Homeಕರ್ನಾಟಕಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ನಿರ್ಭಯಾ ಗೈಡ್‌ಲೈನ್ಸ್‌ ಪ್ರಕಾರ ಜವಾಬ್ದಾರಿಯುತ ಸ್ಥಾನದಲ್ಲಿರುವವರು, ಅಧಿಕಾರಿಗಳು ಸಂತ್ರಸ್ತರ ವಿರುದ್ಧ ಹೇಳಿಕೆ ಕೊಡುವಂತಿಲ್ಲ. ಗೃಹ ಸಚಿವರು ಅದನ್ನು ಉಲ್ಲಂಘಿಸಿದ್ದಾರೆ..

- Advertisement -
- Advertisement -

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊರ್ವಳ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣವೀಗ ರಾಜಕೀಯ ಕೆಸರೆರಚಾಟ ಕಾರಣವಾಗಿದೆ. ನಿರ್ಜನ ಪ್ರದೇಶಕ್ಕೆ ಯುವತಿ ಆ ಸಮಯದಲ್ಲಿ ಅಲ್ಲಿಗೆ ಹೋಗಿದ್ದು ತಪ್ಪು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೇಜವಾಬ್ದಾರಿ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.

“ಯುವಕ-ಯುವತಿ 7, 7:30ಯ ಸಮಯಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಯುವತಿ ಅಲ್ಲಿಗೆ ಹೋಗಿದ್ದೆ ತಪ್ಪು, ಸಂಜೆಯ ವೇಳೆ ಹೊರ ಬಂದಿದ್ದೆ ತಪ್ಪು ಎನ್ನುವಂತೆ ಮಾತನಾಡಿದ್ದಾರೆ. ಗೃಹ ಸಚಿವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಪ್ರಕರಣ ಕುರಿತು ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್ ವಿರುದ್ಧ ಗೃಹ ಸಚಿವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್‌ನವರು ನನ್ನ ಮೇಲೆ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಗೃಹ ಸಚಿವರನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಾಜಕೀಯ ಲಾಭ ಪಡೆಯಲು ಅಮಾನುಷವಾದ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ಹೀಗಿದೆ.

“ರೇಪ್ ಆಗಿದ್ದು ಅಲ್ಲಿ… ಕಾಂಗ್ರೆಸ್‌ ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಗೃಹ ಸಚಿವರನ್ನುರೇಪ್ ಮಾಡಲು ಪ್ರಯತ್ನಿಸುತ್ತಿದೆ. ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿರುವುದು ಅಮಾನುಷವಾದ ಕೆಲಸ. ಎಲ್ಲೋ ನಡೆಯುತ್ತದೆ. ನಾವೆಲ್ಲ ಮಾನವೀಯ ದೃಷ್ಠಿಯಿಂದ ಅದನ್ನು ತನಿಖೆ ಮಾಡಿಸುವುದು ಬಿಟ್ಟು ರಾಜಕೀಯ ಲಾಭ ಗಳಿಸುವ ಪ್ರಯತ್ನ ನಡೆಸುತ್ತಿರುವುದರ ಬಗ್ಗೆ ಜನ ಯೋಚನೆ ಮಾಡುತ್ತಾರೆ. ನಾವು ಏನು ಮಾಡಬೇಕು, ನಮ್ಮ ಪೊಲೀಸರು ಏನ್ ಮಾಡಬೇಕು ಅಂದರೆ, ಮುಂದೆ ಈ ರೀತಿಯಾಗದಂತೆ ಸಂದೇಶ ನೀಡಬೇಕು ಇದರ ಸೂಚನೆ ನೀಡಿದ್ದೇನೆ ಪೊಲೀಸರು ಹಾಗೆ ಮಾಡುತ್ತಾರೆ. ಅವರು 7, 7:30ಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ. ಹೋಗಿದ್ದಾಗ.. ಅಲ್ಲಿ ನಿರ್ಜನ ಪ್ರದೇಶ, ಹೇಳಿ ಕೇಳಿ ಯಾರು ಇರುವುದಿಲ್ಲ. ಅಲ್ಲಿ ಗರುಡ ವಾಹನ ತಿರುಗಬೇಕಿತ್ತು ಅಂತ ಹೇಳ್ತಿದ್ರು, ಅದು ಇರಲಿಲ್ಲ. ನಾನು ಇವತ್ತು ಅಲ್ಲಿಗೆ ಅಧಿಕಾರಿಗಳ ಜೊತೆಗೆ ಹೋಗ್ತಿದ್ದೇನೆ. ಎಲ್ಲಿ ಸಮಸ್ಯೆಗಳಿವೆ ಎಂಬುದನ್ನು ಚರ್ಚಿಸಿ ಮುಂದೆ ಹೀಗಾಗದಂತೆ ನೋಡಿಕೊಳ್ತೇವೆ” 

