Homeಕರ್ನಾಟಕಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ನಿರ್ಭಯಾ ಗೈಡ್‌ಲೈನ್ಸ್‌ ಪ್ರಕಾರ ಜವಾಬ್ದಾರಿಯುತ ಸ್ಥಾನದಲ್ಲಿರುವವರು, ಅಧಿಕಾರಿಗಳು ಸಂತ್ರಸ್ತರ ವಿರುದ್ಧ ಹೇಳಿಕೆ ಕೊಡುವಂತಿಲ್ಲ. ಗೃಹ ಸಚಿವರು ಅದನ್ನು ಉಲ್ಲಂಘಿಸಿದ್ದಾರೆ..

- Advertisement -
- Advertisement -

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊರ್ವಳ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣವೀಗ ರಾಜಕೀಯ ಕೆಸರೆರಚಾಟ ಕಾರಣವಾಗಿದೆ. ನಿರ್ಜನ ಪ್ರದೇಶಕ್ಕೆ ಯುವತಿ ಆ ಸಮಯದಲ್ಲಿ ಅಲ್ಲಿಗೆ ಹೋಗಿದ್ದು ತಪ್ಪು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೇಜವಾಬ್ದಾರಿ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.

“ಯುವಕ-ಯುವತಿ 7, 7:30ಯ ಸಮಯಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಯುವತಿ ಅಲ್ಲಿಗೆ ಹೋಗಿದ್ದೆ ತಪ್ಪು, ಸಂಜೆಯ ವೇಳೆ ಹೊರ ಬಂದಿದ್ದೆ ತಪ್ಪು ಎನ್ನುವಂತೆ ಮಾತನಾಡಿದ್ದಾರೆ. ಗೃಹ ಸಚಿವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಪ್ರಕರಣ ಕುರಿತು ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್ ವಿರುದ್ಧ ಗೃಹ ಸಚಿವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್‌ನವರು ನನ್ನ ಮೇಲೆ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಗೃಹ ಸಚಿವರನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಾಜಕೀಯ ಲಾಭ ಪಡೆಯಲು ಅಮಾನುಷವಾದ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ಹೀಗಿದೆ.

“ರೇಪ್ ಆಗಿದ್ದು ಅಲ್ಲಿ… ಕಾಂಗ್ರೆಸ್‌ ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಗೃಹ ಸಚಿವರನ್ನುರೇಪ್ ಮಾಡಲು ಪ್ರಯತ್ನಿಸುತ್ತಿದೆ. ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿರುವುದು ಅಮಾನುಷವಾದ ಕೆಲಸ. ಎಲ್ಲೋ ನಡೆಯುತ್ತದೆ. ನಾವೆಲ್ಲ ಮಾನವೀಯ ದೃಷ್ಠಿಯಿಂದ ಅದನ್ನು ತನಿಖೆ ಮಾಡಿಸುವುದು ಬಿಟ್ಟು ರಾಜಕೀಯ ಲಾಭ ಗಳಿಸುವ ಪ್ರಯತ್ನ ನಡೆಸುತ್ತಿರುವುದರ ಬಗ್ಗೆ ಜನ ಯೋಚನೆ ಮಾಡುತ್ತಾರೆ. ನಾವು ಏನು ಮಾಡಬೇಕು, ನಮ್ಮ ಪೊಲೀಸರು ಏನ್ ಮಾಡಬೇಕು ಅಂದರೆ, ಮುಂದೆ ಈ ರೀತಿಯಾಗದಂತೆ ಸಂದೇಶ ನೀಡಬೇಕು ಇದರ ಸೂಚನೆ ನೀಡಿದ್ದೇನೆ ಪೊಲೀಸರು ಹಾಗೆ ಮಾಡುತ್ತಾರೆ. ಅವರು 7, 7:30ಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ. ಹೋಗಿದ್ದಾಗ.. ಅಲ್ಲಿ ನಿರ್ಜನ ಪ್ರದೇಶ, ಹೇಳಿ ಕೇಳಿ ಯಾರು ಇರುವುದಿಲ್ಲ. ಅಲ್ಲಿ ಗರುಡ ವಾಹನ ತಿರುಗಬೇಕಿತ್ತು ಅಂತ ಹೇಳ್ತಿದ್ರು, ಅದು ಇರಲಿಲ್ಲ. ನಾನು ಇವತ್ತು ಅಲ್ಲಿಗೆ ಅಧಿಕಾರಿಗಳ ಜೊತೆಗೆ ಹೋಗ್ತಿದ್ದೇನೆ. ಎಲ್ಲಿ ಸಮಸ್ಯೆಗಳಿವೆ ಎಂಬುದನ್ನು ಚರ್ಚಿಸಿ ಮುಂದೆ ಹೀಗಾಗದಂತೆ ನೋಡಿಕೊಳ್ತೇವೆ” 

