Homeಕರ್ನಾಟಕಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ನಿರ್ಭಯಾ ಗೈಡ್‌ಲೈನ್ಸ್‌ ಪ್ರಕಾರ ಜವಾಬ್ದಾರಿಯುತ ಸ್ಥಾನದಲ್ಲಿರುವವರು, ಅಧಿಕಾರಿಗಳು ಸಂತ್ರಸ್ತರ ವಿರುದ್ಧ ಹೇಳಿಕೆ ಕೊಡುವಂತಿಲ್ಲ. ಗೃಹ ಸಚಿವರು ಅದನ್ನು ಉಲ್ಲಂಘಿಸಿದ್ದಾರೆ..

- Advertisement -
- Advertisement -

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊರ್ವಳ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣವೀಗ ರಾಜಕೀಯ ಕೆಸರೆರಚಾಟ ಕಾರಣವಾಗಿದೆ. ನಿರ್ಜನ ಪ್ರದೇಶಕ್ಕೆ ಯುವತಿ ಆ ಸಮಯದಲ್ಲಿ ಅಲ್ಲಿಗೆ ಹೋಗಿದ್ದು ತಪ್ಪು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೇಜವಾಬ್ದಾರಿ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.

“ಯುವಕ-ಯುವತಿ 7, 7:30ಯ ಸಮಯಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಯುವತಿ ಅಲ್ಲಿಗೆ ಹೋಗಿದ್ದೆ ತಪ್ಪು, ಸಂಜೆಯ ವೇಳೆ ಹೊರ ಬಂದಿದ್ದೆ ತಪ್ಪು ಎನ್ನುವಂತೆ ಮಾತನಾಡಿದ್ದಾರೆ. ಗೃಹ ಸಚಿವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಪ್ರಕರಣ ಕುರಿತು ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್ ವಿರುದ್ಧ ಗೃಹ ಸಚಿವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್‌ನವರು ನನ್ನ ಮೇಲೆ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಗೃಹ ಸಚಿವರನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಾಜಕೀಯ ಲಾಭ ಪಡೆಯಲು ಅಮಾನುಷವಾದ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ಹೀಗಿದೆ.

“ರೇಪ್ ಆಗಿದ್ದು ಅಲ್ಲಿ… ಕಾಂಗ್ರೆಸ್‌ ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಗೃಹ ಸಚಿವರನ್ನುರೇಪ್ ಮಾಡಲು ಪ್ರಯತ್ನಿಸುತ್ತಿದೆ. ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿರುವುದು ಅಮಾನುಷವಾದ ಕೆಲಸ. ಎಲ್ಲೋ ನಡೆಯುತ್ತದೆ. ನಾವೆಲ್ಲ ಮಾನವೀಯ ದೃಷ್ಠಿಯಿಂದ ಅದನ್ನು ತನಿಖೆ ಮಾಡಿಸುವುದು ಬಿಟ್ಟು ರಾಜಕೀಯ ಲಾಭ ಗಳಿಸುವ ಪ್ರಯತ್ನ ನಡೆಸುತ್ತಿರುವುದರ ಬಗ್ಗೆ ಜನ ಯೋಚನೆ ಮಾಡುತ್ತಾರೆ. ನಾವು ಏನು ಮಾಡಬೇಕು, ನಮ್ಮ ಪೊಲೀಸರು ಏನ್ ಮಾಡಬೇಕು ಅಂದರೆ, ಮುಂದೆ ಈ ರೀತಿಯಾಗದಂತೆ ಸಂದೇಶ ನೀಡಬೇಕು ಇದರ ಸೂಚನೆ ನೀಡಿದ್ದೇನೆ ಪೊಲೀಸರು ಹಾಗೆ ಮಾಡುತ್ತಾರೆ. ಅವರು 7, 7:30ಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ. ಹೋಗಿದ್ದಾಗ.. ಅಲ್ಲಿ ನಿರ್ಜನ ಪ್ರದೇಶ, ಹೇಳಿ ಕೇಳಿ ಯಾರು ಇರುವುದಿಲ್ಲ. ಅಲ್ಲಿ ಗರುಡ ವಾಹನ ತಿರುಗಬೇಕಿತ್ತು ಅಂತ ಹೇಳ್ತಿದ್ರು, ಅದು ಇರಲಿಲ್ಲ. ನಾನು ಇವತ್ತು ಅಲ್ಲಿಗೆ ಅಧಿಕಾರಿಗಳ ಜೊತೆಗೆ ಹೋಗ್ತಿದ್ದೇನೆ. ಎಲ್ಲಿ ಸಮಸ್ಯೆಗಳಿವೆ ಎಂಬುದನ್ನು ಚರ್ಚಿಸಿ ಮುಂದೆ ಹೀಗಾಗದಂತೆ ನೋಡಿಕೊಳ್ತೇವೆ” 

