Homeಸಿನಿಮಾಕ್ರೀಡೆನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ- ನೀರಜ್ ಚೋಪ್ರಾ

ನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ- ನೀರಜ್ ಚೋಪ್ರಾ

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ಭಾರತೀಯರ ಚಿನ್ನದ ಕನಸು ನನಸು ಮಾಡಿದ್ದ ನೀರಜ್ ಚೋಪ್ರಾ ಅವರ ಹೇಳಿಕೆಯನ್ನು ಬಳಸಿ ಹಲವು ಮಂದಿ ವಿವಾದ ಸೃಷ್ಠಿಸಿದ್ದರು. ಇದಕ್ಕೆ ನೀರಜ್ ಚೋಪ್ರಾ, ನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಒಲಿಂಪಿಕ್ಸ್‌ನ ಜಾವೆಲಿನ್‌ ಥ್ರೋ ಫೈನಲ್‌ ವೇಳೆ ನೀರಜ್ ಅವರು ಎಸೆಯಬೇಕಿದ್ದ ಜಾವೆಲಿನ್‌ ಪಾಕಿಸ್ತಾನದ ಅಥ್ಲೀಟ್‌ ಆರ್ಶದ್ ನದೀಮ್ ಬಳಿಯಿತ್ತು, ಅದನ್ನು ಕೇಳಿದಾಗ ಅವರು ವಾಪಸ್ ನೀಡಿದ್ದರು ಎಂದು ಖಾಸಗಿ ಮಾಧ್ಯಮದ ಸಂದರ್ಶನವೊಂದರಲ್ಲಿ ತಿಳಿಸಿದ್ದರು.

ನೀರಜ್‌ ಚೋಪ್ರಾರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಆರ್ಶದ್ ಅವರ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿ ಹೀಯಾಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನೀರಜ್, ಕ್ರೀಡೆಯಲ್ಲಿ ಇದೊಂದು ಅತ್ಯಂತ ಸಹಜ ಪ್ರಕ್ರಿಯೆ. ನಾವೆಲ್ಲರೂ ಪ್ರೀತಿಯಿಂದ ಇರುತ್ತೇವೆ. ನಿಮ್ಮ ಕೊಳಕು ಅಜೆಂಡಾಗಳಿಗೆ ನಮ್ಮ ಹೆಸರು ಮತ್ತು ಹೇಳಿಕೆಯನ್ನು ಬಳಸದಿರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಟ್ವಿಟರ್‌ನಲ್ಲಿ ವಿಡಿಯೋ ಶೇರ್‌ ಮಾಡಿರುವ ನೀರಜ್ ಚೋಪ್ರಾ ಅವರ ಹೇಳಿಕೆ ಹೀಗಿದೆ.

“ಎಲ್ಲರಿಗೂ ನಮಸ್ಕಾರ ಮೊದಲಿಗೆ ನನ್ನನ್ನು ಬೆಂಬಲಿಸಿದ, ಪ್ರೀತಿ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನೀವೆಲ್ಲರೂ ಪ್ರೋತ್ಸಾಹಿಸಿದ ರೀತಿಗೆ ಖುಷಿಯಾಗುತ್ತಿದೆ. ಅದೇ ರೀತಿ ಈಗ ಒಂದು ವಿವಾದ ಅದೇ ರೀತಿ ನಾನು ಟೋಕಿಯೋ ಒಲಿಂಪಿಕ್ಸ್‌ ಜಾವಲಿನ್ ಥ್ರೋ ಫೈನಲ್‌ನಲ್ಲಿ ಪಾಕಿಸ್ತಾನದ ಆರ್ಶದ್ ನದೀಮ್ ಅವರ ಬಳಿಯಿದ್ದ ಜಾವೆಲಿನ್‌ ಪಡೆದು ಎಸೆದೆ. ಇದನ್ನು ದೊಡ್ಡ ವಿವಾದ ಮಾಡುತ್ತಿದ್ದಾರೆ. ಇದೊಂದು ಅತ್ಯಂತ ಸರಳ ಹಾಗೂ ಸಹಜ ಪ್ರಕ್ರಿಯೆ. ಜಾವಲಿನ್‌ ಪಟು ತಮ್ಮದೇ ಆದ ಜಾವಲಿನ್‌ ಹೊಂದಿರುತ್ತಾರೆ. ಅದನ್ನು ಬೇರೆಯವರು ಸಹ ಬಳಸುತ್ತಾರೆ. ಅದೇ ರೀತಿ ನನ್ನ ಜಾವೆಲಿನ್ ಹಿಡಿದುಕೊಂಡು ಆರ್ಶದ್ ನದೀಂ ಅಭ್ಯಾಸ ನಡೆಸುತ್ತಿದ್ದರು. ಅದರಲ್ಲಿ ಯಾವುದೇ ತಪ್ಪು ಇಲ್ಲ. ಈಗ ನನ್ನ ಸ್ಪರ್ಧೆಯಿದೆ ಎಂದು ಅವರ ಬಳಿಯಿದ್ದ ನನ್ನ ಜಾವೆಲಿನ್ ಪಡೆದುಕೊಂಡು ನನ್ನ ಸ್ಪರ್ಧೆ ಪೂರ್ತಿಗೊಳಿಸಿದೆ. ಇದು ಅಂತಹ ದೊಡ್ಡ ವಿಷಯ ಕೂಡ ಅಲ್ಲ. ನನಗೆ ದುಖಃವಿದೆ. ನನ್ನ ಮನವಿ ಏನೆಂದರೆ, ಈ ರೀತಿ ಮಾಡಬೇಡಿ. ಕ್ರೀಡೆ ಎಲ್ಲರನ್ನೂ ಒಟ್ಟಾಗಿ ಸಾಗುವುದನ್ನು ಕಲಿಸುತ್ತದೆ. ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ” ಎಂದಿದ್ದಾರೆ.

ಜೊತೆಗೆ ನಿಮ್ಮ ಪ್ರಚಾರಕ್ಕಾಗಿ ನಮ್ಮ ಭಾವನೆಗಳಿಗೆ ಧಕ್ಕೆಯಾಗುವಂತೆ ಈ ವಿಚಾರವನ್ನು ಬಿಂಬಿಸಬೇಡಿ. ನಿಮ್ಮ ಅಜೆಂಡಾಗಳಿಗೆ ನನ್ನ ಹೆಸರು, ಹೇಳಿಕೆಯನ್ನು ಬಳಸದಿರಿ ಎಂದು  ನೀರಜ್ ಟ್ವೀಟ್ ಮೂಲಕ ವಿಡಿಯೋ ಸಂದೇಶ ನೀಡಿದ್ದಾರೆ.


ಇದನ್ನೂ ಓದಿ: ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...