದ ಹೊರಹೋಗದಂತೆ ತಡೆಹಿಡಿದಿತ್ತು. ಕಾಲುಗಳು ಕೂಡ ಕಾಣದಂತೆ ಸಂಪೂರ್ಣ ದೇಹವನ್ನು ಮುಚ್ಚುವಂತೆ ಒತ್ತಾಯಿಸಲಾಗಿತ್ತು.

ಈ ಬಾರಿ ತಾಲಿಬಾನ್ ತನ್ನ ಹೊಸ ಯುಗವು ಹೆಚ್ಚು ಆಶಾದಾಯಕವಾಗಿರುತ್ತದೆ ಎಂದು ಭರವಸೆ ನೀಡಿತ್ತು. ಆದರೆ,  ತಾಲಿಬಾನ್ ನಾಯಕರು ಮಹಿಳಾ ಹಕ್ಕುಗಳನ್ನು ಕಸಿದುಕೊಳ್ಳುವುದಿಲ್ಲ ಎಂದು ಭರವಸೆ ನೀಡಲು ನಿರಾಕರಿಸಿದ್ದಾರೆ. ಈಗಾಗಲೇ ಅನೇಕ ಮಹಿಳೆಯರು ಹಿಂಸೆಯನ್ನು ಎದುರಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಅಫ್ಘಾನಿಸ್ತಾನವನ್ನು ತೊರೆದ ಒಟ್ಟು ಜನಸಂಖ್ಯೆ 19,000. ಇದರಲ್ಲಿ 11,200 ಜನರು 42 ಯುಎಸ್ ಮಿಲಿಟರಿ ವಿಮಾನಗಳಲ್ಲಿ ಸ್ಥಳಾಂತರಗೊಂಡಿದ್ದಾರೆ. ಇತರ 7,800 ಜನರನ್ನು ಒಕ್ಕೂಟದ ಪಾಲುದಾರರಿಂದ ಸ್ಥಳಾಂತರಿಸಲಾಗಿದೆ ಎಂದು ಬುಧವಾರ ಘೋಷಿಸಿಸಲಾಗಿದೆ.

ಇನ್ನು, ಅಫ್ಘಾನ್‌ನಿಂದ ಭಾರತಕ್ಕೆ ಬಂದಿರುವ ನೂರಾರು ಅಫ್ಘಾನಿಸ್ತಾನದ ಪ್ರಜೆಗಳು ನಿರಾಶ್ರಿತರ ಕಾರ್ಡ್‌ಗಾಗಿ ಒತ್ತಾಯಿಸಿ ಬುಧವಾರ ನವದೆಹಲಿಯಲ್ಲಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ (UNHRC) ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ನಿರಾಶ್ರಿತರ ಕಾರ್ಡ್‌ಗಾಗಿ ಅಫ್ಘಾನ್ ನಿರಾಶ್ರಿತರು ಕಳೆದ ನಾಲ್ಕು ದಿನಗಳಿಂದ  ಪ್ರತಿಭಟನೆ ನಡೆಸುತ್ತಿದ್ದಾರೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ನಿರಾಶ್ರಿತರ ಕಾರ್ಡುಗಳು ಸಿಗದ ಹಿನ್ನೆಲೆ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...