Homeಕರ್ನಾಟಕಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ನಿರ್ಭಯಾ ಗೈಡ್‌ಲೈನ್ಸ್‌ ಪ್ರಕಾರ ಜವಾಬ್ದಾರಿಯುತ ಸ್ಥಾನದಲ್ಲಿರುವವರು, ಅಧಿಕಾರಿಗಳು ಸಂತ್ರಸ್ತರ ವಿರುದ್ಧ ಹೇಳಿಕೆ ಕೊಡುವಂತಿಲ್ಲ. ಗೃಹ ಸಚಿವರು ಅದನ್ನು ಉಲ್ಲಂಘಿಸಿದ್ದಾರೆ..

- Advertisement -
- Advertisement -

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊರ್ವಳ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣವೀಗ ರಾಜಕೀಯ ಕೆಸರೆರಚಾಟ ಕಾರಣವಾಗಿದೆ. ನಿರ್ಜನ ಪ್ರದೇಶಕ್ಕೆ ಯುವತಿ ಆ ಸಮಯದಲ್ಲಿ ಅಲ್ಲಿಗೆ ಹೋಗಿದ್ದು ತಪ್ಪು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೇಜವಾಬ್ದಾರಿ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.

“ಯುವಕ-ಯುವತಿ 7, 7:30ಯ ಸಮಯಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಯುವತಿ ಅಲ್ಲಿಗೆ ಹೋಗಿದ್ದೆ ತಪ್ಪು, ಸಂಜೆಯ ವೇಳೆ ಹೊರ ಬಂದಿದ್ದೆ ತಪ್ಪು ಎನ್ನುವಂತೆ ಮಾತನಾಡಿದ್ದಾರೆ. ಗೃಹ ಸಚಿವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಪ್ರಕರಣ ಕುರಿತು ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್ ವಿರುದ್ಧ ಗೃಹ ಸಚಿವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್‌ನವರು ನನ್ನ ಮೇಲೆ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಗೃಹ ಸಚಿವರನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಾಜಕೀಯ ಲಾಭ ಪಡೆಯಲು ಅಮಾನುಷವಾದ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ಹೀಗಿದೆ.

“ರೇಪ್ ಆಗಿದ್ದು ಅಲ್ಲಿ… ಕಾಂಗ್ರೆಸ್‌ ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಗೃಹ ಸಚಿವರನ್ನುರೇಪ್ ಮಾಡಲು ಪ್ರಯತ್ನಿಸುತ್ತಿದೆ. ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿರುವುದು ಅಮಾನುಷವಾದ ಕೆಲಸ. ಎಲ್ಲೋ ನಡೆಯುತ್ತದೆ. ನಾವೆಲ್ಲ ಮಾನವೀಯ ದೃಷ್ಠಿಯಿಂದ ಅದನ್ನು ತನಿಖೆ ಮಾಡಿಸುವುದು ಬಿಟ್ಟು ರಾಜಕೀಯ ಲಾಭ ಗಳಿಸುವ ಪ್ರಯತ್ನ ನಡೆಸುತ್ತಿರುವುದರ ಬಗ್ಗೆ ಜನ ಯೋಚನೆ ಮಾಡುತ್ತಾರೆ. ನಾವು ಏನು ಮಾಡಬೇಕು, ನಮ್ಮ ಪೊಲೀಸರು ಏನ್ ಮಾಡಬೇಕು ಅಂದರೆ, ಮುಂದೆ ಈ ರೀತಿಯಾಗದಂತೆ ಸಂದೇಶ ನೀಡಬೇಕು ಇದರ ಸೂಚನೆ ನೀಡಿದ್ದೇನೆ ಪೊಲೀಸರು ಹಾಗೆ ಮಾಡುತ್ತಾರೆ. ಅವರು 7, 7:30ಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ. ಹೋಗಿದ್ದಾಗ.. ಅಲ್ಲಿ ನಿರ್ಜನ ಪ್ರದೇಶ, ಹೇಳಿ ಕೇಳಿ ಯಾರು ಇರುವುದಿಲ್ಲ. ಅಲ್ಲಿ ಗರುಡ ವಾಹನ ತಿರುಗಬೇಕಿತ್ತು ಅಂತ ಹೇಳ್ತಿದ್ರು, ಅದು ಇರಲಿಲ್ಲ. ನಾನು ಇವತ್ತು ಅಲ್ಲಿಗೆ ಅಧಿಕಾರಿಗಳ ಜೊತೆಗೆ ಹೋಗ್ತಿದ್ದೇನೆ. ಎಲ್ಲಿ ಸಮಸ್ಯೆಗಳಿವೆ ಎಂಬುದನ್ನು ಚರ್ಚಿಸಿ ಮುಂದೆ ಹೀಗಾಗದಂತೆ ನೋಡಿಕೊಳ್ತೇವೆ” 