ಇದನ್ನೂ ಓದಿ: ಸಾಹಿತಿಯ ವೈಯಕ್ತಿಕ ಅನುಭವಗಳನ್ನು ಸಾರ್ವತ್ರಿಕಗೊಳಿಸಿ ಪ್ರತಿಪಾದಿಸುವ ಅಪಾಯ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ರೇಪ್ ಮಾಡುವುದೇನಿದ್ದರೂ ಬಿಜೆಪಿಯ ಸಂಸ್ಕೃತಿಯೇ ಹೊರತು ಕಾಂಗ್ರೆಸ್‌ನದ್ದಲ್ಲ ಗೃಹಸಚಿವರೇ ಎಂದು ವ್ಯಂಗ್ಯವಾಡಿದೆ.

“ರೇಪ್ ಮಾಡುವುದೇನಿದ್ದರೂ ಬಿಜೆಪಿಯ ಸಂಸ್ಕೃತಿಯೇ ಹೊರತು ಕಾಂಗ್ರೆಸ್‌ನದ್ದಲ್ಲ ಗೃಹಸಚಿವರೇ. ಕಳೆದ ಬಾರಿಯ ಅಧಿಕಾರಾವಧಿಯಲ್ಲಿ ನಿಮ್ಮ ಶಾಸಕರೊಬ್ಬರು ಅತ್ಯಾಚಾರವೆಸಗಿದ್ದರು.  ಈ ಬಾರಿ ನಿಮ್ಮ ಮಾಜಿ ಸಚಿವರೊಬ್ಬರು ಉದ್ಯೋಗ ಕೇಳಿದ ಯುವತಿಯನ್ನು ಅತ್ಯಾಚಾರವೆಸಗಿದ್ದರು. ಅತ್ಯಾಚಾರಿಗಳೇ ತುಂಬಿರುವ ಬಿಜೆಪಿಯಿಂದ ಇನ್ನೆಂತಹ ಹೇಳಿಕೆ ನಿರೀಕ್ಷಿಸಲಾದೀತು!” ಎಂದು ಕಿಡಿ ಕಾರಿದೆ.

7.30ರ ಸಮಯದಲ್ಲಿ ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂಬ ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ, “ರಾತ್ರಿ 7.30ರ ಸಮಯದಲ್ಲಿ ಅವರು ಅಲ್ಲಿಗೆ ಹೋಗಲೇಬಾರದಿತ್ತು! ರಾಜ್ಯದ ರಕ್ಷಣೆ ಹೊತ್ತ ಗೃಹಸಚಿವರೇ, ಇಂತಹ ಅಯೋಗ್ಯತನದ ಹೇಳಿಕೆ ಕೊಡಲು ನಾಚಿಕೆ ಆಗುವುದಿಲ್ಲವೇ..? ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ 7.30ರ ಸಂಜೆಯೂ ಅಪಾಯಕಾರಿ ಎಂದು ಸ್ವತಃ ಅವರೇ ಒಪ್ಪಿದ್ದಾರೆ. ಇಂತಹ ಅಸಮರ್ಥ ಬಿಜೆಪಿಯಿಂದ ರಾಜ್ಯದ ಜನತೆಯ ರಕ್ಷಣೆ ಸಾಧ್ಯವೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ನಿರ್ಭಯಾ ಗೈಡ್‌ಲೈನ್ಸ್‌ ಪ್ರಕಾರ ಜವಾಬ್ದಾರಿಯುತ ಸ್ಥಾನದಲ್ಲಿರುವವರು, ಅಧಿಕಾರಿಗಳು ಸಂತ್ರಸ್ತರ ವಿರುದ್ಧ ಹೇಳಿಕೆ ಕೊಡುವಂತಿಲ್ಲ. ಇಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವಾಗಿದ್ದರೂ ಅದು ಒಂದು ಸರ್ಕಾರದ ವಿರುದ್ಧದ ಕೃತ್ಯ. ಅಲ್ಲಿ ವಿದ್ಯಾರ್ಥಿನಿ ಸಂತ್ರಸ್ತೆ ಅಷ್ಟೇ. ಇಂತಹ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯದ ಕೆಲಸ. ಅದರಲ್ಲಿ ವಿಫಲವಾಗಿದ್ದಕ್ಕೆ ಕೊಲೆ, ಅತ್ಯಾಚಾರಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲಿ ಗೃಹ ಸಚಿವರ ಹೇಳಿಕೆ ತನಿಖೆ ಮೇಲೆ ಪ್ರಭಾವ ಬಿರುತ್ತದೆ ಮತ್ತು ಆರೋಪಿಗಳ ಪರವಾಗಿದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಹೆಸರು ಹೇಳಲು ಇಚ್ಛಿಸದ ವಕೀಲರು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...