ಇದನ್ನೂ ಓದಿ: ಸಾಹಿತಿಯ ವೈಯಕ್ತಿಕ ಅನುಭವಗಳನ್ನು ಸಾರ್ವತ್ರಿಕಗೊಳಿಸಿ ಪ್ರತಿಪಾದಿಸುವ ಅಪಾಯ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ರೇಪ್ ಮಾಡುವುದೇನಿದ್ದರೂ ಬಿಜೆಪಿಯ ಸಂಸ್ಕೃತಿಯೇ ಹೊರತು ಕಾಂಗ್ರೆಸ್‌ನದ್ದಲ್ಲ ಗೃಹಸಚಿವರೇ ಎಂದು ವ್ಯಂಗ್ಯವಾಡಿದೆ.

“ರೇಪ್ ಮಾಡುವುದೇನಿದ್ದರೂ ಬಿಜೆಪಿಯ ಸಂಸ್ಕೃತಿಯೇ ಹೊರತು ಕಾಂಗ್ರೆಸ್‌ನದ್ದಲ್ಲ ಗೃಹಸಚಿವರೇ. ಕಳೆದ ಬಾರಿಯ ಅಧಿಕಾರಾವಧಿಯಲ್ಲಿ ನಿಮ್ಮ ಶಾಸಕರೊಬ್ಬರು ಅತ್ಯಾಚಾರವೆಸಗಿದ್ದರು.  ಈ ಬಾರಿ ನಿಮ್ಮ ಮಾಜಿ ಸಚಿವರೊಬ್ಬರು ಉದ್ಯೋಗ ಕೇಳಿದ ಯುವತಿಯನ್ನು ಅತ್ಯಾಚಾರವೆಸಗಿದ್ದರು. ಅತ್ಯಾಚಾರಿಗಳೇ ತುಂಬಿರುವ ಬಿಜೆಪಿಯಿಂದ ಇನ್ನೆಂತಹ ಹೇಳಿಕೆ ನಿರೀಕ್ಷಿಸಲಾದೀತು!” ಎಂದು ಕಿಡಿ ಕಾರಿದೆ.

7.30ರ ಸಮಯದಲ್ಲಿ ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂಬ ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ, “ರಾತ್ರಿ 7.30ರ ಸಮಯದಲ್ಲಿ ಅವರು ಅಲ್ಲಿಗೆ ಹೋಗಲೇಬಾರದಿತ್ತು! ರಾಜ್ಯದ ರಕ್ಷಣೆ ಹೊತ್ತ ಗೃಹಸಚಿವರೇ, ಇಂತಹ ಅಯೋಗ್ಯತನದ ಹೇಳಿಕೆ ಕೊಡಲು ನಾಚಿಕೆ ಆಗುವುದಿಲ್ಲವೇ..? ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ 7.30ರ ಸಂಜೆಯೂ ಅಪಾಯಕಾರಿ ಎಂದು ಸ್ವತಃ ಅವರೇ ಒಪ್ಪಿದ್ದಾರೆ. ಇಂತಹ ಅಸಮರ್ಥ ಬಿಜೆಪಿಯಿಂದ ರಾಜ್ಯದ ಜನತೆಯ ರಕ್ಷಣೆ ಸಾಧ್ಯವೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ನಿರ್ಭಯಾ ಗೈಡ್‌ಲೈನ್ಸ್‌ ಪ್ರಕಾರ ಜವಾಬ್ದಾರಿಯುತ ಸ್ಥಾನದಲ್ಲಿರುವವರು, ಅಧಿಕಾರಿಗಳು ಸಂತ್ರಸ್ತರ ವಿರುದ್ಧ ಹೇಳಿಕೆ ಕೊಡುವಂತಿಲ್ಲ. ಇಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವಾಗಿದ್ದರೂ ಅದು ಒಂದು ಸರ್ಕಾರದ ವಿರುದ್ಧದ ಕೃತ್ಯ. ಅಲ್ಲಿ ವಿದ್ಯಾರ್ಥಿನಿ ಸಂತ್ರಸ್ತೆ ಅಷ್ಟೇ. ಇಂತಹ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯದ ಕೆಲಸ. ಅದರಲ್ಲಿ ವಿಫಲವಾಗಿದ್ದಕ್ಕೆ ಕೊಲೆ, ಅತ್ಯಾಚಾರಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲಿ ಗೃಹ ಸಚಿವರ ಹೇಳಿಕೆ ತನಿಖೆ ಮೇಲೆ ಪ್ರಭಾವ ಬಿರುತ್ತದೆ ಮತ್ತು ಆರೋಪಿಗಳ ಪರವಾಗಿದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಹೆಸರು ಹೇಳಲು ಇಚ್ಛಿಸದ ವಕೀಲರು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...