ಇದನ್ನೂ ಓದಿ: ಸಾಹಿತಿಯ ವೈಯಕ್ತಿಕ ಅನುಭವಗಳನ್ನು ಸಾರ್ವತ್ರಿಕಗೊಳಿಸಿ ಪ್ರತಿಪಾದಿಸುವ ಅಪಾಯ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ರೇಪ್ ಮಾಡುವುದೇನಿದ್ದರೂ ಬಿಜೆಪಿಯ ಸಂಸ್ಕೃತಿಯೇ ಹೊರತು ಕಾಂಗ್ರೆಸ್‌ನದ್ದಲ್ಲ ಗೃಹಸಚಿವರೇ ಎಂದು ವ್ಯಂಗ್ಯವಾಡಿದೆ.

“ರೇಪ್ ಮಾಡುವುದೇನಿದ್ದರೂ ಬಿಜೆಪಿಯ ಸಂಸ್ಕೃತಿಯೇ ಹೊರತು ಕಾಂಗ್ರೆಸ್‌ನದ್ದಲ್ಲ ಗೃಹಸಚಿವರೇ. ಕಳೆದ ಬಾರಿಯ ಅಧಿಕಾರಾವಧಿಯಲ್ಲಿ ನಿಮ್ಮ ಶಾಸಕರೊಬ್ಬರು ಅತ್ಯಾಚಾರವೆಸಗಿದ್ದರು.  ಈ ಬಾರಿ ನಿಮ್ಮ ಮಾಜಿ ಸಚಿವರೊಬ್ಬರು ಉದ್ಯೋಗ ಕೇಳಿದ ಯುವತಿಯನ್ನು ಅತ್ಯಾಚಾರವೆಸಗಿದ್ದರು. ಅತ್ಯಾಚಾರಿಗಳೇ ತುಂಬಿರುವ ಬಿಜೆಪಿಯಿಂದ ಇನ್ನೆಂತಹ ಹೇಳಿಕೆ ನಿರೀಕ್ಷಿಸಲಾದೀತು!” ಎಂದು ಕಿಡಿ ಕಾರಿದೆ.

7.30ರ ಸಮಯದಲ್ಲಿ ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂಬ ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ, “ರಾತ್ರಿ 7.30ರ ಸಮಯದಲ್ಲಿ ಅವರು ಅಲ್ಲಿಗೆ ಹೋಗಲೇಬಾರದಿತ್ತು! ರಾಜ್ಯದ ರಕ್ಷಣೆ ಹೊತ್ತ ಗೃಹಸಚಿವರೇ, ಇಂತಹ ಅಯೋಗ್ಯತನದ ಹೇಳಿಕೆ ಕೊಡಲು ನಾಚಿಕೆ ಆಗುವುದಿಲ್ಲವೇ..? ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ 7.30ರ ಸಂಜೆಯೂ ಅಪಾಯಕಾರಿ ಎಂದು ಸ್ವತಃ ಅವರೇ ಒಪ್ಪಿದ್ದಾರೆ. ಇಂತಹ ಅಸಮರ್ಥ ಬಿಜೆಪಿಯಿಂದ ರಾಜ್ಯದ ಜನತೆಯ ರಕ್ಷಣೆ ಸಾಧ್ಯವೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ನಿರ್ಭಯಾ ಗೈಡ್‌ಲೈನ್ಸ್‌ ಪ್ರಕಾರ ಜವಾಬ್ದಾರಿಯುತ ಸ್ಥಾನದಲ್ಲಿರುವವರು, ಅಧಿಕಾರಿಗಳು ಸಂತ್ರಸ್ತರ ವಿರುದ್ಧ ಹೇಳಿಕೆ ಕೊಡುವಂತಿಲ್ಲ. ಇಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವಾಗಿದ್ದರೂ ಅದು ಒಂದು ಸರ್ಕಾರದ ವಿರುದ್ಧದ ಕೃತ್ಯ. ಅಲ್ಲಿ ವಿದ್ಯಾರ್ಥಿನಿ ಸಂತ್ರಸ್ತೆ ಅಷ್ಟೇ. ಇಂತಹ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯದ ಕೆಲಸ. ಅದರಲ್ಲಿ ವಿಫಲವಾಗಿದ್ದಕ್ಕೆ ಕೊಲೆ, ಅತ್ಯಾಚಾರಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲಿ ಗೃಹ ಸಚಿವರ ಹೇಳಿಕೆ ತನಿಖೆ ಮೇಲೆ ಪ್ರಭಾವ ಬಿರುತ್ತದೆ ಮತ್ತು ಆರೋಪಿಗಳ ಪರವಾಗಿದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಹೆಸರು ಹೇಳಲು ಇಚ್ಛಿಸದ ವಕೀಲರು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...