ಇದನ್ನೂ ಓದಿ: ಸಾಹಿತಿಯ ವೈಯಕ್ತಿಕ ಅನುಭವಗಳನ್ನು ಸಾರ್ವತ್ರಿಕಗೊಳಿಸಿ ಪ್ರತಿಪಾದಿಸುವ ಅಪಾಯ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ರೇಪ್ ಮಾಡುವುದೇನಿದ್ದರೂ ಬಿಜೆಪಿಯ ಸಂಸ್ಕೃತಿಯೇ ಹೊರತು ಕಾಂಗ್ರೆಸ್‌ನದ್ದಲ್ಲ ಗೃಹಸಚಿವರೇ ಎಂದು ವ್ಯಂಗ್ಯವಾಡಿದೆ.

“ರೇಪ್ ಮಾಡುವುದೇನಿದ್ದರೂ ಬಿಜೆಪಿಯ ಸಂಸ್ಕೃತಿಯೇ ಹೊರತು ಕಾಂಗ್ರೆಸ್‌ನದ್ದಲ್ಲ ಗೃಹಸಚಿವರೇ. ಕಳೆದ ಬಾರಿಯ ಅಧಿಕಾರಾವಧಿಯಲ್ಲಿ ನಿಮ್ಮ ಶಾಸಕರೊಬ್ಬರು ಅತ್ಯಾಚಾರವೆಸಗಿದ್ದರು.  ಈ ಬಾರಿ ನಿಮ್ಮ ಮಾಜಿ ಸಚಿವರೊಬ್ಬರು ಉದ್ಯೋಗ ಕೇಳಿದ ಯುವತಿಯನ್ನು ಅತ್ಯಾಚಾರವೆಸಗಿದ್ದರು. ಅತ್ಯಾಚಾರಿಗಳೇ ತುಂಬಿರುವ ಬಿಜೆಪಿಯಿಂದ ಇನ್ನೆಂತಹ ಹೇಳಿಕೆ ನಿರೀಕ್ಷಿಸಲಾದೀತು!” ಎಂದು ಕಿಡಿ ಕಾರಿದೆ.

7.30ರ ಸಮಯದಲ್ಲಿ ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂಬ ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ, “ರಾತ್ರಿ 7.30ರ ಸಮಯದಲ್ಲಿ ಅವರು ಅಲ್ಲಿಗೆ ಹೋಗಲೇಬಾರದಿತ್ತು! ರಾಜ್ಯದ ರಕ್ಷಣೆ ಹೊತ್ತ ಗೃಹಸಚಿವರೇ, ಇಂತಹ ಅಯೋಗ್ಯತನದ ಹೇಳಿಕೆ ಕೊಡಲು ನಾಚಿಕೆ ಆಗುವುದಿಲ್ಲವೇ..? ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ 7.30ರ ಸಂಜೆಯೂ ಅಪಾಯಕಾರಿ ಎಂದು ಸ್ವತಃ ಅವರೇ ಒಪ್ಪಿದ್ದಾರೆ. ಇಂತಹ ಅಸಮರ್ಥ ಬಿಜೆಪಿಯಿಂದ ರಾಜ್ಯದ ಜನತೆಯ ರಕ್ಷಣೆ ಸಾಧ್ಯವೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ನಿರ್ಭಯಾ ಗೈಡ್‌ಲೈನ್ಸ್‌ ಪ್ರಕಾರ ಜವಾಬ್ದಾರಿಯುತ ಸ್ಥಾನದಲ್ಲಿರುವವರು, ಅಧಿಕಾರಿಗಳು ಸಂತ್ರಸ್ತರ ವಿರುದ್ಧ ಹೇಳಿಕೆ ಕೊಡುವಂತಿಲ್ಲ. ಇಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವಾಗಿದ್ದರೂ ಅದು ಒಂದು ಸರ್ಕಾರದ ವಿರುದ್ಧದ ಕೃತ್ಯ. ಅಲ್ಲಿ ವಿದ್ಯಾರ್ಥಿನಿ ಸಂತ್ರಸ್ತೆ ಅಷ್ಟೇ. ಇಂತಹ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯದ ಕೆಲಸ. ಅದರಲ್ಲಿ ವಿಫಲವಾಗಿದ್ದಕ್ಕೆ ಕೊಲೆ, ಅತ್ಯಾಚಾರಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲಿ ಗೃಹ ಸಚಿವರ ಹೇಳಿಕೆ ತನಿಖೆ ಮೇಲೆ ಪ್ರಭಾವ ಬಿರುತ್ತದೆ ಮತ್ತು ಆರೋಪಿಗಳ ಪರವಾಗಿದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಹೆಸರು ಹೇಳಲು ಇಚ್ಛಿಸದ ವಕೀಲರು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...