Homeಸಿನಿಮಾಕ್ರೀಡೆನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ- ನೀರಜ್ ಚೋಪ್ರಾ

ನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ- ನೀರಜ್ ಚೋಪ್ರಾ

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ಭಾರತೀಯರ ಚಿನ್ನದ ಕನಸು ನನಸು ಮಾಡಿದ್ದ ನೀರಜ್ ಚೋಪ್ರಾ ಅವರ ಹೇಳಿಕೆಯನ್ನು ಬಳಸಿ ಹಲವು ಮಂದಿ ವಿವಾದ ಸೃಷ್ಠಿಸಿದ್ದರು. ಇದಕ್ಕೆ ನೀರಜ್ ಚೋಪ್ರಾ, ನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಒಲಿಂಪಿಕ್ಸ್‌ನ ಜಾವೆಲಿನ್‌ ಥ್ರೋ ಫೈನಲ್‌ ವೇಳೆ ನೀರಜ್ ಅವರು ಎಸೆಯಬೇಕಿದ್ದ ಜಾವೆಲಿನ್‌ ಪಾಕಿಸ್ತಾನದ ಅಥ್ಲೀಟ್‌ ಆರ್ಶದ್ ನದೀಮ್ ಬಳಿಯಿತ್ತು, ಅದನ್ನು ಕೇಳಿದಾಗ ಅವರು ವಾಪಸ್ ನೀಡಿದ್ದರು ಎಂದು ಖಾಸಗಿ ಮಾಧ್ಯಮದ ಸಂದರ್ಶನವೊಂದರಲ್ಲಿ ತಿಳಿಸಿದ್ದರು.

ನೀರಜ್‌ ಚೋಪ್ರಾರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಆರ್ಶದ್ ಅವರ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿ ಹೀಯಾಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನೀರಜ್, ಕ್ರೀಡೆಯಲ್ಲಿ ಇದೊಂದು ಅತ್ಯಂತ ಸಹಜ ಪ್ರಕ್ರಿಯೆ. ನಾವೆಲ್ಲರೂ ಪ್ರೀತಿಯಿಂದ ಇರುತ್ತೇವೆ. ನಿಮ್ಮ ಕೊಳಕು ಅಜೆಂಡಾಗಳಿಗೆ ನಮ್ಮ ಹೆಸರು ಮತ್ತು ಹೇಳಿಕೆಯನ್ನು ಬಳಸದಿರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಟ್ವಿಟರ್‌ನಲ್ಲಿ ವಿಡಿಯೋ ಶೇರ್‌ ಮಾಡಿರುವ ನೀರಜ್ ಚೋಪ್ರಾ ಅವರ ಹೇಳಿಕೆ ಹೀಗಿದೆ.

“ಎಲ್ಲರಿಗೂ ನಮಸ್ಕಾರ ಮೊದಲಿಗೆ ನನ್ನನ್ನು ಬೆಂಬಲಿಸಿದ, ಪ್ರೀತಿ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನೀವೆಲ್ಲರೂ ಪ್ರೋತ್ಸಾಹಿಸಿದ ರೀತಿಗೆ ಖುಷಿಯಾಗುತ್ತಿದೆ. ಅದೇ ರೀತಿ ಈಗ ಒಂದು ವಿವಾದ ಅದೇ ರೀತಿ ನಾನು ಟೋಕಿಯೋ ಒಲಿಂಪಿಕ್ಸ್‌ ಜಾವಲಿನ್ ಥ್ರೋ ಫೈನಲ್‌ನಲ್ಲಿ ಪಾಕಿಸ್ತಾನದ ಆರ್ಶದ್ ನದೀಮ್ ಅವರ ಬಳಿಯಿದ್ದ ಜಾವೆಲಿನ್‌ ಪಡೆದು ಎಸೆದೆ. ಇದನ್ನು ದೊಡ್ಡ ವಿವಾದ ಮಾಡುತ್ತಿದ್ದಾರೆ. ಇದೊಂದು ಅತ್ಯಂತ ಸರಳ ಹಾಗೂ ಸಹಜ ಪ್ರಕ್ರಿಯೆ. ಜಾವಲಿನ್‌ ಪಟು ತಮ್ಮದೇ ಆದ ಜಾವಲಿನ್‌ ಹೊಂದಿರುತ್ತಾರೆ. ಅದನ್ನು ಬೇರೆಯವರು ಸಹ ಬಳಸುತ್ತಾರೆ. ಅದೇ ರೀತಿ ನನ್ನ ಜಾವೆಲಿನ್ ಹಿಡಿದುಕೊಂಡು ಆರ್ಶದ್ ನದೀಂ ಅಭ್ಯಾಸ ನಡೆಸುತ್ತಿದ್ದರು. ಅದರಲ್ಲಿ ಯಾವುದೇ ತಪ್ಪು ಇಲ್ಲ. ಈಗ ನನ್ನ ಸ್ಪರ್ಧೆಯಿದೆ ಎಂದು ಅವರ ಬಳಿಯಿದ್ದ ನನ್ನ ಜಾವೆಲಿನ್ ಪಡೆದುಕೊಂಡು ನನ್ನ ಸ್ಪರ್ಧೆ ಪೂರ್ತಿಗೊಳಿಸಿದೆ. ಇದು ಅಂತಹ ದೊಡ್ಡ ವಿಷಯ ಕೂಡ ಅಲ್ಲ. ನನಗೆ ದುಖಃವಿದೆ. ನನ್ನ ಮನವಿ ಏನೆಂದರೆ, ಈ ರೀತಿ ಮಾಡಬೇಡಿ. ಕ್ರೀಡೆ ಎಲ್ಲರನ್ನೂ ಒಟ್ಟಾಗಿ ಸಾಗುವುದನ್ನು ಕಲಿಸುತ್ತದೆ. ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ” ಎಂದಿದ್ದಾರೆ.

ಜೊತೆಗೆ ನಿಮ್ಮ ಪ್ರಚಾರಕ್ಕಾಗಿ ನಮ್ಮ ಭಾವನೆಗಳಿಗೆ ಧಕ್ಕೆಯಾಗುವಂತೆ ಈ ವಿಚಾರವನ್ನು ಬಿಂಬಿಸಬೇಡಿ. ನಿಮ್ಮ ಅಜೆಂಡಾಗಳಿಗೆ ನನ್ನ ಹೆಸರು, ಹೇಳಿಕೆಯನ್ನು ಬಳಸದಿರಿ ಎಂದು  ನೀರಜ್ ಟ್ವೀಟ್ ಮೂಲಕ ವಿಡಿಯೋ ಸಂದೇಶ ನೀಡಿದ್ದಾರೆ.


ಇದನ್ನೂ ಓದಿ: ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...