Homeಮುಖಪುಟಭಾರತ ಮಾರಾಟಕ್ಕಿದೆ: ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣದ ಕುರಿತು ಗಮನ ಸೆಳೆದ ಕಾರ್ಟೂನ್‌ಗಳು

ಭಾರತ ಮಾರಾಟಕ್ಕಿದೆ: ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣದ ಕುರಿತು ಗಮನ ಸೆಳೆದ ಕಾರ್ಟೂನ್‌ಗಳು

- Advertisement -
- Advertisement -

ಸೋಮವಾರ (ಆಗಸ್ಟ್ 23) ಕೇಂದ್ರದ ಹಣಕಾಸು ಇಲಾಖೆಯು ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ವಿತ್ತೀಯ ಕೊರತೆ ನೀಗಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿಯಲ್ಲಿ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ. ಇದರ ಮೂಲಕ ಸರ್ಕಾರಿ- ಖಾಸಗಿ ವಲಯಗಳು ಭಾಗಿ ಆಗಬಹುದು ಎನ್ನಲಾಗಿದೆ. ಈಗಾಗಲೇ ಹತ್ತಾರು ಸಾರ್ವಜನಿಕ ಸಂಸ್ಥೆಗಳನ್ನು ಮೋದಿ ಸರ್ಕಾರ ಮಾರಾಟ ಮಾಡಿದೆ. ಈಗ ಮತ್ತಷ್ಟು ಮಾರಲು ಹೊರಟಿರುವುದುಕ್ಕೆ ತೀವ್ರ ಟೀಕೆ ಕೇಳಿಬಂದಿದೆ. ಭಾರತ ಮಾರಾಟಕ್ಕಿದೆ ಎಂದು ಟ್ರೋಲ್ ಮಾಡಲಾಗುತ್ತಿದೆ. ಈ ಕುರಿತು ಬಂದ ಅತ್ಯುತ್ತಮ ಕಾರ್ಟೂನ್‌ಗಳು ಇಲ್ಲಿವೆ.

 

ಕನ್ನಡದ ಖ್ಯಾತ ಕಾರ್ಟೂನಿಸ್ಟ್ ಆದ ಪಿ.ಮಹಮ್ಮದ್‌ರವರು “ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಹೆಸರಿನಲ್ಲಿ ಭಾರತದ ಸಂಪತ್ತನ್ನು ಹೇಗೆ ಪ್ರಧಾನಿ ಮತ್ತು ಹಣಕಾಸು ಸಚಿವರು ಮಾರುತ್ತಿದ್ದಾರೆ” ಎಂಬದನ್ನು ಚಿತ್ರಿಸಿದ್ದಾರೆ.

ಸಕೆಂಡ್ ಹ್ಯಾಂಡ್ ವಸ್ತುಗಳನ್ನು ಮಾರಲು ಅತಿ ಹೆಚ್ಚು ಉಪಯೋಗಿಸುವ ಜನಪ್ರಿಯ ಮಾರಾಟ ಮತ್ತು ಕೊಳ್ಳುವ ಆಪ್ OLX ಗೆ ಈ ಸರ್ಕಾರವನ್ನು ಹೋಲಿಸಿ ನೂರಾರು ಮೀಮ್ಸ್‌ಗಳು ಸೃಷ್ಟಿಯಾಗಿವೆ. ಅರ್ಥ ಸಚಿವೆ ನಿರ್ಮಲ ಸೀತಾರಾಮನ್‌ರವರನ್ನು ಇವು ಟೀಕಿಸಿವೆ.

ಕನ್ನಡದ ಮತ್ತೊಬ್ಬ ಪ್ರತಿಭಾವಂತ ಕಾರ್ಟೂನಿಸ್ಟ್ ದಿನೇಶ್ ಕುಕ್ಕಜಡ್ಕರವರು ಪ್ರಸಿದ್ದ ವಾಷಿಂಗ್ ಪೌಡರ್ ನಿರ್ಮಾ ಜಾಹೀರಾತಿನೊಂದಿಗೆ ಮೋದಿ ಮತ್ತು ನಿರ್ಮಲಾ ಸೀತಾರಾಮನ್‌ರವರನ್ನು ಸೇರಿಸಿ ವ್ಯಂಗ್ಯ ಚಿತ್ರ ರಚಿಸಿದ್ದಾರೆ. ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಇಬ್ಬರು ಹಾಳುಗೆಡುವುದರ ಚಿತ್ರಣ ಇದಾಗಿದೆ.

ಖ್ಯಾತ ವ್ಯಂಗ್ಯಚಿತ್ರಕಾರರಾದ ಸುರೇಂದ್ರರವರು ಏರ್ ಇಂಡಿಯಾ ಖಾಸಗೀಕರಣವಾಗುವುದನ್ನು ಮೊನಚಾಗಿ ನಿರೂಪಿಸಿದ್ದಾರೆ. ಈಗಲೂ ವಿಮಾನ ನಮ್ಮದೆ, ಅವರು ಕೇವಲ ಪೈಲೆಟ್‌ಗಳು ಎಂದು ನಿರ್ಮಲ ಸೀತಾರಾಮನ್‌ರವರು ಹೇಳಿರುವಂತೆ ವ್ಯಂಗ್ಯವಾಡಿದ್ದಾರೆ.

ಕನ್ನಡದ ಖ್ಯಾತ ವ್ಯಂಗ್ಯಚಿತ್ರಕಾರರಾದ, ದೇಶದ್ಯಂತ ಪ್ರಸಿದ್ದಿಯಾಗಿರುವ ಸತೀಶ್ ಆಚಾರ್ಯರವರು ತೀಕ್ಷ್ಣ ವ್ಯಂಗ್ಯ ಚಿತ್ರ ರಚಿಸಿದ್ದಾರೆ. ಮಿತ್ರರೆ 70 ವರ್ಷ ಅವರೇನೂ ಮಾಡಿಲ್ಲ ಎಂದು ಮೋದಿ ಟೀಕಿಸುತ್ತಾ ಎಲ್ಲವನ್ನು ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಹೆಸರಿನಲ್ಲಿ ದೇಶದ ಸಂಪತ್ರನ್ನು ಮಾರುತ್ತಿರುವುದನ್ನು ಚಿತ್ರಿಸಿದ್ದಾರೆ.

ಅರವಿಂದ್ ಜಿ ಮೆನನ್ ಎಂಬುವವರು ನೆಹರುರವರು ಕಟ್ಟಿ ಬೆಳೆಸಿದ ಸಾರ್ವಜನಿಕ ಸಂಸ್ಥೆಗಳು ಇಂದು ಹೆಮ್ಮರವಾಗಿ ಬೆಳೆದಿವೆ. ಆದರೆ ಅವನ್ನು ಮೋದಿ-ನಿರ್ಮಲ ಜೋಡಿ ಕುಯ್ದು ಮಾರುತ್ತಿವೆ ಎಂದು ವ್ಯಂಗ್ಯ ಚಿತ್ರ ರಚಿಸಿದ್ದಾರೆ.


ಇದನ್ನೂ ಓದಿ: ಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ ಮಾರಾಟಗೊಂಡ ಸಂಸ್ಥೆಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The one who eats the salt should obviously drink water…..public sector employees made merry of their time…..enjoyed and ate salaries with out working then….They dint respect the public sentiments who were actually the owners of public sectors, instead they behaved as if they were the owners…..now karma is hitting them….let them eat their own fruit from the tree they planted. Where were all these cartoonists then. Supporting them now is crime….

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...